Homeಅಂಕಣಗಳುಅಭಯೋತ್ಪಾದಕ ಮಸೂತಿ, ದರ್ಗಾ ಮತ್ತು ಮೌಲ್ವಿಗಳು

ಅಭಯೋತ್ಪಾದಕ ಮಸೂತಿ, ದರ್ಗಾ ಮತ್ತು ಮೌಲ್ವಿಗಳು

ಎಲ್ಲಾ ಸಂಗತಿಗಳು ಭಯೋತ್ಪಾದನೆಗೆ ಸಂಬಂಧಿಸಿವೆ ಎಂದು ಕತೆಕಟ್ಟಿ ಜನರಲ್ಲಿ ಭಯವನ್ನು ಉತ್ಪಾದಿಸುವ ಮೂಲಭೂತವಾದಿಗಳೂ ಇದ್ದಾರೆ

- Advertisement -
- Advertisement -

| ಅರುಣ್ ಜೋಳದಕೂಡ್ಲಿಗಿ |

ಈಚೆಗೆ ಕೊಟ್ಟೂರಿನಲ್ಲಿ ನನ್ನ ಹೈಸ್ಕೂಲ್ ಮಿತ್ರನೊಬ್ಬ ಮಾತನಾಡುತ್ತಾ `ಗೆಳೆಯಾ ನಿನಗೆ ಗೊತ್ತಿಲ್ಲ ಈ ಮಸೂತಿ, ದರ್ಗಾ, ಮೌಲ್ವಿಗಳೆಲ್ಲಾ ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿದ್ದಾರೆ’ ಎಂದ. ನಾನು ಅದು ಹೇಗೆ ಹೇಳ್ತೀಯ, ಬಾ ಕೊಟ್ಟೂರಲ್ಲಿರುವ ಎಲ್ಲಾ ಮಸೂತಿಗಳನ್ನು ಒಮ್ಮೆ ಸುತ್ತಾಕಿಕೊಂಡು ಬರೋಣ, ನಿನ್ನ ಮಾತಿಗೆ ಸಾಕ್ಷಿ ತೋರಿಸು ಅಂದೆ. ಆತ ತಡವರಿಸುತ್ತ `ಹಂಗಲ್ಲ ಕೆಲವು ಮಸೀತಿಗಳು ಹಂಗೆ ಇದಾವೆ ಅಂದ’ ಆಗ ನಾನು ಮತ್ತೆ `ಸರಿ ನೀನು ಹೇಳೋವಂತ ಮಸೀತಿಗಳನ್ನಾದರೂ ತೋರಿಸು’ ಅಂದೆ. ಕೊನೆಗೆ ಆತ ಮತ್ತಷ್ಟು ಗಲಿಬಿಲಿಗೊಂಡು `ನನಗೆ ಪಕ್ಕ ಗೊತ್ತಿಲ್ಲ, ಆದ್ರ ನಾನು ಹೇಳೋ ಮಾತಂತು ಸತ್ಯ’ ಅಂದ. ನಾನು `ಅರೆ ನಿನ್ನ ಮಾತಿಗೆ ಒಂದಾದ್ರೂ ಸಾಕ್ಷಿ ತೋರಿಸೋಕೆ ರೆಡಿ ಇಲ್ಲ, ಆದ್ರೆ `ನಾನೇಳೋ ಮಾತು ಮಾತ್ರ ಸತ್ಯ’ ಅಂದ್ರೆ ಹೇಗೆ ಅಂದೆ. ಗೆಳೆಯ ಸ್ವಲ್ಪ ವಿಚಲಿತನಾದಂತೆ `ಇಲ್ಲ ಇಲ್ಲ ನಮ್ಮ ಭಾಗದ ಮುಸ್ಲಿಮರು ಒಳ್ಳೇರಿದಾರ, ಆದರೆ ಬೇರೆ ಕಡೆ ಮುಸ್ಲೀಮರು ಹಾಗಲ್ಲ’ ಎಂದ. ನಾನು ಮತ್ತೆ `ಅಲ್ಲಪ್ಪ ಬೇರೆ ಭಾಗದವರು ಇದೇ ಮಾತು ಹೇಳ್ತಾರೆ ಅಂತಿಟ್ಕೋ, ಹಾಗಾದ್ರೆ ಯಾವ ಭಾಗದ ಮುಸ್ಲೀಮರು ಒಳ್ಳೇರಲ್ಲ ಹೇಳು’ ಅಂದೆ. ಆತ ತಡವರಿಸುತ್ತಾ ಮಾತು ಬದಲಿಸಿ ಬೇರೆ ಖಾಸಗಿ ಸಂಗತಿಗಳಿಗೆ ತಿರುಗಿದ.
ನಾನು ಗೆಳೆಯನಿಗೆ ಮತ್ತೆ ಅದೆ ವಿಷಯ ಕೆದಕಿ `ಈಗ ಟೈಮಿದ್ರೆ ನೀನು ನನ್ನ ಜತೆ ಬಾ, ಇದೇ ಕೊಟ್ಟೂರ ಮಸೀದಿಯೊಂದರ ಹತ್ತಿರ ಕೂರೋಣ. ಹೆದರಿದ ಮಕ್ಕಳಿಗೆ ತಾಯತ ಕಟ್ಟಿಸಲಿಕ್ಕೋ, ಸಕ್ಕರೆ ಓದಿಸಲಿಕ್ಕೋ ಒಬ್ರು ಇಬ್ರಾದ್ರೂ ಬಂದೇ ಬರ್ತಾರೆ. ನೀನು ಹೇಳಿದ ಮಸೀದಿ ದರ್ಗಾಗಳೇ ಜನರಲ್ಲಿ ಹೇಗೆ ಭಯವನ್ನು ನಿವಾರಿಸುವ ನಂಬಿಕೆ ಹುಟ್ಟಿಸುತ್ತವೆಯೆಂದು ನೋಡೋಣ. ಇದನ್ನು ಇನ್ನಷ್ಟು ಖಚಿತಪಡಿಸಿಕೊಳ್ಳಲು ಮಸೂತಿಗೆ ಬಂದ ಜನರ ಬಳಿ ಮಾತಾಡೋಣ. ನೀನು ನನ್ನ ಜತೆ ಬರುವುದಾದರೆ ನನ್ನ ಮಾತಿಗೆ ಇಂತಹ ಸಾವಿರಾರು ದರ್ಗಾ ಮಸೂತಿಗಳನ್ನು ಸಾಕ್ಷಿಯಾಗಿ ತೋರಿಸಲು ಸಿದ್ಧನಿದ್ದೇನೆ’ ಎಂದೆ. ಗೆಳೆಯ `ಹೌದು ನೀನು ಹೇಳೋದ್ರಲ್ಲಿ ನಿಜವಿದೆ. ನನ್ನ ಮಗಳಿಗೂ ನಮ್ಮವ್ವ ನಮ್ಮೂರ ಮುಜಾವರನ ಬಳಿ ತಾಯಿತ ಕಟ್ಟಿಸಿದ್ಲು’ ಎಂದು ದಿಢೀರ್ ನನ್ನ ದಾರಿಗೆ ಬಂದು ನಿಂತ. ಗೆಳೆಯನ ಈ ಗೊಂದಲದ ಸ್ಥಿತಿ ನೋಡಿ ಏನು ಹೇಳುವುದೋ ತಿಳಿಯದಾಯಿತು. ಆದರೆ ಹಲವರು ಇಂತಹ ಗೊಂದಲದಲ್ಲಿದ್ದಾರೆ ಎನ್ನುವುದಕ್ಕೆ ಈತ ಸಂಕೇತದಂತಿದ್ದ.
ಕಳೆದ ವರ್ಷ ನಮ್ಮೂರಲ್ಲಿ ನಡೆದ ಒಂದು ಘಟನೆ. ಆ ರಾತ್ರಿ ನನ್ನ ಮಗ ವಿಪರೀತ ಅಳುವುದಕ್ಕೆ ಶುರು ಮಾಡಿದ, ನಾವು ಮಗನನ್ನು ಸಂತೈಸಲು ಪ್ರಯತ್ನಿಸುತ್ತಿದ್ದೆವು. ನನ್ನವ್ವ ಮೊಮ್ಮಗ ಹೆದರಿಕೊಂಡಂತಿದೆ ಎಂದರಿತು ನಮ್ಮೂರ ಅಲಾವಿ ದೇವರಿಗೆ ಬೆಲ್ಲದ ತೂಕದ ಹರಕೆ ಹೊತ್ತಳು. ಕಾಕತಾಳೀಯವೆಂಬಂತೆ ಮಗನ ಅಳು ನಿಂತಿತು. ಅವ್ವನ ಮುಖದಲ್ಲಿ ಸಂತಸ ಮೂಡಿ `ನೋಡು ದೇವ್ರಿಲ್ಲ ದೇವ್ರಿಲ್ಲ ಅಂತ ನೀನು ಮೊಂಡುವಾದ ಮಾಡ್ತಿ, ಅಲಾವಿ ದೇವ್ರು ಹುಸೇನಪ್ಪ ಹ್ಯಂಗ ಮಗೂನ ಹೆದ್ರಿಕಿನ ಹೋಗಿಸ್ತು’ ಎಂದು ನನ್ನನ್ನು ದುರುಗುಟ್ಟಿ ನೋಡಿದಳು. ನಾನೀಗ ಏನಾದರೂ ಮಾತನಾಡಿದರೆ, ಮನಸ್ಸಿಗೆ ನೋವಾಗುವುದೆಂದು ಭಾವಿಸಿ ಮೌನ ವಹಿಸಿದೆ. ಮಗ ಅಳುವುದನ್ನು ನಿಲ್ಲಿಸಿ ನಿದ್ದೆಗೆ ಜಾರಿದ್ದಕ್ಕೆ ನಿರಾಳವಾದೆವು. ಇದರ ತಾರ್ಕಿಕತೆಯ ಬಗ್ಗೆ ವಿಚಾರ ಮಾಡದೆ ನನ್ನವ್ವನ ನಂಬಿಕೆಯಲ್ಲಿ ಮಸೂತಿ, ಅಲಾವಿ ದೇವ್ರು ಭಯನಿವಾರಕ ಶಕ್ತಿಗಳಾಗಿ ಉಳಿದದ್ದು ನನ್ನ ಮನದಲ್ಲಿ ಉಳಿಯಿತು.
ಮೇಲಿನ ಎರಡೂ ಸಂಗತಿಗಳೂ ಒಂದಕ್ಕೊಂದು ವಿರುದ್ಧವಾಗಿವೆ. ಒಂದೆಡೆ ಭಾರತದಾದ್ಯಂತ ಗ್ರಾಮೀಣ ಭಾಗದಲ್ಲಿ ಮಸೂತಿ, ದರ್ಗಾ, ಮೌಲ್ವಿ ಎಂದರೆ ಭಯನಿವಾರಕ ಸ್ಥಳಗಳೆಂದು ಭಾವಿಸಿದ ದೊಡ್ಡ ಜನವರ್ಗವಿದೆ. ಮತ್ತೊಂದೆಡೆ ಭಯವನ್ನು ಉತ್ಪಾದಿಸುವ ನೆರೆಯ ಮುಸ್ಲಿಂ ದೇಶಗಳನ್ನು ಆಧರಿಸಿ ಇಡಿಯಾಗಿ ಮುಸ್ಲಿಮರ ಎಲ್ಲಾ ಸಂಗತಿಗಳು ಭಯೋತ್ಪಾದನೆಗೆ ಸಂಬಂಧಿಸಿವೆ ಎಂದು ಕತೆಕಟ್ಟಿ ಜನರಲ್ಲಿ ಭಯವನ್ನು ಉತ್ಪಾದಿಸುವ ಮೂಲಭೂತವಾದಿಗಳೂ ಇದ್ದಾರೆ. ಈ ಎರಡೂ ನೆಲೆಗಳ ಆಚೆ ವಾಸ್ತವ ಸಂಕೀರ್ಣವಾಗಿದೆ. ಬಹುಸಂಖ್ಯಾತ ಧರ್ಮಿಯರು ಅಹಮ್ಮಿನಿಂದ ಹುಟ್ಟಿಸುವ ಭಯದ ಕಾರಣಕ್ಕೆ ಮುಸ್ಲೀಮರಲ್ಲಿ ಅನಿವಾರ್ಯ ಆತಂಕದಿಂದ ಸ್ವರಕ್ಷಣೆಯ ಸಂಘಟಿತ ಚಟುವಟಿಕೆಗಳು ಕೆಲವೆಡೆ ನಡೆದಿರಬಹುದು. ಅದನ್ನು ಅಲ್ಲಗಳೆಯಲಾಗದು. ಆದರೆ ಬಹುಪಾಲು ಮಸೂತಿ, ದರ್ಗಾ, ಮೌಲ್ವಿಗಳು ಅಭಯೋತ್ಪಾದಕ ಅಥವಾ ಭಯಮುಕ್ತಗೊಳಿಸುವ ಚಟುವಟಿಕೆಗಳಲ್ಲಿ ಸಕ್ರಿಯವಾಗಿವೆ ಎನ್ನುವುದು ವಾಸ್ತವ. ಹೀಗೆ ಭಯಮುಕ್ತ ಕೇಂದ್ರಗಳಾಗಿರುವ ಮಸೂತಿ ಮತ್ತು ದರ್ಗಾಗಳು ಬಹುಪಾಲು ಸೂಫಿ ಸಂತರವು ಎನ್ನುವುದನ್ನೂ ಗಮನಿಸಬೇಕಿದೆ. ಹಾಗಾಗಿಯೇ ಸೂಫಿ ಸಂತರ ಬಗ್ಗೆ `ರೋಗನಿವಾರಕ’ ಪವಾಡ ಕತೆಗಳು ಹೆಚ್ಚಿವೆ.
ಕರ್ನಾಟಕದಾದ್ಯಂತ ಇರುವ ಮೊಹರಂ ಮಸೀತಿಗಳು ಮತ್ತು ಸೂಫಿ ಸಂತರ ದರ್ಗಾಗಳು ಈಗಲೂ ಭಯ ನಿವಾರಕ ಕೇಂದ್ರಗಳಂತೆ ಕೆಲಸ ಮಾಡುತ್ತವೆ. ಬೆಂಗಳೂರಿನ ತವಕ್ಕಲ್ ಮಸ್ತಾನ್ ಸಾಹೇಬನು ಎಳೆಮಕ್ಕಳನ್ನು ರಕ್ಷಿಸುವ ದೈವವಾಗಿದೆ. ನವಲಗುಂದದ ಯಮನೂರಪ್ಪನ ಉರುಸನ್ನು ಜನರು `ಜಡ್ಡಿನ ಜಾತ್ರೆ’ ಎಂದು ಕರೆಯುವ ವಾಡಿಕೆಯಿದೆ. ಕಾಯಿಲೆಗೆ ಬಿದ್ದ ಗಂಡನನ್ನು ಉಳಿಸಿಕೊಂಡು ಭಯ ನಿವಾರಿಸಿಕೊಳ್ಳಲು ಸವಣೂರಿನ ಬ್ರಹ್ಮಚಾರಿ ಸಂತ ಕಮಲ್ ಭಾಷಾನ ದರ್ಗಾದಲ್ಲಿ ಮಹಿಳೆಯರ ರಾಶಿಗಟ್ಟಲೆ ಹರಕೆಯ ಬಳೆಗಳಿವೆ. ದನಗಳಿಗೆ ರೋಗ ಬಂದಾಗ, ಅವು ಕಳೆದು ಹೋದಾಗ ಉಳಿಸುವ ಮತ್ತು ಹುಡುಕಿಕೊಡುವ ಕೆಲಸವನ್ನು ಬೈದೊಡ್ಡಿಯ ಹುಜೂರಸಾಬ, ಕುಸುನೂರಿನ ಗೋಕುರಸಾಬ, ಅಂಬತ್ತಿಯ ಶೇಕಮಾರ ಮುಂತಾದವರಿಗೆ ವಹಿಸಿ ಭಯಮುಕ್ತರಾಗುವುದಿದೆ. ಮೈನರೆದ ಹುಡುಗಿ ನೀರುಹಾಕಿಕೊಂಡ ಮೇಲೆ, ಮದುಮಕ್ಕಳು ಪ್ರಸ್ತಕ್ಕೆ ಮೊದಲು ‘ಓದಿಕೆ’ ಮಾಡಿಸುವುದು, ಮಕ್ಕಳಿಲ್ಲದವರು ಹರಸಿಕೊಳ್ಳುವುದು, ಸರಾಗವಾಗಿ ಹೆರಿಗೆಯಾಗಲೆಂದು ಗಬಿರ್sಣಿಯ ಕೈಗೆ ಗೋರಿ ಮೇಲಿನ ಬಟ್ಟೆತುಂಡು ಕಟ್ಟುವುದು, ಹುಟ್ಟಿದ ಕೂಸನ್ನು ಅಥವಾ ಕರುವನ್ನು ತಂದು ದರ್ಗಾಕ್ಕೆ ‘ಸಣ’ ಮಾಡಿಸುವುದು, ಫಸಲಿನ ಮೊದಲ ಕಟಾವನ್ನು ತಂದೊಪ್ಪಿಸುವುದು-ಇವೇ ಮುಂತಾದ ಫಲವಂತಿಕೆಗೆ ಸಂಬಂದಿsಸಿದ ಆಚರಣೆಗಳು ದರ್ಗಾ ಸಂಸ್ಕøತಿಯ ಭಾಗವಾಗಿ ಬೆಳೆದುಬಿಟ್ಟಿವೆ. ರಹಮತ್ ತರೀಕೆರೆಯವರು `ಕರ್ನಾಟಕದ ಸೂಫಿಗಳು’ ಕೃತಿಯಲ್ಲಿ ಇಂತಹ ದರ್ಗಾ ಮಸೂತಿಗಳ ಬಗೆಗೆ ವಿಶ್ಲೇಷಿಸಿದ್ದಾರೆ.
ಜನರು ದೆವ್ವ ಬಂದಿದೆ ಎಂದು ನಂಬುವ `ಗಾಳಿ’ ಬಿಡಿಸುವ ದರ್ಗಾಗಳಾದ ಲಕ್ಷ್ಮೇಶ್ವರದ ದೂದಪೀರಾ, ಕರೋಶಿಯ ಶಾನೂರುಬಾಬಾ, ಬಿಜಾಪುರದ ಅಬ್ದುಲ್ ರಜಾಕ್ ಖಾದ್ರಿ, ಮುರುಗಾಮಲೈನ ಅಮ್ಮಾಜಾನ್ ಬಾವಾಜಾನ್ ಹಾಗೂ ಎಳ್ಳಾರತಿಯ ಶೇಕ್ ಶಾವಲಿ ಮುಂತಾದವುಗಳನ್ನು ನೋಡಬಹುದು. ಇವೂ ಕೂಡ ದೆವ್ವವೆಂಬ ಭಯವನ್ನು ಸಮುದಾಯದ ಮನಸ್ಸಿನಿಂದ ಹೋಗಲಾಡಿಸಿ ಭಯಮುಕ್ತಗೊಳಿಸುವ ಕೆಲಸವೇ ಆಗಿದೆ. ಹೀಗೆ ಮೂಢನಂಬಿಕೆಯ ಕಾರಣಕ್ಕೋ, ಅರಿವಿನ ಕೊರತೆಯ ಕಾರಣಕ್ಕೋ, ಅಸಹಾಯಕತೆಯ ಕಾರಣಕ್ಕೋ ಜನರನ್ನು ಆವರಿಸಿರುವ ಹಲವು ಬಗೆಯ `ಭಯ’ಗಳನ್ನು ಹೋಗಲಾಡಿಸಿ `ಅಭಯೋತ್ಪಾದಕ’ ಕೇಂದ್ರಗಳಾದ ಮಸೂತಿ, ದರ್ಗಾ, ಮುಜಾವರ ಮುಂತಾದ ಸಂಗತಿಗಳನ್ನು ಭಯೋತ್ಪಾದಕ ಚಟುವಟಿಕೆಗಳ ಜತೆ ಹೆಣೆಯುವು ಎಷ್ಟು ಅಮಾನವೀಯ ಎನ್ನುವುದನ್ನು ಅರಿಯಬೇಕಿದೆ. ಜನಸಾಮಾನ್ಯರಿಗೆ ಅವರದೇ ಆದ `ಜನತೆಯ ಧರ್ಮವಿದೆ’ ಆ ಜನತೆಯ ಧರ್ಮದಲ್ಲಿ ಹಿಂದು ಮುಸ್ಲಿಂ ಜೈನ ಬೌದ್ಧ ಮತಗಳೆಲ್ಲಾ ಬೆರೆತು ಹೊಸ ಆಕಾರವನ್ನು ಪಡೆಯುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಜ ಅರುಣ್… ಜನತೆಯ ಧರ್ಮವೇ ಬೇರೆ.. ಅದಕ್ಕೆ ಮುಕ್ತ ಪ್ರಜ್ಞೆ ಇದೆ… ಹೀಗಾಗಿ ದೂರದಲ್ಲಿ ನಿಂತು ಕನ್ನಡಕಗಳನ್ನು ಹಾಕಿ ನೋಡುವವರ ಗರ ಬಿಡಿಸಲಾಗದು…. ಹತ್ತಿರ ಹೋಗಿ ಸಣ ಮಾಡಿದರೆ ಸಾಕು… ಈಗಲೂ ಎಷ್ಟೋ ಮಠಗಳು ಅಂತ್ರ ತಾಯಿತ ಕಟ್ಟುತ್ತಿವೆ… ಬೂದಿ ಹಚ್ಚಿ ದೆವ್ವ ಬಿಡಿಸುತ್ತಿವೆ….

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...