Homeಕರ್ನಾಟಕಅನರ್ಹ ಶಾಸಕರ ರಾಜಕೀಯ ಭವಿಷ್ಯ ಮುಂದೇನು?

ಅನರ್ಹ ಶಾಸಕರ ರಾಜಕೀಯ ಭವಿಷ್ಯ ಮುಂದೇನು?

- Advertisement -
- Advertisement -

| ಅಶೋಕ್ |

ಬಿಜೆಪಿ ತವರೂರು ಗುಜರಾತ್‍ನಲ್ಲೇ 6 ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಇನ್ನು ಈ ಚುನಾವಣೆಯಲ್ಲಿ ಬೇರೆ ಪಕ್ಷಗಳಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ್ದ ಗುಜರಾತ್‍ನ ಹಿಂದುಳಿದ ವರ್ಗಗಳ ನಾಯಕ ಅಲ್ಪೇಶ್ ಠಾಕೂರ್, ಮಹಾರಾಷ್ಟ್ರದ ರಾಜ ವಂಶಸ್ಥ ಉದಯನ್ರಾಜೆ ಬೋಸಲೆ ಹಾಗೂ ಹರಿಯಾಣದ ಸೊನಾಲಿ ಪೋಗಟ್ ಸೋಲು ಕಂಡಿರುವುದು ಪಕ್ಷಾಂತರಿಗಳಲ್ಲಿ ಭಯಕ್ಕೆ ಕಾರಣವಾಗಿದೆ.

ನಾವು ಆಮಿಷಗಳಿಗೆ ಒಳಗಾಗಿಲ್ಲ ಎಂದು ಹೇಳುತ್ತಲೇ 17 ಶಾಸಕರು ಸಾಮೂಹಿಕ ರಾಜೀನಾಮೆ ಕೊಟ್ಟು ಮಹಾರಾಷ್ಟ್ರ ಸರ್ಕಾರದ ಪ್ರಾಯೋಜಕತ್ವದಲ್ಲಿ ಅಲ್ಲಿನ ಐಶಾರಾಮಿ ಹೋಟೆಲ್‍ನಲ್ಲಿ ಉಳಿದುಕೊಂಡದ್ದು ಮತ್ತು ಈ ಎಲ್ಲಾ ಶಾಸಕರನ್ನು ಮುಲಾಜಿಲ್ಲದೆ ಸ್ಪೀಕರ್ ಅನರ್ಹಗೊಳಿಸಿದ್ದು ಈಗ ಹಳೆಯ ವಿಷಯ.

ಮೈತ್ರಿ ಸರ್ಕಾರದ ವಿರುದ್ಧ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ನೇರವಾಗಿ ಬಿಜೆಪಿ ಸರ್ಕಾರದ ರಚನೆಗೆ ಕಾರಣವಾಗಿದ್ದ ಅನರ್ಹ ಶಾಸಕರಿಗೆ ಆ ಎಲ್ಲಾ ಕ್ಷೇತ್ರದಲ್ಲೂ ಶತಾಯಗತಾಯ ಟಿಕೆಟ್ ನೀಡುವುದಾಗಿ ಬಿಜೆಪಿ ನಾಯಕರು ಮಾತು ಕೊಟ್ಟಿದ್ದಾರೆ. ಮೊನ್ನೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅನರ್ಹರಿಗೆ ಟಿಕೆಟ್ ನೀಡುವ ಕುರಿತು ಸಿಎಂ ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಮ್ಮತದ ನಿರ್ಣಯ ತೆಗೆದುಕೊಳ್ಳುವ ಮೂಲಕ ಅನರ್ಹರ ಪರ ಬ್ಯಾಟ್ ಬೀಸಿದ್ದಾರೆ.

ಆದರೆ, ಬಿಜೆಪಿ ಟಿಕೆಟ್ ನೀಡಿದ ಮಾತ್ರಕ್ಕೆ ಅನರ್ಹರ ಗೆಲುವು ನಿಶ್ಚಿತ ಎಂದು ಹೇಳಲು ಸಾಧ್ಯವಿಲ್ಲ. ಹಾಗಾದರೆ ಇದೀಗ ಅನರ್ಹರ ಮುಂದಿರುವ ಸವಾಲುಗಳೇನು? ಮಹಾರಾಷ್ಟ್ರ-ಹರಿಯಾಣ ಚುನಾವಣೆಯು ರಾಜ್ಯದ ಉಪಚುನಾವಣೆ ಮೇಲೆ ಬೀರುವ ಪ್ರಭಾವವೇನು? ಸುಪ್ರೀಂ ತೀರ್ಪು ಕಂಟಕವಾದರೆ ಅನರ್ಹರ ಗತಿ ಏನು? ಅನರ್ಹರು ರಾಜೀನಾಮೆ ನೀಡಿರುವ 17 ಕ್ಷೇತ್ರದಲ್ಲೂ ಬಂಡಾಯ ಅಭ್ಯರ್ಥಿಗಳ ನಡೆ ಏನು? ನಿಜಕ್ಕೂ ರಾಜ್ಯದ ಉಪಚುನಾವಣೆಯಲ್ಲಿ ಅನರ್ಹ ಶಾಸಕರು ಗೆಲ್ಲುವ ವಾತಾವರಣ ಇದೆಯೇ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್.

ಅನರ್ಹರಿಗೆ ಮುಹೂರ್ತವಿಟ್ಟ ಸುಪ್ರೀಂ; ಏನಾಗಲಿದೆ ತೀರ್ಪು?

ಮೈತ್ರಿ ಸರ್ಕಾರದ ವಿರುದ್ಧ ಬಂಡಾಯವೆದ್ದು ಸಾಮೂಹಿಕ ರಾಜೀನಾಮೆ ನೀಡಿದ್ದ 14 ಕಾಂಗ್ರೆಸ್ ಹಾಗೂ 3 ಜೆಡಿಎಸ್ ಶಾಸಕರನ್ನು ಸ್ಪೀಕರ್ ರಮೇಶ್‍ಕುಮಾರ್ ಪಕ್ಷಾಂತರ ನಿಷೇಧ ಕಾಯ್ದೆ ಶೆಡ್ಯೂಲ್ 10ರ ಅನ್ವಯ ಕಳೆದ ಜುಲೈ 28ರಂದು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ನೀಡಿದ್ದರು. ಜೊತೆಗೆ ಈ ವಿಧಾನಸಭೆ ಚಾಲ್ತಿಯಲ್ಲಿರುವವರೆಗೆ ಯಾವುದೇ ಉಪಚುನಾವಣೆಯಲ್ಲಿ ಸ್ಪರ್ಧೆ ನಡೆಸುವಂತಿಲ್ಲ ಎಂಬುದೂ ಆದೇಶದ ಭಾಗವಾಗಿತ್ತು.

ಇದೇ ಕಾರಣಕ್ಕೆ ಸ್ಪೀಕರ್ ತೀರ್ಪನ್ನು ವಿರೋಧಿಸಿ ಅನರ್ಹ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಕಳೆದ ಎರಡು ವಾರದಿಂದ ವಾದ-ಪ್ರತಿವಾದವನ್ನು ಆಲಿಸಿರುವ ಸುಪ್ರೀಂಕೋರ್ಟ್ ತೀರ್ಪನ್ನು ನವೆಂಬರ್ 4ಕ್ಕೆ ಕಾಯ್ದಿರಿಸಿದೆ. ಆದರೆ, ತೀರ್ಪು ಅನರ್ಹ ಶಾಸಕರ ಪರವಾಗಿಯೇ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.

ಏಕೆಂದರೆ ಕಾಂಗ್ರೆಸ್ ಪರ ವಾದ ಮಂಡಿಸಿರುವ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ “ಪಕ್ಷಾಂತರ ಒಂದು ಸಾಮೂಹಿಕ ಪಿಡುಗಾಗಿ ಬದಲಾಗಿದ್ದು, ಇದಕ್ಕೆ ನ್ಯಾಯಾಲಯದ ತೀರ್ಪು ಔಷಧಿಯಾಗಬೇಕು. ಹೀಗೆ ಆಮಿಷಗಳಿಗೆ ಬಲಿಯಾಗಿ ಪಕ್ಷದ್ರೋಹ ಮಾಡುವವರಿಗೆ ತಕ್ಕ ಪಾಠವಾಗಬೇಕು ಎಂದು ನ್ಯಾಯಮೂರ್ತಿಗಳ ಒತ್ತಾಯಿಸಿದ್ದಾರೆ. ಅಲ್ಲದೆ, ಈ ಪ್ರಕರಣವನ್ನು ಸುಪ್ರೀಂಕೋರ್ಟ್‍ನ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಬೇಕು” ಎಂದು ಮನವಿ ಮಾಡಿದ್ದಾರೆ.

ಅಕಸ್ಮಾತ್ ನ್ಯಾಯಾಲಯ ಇವರ ವಾದಕ್ಕೆ ಮನ್ನಣೆ ನೀಡಿ ಈ ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ ಮಾಡಿದರೆ ಅನರ್ಹರು ಉಪಚುನಾವಣೆ ಆಸೆಯನ್ನು ಬಿಡಲೇಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಒಂದುವೇಳೆ ತೀರ್ಪು ಅನರ್ಹರ ಪರ ಹೊರ ಬಿದ್ದರೂ ಸಹ ಖುಷಿ ಪಡಲು ಕಾರಣವಿಲ್ಲ. ಏಕೆಂದರೆ ಅನರ್ಹರ ಸೋಲಿಗೆ ಉದಾಹರಣೆಯಾಗಿ ಕಣ್ಣ ಮುಂದಿದೆ ತಮಿಳುನಾಡು ರಾಜಕಾರಣ. ಅನರ್ಹರಾದರೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಪಡೆದುಕೊಂಡ ಶಾಸಕರು ಚುನಾವಣೆಯಲ್ಲಿ ಸೋಲನುಭವಿಸಿದ್ದರು.

ಕರ್ನಾಟಕದಲ್ಲೂ ಅನರ್ಹ ಶಾಸಕರ ವಿರುದ್ಧ ಇದೇ ರೀತಿಯ ವ್ಯಾಪಕ ಜನಾಭಿಪ್ರಾಯ ಇದೆ. ಅಕಸ್ಮಾತ್ ಇವರು ಚುನಾವಣೆಯಲ್ಲಿ ಸ್ಪರ್ಧೆ ನಡೆಸಿದರೂ ಗೆಲ್ಲಲು ಬೇಕಾದ ಪೂರಕ ವಾತಾವರಣ ಕ್ಷೇತ್ರದಲ್ಲಿ ಇಲ್ಲ. ಅಲ್ಲದೆ, ಸ್ಪೀಕರ್ ರಮೇಶ್‍ಕುಮಾರ್ ಸಾಮೂಹಿಕ ರಾಜೀನಾಮೆ ಪ್ರಕರಣವನ್ನು ಸಂಪೂರ್ಣ ವಿಚಾರಣೆ ನಡೆಸಿ ಕಾನೂನುತಜ್ಞರ ಅಭಿಪ್ರಾಯ ಪಡೆದೇ ತೀರ್ಪು ನೀಡಿದ್ದಾರೆ. ಹೀಗಾಗಿ ಸುಪ್ರೀಂಕೋರ್ಟ್ ಬಹುತೇಕ ಸ್ಪೀಕರ್ ತೀರ್ಪನ್ನು ಎತ್ತಿಹಿಡಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಒಂದುವೇಳೆ ಇದು ಸಾಧ್ಯವಾದರೆ ಅನರ್ಹ ಶಾಸಕರ ರಾಜಕೀಯ ಭವಿಷ್ಯ ಬಹುತೇಕ
ಅಂತ್ಯವಾದಂತೆಯೇ ಸರಿ.

ಬಿಜೆಪಿಗೆ ಪೂರಕವಲ್ಲದ ಮಹಾರಾಷ್ಟ್ರ-ಹರಿಯಾಣ ಚುನಾವಣೆ ಫಲಿತಾಂಶ

ಪ್ರಸ್ತುತ ದೇಶದೆಲ್ಲೆಡೆ ಪ್ರಧಾನಿ ಮೋದಿ ಅಲೆ ಇದೆ ಎಂಬ ಸಂದೇಶವನ್ನು ನೀಡಲಾಯಿತಾದರೂ, ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ತೀರ್ಪು ಬಿಜೆಪಿಗೆ ಪೂರಕವಾಗಿಯೇನೂ ಬಂದಿರಲಿಲ್ಲ. ಅದರಲ್ಲೂ ಉಪಚುನಾವಣೆಗಳಲ್ಲಿ ಬಿಜೆಪಿಯ ಯಶಸ್ಸಿನ ದರ ಕಡಿಮೆಯೇ. ಹರಿಯಾಣ ಮತ್ತು ಮಹಾರಾಷ್ಟ್ರ ಚುನಾವಣೆ ಫಲಿತಾಂಶವೂ ಇದನ್ನೇ ತೋರಿಸಿದೆ.
ಬಿಜೆಪಿ ಈ ಬಾರಿ ಮಹಾರಾಷ್ಟ್ರದಲ್ಲಿ ಏಕಾಂಗಿಯಾಗಿ 140 ಕ್ಷೇತ್ರದಲ್ಲಿ ಗೆಲ್ಲುವ ನಿರೀಕ್ಷೆ ಹೊಂದಿದ್ದರೆ, ಹರಿಯಾಣದಲ್ಲಿ ಮತ್ತೊಂದು ಅವಧಿಗೆ ಬಹುಮತ ಸರ್ಕಾರ ರಚನೆ ಮಾಡುವ ಮಹತ್ವಾಕಾಂಕ್ಷೆಯಲ್ಲಿತ್ತು. ಆದರೆ, ಮಹಾರಾಷ್ಟ್ರದಲ್ಲಿ ಬಿಜೆಪಿ ಕೇವಲ 104 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರೆ, ಹರಿಯಾಣದಲ್ಲಿ ಬಹುಮತ ಗಳಿಸಲು ಎಡವಿ ಮುಖಭಂಗ ಅನುಭವಿಸಿತ್ತು.

ಅಲ್ಲದೆ, ಮಹಾರಾಷ್ಟ್ರ-ಹರಿಯಾಣ ವಿಧಾನಸಭೆ ಚುನಾವಣೆ ಜೊತೆಗೆ 17 ರಾಜ್ಯದ 51 ವಿಧಾನಸಭೆ ಹಾಗೂ 2 ಲೋಕಸಭೆಗೂ ಉಪಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲೂ ಬಿಜೆಪಿ ಶೇ.70 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಬಿಜೆಪಿ ತವರೂರು ಗುಜರಾತ್‍ನಲ್ಲೇ 6 ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಇನ್ನು ಈ ಚುನಾವಣೆಯಲ್ಲಿ ಬೇರೆ ಪಕ್ಷಗಳಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ್ದ ಗುಜರಾತ್‍ನ ಹಿಂದುಳಿದ ವರ್ಗಗಳ ನಾಯಕ ಅಲ್ಪೇಶ್ ಠಾಕೂರ್, ಮಹಾರಾಷ್ಟ್ರದ ರಾಜ ವಂಶಸ್ಥ ಉದಯನ್ರಾಜೆ ಬೋಸಲೆ ಹಾಗೂ ಹರಿಯಾಣದ ಸೊನಾಲಿ ಪೋಗಟ್ ಸೋಲು ಕಂಡಿರುವುದು ಪಕ್ಷಾಂತರಿಗಳಲ್ಲಿ ಭಯಕ್ಕೆ ಕಾರಣವಾಗಿದೆ.

ಅಸಲಿಗೆ ಆರ್ಥಿಕ ಹಿಂಜರಿತ, ರೂಪಾಯಿ ಮೌಲ್ಯದ ಕುಸಿತ, ಬ್ಯಾಂಕ್‍ಗಳು ದಿವಾಳಿಯಾಗಿರುವುದು, ಪೆಟ್ರೋಲ್ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ಅನೇಕ ವಿಚಾರಗಳು ಸಾಮಾನ್ಯವಾಗಿ ಬಿಜೆಪಿ ವಿರೋಧಿ ಅಲೆಗೆ ಕಾರಣವಾಗಿದೆ. ಹೀಗಾಗಿ ಈ ಚುನಾವಣೆಯ ಫಲಿತಾಂಶ ರಾಜ್ಯದ ಉಪಚುನಾವಣೆಯ ಮೇಲೂ ಪ್ರಭಾವ ಬೀರಲಿದೆ. ಅಲ್ಲದೆ, ರಾಜ್ಯದ ಅನರ್ಹ ಶಾಸಕರ ವಿರುದ್ಧ 17 ಕ್ಷೇತ್ರದಲ್ಲೂ ಜನಾಭಿಪ್ರಾಯವು ಪಕ್ಷಾಂತರಿಗಳ ಪರ ಇರುತ್ತದೆಂದು ಭಾವಿಸಲಾಗದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...