Homeಅಂಕಣಗಳುಅಮ್ಮನ ದಿನದಂದು ಅಮ್ಮಿ

ಅಮ್ಮನ ದಿನದಂದು ಅಮ್ಮಿ

- Advertisement -
- Advertisement -

2017ರವರೆಗೂ ಪ್ರತಿ ವರ್ಷ ಮಾರ್ಚ್ 08 ಅಥವಾ ಅದರ ಸುತ್ತಾಮುತ್ತಾ ಪಿ.ಲಂಕೇಶ್‌ರ ಜನ್ಮದಿನದ ನೆನಪಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮ ನಡೆಯುತ್ತಿತ್ತು. ನಾಡಿನ ಹಿರಿಯ ಚಿಂತಕರು, ಹೋರಾಟಗಾರರು ಮತ್ತು ಸಾಹಿತಿ ಕಲಾವಿದರನ್ನು ಕರೆಸಿ ಇಡೀ ದಿನ ಸಮಾಜದ ಆಗುಹೋಗುಗಳ ಬಗ್ಗೆ ಚರ್ಚೆ, ಪುಸ್ತಕ ಬಿಡುಗಡೆ, ಸಿನಿಮಾ ವೀಕ್ಷಣೆ ರೀತಿಯ ಹತ್ತು ಹಲವು ಕಾರ್ಯಕ್ರಮಗಳು ನಡೆಸಿಕೊಂಡು ಬಂದಿದ್ದವು. ಗೌರಿ ಲಂಕೇಶ್ ಇದರ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದರು.

ಆದರೆ 2017ರಲ್ಲಿ ಮತಾಂಧ ಶಕ್ತಿಗಳ ಗುಂಡಿಗೆ ಎದೆಯೊಡ್ಡಿ ಗೌರಿ ಅಮ್ಮ ಹುತಾತ್ಮರಾದ ನಂತರ, ಲಂಕೇಶ್ ನೆನಪು ಕಾರ್ಯಕ್ರಮ ನಿಂತುಹೋಯಿತು. ಆದರೆ ಅಪ್ಪನ ಹಾದಿಯಲ್ಲಿಯೇ ನಡೆದ, ಆಕ್ಟಿವಿಸ್ಟ್ ಜರ್ನಲಿಸ್ಟ್ ಆಗಿ ಅಪ್ಪನನ್ನುಮೀರಿಸಿದ ನಮ್ಮ ಗೌರಿ ಅಮ್ಮನನ್ನು ನೆನೆಯುವ ಜವಾಬ್ದಾರಿ ನಮ್ಮ ಮೇಲಿತ್ತು. ಹಾಗಾಗಿ ಅಮ್ಮನ ಜನ್ಮದಿನವಾದ ಜನವರಿ 29ನ್ನು ಕಳೆದ ವರ್ಷದಿಂದ ಗೌರಿದಿನವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ಬಾರಿ ಜನವರಿ 29ರಂದು ಅಮ್ಮನ ದಿನದಂದು ಅಮ್ಮಿ ಎಂಬ ಭಾವಪೂರ್ಣ ಸಿನಿಮಾ ನೋಡಿದ್ದಲ್ಲದೇ, ಅಮ್ಮಿಯನ್ನೇ ಇದಕ್ಕೆ ಕರೆಸಲಾಗಿತ್ತು.

ಗೌರಿ ಅಮ್ಮ ನಮ್ಮನ್ನೆಲ್ಲಾ ಮಕ್ಕಳೆಂದು ಭಾವಿಸಿ ಪೋಷಿಸಿದವರು. ಮರಿ ಎಂದು ಕರೆದು ಪ್ರೀತಿ ಕೊಟ್ಟವರು. ಹೋರಾಟಗಾರ ಮಕ್ಕಳಿಗಾಗಿ ಹಂಬಲಿಸುತ್ತಿದ್ದ, ಈ ಮಕ್ಕಳು ದೊಡ್ಡ ನಾಯಕರಾಗಿ ದೇಶ ಕಟ್ಟಬೇಕೆಂದು ಪರಿತಪಿಸುತ್ತಿದ್ದ ತಾಯಿಹೃದಯ ಗೌರಿ ಅಮ್ಮ. ದೇಶ ಕಟ್ಟುವ ಮತ್ತು ದೇಶ ಬದಲಿಸುವ ನಾಯಕರು ಹಾಗೂ ವಿದ್ವಾಂಸರನ್ನು ರೂಪಿಸುವ ಜೆಎನ್‌ಯು ವಿಶ್ವವಿದ್ಯಾಲಯಕ್ಕೆ ಓದಲು ಕಳಿಸಿದ ಮಗ ನಜೀಬ್‌ನನ್ನು ಕಳೆದುಕೊಂಡ ಅಮ್ಮಿ ನಫೀಸ್‌ರವರು ಅಂದು ನಮ್ಮ ಕಾರ್ಯಕ್ರಮದಲ್ಲಿದ್ದರು.

ಈ ಮತಾಂಧರು ಮಾನವೀಯತೆ ಇಲ್ಲದವರು ಎಂಬುದಕ್ಕೆ ಉದಾಹರಣೆಯಾಗಿ ನಜೀಬ್ ಪ್ರಕರಣವಿದೆ. ಗೌರಿ ಅಮ್ಮನನ್ನು ಕಳೆದು ಮಕ್ಕಳು ನಾವು ಅಲ್ಲಿ ಕುದಿಯುತ್ತಿದ್ದರೆ, ತನ್ನ ಮಗ ನಜೀಬ್‌ನನ್ನು ಕಳೆದುಕೊಂಡ ಕಿಚ್ಚು ನಫೀಸಾ ಅಮ್ಮಿಯಲ್ಲಿತ್ತು. ಇದರ ಕುರಿತಾಗಿಯೇ ಪೆಡೆಸ್ಟ್ರಿಯನ್ ಪಿಕ್ಚರ್ಸ್ ನಿರ್ಮಿಸಿರುವ ಅಮ್ಮಿ ಸಾಕ್ಷ್ಯಚಿತ್ರ ಮೊದಲು ಪ್ರದರ್ಶನಗೊಂಡಿತು. ನಜೀಬ್ ಎಂಬ ಅತ್ಯಂತ ಒಳ್ಳೆಯ ಹುಡುಗನ ವ್ಯಕ್ತಿತ್ವ, ಬಿಜೆಪಿ ಸಂಘಪರಿವಾರದ ಎಬಿವಿಪಿಯ ಹೊಲಸು ರಾಜಕೀಯವನ್ನು ಚಿತ್ರ ಬಿಚ್ಚಿಟ್ಟಿತು. ಜಡಗೊಂಡಿರುವ ವ್ಯವಸ್ಥೆಯನ್ನು ಬಡಿದೆಚ್ಚರಿಸಿ ನಜೀಬ್‌ನನ್ನು ವಾಪಸ್ ತರುವ ಸಂಕಲ್ಪದೊಂದಿಗೆ ಚಿತ್ರ ಮುಕ್ತಾಯವಾಗಿತ್ತು. ಅಮ್ಮನ ದಿನಕ್ಕೆ ಅಮ್ಮಿ ನಮ್ಮೆಲ್ಲರ ಹೋರಾಟದ ಕಿಚ್ಚನ್ನು ಎಚ್ಚರಿಸಿದರು. ಈಗ ಅವರು ತಾಯಿಯ ಮಮತೆ, ಮಗನನ್ನು ಹುಡುಕುತ್ತಿರುವ ದುಃಖತಪ್ತೆಯಾಗಿ ಮಾತ್ರವಲ್ಲದೇ, ಅದರ ಕಾರಣವನ್ನು ದೇಶದ ಪ್ರಸಕ್ತ ರಾಜಕೀಯ ಪರಿಸ್ಥಿತಿಯಲ್ಲಿ ಕಂಡುಕೊಂಡಿರುವ ಒಬ್ಬ ಚಿಂತಕಿಯಾಗಿ ರೂಪುಗೊಂಡಿದ್ದಾರೆ. ಅಷ್ಟು ಖಚಿತವಾಗಿ ಅವರು ಇಡೀ ದೇಶದ ಪರಿಸ್ಥಿತಿಯನ್ನು ವಿಶ್ಲೇಷಣಾತ್ಮಕವಾಗಿ ಮುಂದಿಟ್ಟರು.

ಅಮ್ಮಿ ನಫೀಸಾರವರ ಮಾತುಗಳು ನಮ್ಮೆದೆಯೊಕ್ಕ ಗುಂಡುಗಳಂತಾಗಿದ್ದವು. ಅಷ್ಟು ಸ್ಪಷ್ಟ ಮತ್ತು ಆವೇಗದಲ್ಲಿ ಮಾತಾಡಿದರು. ಅವರ ಧೈರ್ಯಕ್ಕೆ ಗೌರಿ ಸ್ಮಾರಕ ಟ್ರಸ್ಟ್ ವತಿಯಿಂದ ಪ್ರೊ. ಬಾಬು ಮ್ಯಾಥ್ಯೂ ಅಭಿನಂದನಾ ಮಾತುಗಳನ್ನಾಡಿದರು.
ಕನ್ನಡ ದಿನಪತ್ರಿಕೆ ವಾರ್ತಾಭಾರತಿಯ ಸಂಪಾದಕರಾದ ಅಬ್ದುಲ್ ಸಲಾಂ ಪುತ್ತಿಗೆಯವರು ಗೌರಿ ನೆನಪಿನ ಉಪನ್ಯಾಸ ನೀಡಿದರು. ಜಾತೀಯತೆ, ಬಂಡವಾಳಶಾಹಿ ಶೋಷಣೆ ಮತ್ತು ಮತಾಂಧತೆಯೇ ಭಾರತದ ಪ್ರಮುಖ ಶತ್ರುಗಳಾಗಿದ್ದು ಇಂದಿನ ಪ್ರಧಾನ ಶತ್ರುಗಳಾಗಿದ್ದು ಇವುಗಳನ್ನು ನಿರ್ಮೂಲನೆ ಮಾಡುವ ಶಪಥ ಮಾಡಬೇಕಾಗಿದೆ ಎಂದರು.

ಅಮ್ಮನ ದಿನದಂದು ಅವರ ಕನಸಿನ ನೂತನ www.naanugauri.com ವೆಬ್‌ಪೋರ್ಟಲ್‌ಅನ್ನು ಅವರ ತಂಗಿ ಕವಿತಾ ಲಂಕೇಶ್ ಲೋಕಾರ್ಪಣೆ ಮಾಡಿದರು. ಈ ಮೂಲಕ ಗೌರಿ ಸ್ಮಾರಕ ಟ್ರಸ್ಟ್ ಮುಖಾಂತರ ನಾವೆಲ್ಲರೂ ಒಂದು ಸಣ್ಣ ಗಿಫ್ಟ್ಅನ್ನು ಅಮ್ಮನಿಗೆ ನೀಡುತ್ತಿದ್ದೇವೆ. ನ್ಯಾಯಪಥ ಮುದ್ರಿತ ವಾರಪತ್ರಿಕೆ ಯಥಾಪ್ರಕಾರ ಮುಂದುವರೆಯುತ್ತದೆ. ಜೊತೆಗೆ ಈ ವೆಬ್ ಪೋರ್ಟಲ್ ಪ್ರತಿದಿನವೂ ಸತ್ಯಸುದ್ದಿಗಳನ್ನು ನಿಮ್ಮಲ್ಲಿಗೆ ತಲುಪಿಸುವ ಕೆಲಸ ಮಾಡಲಿದೆ. ಇದಕ್ಕಾಗಿ ನೂರು ಜನ

ನಜೀಬ್

ಬರಹಗಾರರು ನಮ್ಮೊಡನಿದ್ದಾರೆ.

ನಂತರ ಮದ್ಯ ನಿಷೇಧಕ್ಕೆ ಒತ್ತಾಯಿಸಿ ಪಾದಯಾತ್ರೆ ಬರುತ್ತಿದ್ದ ಮಹಿಳೆಯರ ಹೋರಾಟಕ್ಕೆ ಬೆಂಬಲ ಸೂಚಿಸಿ ಅಲ್ಲೆ ಒಂದಷ್ಟು ಹಣ ಸಂಗ್ರಹ ಮಾಡಿ ತಲುಪಿಸಲಾಯಿತು. ಈ ರೀತಿಯಾಗಿ ಅಮ್ಮನ ಹೋರಾಟದ ಸ್ಫೂರ್ತಿಯನ್ನು ಮತ್ತಷ್ಟು ಗಟ್ಟಿಗೊಳಿಸಲು ಅಮ್ಮನ ದಿನ ಅರ್ಥಪೂರ್ಣವಾಗಿ ಆಚರಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...