Homeಕರ್ನಾಟಕಅನರ್ಹ ಶಾಸಕರ ರಾಜಕೀಯ ಭವಿಷ್ಯ ಮುಂದೇನು?

ಅನರ್ಹ ಶಾಸಕರ ರಾಜಕೀಯ ಭವಿಷ್ಯ ಮುಂದೇನು?

- Advertisement -
- Advertisement -

| ಅಶೋಕ್ |

ಬಿಜೆಪಿ ತವರೂರು ಗುಜರಾತ್‍ನಲ್ಲೇ 6 ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಇನ್ನು ಈ ಚುನಾವಣೆಯಲ್ಲಿ ಬೇರೆ ಪಕ್ಷಗಳಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ್ದ ಗುಜರಾತ್‍ನ ಹಿಂದುಳಿದ ವರ್ಗಗಳ ನಾಯಕ ಅಲ್ಪೇಶ್ ಠಾಕೂರ್, ಮಹಾರಾಷ್ಟ್ರದ ರಾಜ ವಂಶಸ್ಥ ಉದಯನ್ರಾಜೆ ಬೋಸಲೆ ಹಾಗೂ ಹರಿಯಾಣದ ಸೊನಾಲಿ ಪೋಗಟ್ ಸೋಲು ಕಂಡಿರುವುದು ಪಕ್ಷಾಂತರಿಗಳಲ್ಲಿ ಭಯಕ್ಕೆ ಕಾರಣವಾಗಿದೆ.

ನಾವು ಆಮಿಷಗಳಿಗೆ ಒಳಗಾಗಿಲ್ಲ ಎಂದು ಹೇಳುತ್ತಲೇ 17 ಶಾಸಕರು ಸಾಮೂಹಿಕ ರಾಜೀನಾಮೆ ಕೊಟ್ಟು ಮಹಾರಾಷ್ಟ್ರ ಸರ್ಕಾರದ ಪ್ರಾಯೋಜಕತ್ವದಲ್ಲಿ ಅಲ್ಲಿನ ಐಶಾರಾಮಿ ಹೋಟೆಲ್‍ನಲ್ಲಿ ಉಳಿದುಕೊಂಡದ್ದು ಮತ್ತು ಈ ಎಲ್ಲಾ ಶಾಸಕರನ್ನು ಮುಲಾಜಿಲ್ಲದೆ ಸ್ಪೀಕರ್ ಅನರ್ಹಗೊಳಿಸಿದ್ದು ಈಗ ಹಳೆಯ ವಿಷಯ.

ಮೈತ್ರಿ ಸರ್ಕಾರದ ವಿರುದ್ಧ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ನೇರವಾಗಿ ಬಿಜೆಪಿ ಸರ್ಕಾರದ ರಚನೆಗೆ ಕಾರಣವಾಗಿದ್ದ ಅನರ್ಹ ಶಾಸಕರಿಗೆ ಆ ಎಲ್ಲಾ ಕ್ಷೇತ್ರದಲ್ಲೂ ಶತಾಯಗತಾಯ ಟಿಕೆಟ್ ನೀಡುವುದಾಗಿ ಬಿಜೆಪಿ ನಾಯಕರು ಮಾತು ಕೊಟ್ಟಿದ್ದಾರೆ. ಮೊನ್ನೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅನರ್ಹರಿಗೆ ಟಿಕೆಟ್ ನೀಡುವ ಕುರಿತು ಸಿಎಂ ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಮ್ಮತದ ನಿರ್ಣಯ ತೆಗೆದುಕೊಳ್ಳುವ ಮೂಲಕ ಅನರ್ಹರ ಪರ ಬ್ಯಾಟ್ ಬೀಸಿದ್ದಾರೆ.

ಆದರೆ, ಬಿಜೆಪಿ ಟಿಕೆಟ್ ನೀಡಿದ ಮಾತ್ರಕ್ಕೆ ಅನರ್ಹರ ಗೆಲುವು ನಿಶ್ಚಿತ ಎಂದು ಹೇಳಲು ಸಾಧ್ಯವಿಲ್ಲ. ಹಾಗಾದರೆ ಇದೀಗ ಅನರ್ಹರ ಮುಂದಿರುವ ಸವಾಲುಗಳೇನು? ಮಹಾರಾಷ್ಟ್ರ-ಹರಿಯಾಣ ಚುನಾವಣೆಯು ರಾಜ್ಯದ ಉಪಚುನಾವಣೆ ಮೇಲೆ ಬೀರುವ ಪ್ರಭಾವವೇನು? ಸುಪ್ರೀಂ ತೀರ್ಪು ಕಂಟಕವಾದರೆ ಅನರ್ಹರ ಗತಿ ಏನು? ಅನರ್ಹರು ರಾಜೀನಾಮೆ ನೀಡಿರುವ 17 ಕ್ಷೇತ್ರದಲ್ಲೂ ಬಂಡಾಯ ಅಭ್ಯರ್ಥಿಗಳ ನಡೆ ಏನು? ನಿಜಕ್ಕೂ ರಾಜ್ಯದ ಉಪಚುನಾವಣೆಯಲ್ಲಿ ಅನರ್ಹ ಶಾಸಕರು ಗೆಲ್ಲುವ ವಾತಾವರಣ ಇದೆಯೇ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್.

ಅನರ್ಹರಿಗೆ ಮುಹೂರ್ತವಿಟ್ಟ ಸುಪ್ರೀಂ; ಏನಾಗಲಿದೆ ತೀರ್ಪು?

ಮೈತ್ರಿ ಸರ್ಕಾರದ ವಿರುದ್ಧ ಬಂಡಾಯವೆದ್ದು ಸಾಮೂಹಿಕ ರಾಜೀನಾಮೆ ನೀಡಿದ್ದ 14 ಕಾಂಗ್ರೆಸ್ ಹಾಗೂ 3 ಜೆಡಿಎಸ್ ಶಾಸಕರನ್ನು ಸ್ಪೀಕರ್ ರಮೇಶ್‍ಕುಮಾರ್ ಪಕ್ಷಾಂತರ ನಿಷೇಧ ಕಾಯ್ದೆ ಶೆಡ್ಯೂಲ್ 10ರ ಅನ್ವಯ ಕಳೆದ ಜುಲೈ 28ರಂದು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ನೀಡಿದ್ದರು. ಜೊತೆಗೆ ಈ ವಿಧಾನಸಭೆ ಚಾಲ್ತಿಯಲ್ಲಿರುವವರೆಗೆ ಯಾವುದೇ ಉಪಚುನಾವಣೆಯಲ್ಲಿ ಸ್ಪರ್ಧೆ ನಡೆಸುವಂತಿಲ್ಲ ಎಂಬುದೂ ಆದೇಶದ ಭಾಗವಾಗಿತ್ತು.

ಇದೇ ಕಾರಣಕ್ಕೆ ಸ್ಪೀಕರ್ ತೀರ್ಪನ್ನು ವಿರೋಧಿಸಿ ಅನರ್ಹ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಕಳೆದ ಎರಡು ವಾರದಿಂದ ವಾದ-ಪ್ರತಿವಾದವನ್ನು ಆಲಿಸಿರುವ ಸುಪ್ರೀಂಕೋರ್ಟ್ ತೀರ್ಪನ್ನು ನವೆಂಬರ್ 4ಕ್ಕೆ ಕಾಯ್ದಿರಿಸಿದೆ. ಆದರೆ, ತೀರ್ಪು ಅನರ್ಹ ಶಾಸಕರ ಪರವಾಗಿಯೇ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.

ಏಕೆಂದರೆ ಕಾಂಗ್ರೆಸ್ ಪರ ವಾದ ಮಂಡಿಸಿರುವ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ “ಪಕ್ಷಾಂತರ ಒಂದು ಸಾಮೂಹಿಕ ಪಿಡುಗಾಗಿ ಬದಲಾಗಿದ್ದು, ಇದಕ್ಕೆ ನ್ಯಾಯಾಲಯದ ತೀರ್ಪು ಔಷಧಿಯಾಗಬೇಕು. ಹೀಗೆ ಆಮಿಷಗಳಿಗೆ ಬಲಿಯಾಗಿ ಪಕ್ಷದ್ರೋಹ ಮಾಡುವವರಿಗೆ ತಕ್ಕ ಪಾಠವಾಗಬೇಕು ಎಂದು ನ್ಯಾಯಮೂರ್ತಿಗಳ ಒತ್ತಾಯಿಸಿದ್ದಾರೆ. ಅಲ್ಲದೆ, ಈ ಪ್ರಕರಣವನ್ನು ಸುಪ್ರೀಂಕೋರ್ಟ್‍ನ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಬೇಕು” ಎಂದು ಮನವಿ ಮಾಡಿದ್ದಾರೆ.

ಅಕಸ್ಮಾತ್ ನ್ಯಾಯಾಲಯ ಇವರ ವಾದಕ್ಕೆ ಮನ್ನಣೆ ನೀಡಿ ಈ ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ ಮಾಡಿದರೆ ಅನರ್ಹರು ಉಪಚುನಾವಣೆ ಆಸೆಯನ್ನು ಬಿಡಲೇಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಒಂದುವೇಳೆ ತೀರ್ಪು ಅನರ್ಹರ ಪರ ಹೊರ ಬಿದ್ದರೂ ಸಹ ಖುಷಿ ಪಡಲು ಕಾರಣವಿಲ್ಲ. ಏಕೆಂದರೆ ಅನರ್ಹರ ಸೋಲಿಗೆ ಉದಾಹರಣೆಯಾಗಿ ಕಣ್ಣ ಮುಂದಿದೆ ತಮಿಳುನಾಡು ರಾಜಕಾರಣ. ಅನರ್ಹರಾದರೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಪಡೆದುಕೊಂಡ ಶಾಸಕರು ಚುನಾವಣೆಯಲ್ಲಿ ಸೋಲನುಭವಿಸಿದ್ದರು.

ಕರ್ನಾಟಕದಲ್ಲೂ ಅನರ್ಹ ಶಾಸಕರ ವಿರುದ್ಧ ಇದೇ ರೀತಿಯ ವ್ಯಾಪಕ ಜನಾಭಿಪ್ರಾಯ ಇದೆ. ಅಕಸ್ಮಾತ್ ಇವರು ಚುನಾವಣೆಯಲ್ಲಿ ಸ್ಪರ್ಧೆ ನಡೆಸಿದರೂ ಗೆಲ್ಲಲು ಬೇಕಾದ ಪೂರಕ ವಾತಾವರಣ ಕ್ಷೇತ್ರದಲ್ಲಿ ಇಲ್ಲ. ಅಲ್ಲದೆ, ಸ್ಪೀಕರ್ ರಮೇಶ್‍ಕುಮಾರ್ ಸಾಮೂಹಿಕ ರಾಜೀನಾಮೆ ಪ್ರಕರಣವನ್ನು ಸಂಪೂರ್ಣ ವಿಚಾರಣೆ ನಡೆಸಿ ಕಾನೂನುತಜ್ಞರ ಅಭಿಪ್ರಾಯ ಪಡೆದೇ ತೀರ್ಪು ನೀಡಿದ್ದಾರೆ. ಹೀಗಾಗಿ ಸುಪ್ರೀಂಕೋರ್ಟ್ ಬಹುತೇಕ ಸ್ಪೀಕರ್ ತೀರ್ಪನ್ನು ಎತ್ತಿಹಿಡಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಒಂದುವೇಳೆ ಇದು ಸಾಧ್ಯವಾದರೆ ಅನರ್ಹ ಶಾಸಕರ ರಾಜಕೀಯ ಭವಿಷ್ಯ ಬಹುತೇಕ
ಅಂತ್ಯವಾದಂತೆಯೇ ಸರಿ.

ಬಿಜೆಪಿಗೆ ಪೂರಕವಲ್ಲದ ಮಹಾರಾಷ್ಟ್ರ-ಹರಿಯಾಣ ಚುನಾವಣೆ ಫಲಿತಾಂಶ

ಪ್ರಸ್ತುತ ದೇಶದೆಲ್ಲೆಡೆ ಪ್ರಧಾನಿ ಮೋದಿ ಅಲೆ ಇದೆ ಎಂಬ ಸಂದೇಶವನ್ನು ನೀಡಲಾಯಿತಾದರೂ, ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ತೀರ್ಪು ಬಿಜೆಪಿಗೆ ಪೂರಕವಾಗಿಯೇನೂ ಬಂದಿರಲಿಲ್ಲ. ಅದರಲ್ಲೂ ಉಪಚುನಾವಣೆಗಳಲ್ಲಿ ಬಿಜೆಪಿಯ ಯಶಸ್ಸಿನ ದರ ಕಡಿಮೆಯೇ. ಹರಿಯಾಣ ಮತ್ತು ಮಹಾರಾಷ್ಟ್ರ ಚುನಾವಣೆ ಫಲಿತಾಂಶವೂ ಇದನ್ನೇ ತೋರಿಸಿದೆ.
ಬಿಜೆಪಿ ಈ ಬಾರಿ ಮಹಾರಾಷ್ಟ್ರದಲ್ಲಿ ಏಕಾಂಗಿಯಾಗಿ 140 ಕ್ಷೇತ್ರದಲ್ಲಿ ಗೆಲ್ಲುವ ನಿರೀಕ್ಷೆ ಹೊಂದಿದ್ದರೆ, ಹರಿಯಾಣದಲ್ಲಿ ಮತ್ತೊಂದು ಅವಧಿಗೆ ಬಹುಮತ ಸರ್ಕಾರ ರಚನೆ ಮಾಡುವ ಮಹತ್ವಾಕಾಂಕ್ಷೆಯಲ್ಲಿತ್ತು. ಆದರೆ, ಮಹಾರಾಷ್ಟ್ರದಲ್ಲಿ ಬಿಜೆಪಿ ಕೇವಲ 104 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರೆ, ಹರಿಯಾಣದಲ್ಲಿ ಬಹುಮತ ಗಳಿಸಲು ಎಡವಿ ಮುಖಭಂಗ ಅನುಭವಿಸಿತ್ತು.

ಅಲ್ಲದೆ, ಮಹಾರಾಷ್ಟ್ರ-ಹರಿಯಾಣ ವಿಧಾನಸಭೆ ಚುನಾವಣೆ ಜೊತೆಗೆ 17 ರಾಜ್ಯದ 51 ವಿಧಾನಸಭೆ ಹಾಗೂ 2 ಲೋಕಸಭೆಗೂ ಉಪಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲೂ ಬಿಜೆಪಿ ಶೇ.70 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಬಿಜೆಪಿ ತವರೂರು ಗುಜರಾತ್‍ನಲ್ಲೇ 6 ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಇನ್ನು ಈ ಚುನಾವಣೆಯಲ್ಲಿ ಬೇರೆ ಪಕ್ಷಗಳಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ್ದ ಗುಜರಾತ್‍ನ ಹಿಂದುಳಿದ ವರ್ಗಗಳ ನಾಯಕ ಅಲ್ಪೇಶ್ ಠಾಕೂರ್, ಮಹಾರಾಷ್ಟ್ರದ ರಾಜ ವಂಶಸ್ಥ ಉದಯನ್ರಾಜೆ ಬೋಸಲೆ ಹಾಗೂ ಹರಿಯಾಣದ ಸೊನಾಲಿ ಪೋಗಟ್ ಸೋಲು ಕಂಡಿರುವುದು ಪಕ್ಷಾಂತರಿಗಳಲ್ಲಿ ಭಯಕ್ಕೆ ಕಾರಣವಾಗಿದೆ.

ಅಸಲಿಗೆ ಆರ್ಥಿಕ ಹಿಂಜರಿತ, ರೂಪಾಯಿ ಮೌಲ್ಯದ ಕುಸಿತ, ಬ್ಯಾಂಕ್‍ಗಳು ದಿವಾಳಿಯಾಗಿರುವುದು, ಪೆಟ್ರೋಲ್ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ಅನೇಕ ವಿಚಾರಗಳು ಸಾಮಾನ್ಯವಾಗಿ ಬಿಜೆಪಿ ವಿರೋಧಿ ಅಲೆಗೆ ಕಾರಣವಾಗಿದೆ. ಹೀಗಾಗಿ ಈ ಚುನಾವಣೆಯ ಫಲಿತಾಂಶ ರಾಜ್ಯದ ಉಪಚುನಾವಣೆಯ ಮೇಲೂ ಪ್ರಭಾವ ಬೀರಲಿದೆ. ಅಲ್ಲದೆ, ರಾಜ್ಯದ ಅನರ್ಹ ಶಾಸಕರ ವಿರುದ್ಧ 17 ಕ್ಷೇತ್ರದಲ್ಲೂ ಜನಾಭಿಪ್ರಾಯವು ಪಕ್ಷಾಂತರಿಗಳ ಪರ ಇರುತ್ತದೆಂದು ಭಾವಿಸಲಾಗದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...