Homeಕರ್ನಾಟಕಅನರ್ಹ ಶಾಸಕರ ರಾಜಕೀಯ ಭವಿಷ್ಯ ಮುಂದೇನು?

ಅನರ್ಹ ಶಾಸಕರ ರಾಜಕೀಯ ಭವಿಷ್ಯ ಮುಂದೇನು?

- Advertisement -
- Advertisement -

| ಅಶೋಕ್ |

ಬಿಜೆಪಿ ತವರೂರು ಗುಜರಾತ್‍ನಲ್ಲೇ 6 ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಇನ್ನು ಈ ಚುನಾವಣೆಯಲ್ಲಿ ಬೇರೆ ಪಕ್ಷಗಳಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ್ದ ಗುಜರಾತ್‍ನ ಹಿಂದುಳಿದ ವರ್ಗಗಳ ನಾಯಕ ಅಲ್ಪೇಶ್ ಠಾಕೂರ್, ಮಹಾರಾಷ್ಟ್ರದ ರಾಜ ವಂಶಸ್ಥ ಉದಯನ್ರಾಜೆ ಬೋಸಲೆ ಹಾಗೂ ಹರಿಯಾಣದ ಸೊನಾಲಿ ಪೋಗಟ್ ಸೋಲು ಕಂಡಿರುವುದು ಪಕ್ಷಾಂತರಿಗಳಲ್ಲಿ ಭಯಕ್ಕೆ ಕಾರಣವಾಗಿದೆ.

ನಾವು ಆಮಿಷಗಳಿಗೆ ಒಳಗಾಗಿಲ್ಲ ಎಂದು ಹೇಳುತ್ತಲೇ 17 ಶಾಸಕರು ಸಾಮೂಹಿಕ ರಾಜೀನಾಮೆ ಕೊಟ್ಟು ಮಹಾರಾಷ್ಟ್ರ ಸರ್ಕಾರದ ಪ್ರಾಯೋಜಕತ್ವದಲ್ಲಿ ಅಲ್ಲಿನ ಐಶಾರಾಮಿ ಹೋಟೆಲ್‍ನಲ್ಲಿ ಉಳಿದುಕೊಂಡದ್ದು ಮತ್ತು ಈ ಎಲ್ಲಾ ಶಾಸಕರನ್ನು ಮುಲಾಜಿಲ್ಲದೆ ಸ್ಪೀಕರ್ ಅನರ್ಹಗೊಳಿಸಿದ್ದು ಈಗ ಹಳೆಯ ವಿಷಯ.

ಮೈತ್ರಿ ಸರ್ಕಾರದ ವಿರುದ್ಧ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ನೇರವಾಗಿ ಬಿಜೆಪಿ ಸರ್ಕಾರದ ರಚನೆಗೆ ಕಾರಣವಾಗಿದ್ದ ಅನರ್ಹ ಶಾಸಕರಿಗೆ ಆ ಎಲ್ಲಾ ಕ್ಷೇತ್ರದಲ್ಲೂ ಶತಾಯಗತಾಯ ಟಿಕೆಟ್ ನೀಡುವುದಾಗಿ ಬಿಜೆಪಿ ನಾಯಕರು ಮಾತು ಕೊಟ್ಟಿದ್ದಾರೆ. ಮೊನ್ನೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅನರ್ಹರಿಗೆ ಟಿಕೆಟ್ ನೀಡುವ ಕುರಿತು ಸಿಎಂ ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಮ್ಮತದ ನಿರ್ಣಯ ತೆಗೆದುಕೊಳ್ಳುವ ಮೂಲಕ ಅನರ್ಹರ ಪರ ಬ್ಯಾಟ್ ಬೀಸಿದ್ದಾರೆ.

ಆದರೆ, ಬಿಜೆಪಿ ಟಿಕೆಟ್ ನೀಡಿದ ಮಾತ್ರಕ್ಕೆ ಅನರ್ಹರ ಗೆಲುವು ನಿಶ್ಚಿತ ಎಂದು ಹೇಳಲು ಸಾಧ್ಯವಿಲ್ಲ. ಹಾಗಾದರೆ ಇದೀಗ ಅನರ್ಹರ ಮುಂದಿರುವ ಸವಾಲುಗಳೇನು? ಮಹಾರಾಷ್ಟ್ರ-ಹರಿಯಾಣ ಚುನಾವಣೆಯು ರಾಜ್ಯದ ಉಪಚುನಾವಣೆ ಮೇಲೆ ಬೀರುವ ಪ್ರಭಾವವೇನು? ಸುಪ್ರೀಂ ತೀರ್ಪು ಕಂಟಕವಾದರೆ ಅನರ್ಹರ ಗತಿ ಏನು? ಅನರ್ಹರು ರಾಜೀನಾಮೆ ನೀಡಿರುವ 17 ಕ್ಷೇತ್ರದಲ್ಲೂ ಬಂಡಾಯ ಅಭ್ಯರ್ಥಿಗಳ ನಡೆ ಏನು? ನಿಜಕ್ಕೂ ರಾಜ್ಯದ ಉಪಚುನಾವಣೆಯಲ್ಲಿ ಅನರ್ಹ ಶಾಸಕರು ಗೆಲ್ಲುವ ವಾತಾವರಣ ಇದೆಯೇ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್.

ಅನರ್ಹರಿಗೆ ಮುಹೂರ್ತವಿಟ್ಟ ಸುಪ್ರೀಂ; ಏನಾಗಲಿದೆ ತೀರ್ಪು?

ಮೈತ್ರಿ ಸರ್ಕಾರದ ವಿರುದ್ಧ ಬಂಡಾಯವೆದ್ದು ಸಾಮೂಹಿಕ ರಾಜೀನಾಮೆ ನೀಡಿದ್ದ 14 ಕಾಂಗ್ರೆಸ್ ಹಾಗೂ 3 ಜೆಡಿಎಸ್ ಶಾಸಕರನ್ನು ಸ್ಪೀಕರ್ ರಮೇಶ್‍ಕುಮಾರ್ ಪಕ್ಷಾಂತರ ನಿಷೇಧ ಕಾಯ್ದೆ ಶೆಡ್ಯೂಲ್ 10ರ ಅನ್ವಯ ಕಳೆದ ಜುಲೈ 28ರಂದು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ನೀಡಿದ್ದರು. ಜೊತೆಗೆ ಈ ವಿಧಾನಸಭೆ ಚಾಲ್ತಿಯಲ್ಲಿರುವವರೆಗೆ ಯಾವುದೇ ಉಪಚುನಾವಣೆಯಲ್ಲಿ ಸ್ಪರ್ಧೆ ನಡೆಸುವಂತಿಲ್ಲ ಎಂಬುದೂ ಆದೇಶದ ಭಾಗವಾಗಿತ್ತು.

ಇದೇ ಕಾರಣಕ್ಕೆ ಸ್ಪೀಕರ್ ತೀರ್ಪನ್ನು ವಿರೋಧಿಸಿ ಅನರ್ಹ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಕಳೆದ ಎರಡು ವಾರದಿಂದ ವಾದ-ಪ್ರತಿವಾದವನ್ನು ಆಲಿಸಿರುವ ಸುಪ್ರೀಂಕೋರ್ಟ್ ತೀರ್ಪನ್ನು ನವೆಂಬರ್ 4ಕ್ಕೆ ಕಾಯ್ದಿರಿಸಿದೆ. ಆದರೆ, ತೀರ್ಪು ಅನರ್ಹ ಶಾಸಕರ ಪರವಾಗಿಯೇ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.

ಏಕೆಂದರೆ ಕಾಂಗ್ರೆಸ್ ಪರ ವಾದ ಮಂಡಿಸಿರುವ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ “ಪಕ್ಷಾಂತರ ಒಂದು ಸಾಮೂಹಿಕ ಪಿಡುಗಾಗಿ ಬದಲಾಗಿದ್ದು, ಇದಕ್ಕೆ ನ್ಯಾಯಾಲಯದ ತೀರ್ಪು ಔಷಧಿಯಾಗಬೇಕು. ಹೀಗೆ ಆಮಿಷಗಳಿಗೆ ಬಲಿಯಾಗಿ ಪಕ್ಷದ್ರೋಹ ಮಾಡುವವರಿಗೆ ತಕ್ಕ ಪಾಠವಾಗಬೇಕು ಎಂದು ನ್ಯಾಯಮೂರ್ತಿಗಳ ಒತ್ತಾಯಿಸಿದ್ದಾರೆ. ಅಲ್ಲದೆ, ಈ ಪ್ರಕರಣವನ್ನು ಸುಪ್ರೀಂಕೋರ್ಟ್‍ನ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಬೇಕು” ಎಂದು ಮನವಿ ಮಾಡಿದ್ದಾರೆ.

ಅಕಸ್ಮಾತ್ ನ್ಯಾಯಾಲಯ ಇವರ ವಾದಕ್ಕೆ ಮನ್ನಣೆ ನೀಡಿ ಈ ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ ಮಾಡಿದರೆ ಅನರ್ಹರು ಉಪಚುನಾವಣೆ ಆಸೆಯನ್ನು ಬಿಡಲೇಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಒಂದುವೇಳೆ ತೀರ್ಪು ಅನರ್ಹರ ಪರ ಹೊರ ಬಿದ್ದರೂ ಸಹ ಖುಷಿ ಪಡಲು ಕಾರಣವಿಲ್ಲ. ಏಕೆಂದರೆ ಅನರ್ಹರ ಸೋಲಿಗೆ ಉದಾಹರಣೆಯಾಗಿ ಕಣ್ಣ ಮುಂದಿದೆ ತಮಿಳುನಾಡು ರಾಜಕಾರಣ. ಅನರ್ಹರಾದರೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಪಡೆದುಕೊಂಡ ಶಾಸಕರು ಚುನಾವಣೆಯಲ್ಲಿ ಸೋಲನುಭವಿಸಿದ್ದರು.

ಕರ್ನಾಟಕದಲ್ಲೂ ಅನರ್ಹ ಶಾಸಕರ ವಿರುದ್ಧ ಇದೇ ರೀತಿಯ ವ್ಯಾಪಕ ಜನಾಭಿಪ್ರಾಯ ಇದೆ. ಅಕಸ್ಮಾತ್ ಇವರು ಚುನಾವಣೆಯಲ್ಲಿ ಸ್ಪರ್ಧೆ ನಡೆಸಿದರೂ ಗೆಲ್ಲಲು ಬೇಕಾದ ಪೂರಕ ವಾತಾವರಣ ಕ್ಷೇತ್ರದಲ್ಲಿ ಇಲ್ಲ. ಅಲ್ಲದೆ, ಸ್ಪೀಕರ್ ರಮೇಶ್‍ಕುಮಾರ್ ಸಾಮೂಹಿಕ ರಾಜೀನಾಮೆ ಪ್ರಕರಣವನ್ನು ಸಂಪೂರ್ಣ ವಿಚಾರಣೆ ನಡೆಸಿ ಕಾನೂನುತಜ್ಞರ ಅಭಿಪ್ರಾಯ ಪಡೆದೇ ತೀರ್ಪು ನೀಡಿದ್ದಾರೆ. ಹೀಗಾಗಿ ಸುಪ್ರೀಂಕೋರ್ಟ್ ಬಹುತೇಕ ಸ್ಪೀಕರ್ ತೀರ್ಪನ್ನು ಎತ್ತಿಹಿಡಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಒಂದುವೇಳೆ ಇದು ಸಾಧ್ಯವಾದರೆ ಅನರ್ಹ ಶಾಸಕರ ರಾಜಕೀಯ ಭವಿಷ್ಯ ಬಹುತೇಕ
ಅಂತ್ಯವಾದಂತೆಯೇ ಸರಿ.

ಬಿಜೆಪಿಗೆ ಪೂರಕವಲ್ಲದ ಮಹಾರಾಷ್ಟ್ರ-ಹರಿಯಾಣ ಚುನಾವಣೆ ಫಲಿತಾಂಶ

ಪ್ರಸ್ತುತ ದೇಶದೆಲ್ಲೆಡೆ ಪ್ರಧಾನಿ ಮೋದಿ ಅಲೆ ಇದೆ ಎಂಬ ಸಂದೇಶವನ್ನು ನೀಡಲಾಯಿತಾದರೂ, ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ತೀರ್ಪು ಬಿಜೆಪಿಗೆ ಪೂರಕವಾಗಿಯೇನೂ ಬಂದಿರಲಿಲ್ಲ. ಅದರಲ್ಲೂ ಉಪಚುನಾವಣೆಗಳಲ್ಲಿ ಬಿಜೆಪಿಯ ಯಶಸ್ಸಿನ ದರ ಕಡಿಮೆಯೇ. ಹರಿಯಾಣ ಮತ್ತು ಮಹಾರಾಷ್ಟ್ರ ಚುನಾವಣೆ ಫಲಿತಾಂಶವೂ ಇದನ್ನೇ ತೋರಿಸಿದೆ.
ಬಿಜೆಪಿ ಈ ಬಾರಿ ಮಹಾರಾಷ್ಟ್ರದಲ್ಲಿ ಏಕಾಂಗಿಯಾಗಿ 140 ಕ್ಷೇತ್ರದಲ್ಲಿ ಗೆಲ್ಲುವ ನಿರೀಕ್ಷೆ ಹೊಂದಿದ್ದರೆ, ಹರಿಯಾಣದಲ್ಲಿ ಮತ್ತೊಂದು ಅವಧಿಗೆ ಬಹುಮತ ಸರ್ಕಾರ ರಚನೆ ಮಾಡುವ ಮಹತ್ವಾಕಾಂಕ್ಷೆಯಲ್ಲಿತ್ತು. ಆದರೆ, ಮಹಾರಾಷ್ಟ್ರದಲ್ಲಿ ಬಿಜೆಪಿ ಕೇವಲ 104 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರೆ, ಹರಿಯಾಣದಲ್ಲಿ ಬಹುಮತ ಗಳಿಸಲು ಎಡವಿ ಮುಖಭಂಗ ಅನುಭವಿಸಿತ್ತು.

ಅಲ್ಲದೆ, ಮಹಾರಾಷ್ಟ್ರ-ಹರಿಯಾಣ ವಿಧಾನಸಭೆ ಚುನಾವಣೆ ಜೊತೆಗೆ 17 ರಾಜ್ಯದ 51 ವಿಧಾನಸಭೆ ಹಾಗೂ 2 ಲೋಕಸಭೆಗೂ ಉಪಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲೂ ಬಿಜೆಪಿ ಶೇ.70 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಬಿಜೆಪಿ ತವರೂರು ಗುಜರಾತ್‍ನಲ್ಲೇ 6 ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಇನ್ನು ಈ ಚುನಾವಣೆಯಲ್ಲಿ ಬೇರೆ ಪಕ್ಷಗಳಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ್ದ ಗುಜರಾತ್‍ನ ಹಿಂದುಳಿದ ವರ್ಗಗಳ ನಾಯಕ ಅಲ್ಪೇಶ್ ಠಾಕೂರ್, ಮಹಾರಾಷ್ಟ್ರದ ರಾಜ ವಂಶಸ್ಥ ಉದಯನ್ರಾಜೆ ಬೋಸಲೆ ಹಾಗೂ ಹರಿಯಾಣದ ಸೊನಾಲಿ ಪೋಗಟ್ ಸೋಲು ಕಂಡಿರುವುದು ಪಕ್ಷಾಂತರಿಗಳಲ್ಲಿ ಭಯಕ್ಕೆ ಕಾರಣವಾಗಿದೆ.

ಅಸಲಿಗೆ ಆರ್ಥಿಕ ಹಿಂಜರಿತ, ರೂಪಾಯಿ ಮೌಲ್ಯದ ಕುಸಿತ, ಬ್ಯಾಂಕ್‍ಗಳು ದಿವಾಳಿಯಾಗಿರುವುದು, ಪೆಟ್ರೋಲ್ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ಅನೇಕ ವಿಚಾರಗಳು ಸಾಮಾನ್ಯವಾಗಿ ಬಿಜೆಪಿ ವಿರೋಧಿ ಅಲೆಗೆ ಕಾರಣವಾಗಿದೆ. ಹೀಗಾಗಿ ಈ ಚುನಾವಣೆಯ ಫಲಿತಾಂಶ ರಾಜ್ಯದ ಉಪಚುನಾವಣೆಯ ಮೇಲೂ ಪ್ರಭಾವ ಬೀರಲಿದೆ. ಅಲ್ಲದೆ, ರಾಜ್ಯದ ಅನರ್ಹ ಶಾಸಕರ ವಿರುದ್ಧ 17 ಕ್ಷೇತ್ರದಲ್ಲೂ ಜನಾಭಿಪ್ರಾಯವು ಪಕ್ಷಾಂತರಿಗಳ ಪರ ಇರುತ್ತದೆಂದು ಭಾವಿಸಲಾಗದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...