Homeರಾಜಕೀಯಅಪರಾ-ತಪರಾ: ಅಕೌಂಟಿಗೆ ಹಣ ಮತ್ತು ಕೌಂಟ್‌ಲೆಸ್ ಸುಳ್ಳು

ಅಪರಾ-ತಪರಾ: ಅಕೌಂಟಿಗೆ ಹಣ ಮತ್ತು ಕೌಂಟ್‌ಲೆಸ್ ಸುಳ್ಳು

- Advertisement -
ಮಲ್ಲಿ |
2014ರ ಲೋಕಸಭಾ ಚುನಾವಣೆಯ ಪ್ರಚಾರದಿಂದ ಇಲ್ಲಿವರೆಗೆ ‘ಅಕೌಂಟಿಗೆ ರೊಕ್ಕ’ ಎಂಬುದನ್ನು ನರೇಂದ್ರ ಮೋದಿ ಬಡಬಡಿಸುತ್ತಲೇ ಬಂದಿದ್ದಾರೆ. ಈ ವಿಷಯದಲ್ಲಿ ಕೌಂಟ್‌ಲೆಸ್ (ಎಣಿಸಲಾಗದಷ್ಟು!) ಸುಳ್ಳುಗಳನ್ನು  ‘ಸಚ್ಚಾ’ ಪ್ರಧಾನಿ ಹೇಳುತ್ತಲೇ ಬಂದಿದ್ದು, ಆದರೆ 2016ರ ನಂತರ ಕಪ್ಪುಹಣದ ವಿಷಯವನ್ನು ಡ್ರಾಪ್ ಮಾಡಿಬಿಟ್ಟರು!
ಆದರೆ ಅಕೌಂಟು ಎಂಬ ಪದ ಮಾತ್ರ ಅವರ ನಾಲಿಗೆ ಮೇಲೆ ಸೀಟ್ ರಿಸರ್ವ್ ಮಾಡಿಕೊಂಡು ಕೂತು ಬಿಟ್ಟಿದೆ.
ಮೊದಲಿಗೆ, 2014ರ ಚುನಾವಣಾ ಪ್ರಚಾರದಲ್ಲಿ, ವಿದೇಶದಲ್ಲಿರುವ ಕಪ್ಪುಹಣ ವಾಪಸ್ ತರ್ತೇನೆ, ಎಲ್ಲರ ಅಕೌಂಟಿಗೂ ೧೫ ಲಕ್ಷ ಹಾಕ್ತೇನೆ ಎಂದರು.
* ಕಪ್ಪುಹಣ ತರೋದು ಗೋಲ್ವಾಲ್ಕರಾಣೆಗೂ ಸಾಧ್ಯವಿಲ್ಲ ಎಂದು ಅರಿವಾಯಿತು. ತಾವೂ ಗೆದ್ದಿದ್ದು ಅಂಥದೇ ಹಣದಿಂದ ಅಲ್ವಾ ಅಂತಾ ಆ ಹಣದ ಮೇಲೆ ಕರುಣೆ ಉಕ್ಕಿತು, ಅಂತಹ ಹಣದಾತರ ಸೇವೆ ಮಾಡಲು ಶುರು ಮಾಡಿದರು.
* ’15 ಲಕ್ಷ ಹಾಕಬೇಕು ಅನಕೊಂಡಿದ್ದೆ. ಆದರೆ ಈ ದೇಶದ ಕೋಟ್ಯಂತರ ಬಡವರಿಗೆ ಬ್ಯಾಂಕ್ ಅಕೌಂಟೇ ಇಲ್ಲ ಎಂಬುದು ಗೊತ್ತಾಗಿತು. ಅದಕ್ಕೇ ಜನಧನ್ ಅಕೌಂಟು ಆರಂಭಿಸಿದೆ…’ ಎಂದರು.
ಈ ಅಕೌಂಟುಗಳಿಗೆ ಝೀರೋ ಅಕೌಂಟು ಎಂದೂ ಕರೆಯಲಾಗುತ್ತಿದೆ. ಹೆಸರು ಸರಿಯಾಗಿಯೇ ಇದೆ.
* ‘ಡಿಜಿಟಲ್ ಇಂಡಿಯಾ’ ಶುರುವಾದ ಮೇಲೆ ಡಿಜಿಟಲ್ಲಾಗಿಯೇ ಹಣ ಟ್ರಾನ್ಸ್ಫರ್ ಮಾಡೋ ಯೋಚನೆ ಬಂತಂತೆ. ಅಂದರೆ ಮುಟ್ಟಲಾಗದ, ತಟ್ಟಲೂ ಆಗದ ಡಿಜಿಟಲ್ ಹಣ!
* ಈಗ 2019ರ ಚುನಾವಣೆ ಬಂತಲ್ಲ, ಸಣ್ಣ ರೈತರ ಅಕೌಂಟುಗಳಿಗೆ ಅದರಲ್ಲೂ ಝೀರೋ ಅಕೌಂಟುಗಳಿಗೆ ದಿನಕ್ಕೆ 15 ರೂ. ಹಾಕೋದಾಗಿ ರೀಲು ಬಿಟ್ರು. ‘15 ಲಕ್ಷ ರೂ.’ದಲ್ಲಿನ ಲಕ್ಷ ಅಲಕ್ಷ್ಯಕ್ಕೊಳಗಾದ ಕತೆ ಹೀಗಿದೆ ನೋಡಿ!
ಈಗ ತಮ್ಮ ಸ್ವಂತ 15 ರೂ.ನಲ್ಲಿ ಒಂದು ಚಾ ಕುಡಿದು, ಎಲೆ-ಅಡಿಕೆ-ಸುಣ್ಣ-ತಂಬಾಕು ತಿಂದು ಮೋದಿ ಮಕಕ್ಕ  ಉಗಿಯಲು ರೈತರಷ್ಟೇ ಅಲ್ಲ, ನಿರುದ್ಯೋಗಿ ಯುವ ಜನರೂ ರೆಡಿಯಾಗಿದ್ದಾರೆ.
ರೈತರ ಆದಾಯ ದ್ವಿಗುಣ ಆಗೇ ಬಿಟ್ಟಿದೆ!
ಮೋದಿ ಮತ್ತೆ ಮತ್ತೆ ಹೇಳುವುದು ರೈತರ ಆದಾಯವನ್ನು ದ್ವಿಗುಣ ಮಾಡ್ತೀವಿ ಅಂತಾ. ಆದರೆ ಆ ನಿಟ್ಟಿನಲ್ಲಿ ಯಾವ ಪ್ರಯತ್ನವನ್ನೂ ಮಾಡಲೇ ಇಲ್ಲ. ಆದರೆ ಒಂದರ್ಥದಲ್ಲಿ ಮೋದಿ ಕಾರಣದಿಂದಾಗಿ ರೈತರ ಆದಾಯ ದ್ವಿಗುಣಗೊಂಡಿದೆ:
ಉದಾಹರಣೆಗೆ: ಒಬ್ಬ ಸಣ್ಣ ರೈತನ ಸಾಲ ೫ ಲಕ್ಷ ಅಂತಾ ಇಟ್ಟುಕೊಳ್ಳಿ. ಅದನ್ನು ಹೀಗೂ ಹೇಳಬಹುದು: ‘ಆತನ/ಆಕೆಯ ಆದಾಯ  –5 ಲಕ್ಷ ರೂ (ಮೈನಸ್ 5 ಲಕ್ಷ ರೂ)’…..ಈಗ ಮೋದಿಯ  ಕೃಷಿ ವಿರೋಧಿ ನೀತಿಯಿಂದಾಗಿ ಆ ರೈತನ ಸಾಲ 10 ಲಕ್ಷಕ್ಕೆ ಏರಿದೆ. ಅಂದರೆ ಆ ರೈತನ ಆದಾಯ ಈಗ -10 ಲಕ್ಷ ರೂ!  ಆಯಿತಲ್ಲ ರೈತನ ಆದಾಯ ದ್ವಿಗುಣ!
                       ****
೨೦೧೪ರ ಚುನಾವಣಾ ಪ್ರಚಾರದಿಂದ ಇಲ್ಲಿವರೆಗೆ ಸುಳ್ಳುಗಳನ್ನೇ ಹೇಳುತ್ತ ಜನದ್ರೋಹಿ ಆಡಳಿತ ನೀಡಿದ, ಅಕೌಂಟೆಬಿಲಿಟಿಯೇ (ಹೊಣೆಗಾರಿಕೆ) ಇಲ್ಲದ ಈ ಮನುಷ್ಯನನ್ನು ಇನ್ನೂ ಹಾಡಿ ಹೊಗಳುವ ಭಕ್ತರಿದ್ದಾರಲ್ಲ, ಅವರಿನ್ನೂ ಮೋದಿಯ ಪೆಪ್ಪರಮೆಂಟು ಚೀಪುತ್ತಲೇ ಇದ್ದಾರೆ….
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...