Homeಮುಖಪುಟಅಯೋಧ್ಯೆ ತೀರ್ಪು ಒಪ್ಪಿದ್ದೇವೆ, ಮರು ಪರಿಶೀಲನೆ ಅರ್ಜಿ ಹಾಕುವುದಿಲ್ಲ: ಸುನ್ನಿ ವಕ್ಫ್ ಮಂಡಳಿ

ಅಯೋಧ್ಯೆ ತೀರ್ಪು ಒಪ್ಪಿದ್ದೇವೆ, ಮರು ಪರಿಶೀಲನೆ ಅರ್ಜಿ ಹಾಕುವುದಿಲ್ಲ: ಸುನ್ನಿ ವಕ್ಫ್ ಮಂಡಳಿ

- Advertisement -
- Advertisement -

ಅಯೋಧ್ಯೆ ವಿವಾದದಲ್ಲಿ ಪ್ರಮುಖ ದಾವೆದಾರರಲ್ಲಿ ಒಂದಾಗಿದ್ದ ಸುನ್ನಿ ವಕ್ಫ್ ಬೋರ್ಡ್ ಮಂಡಳಿಯು ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಮರುಪರಿಶೀಲನೆ ಮನವಿಯನ್ನು ಸಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಉತ್ತರ ಪ್ರದೇಶ ಸುನ್ನಿ ವಕ್ಫ್ ಬೋರ್ಡ್ ಮಂಡಳಿಯ ಅಧ್ಯಕ್ಷ ಜಫರ್ ಅಹ್ಮದ್ ಫರೂಕಿಯವರು ಸುದ್ದಿಗೋಷ್ಠಿ ನಡೆಸಿ “ಮಂಡಳಿಯು ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತದೆ. ಹಾಗಾಗಿ ತೀರ್ಪಿನ ಮರುಪರಿಶೀಲನೆ ಮಾಡುವ ಮೇಲ್ಮನವಿಯನ್ನು ಸಲ್ಲಿಸದಿರಲು ನಿರ್ಧರಿಸಿದೆ. ಮಂಡಳಿಯು ಸಂಪೂರ್ಣ ವರದಿಯನ್ನು ಕೂಲಂಕಷವಾಗಿ ಓದಿದ ತರುವಾಯ ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಲಾಗುವುದು. ಆದರೆ ಮೇಲ್ಮನವಿ ಸಲ್ಲಿಸದಿರುವುದು ಮಾತ್ರ ಖಚಿತ” ಎಂದು ತಿಳಿಸಿದ್ದಾರೆ.

ಇದಕ್ಕು ಮುನ್ನ, ತೀರ್ಪು ಹೊರಬರುತ್ತಿದ್ದಂತೆಯೇ, ಸುನ್ನಿ ವಕ್ಫ್ ಬೋರ್ಡ್ ಪರ ವಾದ ಮಂಡಿಸಿದ್ದ ಮತ್ತು ಸುನ್ನಿ ವಕ್ಪ್ ಮಂಡಳಿಯ ಸದಸ್ಯರೂ, ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನ ಕಾರ್ಯದರ್ಶಿಯೂ ಆದ ಜಫರ್ಯಾಬ್ ಜಿಲಾನಿಯವರು ಪತ್ರಿಕಾಗೋಷ್ಠಿಯಲ್ಲಿ “ತೀರ್ಪಿನ ಬಗ್ಗೆ ಗೌರವವಿದೆ, ಆದರೆ ಸಮಾಧಾನ ತಂದಿಲ್ಲ. ಹಾಗಾಗಿ ಮರುಪರಿಶೀಲನೆ ಅರ್ಜಿ ಹಾಕುವ ಬಗ್ಗೆ ಯೋಚಿಸಿ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದರು. ಆದರೆ ಫರೂಕಿಯವರ ಹೇಳಿಕೆಯಿಂದ ಮರು ಪರಿಶೀಲನೆ ಅರ್ಜಿ ಸಲ್ಲಿಸಲಾಗುವುದಿಲ್ಲ ಎಂಬುದು ಖಾತ್ರಿಯಾಗಿದೆ.

ಈ ಬಗ್ಗೆ ಜಫರ್ಯಾಬ್ ಜಿಲಾನಿಯವರ ಸ್ಪಷ್ಟಣೆ ಕೇಳಿದಾಗ, “ಮಧ್ಯಾಹ್ನ ನಾನು ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅದರ ಕಾರ್ಯದರ್ಶಿಯಾಗಿ ಅಭಿಪ್ರಾಯ ಹೇಳಿದ್ದೆ. ವಕ್ಫ್ ಮಂಡಳಿಯ ಪರವಾಗಿ ಅಲ್ಲ.” ಎಂದರು.
`ಸುನ್ನಿ ವಕ್ಫ್ ಮಂಡಳಿಯಲ್ಲದೆ ನಿರ್ಮೋಹಿ ಅಖಾರ, ಶಿಯಾ ವಕ್ಫ್ ಮಂಡಳಿಗಳೂ ಈ ಪ್ರಕರಣದಲ್ಲಿ ದಾವೆದಾರರಾಗಿದ್ದವು. ಅವು ಮೇಲ್ಮನವಿ ಸಲ್ಲಿಸುತ್ತವೋ, ಇಲ್ಲವೋ ಗೊತ್ತಿಲ್ಲ. ಅದು ಅವರಿಗೆ ಬಿಟ್ಟ ವಿಚಾರ’ ಎಂಬ ಮಾತನ್ನೂ ಫರೂಕಿಯವರು ಹೇಳಿದರು.

ಬೆಳಿಗ್ಗೆ ತನ್ನ ಅಂತಿಮ ತೀರ್ಪು ಪ್ರಕಟಿಸಿದ್ದ ಸುಪ್ರೀಂ ಕೋರ್ಟ್ ಅಯೋಧ್ಯೆಯ ವಿವಾದಿತ 2.7 ಎಕರೆ ಜಾಗವನ್ನು ಮಂದಿರ ನಿರ್ಮಾಣಕ್ಕೆ ಬಿಟ್ಟುಕೊಡಬೇಕು, ಈ ಕುರಿತು ಕೇಂದ್ರ ಸರ್ಕಾರ ಒಂದು ಟ್ರಸ್ಟ್ ಸ್ಥಾಪಿಸಬೇಕು. ಮತ್ತು ಇದಕ್ಕೆ ಬದಲಾಗಿ ಅಯೋಧ್ಯೆಯಲ್ಲೇ ಬೇರೆಡೆ ಮಸೀದಿ ನಿರ್ಮಿಸಲು ಸುನ್ನಿ ವಕ್ಫ್ ಮಂಡಳಿಗೆ ಐದು ಎಕರೆ ಜಮೀನು ನೀಡಬೇಕು ಎಂದು ಆದೇಶಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...