Homeಅಂಕಣಗಳು`ಅರೆರೆ, ನಮ್ದು ಕುತ್ತೆ ನಮಿಗೇ ಬೌ..ಬೌ..’

`ಅರೆರೆ, ನಮ್ದು ಕುತ್ತೆ ನಮಿಗೇ ಬೌ..ಬೌ..’

- Advertisement -
- Advertisement -

ಕೇಳುಗರಿಗೆಲ್ಲ ಸ್ವಾಗತ, ಆಘಾತವಾಣಿ ವಾರ್ತೆಗಳು, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ.
ಬ್ಲೂಜೆಪಿಯೆಂಬ ಕೊಳಕುಮಂಡಲ ಪಾರ್ಟಿಯು ದೇಶದ ತುಂಬೆಲ್ಲ ಕಾರ್ಯಕರ್ತರ ಹೆಸರಿನಲ್ಲಿ ಮಿಡಿನಾಗರಗಳನ್ನು ಸಾಕಿ, ವಿರೋಧಿಗಳ ಮೇಲೆ ಎಸೆಯುತ್ತಿರುವುದು ಗೊತ್ತೇ ಇದೆ. ಕಂಡಕಂಡವರಿಗೆಲ್ಲ ಕಚ್ಚಿ ಕಚ್ಚಿ ಅಭ್ಯಾಸವಾಗಿರುವ ಈ ಹಾವುಗಳು ಕಚ್ಚಲು ಬೇರೆ ಯಾರೂ ಸಿಗದೆ ಇತ್ತೀಚೆಗೆ ಬ್ಲೂಜೆಪಿ ಪಕ್ಷದವರನ್ನೇ ಅಗಿಯುತ್ತಿರುವುದು ಹೊಸ ಸಮಾಚಾರ. ಅಂತರ್ಧರ್ಮೀಯ ಮದುವೆಯಾದ ದಂಪತಿಗಳಿಗೆ ಪಾಸ್ ಪೋರ್ಟ್ ಕೊಡಲ್ಲ ಎಂದ ಸರ್ಕಾರಿ ಅಧಿಕಾರಿಯೊಬ್ಬನನ್ನು ಕೇಂದ್ರ ವಿದೇಶಾಂಗ ಮಂತ್ರಿ ಚೆಷ್ಮಾ ಸುರಾಜಮ್ಮ ಒದೆಯಬಾರದ ಜಾಗಕ್ಕೆ ಒದ್ದು ಕೆಲಸದಿಂದ ಓಡಿಸಿದ್ದರು. ಇಷ್ಟಕ್ಕೇ ರೊಚ್ಚಿಗೆದ್ದ ಬ್ಲೂಜೆಪಿಯ ಕಾರ್ಯಕರ್ತ ಸರ್ಪಗಳ ಪಡೆಯು ಚೆಶ್ಮಮ್ಮನನ್ನು ಕೊಲೆ ಮಾಡಲು, ತುಳಿದು ಸಾಯಿಸಲು ಕರೆ ಕೊಟ್ಟಿದ್ದವು. ಮುದ್ದು ಮಾಡಿ, ತಲೆಸವರಿ, ವಿಷವುಣಿಸಿ ಬೆಳೆಸಿದ ತಮ್ಮ ಸ್ವಂತ ಸರ್ಪಗಳೇ ತಿರುಗಿ ಬಿದ್ದು ಕಚ್ಚುತ್ತಿರುವುದರಿಂದ ಘಾಸಿಗೊಂಡ ಚೆಷ್ಮಮ್ಮ `ಅರೆರೆ, ನಮ್ದು ಕುತ್ತಾ ನಮಿಗೇ ಬೌ..ಬೌ..’ ಎಂದು ಕನವರಿಸುತ್ತಾ ಜೀವನದಲ್ಲಿ ಜಿಗುಪ್ಸೆ ಹುಟ್ಟಿಸಿಕೊಂಡಿದ್ದಾರೆಂದು ಅನಧಿಕೃತ ಮೂಲಗಳು ತಿಳಿಸಿವೆ.

******

ಬ್ರದಾನಮಂತ್ರಿ ಫಕೀರಪ್ಪನನ್ನು ರೋಡ್ ಶೋ ಟೈಮಿನಲ್ಲಿ ಆನೆಪಟಾಕಿ ಸರಕ್ಕೆ ಬೆಂಕಿಹಚ್ಚಿ ಎಸೆದು ಉಡೀಸ್ ಮಾಡಲು ದುಷ್ಕರ್ಮಿಗಳು ಹೊಂಚು ಹಾಕುತ್ತಿದ್ದಾರೆಂದು ಹಗಲುಕನಸು ಕಂಡ ಮಹಾರಾಷ್ಟ್ರ ಪೊಲೀಸರು ಈ ಕೆಟ್ಟಕನಸಿನ ಬಗ್ಗೆ ಬ್ರಧಾನಮಂತ್ರಿ ಕಚೇರಿಗೆ ಮಾಹಿತಿ ತಲುಪಿಸಿದ್ದಾರೆ. ಈ ತಳಬುಡವಿಲ್ಲದ ದುಸ್ವಪ್ನದ ಆಧಾರದ ಮೇಲೆ ಪಿ.ಎಂ ಫಕೀರಪ್ಪನಿಗೆ ಸೆಕ್ಯುರಿಟಿಯನ್ನು ಟೈಟ್ ಮಾಡಲಾಗಿದೆಯಂತೆ. ಹೊಸ ಆದೇಶದ ಪ್ರಕಾರ ಫಕೀರಪ್ಪನನ್ನು ದೇಶದ ಎಂ.ಎಲ್.ಎ, ಎಂಪಿಗಳು, ಅಧಿಕಾರಿಗಳೂ ಸಹ ಭೇಟಿ ಮಾಡಲು ನಿಬರ್ಂಧ ಹೇರಲಾಗಿದೆ. ಫಕೀರಪ್ಪನನ್ನು ಒಂದು ಪುರಿಮೂಟೆಯೊಳಗೆ ತುಂಬಿ, ಲಾರಿಯೊಂದಕ್ಕೆ ಎಸೆದು, ಆ ಲಾರಿಯ ಸುತ್ತ ಎಸ್.ಪಿ.ಜಿ ಕಮ್ಯಾಂಡೋಗಳು ಬಂದೂಕು ಹಿಡಿದು ಪಹರೆ ಕಾಯುತ್ತಿದ್ದಾರೆ ಎನ್ನಲಾಗಿದೆ. ತಿಂಡಿ, ಊಟ, ಸುಸ್ಸು ಮಾಡಲಷ್ಟೇ ಪುರಿಮೂಟೆಯಿಂದ ಹೊರಬರುವ ಫಕೀರಪ್ಪ, ಬಂದ ಕೆಲಸ ಮುಗಿಯುತ್ತಿದ್ದಂತೆ ಪುಸುಕ್ ಅಂತ ಲಾರಿ ಹತ್ತಿ ವಾಪಸ್ ಪುರಿಮೂಟೆಯೊಳಗೆ ಹೋಗಿ ಅವಿತು ಕುಳಿತುಕೊಳ್ಳುತ್ತಿದ್ದಾರೆಂದು ಅನಧಿಕೃತ ಮೂಲಗಳು ಸ್ಪಷ್ಟಪಡಿಸಿವೆ.

******

ರಾಜ್ಯ ರಾಜಕಾರಣದ ಕಲಬೆರಕೆ ಸರ್ಕಾರದಲ್ಲಿ ದಿನಕ್ಕೊಂದು ಧೀಂತಕಿಟತೋಂ ಅವಾಂತರಗಳನ್ನು ನೋಡಿ ನೋಡಿ ಕಣ್ಣು ಬೇನೆ ಬರಿಸಿಕೊಂಡಿರುವ ಸಮಾಜವಾದಿ ಸಿದ್ದಣ್ಣನವರು ಧರ್ಮಸ್ಥಳದ ಆಯುರ್ವೇದ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆದೂ ಪಡೆದೂ ಬೇಜಾರಾಗಿರೋ ಸಿದ್ದಣ್ಣ ‘ಬೆರಕೆ ಸರ್ಕಾರದ ಆಯುಸ್ಸು ಇಷ್ಟು ತಿಂಗಳು, ಆಮೇಲಿದು ಕಾಲೆತ್ತಿಕೊಂಡು ಮಲಗುತ್ತದೆ’ ಅಂತ ದಿನಕ್ಕೊಂದು ಆಡಿಯೋ ರೆಕಾಡಿರ್ಂಗ್, ವಿಡಿಯೋ ಕ್ಲಿಪಿಂಗ್ ರಿಲೀಸ್ ಮಾಡುತ್ತ ಕುಮಾರಣ್ಣನ ಬೋಳುಮಂಡೆಯ ಮೇಲೆ ಟುಕುಟುಕು ಕುಟ್ಟಿಕೊಂಡು ಎಂಜಾಯ್ ಮಾಡುತ್ತಿರುವುದು ಕೈಕಮಾಂಡ್ ತಲೆ ಕೆಡಿಸಿದೆ. ಈ ಬಗ್ಗೆ ಚಿಂತಾಕ್ರಾಂತರಾದ ಕೈಕಮ್ಯಾಂಡ್ ಮುಖ್ಯಸ್ಥರು ಪೇಟದ ಹೆಗ್ಗಡೆಯವರಿಗೆ ಫೋನು ಮಾಡಿ, ಸಿದ್ದಣ್ಣನವರ ಚಿಕಿತ್ಸೆ ಮುಗಿಯುವವರೆಗೆ ಅವರು ಮಾತನಾಡಲು ಸಾಧ್ಯವಾಗದಂತೆ ಯಾವುದಾದರೂ ಬೇರನ್ನು ಅರೆದು ಸಿದ್ದಣ್ಣನಿಗೆ ಬಲವಂತವಾಗಿ ಕುಡಿಸುವಂತೆ ವಿನಂತಿ ಮಾಡಿಕೊಂಡಿದ್ದಾರೆಂದು ಸೋರಿಕೆ ಸುದ್ದಿಗಳು ತಿಳಿಸಿವೆ.

******

ಬೀದಿಬೀದಿಗಳಲ್ಲಿ ನಾಯಿಕೊಡೆಗಳಂತೆ ತಲೆಯೆತ್ತಿರುವ ಮೊಬೈಲ್ ರಿಪೇರಿ ಅಂಗಡಿಗಳ ಹುಡುಗರಿಗಿಂತ ಕಡಿಮೆ ಕಾಮನ್ ಸೆನ್ಸ್ ಮತ್ತು ಸೈನ್ಸ್ ತಿಳುವಳಿಕೆಯಿರೋ ‘ಪವನಜ್ಜ’ ಎಂಬ ವಯೋವೃದ್ಧ ಚೆಡ್ಡಿಯೊಂದು ತನ್ನ ಮಾನವನ್ನು ತಾನೇ ತೆಗೆದುಕೊಂಡಿರೋ ಘಟನೆ ವರದಿಯಾಗಿದೆ. ಮೊಬೈಲ್‍ಗಳಲ್ಲಿ ಅದಿದೆ, ಇದು ಹಂಗೆ ಕೆಲ್ಸ ಮಾಡುತ್ತೆ, ಅದು ಹಿಂಗೆ ಕೆಲ್ಸ ಮಾಡುತ್ತೆ ಅಂತ ಪತ್ರಿಕೆಗಳಲ್ಲಿ ಪುಂಗುವ ಈ ಹಳೇ ದೊಗಳೆಚೆಡ್ಡಿಯು ಪುಸ್ತಕ ನೋಡಿ ಪರೀಕ್ಷೆ ಬರೆಯುವ ಶಿಕ್ಷಣ ಇಲಾಖೆಯ ಹೊಸ ಆಲೋಚನೆಯನ್ನು ಮೀಸಲಾತಿಗೆ ಗಂಟುಹಾಕಿ ತನ್ನ ಪುಳಚಾರ್ ಪಾಲಿಟಿಕ್ಸನ್ನು ಬಟಾಬಯಲು ಮಾಡಿಕೊಂಡಿದೆ. ಮೀಸಲಾತಿ ಅನುಪಾತದ ಹಿಂದುಮುಂದು ಗೊತ್ತಿಲ್ಲದೆ ಕೆಕರುಮಕರು ಪಟ್ಟಿಯೊಂದನ್ನು ಫೇಸ್ಬುಕ್ಕಲ್ಲಿ ಪೋಸ್ಟ್ ಮಾಡಿರುವ ಪವನಜ್ಜ.. ತಾನೆಂಥ ಶ್ರೇಷ್ಟಜಾತಿಯ ಹುಳ ಎಂಬುದನ್ನು ಅಂಡು ತಟ್ಟಿಕೊಂಡು ಘೋಷಿಸಿ ಜನರಿಂದ ಛೀಥೂ ಎಂದು ಉಗಿಸಿಕೊಳ್ಳುತ್ತಿದೆ ಎಂದು ವರದಿಯಾಗಿದೆ.

******

ಬಿಹಾರದಲ್ಲಿ ಲಲ್ಲೂ ಯಾದವ್ ಜೊತೆಗೆ ನೆಟ್ಟಗೆ ನಡೆಯುತ್ತಿದ್ದ ಕೂಡುಸಂಸಾರದ ಸರ್ಕಾರಕ್ಕೆ ಕೈ ಕೊಟ್ಟು ಬ್ಲೂಜೆಪಿಯೆಂಬ ಮಾನಸಿಕ ಅಸ್ವಸ್ಥ ಕತ್ತೆಯೊಂದರ ಜೊತೆಗೆ ಹೊಸ ಸಂಸಾರದ ಸರ್ಕಾರ ಮಾಡಿಕೊಂಡಿದ್ದ ನಿತೀಶ್ ಕುಮಾರ್‍ಗೆ ತಾನು ಓತಿಕ್ಯಾತಕ್ಕೆ ಹೆದರಿ ಹೆಬ್ಬಾವನ್ನು ತಬ್ಬಿಕೊಂಡಿದ್ದೇನೆ ಅಂತ ತಡವಾಗಿ ಅರಿವಾಗಿದೆಯತೆ. ಬ್ಲೂಜೆಪಿ ತಿಕ್ಕಲರು ಕೊಡ್ತಿರೋ ಚಿತ್ರಹಿಂಸೆಯಿಂದ ಹೇಗಾದರೂ ಸರಿ ತಪ್ಪಿಸಿಕೊಳ್ಳಲು ಹೆಣಗುತ್ತಿರೋ ನಿತೀಶ್, ಹಳೇ ಹಸ್ಬೆಂಡಿನ ಲೆಗ್ಗೇ ಗತಿ ಎಂಬ ತೀರ್ಮಾನಕ್ಕೆ ಬಂದು “ಲಲ್ಲೂ ಮಾಮ, ಐ ಲವ್ ಯೂ ಮಾಮಾ “ ಎಂದು ಲಲ್ಲೂ ಯಾದವ್‍ಗೆ ಮೆಸೇಜು ಪಾಸ್ ಮಾಡ್ತಿದ್ದಾರೆಂದು ಗೊತ್ತಾಗಿದೆ. ಹೋದ ಬಂದಲ್ಲೆಲ್ಲ ಮಕಮೂತಿಗೆ ಇಕ್ಕಿಸಿಕೊಂಡು ಏದುಸಿರು ಬಿಡುತ್ತಿರೋ ಹಮೀದ್ ಷಾ ಎಂಬ ಹಳೇ ಕ್ರಿಮಿನಲ್ ಗಿರಾಕಿಗೆ ಈ ಬೆಳವಣಿಗೆಯಿಂದ ಹೊಸದಾಗಿ ಬೇಧಿ ಕಿತ್ಕೊಂಡಿದೆಯೆಂದು ಗುಪ್ತಮೂಲಗಳು ತಿಳಿಸಿವೆ. ಬಿಹಾರದಲ್ಲೇನಾದ್ರೂ ಎಡವಟ್ಟಾದರೆ ಅಕ್ಕಪಕ್ಕದ ರಾಜ್ಯಗಳೂ ಕೈಗೆ ಕೆರ ಎತ್ತಿಕೊಳ್ತವೆ ಅಂತ ಗಾಬರಿಯಾಗಿರುವ ಡ್ರಾಮಾ ಮಾಸ್ಟರ್ ಫಕೀರಪ್ಪ ಪಕೋಡೇಂದ್ರನು ನಿತೀಶ್ ಕುಮಾರ್‍ಗೆ ತಕ್ಷಣ ಫೋನ್ ಮಾಡಿ “ಬಾ.. ಮುತ್ತು ಕೊಡುವೆ ಕಂದನೆ, ನನ್ನ ಮುದ್ದು ರಾಜ” ಎಂಬ ಹಾಡನ್ನು ಹಾಡಿದರಂತೆ.. ಇದಕ್ಕೆ ಉತ್ತರಿಸಿದ ನಿತೀಶ್ ಕುಮಾರ್ “ನಾನು ಆ ಟೈಪ್‍ನವನಲ್ಲ… ಮುಚ್ಕೊಂಡ್ ಫೋನ್ ಮಡಗು” ಎಂದು ಖಡಕ್‍ಆಗಿ ಹೇಳಿ ಫೋನು ಕುಕ್ಕಿದರೆಂದು ಬಲ್ಲ ಮೂಲಗಳು ತಿಳಿಸಿವೆ.

******

ಕಳೆದ ಮುವ್ವತ್ತು ವರ್ಷಗಳಿಂದಲೂ ‘ಮಂದಿರ್ ವಹೀ ಬನಾಯೇಂಗೆ, ಇಟ್ಟಿಗೆ ಕೊಡಿ, ಚಪ್ಪಡಿ ಕೊಡಿ, ಮಣ್ಣು ಕೊಡಿ, ಸಿಮೆಂಟು ಕೊಡಿ’ ಅಂತ ಗಂಟಲು ಹರಿದುಕೊಳ್ತಿದ್ದ ದೊಗಳೆಚಡ್ಡಿಗಳು 2014ರಲ್ಲಿ ತಮ್ಮದೇ ಮೆಜಾರಿಟಿ ಸರ್ಕಾರ ಬಂದ ತಕ್ಷಣ ತಮ್ಮ ನವರಂಧ್ರಗಳಿಗೂ ಮಂದಿರದ ಹೆಸರಿನಲ್ಲಿ ಕಲೆಕ್ಷನ್ ಮಾಡಿದ ಐಟಂಗಳನ್ನು ಇಟ್ಟುಕೊಂಡು ಗಪ್ ಚುಪ್ ಆಗಿದ್ದರು. 4 ವರ್ಷ ಇದೇ “ಗಪ್ ಚುಪ್ಪಾಸನ” ಮಾಡುತ್ತಿದ್ದ ಇದೇ ದೊಗಳೆಚಡ್ಡಿಗಳು, ಎಲೆಕ್ಷನ್ ಹತ್ತಿರ ಬರುತ್ತಿದ್ದಂತೆ. ಮತ್ತೆ “ಮಂದಿರ್ ವಹೀ ಬನಾಯೇಂಗೆ” ಎಂದು ಥಕಥಕ ಕುಣಿಯುತ್ತಿವೆ. ನಿಮ್ಮದೇ ಸರ್ಕಾರ, ನಿಮ್ಮದೇ ಕಾನೂನು, ನಿಮ್ಮದೇ ಆಡಳಿತ, ನಿಮ್ಮದೇ ರಾಜ್ಯ, ನಿಮ್ಮದೇ ಮುಖ್ಯಮಂತ್ರಿ, ಇಷ್ಟೆಲ್ಲ ಇದ್ದು ಮಂದಿರ ಕಟ್ಟದೇ ಇಷ್ಟು ವರ್ಷ ಎಲ್ಲಿ ಎಂಜಲೆತ್ತೋಕೆ ಹೋಗಿದ್ರಿ ಅಂತ ದೊಗಳೆ ಚಡ್ಡಿಗಳಿಗೆ ಜನ ಉಗಿಯುತ್ತಿದ್ದಾರೆ. ಇದನ್ನು ಕೇರು ಮಾಡದ ದೊಗಳೆಚಡ್ಡಿಗಳು ಅದೇ ಚಡ್ಡಿಯಲ್ಲಿ ಉಗುಳುಬಿದ್ದ ಮುಖವನ್ನು ಒರೆಸಿಕೊಂಡು “ಮಂದಿರ್ ವಹೀ….” ಅಂತ ತಲೆ ಮೇಲೆ ಟವೆಲ್ ಹಾಕಿಕೊಂಡು ಹತ್ತಿರದ ವೈನ್ ಸ್ಟೋರ್ ಕಡೆಗೆ ಠೀವಿಯಿಂದ ಹೆಜ್ಜೆಹಾಕಿದರು ಎಂಬ ಸುದ್ದಿ ಲಭ್ಯವಾಗಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಬೇಟಿ ಮುಂದಿನವಾರ. ಅಲ್ಲೀತನಕ ನೀವೂ ನೆಮ್ದಿಯಾಗಿರಿ, ನಾವೂ ನೆಮ್ದಿಯಾಗಿರುತ್ತೇವೆ ಅಂತ ಹೇಳುತ್ತ, ವಾರ್ತಾಪ್ರಸಾರಕ್ಕೆ ಮಂಗಳ ಹಾಡುತ್ತಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...