Homeರಾಜಕೀಯಅಪರಾ-ತಪರಾ: ಅಕೌಂಟಿಗೆ ಹಣ ಮತ್ತು ಕೌಂಟ್‌ಲೆಸ್ ಸುಳ್ಳು

ಅಪರಾ-ತಪರಾ: ಅಕೌಂಟಿಗೆ ಹಣ ಮತ್ತು ಕೌಂಟ್‌ಲೆಸ್ ಸುಳ್ಳು

- Advertisement -
ಮಲ್ಲಿ |
2014ರ ಲೋಕಸಭಾ ಚುನಾವಣೆಯ ಪ್ರಚಾರದಿಂದ ಇಲ್ಲಿವರೆಗೆ ‘ಅಕೌಂಟಿಗೆ ರೊಕ್ಕ’ ಎಂಬುದನ್ನು ನರೇಂದ್ರ ಮೋದಿ ಬಡಬಡಿಸುತ್ತಲೇ ಬಂದಿದ್ದಾರೆ. ಈ ವಿಷಯದಲ್ಲಿ ಕೌಂಟ್‌ಲೆಸ್ (ಎಣಿಸಲಾಗದಷ್ಟು!) ಸುಳ್ಳುಗಳನ್ನು  ‘ಸಚ್ಚಾ’ ಪ್ರಧಾನಿ ಹೇಳುತ್ತಲೇ ಬಂದಿದ್ದು, ಆದರೆ 2016ರ ನಂತರ ಕಪ್ಪುಹಣದ ವಿಷಯವನ್ನು ಡ್ರಾಪ್ ಮಾಡಿಬಿಟ್ಟರು!
ಆದರೆ ಅಕೌಂಟು ಎಂಬ ಪದ ಮಾತ್ರ ಅವರ ನಾಲಿಗೆ ಮೇಲೆ ಸೀಟ್ ರಿಸರ್ವ್ ಮಾಡಿಕೊಂಡು ಕೂತು ಬಿಟ್ಟಿದೆ.
ಮೊದಲಿಗೆ, 2014ರ ಚುನಾವಣಾ ಪ್ರಚಾರದಲ್ಲಿ, ವಿದೇಶದಲ್ಲಿರುವ ಕಪ್ಪುಹಣ ವಾಪಸ್ ತರ್ತೇನೆ, ಎಲ್ಲರ ಅಕೌಂಟಿಗೂ ೧೫ ಲಕ್ಷ ಹಾಕ್ತೇನೆ ಎಂದರು.
* ಕಪ್ಪುಹಣ ತರೋದು ಗೋಲ್ವಾಲ್ಕರಾಣೆಗೂ ಸಾಧ್ಯವಿಲ್ಲ ಎಂದು ಅರಿವಾಯಿತು. ತಾವೂ ಗೆದ್ದಿದ್ದು ಅಂಥದೇ ಹಣದಿಂದ ಅಲ್ವಾ ಅಂತಾ ಆ ಹಣದ ಮೇಲೆ ಕರುಣೆ ಉಕ್ಕಿತು, ಅಂತಹ ಹಣದಾತರ ಸೇವೆ ಮಾಡಲು ಶುರು ಮಾಡಿದರು.
* ’15 ಲಕ್ಷ ಹಾಕಬೇಕು ಅನಕೊಂಡಿದ್ದೆ. ಆದರೆ ಈ ದೇಶದ ಕೋಟ್ಯಂತರ ಬಡವರಿಗೆ ಬ್ಯಾಂಕ್ ಅಕೌಂಟೇ ಇಲ್ಲ ಎಂಬುದು ಗೊತ್ತಾಗಿತು. ಅದಕ್ಕೇ ಜನಧನ್ ಅಕೌಂಟು ಆರಂಭಿಸಿದೆ…’ ಎಂದರು.
ಈ ಅಕೌಂಟುಗಳಿಗೆ ಝೀರೋ ಅಕೌಂಟು ಎಂದೂ ಕರೆಯಲಾಗುತ್ತಿದೆ. ಹೆಸರು ಸರಿಯಾಗಿಯೇ ಇದೆ.
* ‘ಡಿಜಿಟಲ್ ಇಂಡಿಯಾ’ ಶುರುವಾದ ಮೇಲೆ ಡಿಜಿಟಲ್ಲಾಗಿಯೇ ಹಣ ಟ್ರಾನ್ಸ್ಫರ್ ಮಾಡೋ ಯೋಚನೆ ಬಂತಂತೆ. ಅಂದರೆ ಮುಟ್ಟಲಾಗದ, ತಟ್ಟಲೂ ಆಗದ ಡಿಜಿಟಲ್ ಹಣ!
* ಈಗ 2019ರ ಚುನಾವಣೆ ಬಂತಲ್ಲ, ಸಣ್ಣ ರೈತರ ಅಕೌಂಟುಗಳಿಗೆ ಅದರಲ್ಲೂ ಝೀರೋ ಅಕೌಂಟುಗಳಿಗೆ ದಿನಕ್ಕೆ 15 ರೂ. ಹಾಕೋದಾಗಿ ರೀಲು ಬಿಟ್ರು. ‘15 ಲಕ್ಷ ರೂ.’ದಲ್ಲಿನ ಲಕ್ಷ ಅಲಕ್ಷ್ಯಕ್ಕೊಳಗಾದ ಕತೆ ಹೀಗಿದೆ ನೋಡಿ!
ಈಗ ತಮ್ಮ ಸ್ವಂತ 15 ರೂ.ನಲ್ಲಿ ಒಂದು ಚಾ ಕುಡಿದು, ಎಲೆ-ಅಡಿಕೆ-ಸುಣ್ಣ-ತಂಬಾಕು ತಿಂದು ಮೋದಿ ಮಕಕ್ಕ  ಉಗಿಯಲು ರೈತರಷ್ಟೇ ಅಲ್ಲ, ನಿರುದ್ಯೋಗಿ ಯುವ ಜನರೂ ರೆಡಿಯಾಗಿದ್ದಾರೆ.
ರೈತರ ಆದಾಯ ದ್ವಿಗುಣ ಆಗೇ ಬಿಟ್ಟಿದೆ!
ಮೋದಿ ಮತ್ತೆ ಮತ್ತೆ ಹೇಳುವುದು ರೈತರ ಆದಾಯವನ್ನು ದ್ವಿಗುಣ ಮಾಡ್ತೀವಿ ಅಂತಾ. ಆದರೆ ಆ ನಿಟ್ಟಿನಲ್ಲಿ ಯಾವ ಪ್ರಯತ್ನವನ್ನೂ ಮಾಡಲೇ ಇಲ್ಲ. ಆದರೆ ಒಂದರ್ಥದಲ್ಲಿ ಮೋದಿ ಕಾರಣದಿಂದಾಗಿ ರೈತರ ಆದಾಯ ದ್ವಿಗುಣಗೊಂಡಿದೆ:
ಉದಾಹರಣೆಗೆ: ಒಬ್ಬ ಸಣ್ಣ ರೈತನ ಸಾಲ ೫ ಲಕ್ಷ ಅಂತಾ ಇಟ್ಟುಕೊಳ್ಳಿ. ಅದನ್ನು ಹೀಗೂ ಹೇಳಬಹುದು: ‘ಆತನ/ಆಕೆಯ ಆದಾಯ  –5 ಲಕ್ಷ ರೂ (ಮೈನಸ್ 5 ಲಕ್ಷ ರೂ)’…..ಈಗ ಮೋದಿಯ  ಕೃಷಿ ವಿರೋಧಿ ನೀತಿಯಿಂದಾಗಿ ಆ ರೈತನ ಸಾಲ 10 ಲಕ್ಷಕ್ಕೆ ಏರಿದೆ. ಅಂದರೆ ಆ ರೈತನ ಆದಾಯ ಈಗ -10 ಲಕ್ಷ ರೂ!  ಆಯಿತಲ್ಲ ರೈತನ ಆದಾಯ ದ್ವಿಗುಣ!
                       ****
೨೦೧೪ರ ಚುನಾವಣಾ ಪ್ರಚಾರದಿಂದ ಇಲ್ಲಿವರೆಗೆ ಸುಳ್ಳುಗಳನ್ನೇ ಹೇಳುತ್ತ ಜನದ್ರೋಹಿ ಆಡಳಿತ ನೀಡಿದ, ಅಕೌಂಟೆಬಿಲಿಟಿಯೇ (ಹೊಣೆಗಾರಿಕೆ) ಇಲ್ಲದ ಈ ಮನುಷ್ಯನನ್ನು ಇನ್ನೂ ಹಾಡಿ ಹೊಗಳುವ ಭಕ್ತರಿದ್ದಾರಲ್ಲ, ಅವರಿನ್ನೂ ಮೋದಿಯ ಪೆಪ್ಪರಮೆಂಟು ಚೀಪುತ್ತಲೇ ಇದ್ದಾರೆ….
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....