Homeಅಂಕಣಗಳುಅಮ್ಮನ ದಿನದಂದು ಅಮ್ಮಿ

ಅಮ್ಮನ ದಿನದಂದು ಅಮ್ಮಿ

- Advertisement -
- Advertisement -

2017ರವರೆಗೂ ಪ್ರತಿ ವರ್ಷ ಮಾರ್ಚ್ 08 ಅಥವಾ ಅದರ ಸುತ್ತಾಮುತ್ತಾ ಪಿ.ಲಂಕೇಶ್‌ರ ಜನ್ಮದಿನದ ನೆನಪಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮ ನಡೆಯುತ್ತಿತ್ತು. ನಾಡಿನ ಹಿರಿಯ ಚಿಂತಕರು, ಹೋರಾಟಗಾರರು ಮತ್ತು ಸಾಹಿತಿ ಕಲಾವಿದರನ್ನು ಕರೆಸಿ ಇಡೀ ದಿನ ಸಮಾಜದ ಆಗುಹೋಗುಗಳ ಬಗ್ಗೆ ಚರ್ಚೆ, ಪುಸ್ತಕ ಬಿಡುಗಡೆ, ಸಿನಿಮಾ ವೀಕ್ಷಣೆ ರೀತಿಯ ಹತ್ತು ಹಲವು ಕಾರ್ಯಕ್ರಮಗಳು ನಡೆಸಿಕೊಂಡು ಬಂದಿದ್ದವು. ಗೌರಿ ಲಂಕೇಶ್ ಇದರ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದರು.

ಆದರೆ 2017ರಲ್ಲಿ ಮತಾಂಧ ಶಕ್ತಿಗಳ ಗುಂಡಿಗೆ ಎದೆಯೊಡ್ಡಿ ಗೌರಿ ಅಮ್ಮ ಹುತಾತ್ಮರಾದ ನಂತರ, ಲಂಕೇಶ್ ನೆನಪು ಕಾರ್ಯಕ್ರಮ ನಿಂತುಹೋಯಿತು. ಆದರೆ ಅಪ್ಪನ ಹಾದಿಯಲ್ಲಿಯೇ ನಡೆದ, ಆಕ್ಟಿವಿಸ್ಟ್ ಜರ್ನಲಿಸ್ಟ್ ಆಗಿ ಅಪ್ಪನನ್ನುಮೀರಿಸಿದ ನಮ್ಮ ಗೌರಿ ಅಮ್ಮನನ್ನು ನೆನೆಯುವ ಜವಾಬ್ದಾರಿ ನಮ್ಮ ಮೇಲಿತ್ತು. ಹಾಗಾಗಿ ಅಮ್ಮನ ಜನ್ಮದಿನವಾದ ಜನವರಿ 29ನ್ನು ಕಳೆದ ವರ್ಷದಿಂದ ಗೌರಿದಿನವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ಬಾರಿ ಜನವರಿ 29ರಂದು ಅಮ್ಮನ ದಿನದಂದು ಅಮ್ಮಿ ಎಂಬ ಭಾವಪೂರ್ಣ ಸಿನಿಮಾ ನೋಡಿದ್ದಲ್ಲದೇ, ಅಮ್ಮಿಯನ್ನೇ ಇದಕ್ಕೆ ಕರೆಸಲಾಗಿತ್ತು.

ಗೌರಿ ಅಮ್ಮ ನಮ್ಮನ್ನೆಲ್ಲಾ ಮಕ್ಕಳೆಂದು ಭಾವಿಸಿ ಪೋಷಿಸಿದವರು. ಮರಿ ಎಂದು ಕರೆದು ಪ್ರೀತಿ ಕೊಟ್ಟವರು. ಹೋರಾಟಗಾರ ಮಕ್ಕಳಿಗಾಗಿ ಹಂಬಲಿಸುತ್ತಿದ್ದ, ಈ ಮಕ್ಕಳು ದೊಡ್ಡ ನಾಯಕರಾಗಿ ದೇಶ ಕಟ್ಟಬೇಕೆಂದು ಪರಿತಪಿಸುತ್ತಿದ್ದ ತಾಯಿಹೃದಯ ಗೌರಿ ಅಮ್ಮ. ದೇಶ ಕಟ್ಟುವ ಮತ್ತು ದೇಶ ಬದಲಿಸುವ ನಾಯಕರು ಹಾಗೂ ವಿದ್ವಾಂಸರನ್ನು ರೂಪಿಸುವ ಜೆಎನ್‌ಯು ವಿಶ್ವವಿದ್ಯಾಲಯಕ್ಕೆ ಓದಲು ಕಳಿಸಿದ ಮಗ ನಜೀಬ್‌ನನ್ನು ಕಳೆದುಕೊಂಡ ಅಮ್ಮಿ ನಫೀಸ್‌ರವರು ಅಂದು ನಮ್ಮ ಕಾರ್ಯಕ್ರಮದಲ್ಲಿದ್ದರು.

ಈ ಮತಾಂಧರು ಮಾನವೀಯತೆ ಇಲ್ಲದವರು ಎಂಬುದಕ್ಕೆ ಉದಾಹರಣೆಯಾಗಿ ನಜೀಬ್ ಪ್ರಕರಣವಿದೆ. ಗೌರಿ ಅಮ್ಮನನ್ನು ಕಳೆದು ಮಕ್ಕಳು ನಾವು ಅಲ್ಲಿ ಕುದಿಯುತ್ತಿದ್ದರೆ, ತನ್ನ ಮಗ ನಜೀಬ್‌ನನ್ನು ಕಳೆದುಕೊಂಡ ಕಿಚ್ಚು ನಫೀಸಾ ಅಮ್ಮಿಯಲ್ಲಿತ್ತು. ಇದರ ಕುರಿತಾಗಿಯೇ ಪೆಡೆಸ್ಟ್ರಿಯನ್ ಪಿಕ್ಚರ್ಸ್ ನಿರ್ಮಿಸಿರುವ ಅಮ್ಮಿ ಸಾಕ್ಷ್ಯಚಿತ್ರ ಮೊದಲು ಪ್ರದರ್ಶನಗೊಂಡಿತು. ನಜೀಬ್ ಎಂಬ ಅತ್ಯಂತ ಒಳ್ಳೆಯ ಹುಡುಗನ ವ್ಯಕ್ತಿತ್ವ, ಬಿಜೆಪಿ ಸಂಘಪರಿವಾರದ ಎಬಿವಿಪಿಯ ಹೊಲಸು ರಾಜಕೀಯವನ್ನು ಚಿತ್ರ ಬಿಚ್ಚಿಟ್ಟಿತು. ಜಡಗೊಂಡಿರುವ ವ್ಯವಸ್ಥೆಯನ್ನು ಬಡಿದೆಚ್ಚರಿಸಿ ನಜೀಬ್‌ನನ್ನು ವಾಪಸ್ ತರುವ ಸಂಕಲ್ಪದೊಂದಿಗೆ ಚಿತ್ರ ಮುಕ್ತಾಯವಾಗಿತ್ತು. ಅಮ್ಮನ ದಿನಕ್ಕೆ ಅಮ್ಮಿ ನಮ್ಮೆಲ್ಲರ ಹೋರಾಟದ ಕಿಚ್ಚನ್ನು ಎಚ್ಚರಿಸಿದರು. ಈಗ ಅವರು ತಾಯಿಯ ಮಮತೆ, ಮಗನನ್ನು ಹುಡುಕುತ್ತಿರುವ ದುಃಖತಪ್ತೆಯಾಗಿ ಮಾತ್ರವಲ್ಲದೇ, ಅದರ ಕಾರಣವನ್ನು ದೇಶದ ಪ್ರಸಕ್ತ ರಾಜಕೀಯ ಪರಿಸ್ಥಿತಿಯಲ್ಲಿ ಕಂಡುಕೊಂಡಿರುವ ಒಬ್ಬ ಚಿಂತಕಿಯಾಗಿ ರೂಪುಗೊಂಡಿದ್ದಾರೆ. ಅಷ್ಟು ಖಚಿತವಾಗಿ ಅವರು ಇಡೀ ದೇಶದ ಪರಿಸ್ಥಿತಿಯನ್ನು ವಿಶ್ಲೇಷಣಾತ್ಮಕವಾಗಿ ಮುಂದಿಟ್ಟರು.

ಅಮ್ಮಿ ನಫೀಸಾರವರ ಮಾತುಗಳು ನಮ್ಮೆದೆಯೊಕ್ಕ ಗುಂಡುಗಳಂತಾಗಿದ್ದವು. ಅಷ್ಟು ಸ್ಪಷ್ಟ ಮತ್ತು ಆವೇಗದಲ್ಲಿ ಮಾತಾಡಿದರು. ಅವರ ಧೈರ್ಯಕ್ಕೆ ಗೌರಿ ಸ್ಮಾರಕ ಟ್ರಸ್ಟ್ ವತಿಯಿಂದ ಪ್ರೊ. ಬಾಬು ಮ್ಯಾಥ್ಯೂ ಅಭಿನಂದನಾ ಮಾತುಗಳನ್ನಾಡಿದರು.
ಕನ್ನಡ ದಿನಪತ್ರಿಕೆ ವಾರ್ತಾಭಾರತಿಯ ಸಂಪಾದಕರಾದ ಅಬ್ದುಲ್ ಸಲಾಂ ಪುತ್ತಿಗೆಯವರು ಗೌರಿ ನೆನಪಿನ ಉಪನ್ಯಾಸ ನೀಡಿದರು. ಜಾತೀಯತೆ, ಬಂಡವಾಳಶಾಹಿ ಶೋಷಣೆ ಮತ್ತು ಮತಾಂಧತೆಯೇ ಭಾರತದ ಪ್ರಮುಖ ಶತ್ರುಗಳಾಗಿದ್ದು ಇಂದಿನ ಪ್ರಧಾನ ಶತ್ರುಗಳಾಗಿದ್ದು ಇವುಗಳನ್ನು ನಿರ್ಮೂಲನೆ ಮಾಡುವ ಶಪಥ ಮಾಡಬೇಕಾಗಿದೆ ಎಂದರು.

ಅಮ್ಮನ ದಿನದಂದು ಅವರ ಕನಸಿನ ನೂತನ www.naanugauri.com ವೆಬ್‌ಪೋರ್ಟಲ್‌ಅನ್ನು ಅವರ ತಂಗಿ ಕವಿತಾ ಲಂಕೇಶ್ ಲೋಕಾರ್ಪಣೆ ಮಾಡಿದರು. ಈ ಮೂಲಕ ಗೌರಿ ಸ್ಮಾರಕ ಟ್ರಸ್ಟ್ ಮುಖಾಂತರ ನಾವೆಲ್ಲರೂ ಒಂದು ಸಣ್ಣ ಗಿಫ್ಟ್ಅನ್ನು ಅಮ್ಮನಿಗೆ ನೀಡುತ್ತಿದ್ದೇವೆ. ನ್ಯಾಯಪಥ ಮುದ್ರಿತ ವಾರಪತ್ರಿಕೆ ಯಥಾಪ್ರಕಾರ ಮುಂದುವರೆಯುತ್ತದೆ. ಜೊತೆಗೆ ಈ ವೆಬ್ ಪೋರ್ಟಲ್ ಪ್ರತಿದಿನವೂ ಸತ್ಯಸುದ್ದಿಗಳನ್ನು ನಿಮ್ಮಲ್ಲಿಗೆ ತಲುಪಿಸುವ ಕೆಲಸ ಮಾಡಲಿದೆ. ಇದಕ್ಕಾಗಿ ನೂರು ಜನ

ನಜೀಬ್

ಬರಹಗಾರರು ನಮ್ಮೊಡನಿದ್ದಾರೆ.

ನಂತರ ಮದ್ಯ ನಿಷೇಧಕ್ಕೆ ಒತ್ತಾಯಿಸಿ ಪಾದಯಾತ್ರೆ ಬರುತ್ತಿದ್ದ ಮಹಿಳೆಯರ ಹೋರಾಟಕ್ಕೆ ಬೆಂಬಲ ಸೂಚಿಸಿ ಅಲ್ಲೆ ಒಂದಷ್ಟು ಹಣ ಸಂಗ್ರಹ ಮಾಡಿ ತಲುಪಿಸಲಾಯಿತು. ಈ ರೀತಿಯಾಗಿ ಅಮ್ಮನ ಹೋರಾಟದ ಸ್ಫೂರ್ತಿಯನ್ನು ಮತ್ತಷ್ಟು ಗಟ್ಟಿಗೊಳಿಸಲು ಅಮ್ಮನ ದಿನ ಅರ್ಥಪೂರ್ಣವಾಗಿ ಆಚರಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...