Homeಸಿನಿಮಾಅಮ್ಮನ ಪ್ರೀತಿಯಲ್ಲಿ ಬದುಕಿನ ಬಿಚ್ಚುನೋಟ....

ಅಮ್ಮನ ಪ್ರೀತಿಯಲ್ಲಿ ಬದುಕಿನ ಬಿಚ್ಚುನೋಟ….

- Advertisement -
- Advertisement -
ಕನ್ನಡಿಗರು ಭಾವನಾ ಜೀವಿಗಳು, ಕರ್ನಾಟಕದಲ್ಲಿ ಭಾವನೆಗಳಿಗೆ ಬೆಲೆ ಜಾಸ್ತಿ ಎಂಬ ಮಾತುಗಳು ಚಿತ್ರರಂಗದಲ್ಲಿ ಬಹಳ ಕಾಲದಿಂದಲೂ ಕೇಳಿಬರುತ್ತಿದೆ. ಅಂತೆಯೇ ಕೆಲವು ಸಿನಿಮಾಗಳಲ್ಲಿ ಕನ್ನಡಿಗರು ಸೆಂಟಿಮೆಂಟಲ್ ಫೂಲ್ಸ್ ಎಂದೂ ಸಹ ನಯವಾಗಿ ಬೈಸಿಕೊಂಡಿರುವುದೂ ಇದೆ. ಕನ್ನಡ ಚಿತ್ರರಂಗವು ಸೆಂಟಿಮೆಂಟ್‍ಗೆ ಹೆಚ್ಚು ಹೊತ್ತು ಕೊಡುತ್ತಾ ಬಂದಿದೆ, ಸಂಬಂಧಗಳ ಭಾವನೆಗಳನ್ನಿಟ್ಟುಕೊಂಡು ಮಾಡಿದ ಸಿನಿಮಾಗಳು ಫೈಲ್ ಆಗಿದ್ದೇ ಇಲ್ಲ.
ಅದರಲ್ಲೂ ತಾಯಿಯ ಪ್ರೀತಿ ವಾತ್ಸಲ್ಯಕ್ಕೆ ಬೆಲೆ ಕಟ್ಟಲಾಗದಷ್ಟು ಅನುಕಂಪ. ಅಮ್ಮ ಎಂದರೆ ಸ್ಥೈರ್ಯ, ಅಮ್ಮಾ ಎಂದರೆ ಅನುಕಂಪ, ತಾಯಿಯೇ ಸ್ಫೂರ್ತಿ ಎಂಬ ಹೆಗ್ಗಳಿಕೆ ಕನ್ನಡಿಗರದು. ಹೆತ್ತವಳು ಕಣ್ಣೆದುರೇ ಮರೆಯಾಗುತ್ತಾಳೆಂದಾಗ ಅವಳನ್ನು ಉಳಿಸಿಕೊಳ್ಳಲು ಮಗನ ಒದ್ದಾಟ ಹಾಗೂ ತಳಮಳವನ್ನು ಕಥೆಯನ್ನಾಗಿಟ್ಟುಕೊಂಡು ನಿರ್ದೇಶಕ ಕೆ.ಎಂ.ಚೈತನ್ಯ ‘ಅಮ್ಮ ಐ ಲವ್ ಯೂ’ ಸಿನಿಮಾ ಮಾಡಿದ್ದಾರೆ.
ಪ್ರೀತಿಯ ಪ್ರಜ್ಞೆಯನ್ನು ಕೇಂದ್ರವಾಗಿಟ್ಟುಕೊಂಡಿರುವ ಈ ಚಿತ್ರ ಅಮ್ಮ ಮಗನ ಸೆಂಟಿಮೆಂಟ್ ಅಷ್ಟೇ ಅಲ್ಲದೆ ಸಮಾಜದ ಹಲವು ಸಂಬಂಧಗಳನ್ನು ಬೆಸೆಯುವ ಮಾನವೀಯ ಮೌಲ್ಯಗಳನ್ನು ಒಳಗೊಂಡಿದೆ. ಭಿಕ್ಷುಕರ ಬದುಕಿನ ತೊಳಲಾಟದೊಂದಿಗೆ ಬದುಕಿನ ಅರ್ಥವನ್ನು ಕಟ್ಟಿಕೊಟ್ಟಿದೆ.
ಸಿದ್ದಾರ್ಥ್ ತನ್ನ ಹೆತ್ತ ತಾಯಿ ಸಾವು ಬದುಕಿನ ನಡುವೆ ಹೋರಾಟ ಮಾಡುವಾಗ ಅವಳನ್ನು ಉಳಿಸಿಕೊಳ್ಳಲು ಹಲವು ಆಸ್ಪತ್ರೆಗಳನ್ನು ಸುತ್ತಿದರು ತಾಯಿ ಗುಣಮುಖಳಾಗದಿದ್ದ ಚಿಂತೆಯಲ್ಲಿದ್ದವನು ಒಬ್ಬ ಸನ್ಯಾಸಿಯ ಮಾತು ಕೇಳಿ ತನ್ನ ವೈಚಾರಿಕತೆಯನ್ನು ಬದಿಗೊತ್ತಿ ಶ್ರೀಮಂತಿಯ ವೇಷ ಮರೆಸಿ ಭಿಕ್ಷುಕನ ವೇಷ ಧರಿಸಿ ಭಿಕ್ಷಾಟನೆಯ ಅಜ್ಞಾತವಾಸಕ್ಕೆ ತೆರಳುತ್ತಾನೆ, ಇಲ್ಲಿ ತಾಯಿಯ ಮೇಲಿನ ಮಮತೆ ಔಷಧಿಗಳಿಂದ ಸಾಧ್ಯವಾಗದ್ದು ಹರಕೆಯಿಂದ ಸಾಧ್ಯವೇ ಎಂಬ ಪ್ರಶ್ನೆಯನ್ನೂ ಹುಟ್ಟುಹಾಕಲಾರದು. ಇಂತಹ ಸಂದರ್ಭಗಳು ಜನರು ಮೌಢ್ಯದ ಮೊರೆಹೊಗುವ ಪರಿಸ್ಥಿತಿಗೆ ಕನ್ನಡಿ ಇಟ್ಟಂತೆ ತಿಳಿಸುತ್ತವೆ.
ಆ ದಿನಗಳಲ್ಲಿ ಭಿಕ್ಷುಕರ ನೋವು-ನಲಿವು, ಅವರು ಎದುರಿಸುವ ಮಾನಸಿಕ ದೈಹಿಕ ಹಿಂಸೆಗಳನ್ನು ಬಿಡಿಸಿಟ್ಟಿರುವ ಚಿತ್ರ, ಭಿಕ್ಷುಕರೆಂದರೆ ಅಸಹ್ಯ ಪಡುವ ಜನರು ಹಾಗೂ ಕೆಲವು ಸಿನಿಮಾಗಳನ್ನು ನೋಡಿ ಭಿಕ್ಷುಕರು ಭಾರಿ ಸಂಪಾದಿಸುತ್ತಾರೆಂದು ಅವರನ್ನು ದೂಷಿಸುವ ಜನರಿಗೆ ಭಿಕ್ಷುಕರನ್ನು ಕಾಮೆಡಿ ಸೀನ್‍ಗಳಾಗಿ ತೋರುವ ಬೇರೆಲ್ಲ ಸಿನಿಮಾಗಳಿಗಿಂತ ಭಿಕ್ಷುಕರ ಬದುಕಿನ ನೈಜತೆಯನ್ನು ಚಿತ್ರಿಸಿದೆ. ಭಿಕ್ಷುಕರೂ ಮನುಷ್ಯರೇ ಅವರಿಗೂ ಒಂದು ಬದುಕಿದೆ, ಉಳ್ಳವರ ಮಧ್ಯೆ ಅವರ ದೌರ್ಜನ್ಯಗಳಿಂದ ತೊಳಲಾಡುವ ಇಲ್ಲದವರ ಬದುಕಿನ ಪ್ರತಿಬಿಂಬವಾಗಿ ಭಿಕ್ಷುಕರ ಬದುಕು ಕಾಣದೆ ಇರಲಾರದು.
ಮಾಲೀಕನ ಕೈ ಕೆಳಗೆ ದುಡಿದು ಕಷ್ಟದ ದಿನಗಳಲ್ಲಿ ಎದುರಿಸಿ ಉದ್ಯಮಿಯಾಗಿ ಬೆಳೆದುಬಂದ ಸಿದ್ದಾರ್ಥನ ತಾಯಿ, ಕಂಪನಿಯ ಮಾಲಕಿಯಾಗಿ, ದುಡಿಯುವ ಜನರ ಸ್ನೇಹಿತೆಯಾಗಿದ್ದು, ನೌಕರರನ್ನು ರೋಬೋಟ್‍ಗಳಂತೆ ದುಡಿಸಿಕೊಳ್ಳುವ ವ್ಯವಸ್ಥೆಯೊಳಗೆ ಕಷ್ಟದ ಅರಿವಿರುವ ತಾಯಿ ತನ್ನ ಕಂಪನಿಯಲ್ಲಿ ದುಡಿಯುವ ಶ್ರಮಿಕರ ಹಿತವನ್ನೂ ಕಾಯುವ, ಅವರ ಬದುಕಿನಲ್ಲಿ ನೆರವಾಗುತ್ತಾ ಎಲ್ಲರನ್ನೂ ನಿಸ್ವಾರ್ಥವಾಗಿ ಒಳಗೊಳ್ಳುವಳು, ಈ ಒಳಗೊಳ್ಳುವಿಕೆ ಇಲ್ಲದವರ ಶ್ರಮದಿಂದ ಉಳ್ಳವರು ಕಟ್ಟಿಕೊಳ್ಳುವ ಮೊಹಲ್ಲಗಳ ಮಧ್ಯೆ ಸದೃಢ ಸಮಾಜದಲ್ಲಿ ದುಡಿಯುವ ಕೈಗಳಿಸಿ ತಮ್ಮ ಶ್ರಮಕ್ಕೆ ಸಿಗಬೇಕಾದ ಪಾಲಿನ ಸಂಕೇತವಾಗಿದೆ. ತಮ್ಮ ದುಡಿವ ಕೈಗಳಿಗೆ ಕೆಲಸಕೊಟ್ಟ ಅವಳ ಉಳಿವಿಗಾಗಿ ಪ್ರಾರ್ಥಿಸುವ ಸಿಬ್ಬಂದಿಗಳು, ಮಾಲಿಕ ಮತ್ತು ಶ್ರಮಿಕರ ಹೊಂದಾಣಿಕೆಗೆ ಸ್ಪೂರ್ತಿ ತುಂಬುತ್ತದೆ.
ಮತ್ತೊಂದೆಡೆ ಇಂದಿನ ಯುವಜನರು ಸಮಾಜದಲ್ಲಿ ಮಾಡಬೇಕಾದ ಸಹಾಯಾಸ್ತದ ಕನಿಷ್ಟ ಮೌಲ್ಯವನ್ನು ತೋರಿಸುವ ನಾಯಕಿಯ ಪಾತ್ರ, ತಾಯಿಗಾಗಿ ಭಿಕ್ಷೆ ಬೇಡುವ ಪ್ರೇಮಿಯ ಪ್ರೀತಿ ಬಯಸುವ ಪ್ರೇಯಸಿ. ಈ ಎಲ್ಲಾ ಪಾತ್ರಗಳೂ ಜೀವನ ಸಂಗ್ರಾಮದ ಹಲವು ದಿಕ್ಕುಗಳನ್ನು ತೋರುತ್ತವೆ.

ಪ್ರೀತಿ, ಮಮತೆಯ ಹುಡುಕಾಟದೊಂದಿಗೆ ಸಾಗುವ ಚಿತ್ರ ನೋಡುಗರ ಮನತಟ್ಟುವ ಕಥಾಹಂದರವನ್ನು ಒಳಗೊಂಡಿದೆ. ಆದರೆ ಇಂತಹ ಕತೆಯನ್ನು ತೆರೆಯ ಮೇಲೆ ನಿರೂಪಿಸುವಾಗ ಪ್ರೇಕ್ಷಕರ ಮನಸಲ್ಲಿ ಕ್ಯೂರಿಯಾಸಿಟಿಯನ್ನಾಗಲಿ ಅಥವಾ ನೋಡುಗರ ಗಮನ ಮತ್ತೊಂದೆಡೆಗೆ ಜಾರದಂತೆ ತನ್ನತ್ತ ಸೆಳೆದಿಟ್ಟುಕೊಳ್ಳುವಲ್ಲಿ ತಂಡ ಕೊಂಚ ಎಡವಿದೆಯಾದರೂ, ಭಿಕ್ಷುಕನ ಪಾತ್ರದಲ್ಲಿ ಚಿರು, ಹಾಗೂ ನಾಯಕಿಯಾಗಿ ಹೊಸ ನಟಿ ನಿಶ್ಚಿಕಾ ಸೌಂದರ್ಯ ಉತ್ತಮ ಅಭಿನಯ ನೀಡಿದ್ದಾರೆ.


ಕಳೆದುಹೋದ ಖಳನಾಯಕ

ವಿಷ್ಣುವರ್ಧನ್, ಅಂಬರೀಶ್, ಶಿವರಾಜ್‍ಕುಮಾರ್‍ರಂಥಹ ಕನ್ನಡ ಚಿತ್ರರಂಗದ ದಿಗ್ಗಜರೊಂದಿಗೆ ಖಳನಾಯಕನಾಗಿ ಅಭಿನಯಿಸುತ್ತಿದ್ದ ಧೀಮಂತ ಕಲಾವಿದ, ಖ್ಯಾತ ನಾಟಕಕಾರ ಸದಾಶಿವ ಸಾಲ್ಯನ್ ಇಹಲೋಕ ತ್ಯಜಿಸಿದ್ದಾರೆ. 1988ರಲ್ಲಿ ತುಳು ಭಾಷೆಯ ‘ಭಾಗ್ಯವಂತೆದಿ” ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದ ಸಾಲ್ಯನ್ ಕನ್ನಡ, ತುಳು, ಹಿಂದಿ, ಮರಾಠಿ ಭಾಷೆಯಲ್ಲಿ ಸುಮಾರು 50 ಚಿತ್ರಗಳಲ್ಲಿ ಅಭಿನಯಿಸಿದ್ದರು, 500ಕ್ಕೂ ಹೆಚ್ಚು ರಂಗ ಪ್ರಯೋಗಗಳಲ್ಲ್ಲಿ ಅಭಿನಯಿಸಿದ ಮುಂಬೈ-ಕರ್ನಾಟಕದ ಏಕೈಕ ರಂಗಕಲಾವಿದನೆಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು. ಮುಂಬೈನಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಉದ್ಯೋಗಿಯೂ ಆಗಿದ್ದ ಇವರು 2004ಅಲ್ಲಿ ಸಂಭವಿಸಿದ ಅಪಘಾತದಲ್ಲಿ ಕಾಲಿನ ಸ್ವಾಧಿನ ಕಳೆದುಕೊಂಡು ಕಷ್ಟದ ಜೀವನ ಸಾಗಿಸುತ್ತಿದ್ದವರು.


ಕುಂಬಳಕಾಯಿ ಕಳ್ಳ ಕೋಕಿಲ?
ಸಿನಿಮಾ ರಂಗದ ಸ್ಟಾರ್‍ಗಳು, ನಿರ್ದೇಶಕರು, ನಿರ್ಮಾಪಕರಿಗಾಗಲೀ ಭೂಗತ ಪಾತಕಿಗಳೊಂದಿಗಿನ ಒಡನಾಟ ಮಾಮೂಲಿಯಾದದ್ದು. ಎಷ್ಟೋ ನಿರ್ಮಾಪಕರೇ ರೌಡಿ ಶೀಟರ್ ಬ್ಯಾಗ್ರೌಂಡ್ ಹೊಂದಿರುತ್ತಾರೆ. ಇದಕ್ಕೆ ಕನ್ನಡ ಚಿತ್ರರಂಗವೂ ಹೊರತಲ್ಲ. ಅಂತೆಯೇ ಬೆಂಗಳೂರಿನ ಕುಖ್ಯಾತ ರೌಡಿ ಶೀಟರ್ ಸೈಕಲ್ ರವಿಯನ್ನು ಬಹಳ ದಿನಗಳಿಂದ ಹುಡುಕುತ್ತಿದ್ದ ಸಿಸಿಬಿ ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆಯಲ್ಲಿ ರೌಡಿ ರವಿ ಜತೆ ಹಾಸ್ಯನಟ ಸಾಧುಕೋಕಿಲ ಒಡನಾಟ ಇಟ್ಟುಕೊಂಡಿದ್ದರೆಂದು ಯಾರೋ ಹಬ್ಬಿಸಿದ
ಗಾಳಿಸುದ್ದಿಯನ್ನು ಕೇಳಿ ಹೆದರಿದ ಸಾಧು ಸಿಸಿಬಿ ಕಚೇರಿಗೆ ದೌಡಾಯಿಸಿದ್ದಾರೆ. ನನಗೂ ರೌಡಿಗೂ ಯಾವ ಸಂಬಂಧವೂ ಇಲ್ಲ, ಈ ಪ್ರಕರಣದಲ್ಲಿ ನನ್ನ ಹೆಸರು ಬರುತ್ತಿದೆಯಂತೆ ಎಂದು ಅಧಿಕಾರಿಯ ಎದುರು ಕುಂಯ್ಯೋಮರ್ರೋ ಎಂದರಂತೆ. ಅದಕ್ಕೆ ಆ ಅಧಿಕಾರಿ ನಿನಗೆ ರೌಡಿಯ ಜತೆ ಒಡನಾಟವಿದೆ ಎಂದು ನಾವು ಎಲ್ಲಿಯೂ ಹೇಳಿಲ್ಲ, ಹೇಳೋಕೆ ಯಾವ ಪುರಾವೆಯೂ ಇಲ್ಲ, ‘ಕುಂಬಳಕಾಯಿ ಕಳ್ಳ ಅಂದ್ರೆ ನೀನ್ಯಾಕೆ ಹೆಗಲು ಮುಟ್ಟಿ ನೋಡ್ಕೋತೀಯಾ’, ಹಾಗೇನಾದರೂ ಇದ್ದರೆ ನಾವೆ ಕರೆಯುತ್ತಿದ್ದೆವು ಎಂದು ಮಂಗಳಾರತಿ ಮಾಡಿ ಕಳಿಸಿದ್ದಾರೆ. ಸಾಧುವಿನ ಈ ಅತಿಗಾಬರಿಯ ವರ್ತನೆ ಅದ್ಯಾವುದೋ ಕೆಟ್ಟ ಕ್ಷಣಗಳ ಮುನ್ಸೂಚನೆಯಂತೆ ಕಾಣುತ್ತಿದೆ. ಹಾಗೇನಾದರೂ ಸಾಧು ಇಂತಹ ಕ್ರಿಮಿನಲ್‍ಗಳ ಒಡನಾಟ ಇಟ್ಟುಕೊಂಡಿದ್ದರೆ, ಅಂತಹವುಗಳನ್ನು ಕತ್ತರಿಸಿಕೊಂಡು ಹೊರಬರಲಿ. ಯಾಕೆಂದರೆ, ಅವರ ಪ್ರತಿಭೆಗೆ ಈ ಬಗೆಯ ಮಸಿ ಹತ್ತಿಕೊಂಡು ಮಂಕಾಗುವುದು ಯಾರಿಗೂ ಇಷ್ಟವಿಲ್ಲ.
– ಸೋಮಶೇಖರ್ ಚಲ್ಯ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...