Homeಅಂಕಣಗಳುಅಮ್ಮನ ದಿನದಂದು ಅಮ್ಮಿ

ಅಮ್ಮನ ದಿನದಂದು ಅಮ್ಮಿ

- Advertisement -
- Advertisement -

2017ರವರೆಗೂ ಪ್ರತಿ ವರ್ಷ ಮಾರ್ಚ್ 08 ಅಥವಾ ಅದರ ಸುತ್ತಾಮುತ್ತಾ ಪಿ.ಲಂಕೇಶ್‌ರ ಜನ್ಮದಿನದ ನೆನಪಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮ ನಡೆಯುತ್ತಿತ್ತು. ನಾಡಿನ ಹಿರಿಯ ಚಿಂತಕರು, ಹೋರಾಟಗಾರರು ಮತ್ತು ಸಾಹಿತಿ ಕಲಾವಿದರನ್ನು ಕರೆಸಿ ಇಡೀ ದಿನ ಸಮಾಜದ ಆಗುಹೋಗುಗಳ ಬಗ್ಗೆ ಚರ್ಚೆ, ಪುಸ್ತಕ ಬಿಡುಗಡೆ, ಸಿನಿಮಾ ವೀಕ್ಷಣೆ ರೀತಿಯ ಹತ್ತು ಹಲವು ಕಾರ್ಯಕ್ರಮಗಳು ನಡೆಸಿಕೊಂಡು ಬಂದಿದ್ದವು. ಗೌರಿ ಲಂಕೇಶ್ ಇದರ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದರು.

ಆದರೆ 2017ರಲ್ಲಿ ಮತಾಂಧ ಶಕ್ತಿಗಳ ಗುಂಡಿಗೆ ಎದೆಯೊಡ್ಡಿ ಗೌರಿ ಅಮ್ಮ ಹುತಾತ್ಮರಾದ ನಂತರ, ಲಂಕೇಶ್ ನೆನಪು ಕಾರ್ಯಕ್ರಮ ನಿಂತುಹೋಯಿತು. ಆದರೆ ಅಪ್ಪನ ಹಾದಿಯಲ್ಲಿಯೇ ನಡೆದ, ಆಕ್ಟಿವಿಸ್ಟ್ ಜರ್ನಲಿಸ್ಟ್ ಆಗಿ ಅಪ್ಪನನ್ನುಮೀರಿಸಿದ ನಮ್ಮ ಗೌರಿ ಅಮ್ಮನನ್ನು ನೆನೆಯುವ ಜವಾಬ್ದಾರಿ ನಮ್ಮ ಮೇಲಿತ್ತು. ಹಾಗಾಗಿ ಅಮ್ಮನ ಜನ್ಮದಿನವಾದ ಜನವರಿ 29ನ್ನು ಕಳೆದ ವರ್ಷದಿಂದ ಗೌರಿದಿನವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ಬಾರಿ ಜನವರಿ 29ರಂದು ಅಮ್ಮನ ದಿನದಂದು ಅಮ್ಮಿ ಎಂಬ ಭಾವಪೂರ್ಣ ಸಿನಿಮಾ ನೋಡಿದ್ದಲ್ಲದೇ, ಅಮ್ಮಿಯನ್ನೇ ಇದಕ್ಕೆ ಕರೆಸಲಾಗಿತ್ತು.

ಗೌರಿ ಅಮ್ಮ ನಮ್ಮನ್ನೆಲ್ಲಾ ಮಕ್ಕಳೆಂದು ಭಾವಿಸಿ ಪೋಷಿಸಿದವರು. ಮರಿ ಎಂದು ಕರೆದು ಪ್ರೀತಿ ಕೊಟ್ಟವರು. ಹೋರಾಟಗಾರ ಮಕ್ಕಳಿಗಾಗಿ ಹಂಬಲಿಸುತ್ತಿದ್ದ, ಈ ಮಕ್ಕಳು ದೊಡ್ಡ ನಾಯಕರಾಗಿ ದೇಶ ಕಟ್ಟಬೇಕೆಂದು ಪರಿತಪಿಸುತ್ತಿದ್ದ ತಾಯಿಹೃದಯ ಗೌರಿ ಅಮ್ಮ. ದೇಶ ಕಟ್ಟುವ ಮತ್ತು ದೇಶ ಬದಲಿಸುವ ನಾಯಕರು ಹಾಗೂ ವಿದ್ವಾಂಸರನ್ನು ರೂಪಿಸುವ ಜೆಎನ್‌ಯು ವಿಶ್ವವಿದ್ಯಾಲಯಕ್ಕೆ ಓದಲು ಕಳಿಸಿದ ಮಗ ನಜೀಬ್‌ನನ್ನು ಕಳೆದುಕೊಂಡ ಅಮ್ಮಿ ನಫೀಸ್‌ರವರು ಅಂದು ನಮ್ಮ ಕಾರ್ಯಕ್ರಮದಲ್ಲಿದ್ದರು.

ಈ ಮತಾಂಧರು ಮಾನವೀಯತೆ ಇಲ್ಲದವರು ಎಂಬುದಕ್ಕೆ ಉದಾಹರಣೆಯಾಗಿ ನಜೀಬ್ ಪ್ರಕರಣವಿದೆ. ಗೌರಿ ಅಮ್ಮನನ್ನು ಕಳೆದು ಮಕ್ಕಳು ನಾವು ಅಲ್ಲಿ ಕುದಿಯುತ್ತಿದ್ದರೆ, ತನ್ನ ಮಗ ನಜೀಬ್‌ನನ್ನು ಕಳೆದುಕೊಂಡ ಕಿಚ್ಚು ನಫೀಸಾ ಅಮ್ಮಿಯಲ್ಲಿತ್ತು. ಇದರ ಕುರಿತಾಗಿಯೇ ಪೆಡೆಸ್ಟ್ರಿಯನ್ ಪಿಕ್ಚರ್ಸ್ ನಿರ್ಮಿಸಿರುವ ಅಮ್ಮಿ ಸಾಕ್ಷ್ಯಚಿತ್ರ ಮೊದಲು ಪ್ರದರ್ಶನಗೊಂಡಿತು. ನಜೀಬ್ ಎಂಬ ಅತ್ಯಂತ ಒಳ್ಳೆಯ ಹುಡುಗನ ವ್ಯಕ್ತಿತ್ವ, ಬಿಜೆಪಿ ಸಂಘಪರಿವಾರದ ಎಬಿವಿಪಿಯ ಹೊಲಸು ರಾಜಕೀಯವನ್ನು ಚಿತ್ರ ಬಿಚ್ಚಿಟ್ಟಿತು. ಜಡಗೊಂಡಿರುವ ವ್ಯವಸ್ಥೆಯನ್ನು ಬಡಿದೆಚ್ಚರಿಸಿ ನಜೀಬ್‌ನನ್ನು ವಾಪಸ್ ತರುವ ಸಂಕಲ್ಪದೊಂದಿಗೆ ಚಿತ್ರ ಮುಕ್ತಾಯವಾಗಿತ್ತು. ಅಮ್ಮನ ದಿನಕ್ಕೆ ಅಮ್ಮಿ ನಮ್ಮೆಲ್ಲರ ಹೋರಾಟದ ಕಿಚ್ಚನ್ನು ಎಚ್ಚರಿಸಿದರು. ಈಗ ಅವರು ತಾಯಿಯ ಮಮತೆ, ಮಗನನ್ನು ಹುಡುಕುತ್ತಿರುವ ದುಃಖತಪ್ತೆಯಾಗಿ ಮಾತ್ರವಲ್ಲದೇ, ಅದರ ಕಾರಣವನ್ನು ದೇಶದ ಪ್ರಸಕ್ತ ರಾಜಕೀಯ ಪರಿಸ್ಥಿತಿಯಲ್ಲಿ ಕಂಡುಕೊಂಡಿರುವ ಒಬ್ಬ ಚಿಂತಕಿಯಾಗಿ ರೂಪುಗೊಂಡಿದ್ದಾರೆ. ಅಷ್ಟು ಖಚಿತವಾಗಿ ಅವರು ಇಡೀ ದೇಶದ ಪರಿಸ್ಥಿತಿಯನ್ನು ವಿಶ್ಲೇಷಣಾತ್ಮಕವಾಗಿ ಮುಂದಿಟ್ಟರು.

ಅಮ್ಮಿ ನಫೀಸಾರವರ ಮಾತುಗಳು ನಮ್ಮೆದೆಯೊಕ್ಕ ಗುಂಡುಗಳಂತಾಗಿದ್ದವು. ಅಷ್ಟು ಸ್ಪಷ್ಟ ಮತ್ತು ಆವೇಗದಲ್ಲಿ ಮಾತಾಡಿದರು. ಅವರ ಧೈರ್ಯಕ್ಕೆ ಗೌರಿ ಸ್ಮಾರಕ ಟ್ರಸ್ಟ್ ವತಿಯಿಂದ ಪ್ರೊ. ಬಾಬು ಮ್ಯಾಥ್ಯೂ ಅಭಿನಂದನಾ ಮಾತುಗಳನ್ನಾಡಿದರು.
ಕನ್ನಡ ದಿನಪತ್ರಿಕೆ ವಾರ್ತಾಭಾರತಿಯ ಸಂಪಾದಕರಾದ ಅಬ್ದುಲ್ ಸಲಾಂ ಪುತ್ತಿಗೆಯವರು ಗೌರಿ ನೆನಪಿನ ಉಪನ್ಯಾಸ ನೀಡಿದರು. ಜಾತೀಯತೆ, ಬಂಡವಾಳಶಾಹಿ ಶೋಷಣೆ ಮತ್ತು ಮತಾಂಧತೆಯೇ ಭಾರತದ ಪ್ರಮುಖ ಶತ್ರುಗಳಾಗಿದ್ದು ಇಂದಿನ ಪ್ರಧಾನ ಶತ್ರುಗಳಾಗಿದ್ದು ಇವುಗಳನ್ನು ನಿರ್ಮೂಲನೆ ಮಾಡುವ ಶಪಥ ಮಾಡಬೇಕಾಗಿದೆ ಎಂದರು.

ಅಮ್ಮನ ದಿನದಂದು ಅವರ ಕನಸಿನ ನೂತನ www.naanugauri.com ವೆಬ್‌ಪೋರ್ಟಲ್‌ಅನ್ನು ಅವರ ತಂಗಿ ಕವಿತಾ ಲಂಕೇಶ್ ಲೋಕಾರ್ಪಣೆ ಮಾಡಿದರು. ಈ ಮೂಲಕ ಗೌರಿ ಸ್ಮಾರಕ ಟ್ರಸ್ಟ್ ಮುಖಾಂತರ ನಾವೆಲ್ಲರೂ ಒಂದು ಸಣ್ಣ ಗಿಫ್ಟ್ಅನ್ನು ಅಮ್ಮನಿಗೆ ನೀಡುತ್ತಿದ್ದೇವೆ. ನ್ಯಾಯಪಥ ಮುದ್ರಿತ ವಾರಪತ್ರಿಕೆ ಯಥಾಪ್ರಕಾರ ಮುಂದುವರೆಯುತ್ತದೆ. ಜೊತೆಗೆ ಈ ವೆಬ್ ಪೋರ್ಟಲ್ ಪ್ರತಿದಿನವೂ ಸತ್ಯಸುದ್ದಿಗಳನ್ನು ನಿಮ್ಮಲ್ಲಿಗೆ ತಲುಪಿಸುವ ಕೆಲಸ ಮಾಡಲಿದೆ. ಇದಕ್ಕಾಗಿ ನೂರು ಜನ

ನಜೀಬ್

ಬರಹಗಾರರು ನಮ್ಮೊಡನಿದ್ದಾರೆ.

ನಂತರ ಮದ್ಯ ನಿಷೇಧಕ್ಕೆ ಒತ್ತಾಯಿಸಿ ಪಾದಯಾತ್ರೆ ಬರುತ್ತಿದ್ದ ಮಹಿಳೆಯರ ಹೋರಾಟಕ್ಕೆ ಬೆಂಬಲ ಸೂಚಿಸಿ ಅಲ್ಲೆ ಒಂದಷ್ಟು ಹಣ ಸಂಗ್ರಹ ಮಾಡಿ ತಲುಪಿಸಲಾಯಿತು. ಈ ರೀತಿಯಾಗಿ ಅಮ್ಮನ ಹೋರಾಟದ ಸ್ಫೂರ್ತಿಯನ್ನು ಮತ್ತಷ್ಟು ಗಟ್ಟಿಗೊಳಿಸಲು ಅಮ್ಮನ ದಿನ ಅರ್ಥಪೂರ್ಣವಾಗಿ ಆಚರಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ ‘ಹೋರಾಟ ಸಮಿತಿ’

​ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಭೂ ಹೋರಾಟ ಕೊನೆಗೂ ಸುಖಾಂತ್ಯವಾಗಿದೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಜೊತೆಗೆ ರಾಜ್ಯದ ಹತ್ತಾರು ಜನಪರ ಸಂಘಟನೆಗಳು ನಡೆಸಿದ ಸುದೀರ್ಘ ಹೋರಾಟ...

ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಬಗ್ಗೆ ತುಟಿ ಬಿಚ್ಚದ ಸರ್ಕಾರ; ‘ಬೆಳಗಾವಿ ಚಲೋ’ ಹೋರಾಟಕ್ಕೆ ಕರೆ

ಗುರುವಾರ (ಡಿ.4) ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಮೀಸಲಾತಿ ಬಗ್ಗೆ ತುಟಿ ಬಿಚ್ಚದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತವಾಗಿದ್ದು, 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ' 'ಬೆಳಗಾವಿ ಚಲೋ'...

ಅಖಂಡ ಕರ್ನಾಟಕದ ಪ್ರದೇಶಗಳನ್ನು ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಪುರುಷೋತ್ತಮ ಬಿಳಿಮಲೆ

ಕರ್ನಾಟಕ ಮತ್ತು ನೆರೆ ರಾಜ್ಯಗಳ ಅಚ್ಚ ಕನ್ನಡ ಪ್ರದೇಶಗಳ ನಡುವಿನ ಭೌತಿಕ ಗಡಿಗಳು ಇದ್ದಂತೆ ಇದ್ದರೂ ಸಾಂಸ್ಕೃತಿಕವಾಗಿ ಹೇರಲಾಗುತ್ತಿರುವ ಗಡಿಗಳನ್ನು ಅಪ್ರಸ್ತುತವಾಗಿಸುವುದು ಸಾಧ್ಯವಿದೆ. ಇಂತಹ ಪ್ರದೇಶಗಳೊಂದಿಗೆ ಕರ್ನಾಟಕದ ಭಾವನಾತ್ಮಕ ಸಂಬಂಧದ ವಿಸ್ತರಣೆಗೆ ಇದು...

ಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಖ್ಯಾತ ಲೇಖಕಿ ಅರುಂಧತಿ ರಾಯ್ ಅವರ 'ಮದರ್ ಮೇರಿ ಕಮ್ಸ್ ಟು ಮಿ' ಪುಸ್ತಕದ ಮುಖಪುಟ ಚಿತ್ರದ ಪ್ರಸಾರದ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಸುಪ್ರಿಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ. ಏಕೆಂದರೆ, ಲೇಖಕರು ಧೂಮಪಾನವನ್ನು...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ.  ಕಿರುಕುಳದಿಂದ ಪಲಾಯನ ಮಾಡಿದ...

ಛತ್ತೀಸ್‌ಗಢ: ‘ಎಸ್‌ಇಸಿಎಲ್‌ ಅಮೇರಾ’ ಕಲ್ಲಿದ್ದಲು ಗಣಿ ವಿಸ್ತರಣೆ ವಿರೋಧಿಸಿ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ

ಛತ್ತೀಸ್‌ಗಢದ ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ (ಎಸ್‌ಇಸಿಎಲ್‌) ಅಮೇರಾ ಕಲ್ಲಿದ್ದಲು ಗಣಿಗಾರಿಕೆ ವಿಸ್ತರಣೆ ವಿರೋಧಿಸಿ ಡಿ.3 ರಂದು ಅಂಬಿಕಾಪುರದ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಮೇಲೆ ಗ್ರಾಮಸ್ಥರು...

ಗಂಟೆಗಟ್ಟಲೆ ಇಂಡಿಗೋ ವಿಮಾನ ವಿಳಂಬ: ‘ನನ್ನ ಮಗಳಿಗೆ ಸ್ಯಾನಿಟರಿ ಪ್ಯಾಡ್‌ ಕೊಡಿ..’ ಎಂದು ಬೇಡಿಕೊಂಡ ತಂದೆ

ದೇಶಾದ್ಯಂತ ಇಂಡಿಗೋ ಪ್ರಯಾಣಿಕರು ಭಾರಿ ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಏಕೆಂದರೆ, ವಿಮಾನಯಾನ ಸಂಸ್ಥೆಯ ವಿಳಂಬ ಮತ್ತು ರದ್ದತಿ ನಿರ್ಧಾರವು ಸತತ ನಾಲ್ಕನೇ ದಿನವೂ (ಡಿ. 5) ಮುಂದುವರೆದಿದೆ. ಅವ್ಯವಸ್ಥೆಯ ನಡುವೆಯೇ, ವಿಮಾನ ನಿಲ್ದಾಣದಿಂದ ಬಂದ...

ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಮೋದಿ ಹೇಳಿಕೆ

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ. ಶಾಂತಿಯ ಪರವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದು,...

ಮನೆ ಕಟ್ಟಲು, ವಾಹನ ಖರೀದಿಸಲು ಇದು ಸುಸಮಯ: ರೆಪೊ ದರ ಕಡಿತಗೊಳಿಸಿದ ಆರ್.ಬಿ.ಐ

ಡಿಸೆಂಬರ್ 05, ಶುಕ್ರವಾರದಂದು ನಡೆದ ಹಣಕಾಸು ನೀತಿ ಸಭೆಯಲ್ಲಿ (MPC) ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ಇಂದಿನ ಕಡಿತದ ನಂತರ, ಕೇಂದ್ರ ಬ್ಯಾಂಕ್ ಈ...

ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಗುಂಪು ದಲಿತ ಯುವಕನನ್ನು ಚಪ್ಪಲಿಯಿಂದ ಹೊಡೆದು, ಮುಷ್ಟಿ, ಕಾಲು ಮತ್ತು...