Homeಮುಖಪುಟಅಯೋಧ್ಯೆ ತೀರ್ಪು ಒಪ್ಪಿದ್ದೇವೆ, ಮರು ಪರಿಶೀಲನೆ ಅರ್ಜಿ ಹಾಕುವುದಿಲ್ಲ: ಸುನ್ನಿ ವಕ್ಫ್ ಮಂಡಳಿ

ಅಯೋಧ್ಯೆ ತೀರ್ಪು ಒಪ್ಪಿದ್ದೇವೆ, ಮರು ಪರಿಶೀಲನೆ ಅರ್ಜಿ ಹಾಕುವುದಿಲ್ಲ: ಸುನ್ನಿ ವಕ್ಫ್ ಮಂಡಳಿ

- Advertisement -
- Advertisement -

ಅಯೋಧ್ಯೆ ವಿವಾದದಲ್ಲಿ ಪ್ರಮುಖ ದಾವೆದಾರರಲ್ಲಿ ಒಂದಾಗಿದ್ದ ಸುನ್ನಿ ವಕ್ಫ್ ಬೋರ್ಡ್ ಮಂಡಳಿಯು ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಮರುಪರಿಶೀಲನೆ ಮನವಿಯನ್ನು ಸಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಉತ್ತರ ಪ್ರದೇಶ ಸುನ್ನಿ ವಕ್ಫ್ ಬೋರ್ಡ್ ಮಂಡಳಿಯ ಅಧ್ಯಕ್ಷ ಜಫರ್ ಅಹ್ಮದ್ ಫರೂಕಿಯವರು ಸುದ್ದಿಗೋಷ್ಠಿ ನಡೆಸಿ “ಮಂಡಳಿಯು ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತದೆ. ಹಾಗಾಗಿ ತೀರ್ಪಿನ ಮರುಪರಿಶೀಲನೆ ಮಾಡುವ ಮೇಲ್ಮನವಿಯನ್ನು ಸಲ್ಲಿಸದಿರಲು ನಿರ್ಧರಿಸಿದೆ. ಮಂಡಳಿಯು ಸಂಪೂರ್ಣ ವರದಿಯನ್ನು ಕೂಲಂಕಷವಾಗಿ ಓದಿದ ತರುವಾಯ ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಲಾಗುವುದು. ಆದರೆ ಮೇಲ್ಮನವಿ ಸಲ್ಲಿಸದಿರುವುದು ಮಾತ್ರ ಖಚಿತ” ಎಂದು ತಿಳಿಸಿದ್ದಾರೆ.

ಇದಕ್ಕು ಮುನ್ನ, ತೀರ್ಪು ಹೊರಬರುತ್ತಿದ್ದಂತೆಯೇ, ಸುನ್ನಿ ವಕ್ಫ್ ಬೋರ್ಡ್ ಪರ ವಾದ ಮಂಡಿಸಿದ್ದ ಮತ್ತು ಸುನ್ನಿ ವಕ್ಪ್ ಮಂಡಳಿಯ ಸದಸ್ಯರೂ, ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನ ಕಾರ್ಯದರ್ಶಿಯೂ ಆದ ಜಫರ್ಯಾಬ್ ಜಿಲಾನಿಯವರು ಪತ್ರಿಕಾಗೋಷ್ಠಿಯಲ್ಲಿ “ತೀರ್ಪಿನ ಬಗ್ಗೆ ಗೌರವವಿದೆ, ಆದರೆ ಸಮಾಧಾನ ತಂದಿಲ್ಲ. ಹಾಗಾಗಿ ಮರುಪರಿಶೀಲನೆ ಅರ್ಜಿ ಹಾಕುವ ಬಗ್ಗೆ ಯೋಚಿಸಿ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದರು. ಆದರೆ ಫರೂಕಿಯವರ ಹೇಳಿಕೆಯಿಂದ ಮರು ಪರಿಶೀಲನೆ ಅರ್ಜಿ ಸಲ್ಲಿಸಲಾಗುವುದಿಲ್ಲ ಎಂಬುದು ಖಾತ್ರಿಯಾಗಿದೆ.

ಈ ಬಗ್ಗೆ ಜಫರ್ಯಾಬ್ ಜಿಲಾನಿಯವರ ಸ್ಪಷ್ಟಣೆ ಕೇಳಿದಾಗ, “ಮಧ್ಯಾಹ್ನ ನಾನು ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅದರ ಕಾರ್ಯದರ್ಶಿಯಾಗಿ ಅಭಿಪ್ರಾಯ ಹೇಳಿದ್ದೆ. ವಕ್ಫ್ ಮಂಡಳಿಯ ಪರವಾಗಿ ಅಲ್ಲ.” ಎಂದರು.
`ಸುನ್ನಿ ವಕ್ಫ್ ಮಂಡಳಿಯಲ್ಲದೆ ನಿರ್ಮೋಹಿ ಅಖಾರ, ಶಿಯಾ ವಕ್ಫ್ ಮಂಡಳಿಗಳೂ ಈ ಪ್ರಕರಣದಲ್ಲಿ ದಾವೆದಾರರಾಗಿದ್ದವು. ಅವು ಮೇಲ್ಮನವಿ ಸಲ್ಲಿಸುತ್ತವೋ, ಇಲ್ಲವೋ ಗೊತ್ತಿಲ್ಲ. ಅದು ಅವರಿಗೆ ಬಿಟ್ಟ ವಿಚಾರ’ ಎಂಬ ಮಾತನ್ನೂ ಫರೂಕಿಯವರು ಹೇಳಿದರು.

ಬೆಳಿಗ್ಗೆ ತನ್ನ ಅಂತಿಮ ತೀರ್ಪು ಪ್ರಕಟಿಸಿದ್ದ ಸುಪ್ರೀಂ ಕೋರ್ಟ್ ಅಯೋಧ್ಯೆಯ ವಿವಾದಿತ 2.7 ಎಕರೆ ಜಾಗವನ್ನು ಮಂದಿರ ನಿರ್ಮಾಣಕ್ಕೆ ಬಿಟ್ಟುಕೊಡಬೇಕು, ಈ ಕುರಿತು ಕೇಂದ್ರ ಸರ್ಕಾರ ಒಂದು ಟ್ರಸ್ಟ್ ಸ್ಥಾಪಿಸಬೇಕು. ಮತ್ತು ಇದಕ್ಕೆ ಬದಲಾಗಿ ಅಯೋಧ್ಯೆಯಲ್ಲೇ ಬೇರೆಡೆ ಮಸೀದಿ ನಿರ್ಮಿಸಲು ಸುನ್ನಿ ವಕ್ಫ್ ಮಂಡಳಿಗೆ ಐದು ಎಕರೆ ಜಮೀನು ನೀಡಬೇಕು ಎಂದು ಆದೇಶಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...