Homeಅಂಕಣಗಳು`ಅರೆರೆ, ನಮ್ದು ಕುತ್ತೆ ನಮಿಗೇ ಬೌ..ಬೌ..’

`ಅರೆರೆ, ನಮ್ದು ಕುತ್ತೆ ನಮಿಗೇ ಬೌ..ಬೌ..’

- Advertisement -
- Advertisement -

ಕೇಳುಗರಿಗೆಲ್ಲ ಸ್ವಾಗತ, ಆಘಾತವಾಣಿ ವಾರ್ತೆಗಳು, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ.
ಬ್ಲೂಜೆಪಿಯೆಂಬ ಕೊಳಕುಮಂಡಲ ಪಾರ್ಟಿಯು ದೇಶದ ತುಂಬೆಲ್ಲ ಕಾರ್ಯಕರ್ತರ ಹೆಸರಿನಲ್ಲಿ ಮಿಡಿನಾಗರಗಳನ್ನು ಸಾಕಿ, ವಿರೋಧಿಗಳ ಮೇಲೆ ಎಸೆಯುತ್ತಿರುವುದು ಗೊತ್ತೇ ಇದೆ. ಕಂಡಕಂಡವರಿಗೆಲ್ಲ ಕಚ್ಚಿ ಕಚ್ಚಿ ಅಭ್ಯಾಸವಾಗಿರುವ ಈ ಹಾವುಗಳು ಕಚ್ಚಲು ಬೇರೆ ಯಾರೂ ಸಿಗದೆ ಇತ್ತೀಚೆಗೆ ಬ್ಲೂಜೆಪಿ ಪಕ್ಷದವರನ್ನೇ ಅಗಿಯುತ್ತಿರುವುದು ಹೊಸ ಸಮಾಚಾರ. ಅಂತರ್ಧರ್ಮೀಯ ಮದುವೆಯಾದ ದಂಪತಿಗಳಿಗೆ ಪಾಸ್ ಪೋರ್ಟ್ ಕೊಡಲ್ಲ ಎಂದ ಸರ್ಕಾರಿ ಅಧಿಕಾರಿಯೊಬ್ಬನನ್ನು ಕೇಂದ್ರ ವಿದೇಶಾಂಗ ಮಂತ್ರಿ ಚೆಷ್ಮಾ ಸುರಾಜಮ್ಮ ಒದೆಯಬಾರದ ಜಾಗಕ್ಕೆ ಒದ್ದು ಕೆಲಸದಿಂದ ಓಡಿಸಿದ್ದರು. ಇಷ್ಟಕ್ಕೇ ರೊಚ್ಚಿಗೆದ್ದ ಬ್ಲೂಜೆಪಿಯ ಕಾರ್ಯಕರ್ತ ಸರ್ಪಗಳ ಪಡೆಯು ಚೆಶ್ಮಮ್ಮನನ್ನು ಕೊಲೆ ಮಾಡಲು, ತುಳಿದು ಸಾಯಿಸಲು ಕರೆ ಕೊಟ್ಟಿದ್ದವು. ಮುದ್ದು ಮಾಡಿ, ತಲೆಸವರಿ, ವಿಷವುಣಿಸಿ ಬೆಳೆಸಿದ ತಮ್ಮ ಸ್ವಂತ ಸರ್ಪಗಳೇ ತಿರುಗಿ ಬಿದ್ದು ಕಚ್ಚುತ್ತಿರುವುದರಿಂದ ಘಾಸಿಗೊಂಡ ಚೆಷ್ಮಮ್ಮ `ಅರೆರೆ, ನಮ್ದು ಕುತ್ತಾ ನಮಿಗೇ ಬೌ..ಬೌ..’ ಎಂದು ಕನವರಿಸುತ್ತಾ ಜೀವನದಲ್ಲಿ ಜಿಗುಪ್ಸೆ ಹುಟ್ಟಿಸಿಕೊಂಡಿದ್ದಾರೆಂದು ಅನಧಿಕೃತ ಮೂಲಗಳು ತಿಳಿಸಿವೆ.

******

ಬ್ರದಾನಮಂತ್ರಿ ಫಕೀರಪ್ಪನನ್ನು ರೋಡ್ ಶೋ ಟೈಮಿನಲ್ಲಿ ಆನೆಪಟಾಕಿ ಸರಕ್ಕೆ ಬೆಂಕಿಹಚ್ಚಿ ಎಸೆದು ಉಡೀಸ್ ಮಾಡಲು ದುಷ್ಕರ್ಮಿಗಳು ಹೊಂಚು ಹಾಕುತ್ತಿದ್ದಾರೆಂದು ಹಗಲುಕನಸು ಕಂಡ ಮಹಾರಾಷ್ಟ್ರ ಪೊಲೀಸರು ಈ ಕೆಟ್ಟಕನಸಿನ ಬಗ್ಗೆ ಬ್ರಧಾನಮಂತ್ರಿ ಕಚೇರಿಗೆ ಮಾಹಿತಿ ತಲುಪಿಸಿದ್ದಾರೆ. ಈ ತಳಬುಡವಿಲ್ಲದ ದುಸ್ವಪ್ನದ ಆಧಾರದ ಮೇಲೆ ಪಿ.ಎಂ ಫಕೀರಪ್ಪನಿಗೆ ಸೆಕ್ಯುರಿಟಿಯನ್ನು ಟೈಟ್ ಮಾಡಲಾಗಿದೆಯಂತೆ. ಹೊಸ ಆದೇಶದ ಪ್ರಕಾರ ಫಕೀರಪ್ಪನನ್ನು ದೇಶದ ಎಂ.ಎಲ್.ಎ, ಎಂಪಿಗಳು, ಅಧಿಕಾರಿಗಳೂ ಸಹ ಭೇಟಿ ಮಾಡಲು ನಿಬರ್ಂಧ ಹೇರಲಾಗಿದೆ. ಫಕೀರಪ್ಪನನ್ನು ಒಂದು ಪುರಿಮೂಟೆಯೊಳಗೆ ತುಂಬಿ, ಲಾರಿಯೊಂದಕ್ಕೆ ಎಸೆದು, ಆ ಲಾರಿಯ ಸುತ್ತ ಎಸ್.ಪಿ.ಜಿ ಕಮ್ಯಾಂಡೋಗಳು ಬಂದೂಕು ಹಿಡಿದು ಪಹರೆ ಕಾಯುತ್ತಿದ್ದಾರೆ ಎನ್ನಲಾಗಿದೆ. ತಿಂಡಿ, ಊಟ, ಸುಸ್ಸು ಮಾಡಲಷ್ಟೇ ಪುರಿಮೂಟೆಯಿಂದ ಹೊರಬರುವ ಫಕೀರಪ್ಪ, ಬಂದ ಕೆಲಸ ಮುಗಿಯುತ್ತಿದ್ದಂತೆ ಪುಸುಕ್ ಅಂತ ಲಾರಿ ಹತ್ತಿ ವಾಪಸ್ ಪುರಿಮೂಟೆಯೊಳಗೆ ಹೋಗಿ ಅವಿತು ಕುಳಿತುಕೊಳ್ಳುತ್ತಿದ್ದಾರೆಂದು ಅನಧಿಕೃತ ಮೂಲಗಳು ಸ್ಪಷ್ಟಪಡಿಸಿವೆ.

******

ರಾಜ್ಯ ರಾಜಕಾರಣದ ಕಲಬೆರಕೆ ಸರ್ಕಾರದಲ್ಲಿ ದಿನಕ್ಕೊಂದು ಧೀಂತಕಿಟತೋಂ ಅವಾಂತರಗಳನ್ನು ನೋಡಿ ನೋಡಿ ಕಣ್ಣು ಬೇನೆ ಬರಿಸಿಕೊಂಡಿರುವ ಸಮಾಜವಾದಿ ಸಿದ್ದಣ್ಣನವರು ಧರ್ಮಸ್ಥಳದ ಆಯುರ್ವೇದ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆದೂ ಪಡೆದೂ ಬೇಜಾರಾಗಿರೋ ಸಿದ್ದಣ್ಣ ‘ಬೆರಕೆ ಸರ್ಕಾರದ ಆಯುಸ್ಸು ಇಷ್ಟು ತಿಂಗಳು, ಆಮೇಲಿದು ಕಾಲೆತ್ತಿಕೊಂಡು ಮಲಗುತ್ತದೆ’ ಅಂತ ದಿನಕ್ಕೊಂದು ಆಡಿಯೋ ರೆಕಾಡಿರ್ಂಗ್, ವಿಡಿಯೋ ಕ್ಲಿಪಿಂಗ್ ರಿಲೀಸ್ ಮಾಡುತ್ತ ಕುಮಾರಣ್ಣನ ಬೋಳುಮಂಡೆಯ ಮೇಲೆ ಟುಕುಟುಕು ಕುಟ್ಟಿಕೊಂಡು ಎಂಜಾಯ್ ಮಾಡುತ್ತಿರುವುದು ಕೈಕಮಾಂಡ್ ತಲೆ ಕೆಡಿಸಿದೆ. ಈ ಬಗ್ಗೆ ಚಿಂತಾಕ್ರಾಂತರಾದ ಕೈಕಮ್ಯಾಂಡ್ ಮುಖ್ಯಸ್ಥರು ಪೇಟದ ಹೆಗ್ಗಡೆಯವರಿಗೆ ಫೋನು ಮಾಡಿ, ಸಿದ್ದಣ್ಣನವರ ಚಿಕಿತ್ಸೆ ಮುಗಿಯುವವರೆಗೆ ಅವರು ಮಾತನಾಡಲು ಸಾಧ್ಯವಾಗದಂತೆ ಯಾವುದಾದರೂ ಬೇರನ್ನು ಅರೆದು ಸಿದ್ದಣ್ಣನಿಗೆ ಬಲವಂತವಾಗಿ ಕುಡಿಸುವಂತೆ ವಿನಂತಿ ಮಾಡಿಕೊಂಡಿದ್ದಾರೆಂದು ಸೋರಿಕೆ ಸುದ್ದಿಗಳು ತಿಳಿಸಿವೆ.

******

ಬೀದಿಬೀದಿಗಳಲ್ಲಿ ನಾಯಿಕೊಡೆಗಳಂತೆ ತಲೆಯೆತ್ತಿರುವ ಮೊಬೈಲ್ ರಿಪೇರಿ ಅಂಗಡಿಗಳ ಹುಡುಗರಿಗಿಂತ ಕಡಿಮೆ ಕಾಮನ್ ಸೆನ್ಸ್ ಮತ್ತು ಸೈನ್ಸ್ ತಿಳುವಳಿಕೆಯಿರೋ ‘ಪವನಜ್ಜ’ ಎಂಬ ವಯೋವೃದ್ಧ ಚೆಡ್ಡಿಯೊಂದು ತನ್ನ ಮಾನವನ್ನು ತಾನೇ ತೆಗೆದುಕೊಂಡಿರೋ ಘಟನೆ ವರದಿಯಾಗಿದೆ. ಮೊಬೈಲ್‍ಗಳಲ್ಲಿ ಅದಿದೆ, ಇದು ಹಂಗೆ ಕೆಲ್ಸ ಮಾಡುತ್ತೆ, ಅದು ಹಿಂಗೆ ಕೆಲ್ಸ ಮಾಡುತ್ತೆ ಅಂತ ಪತ್ರಿಕೆಗಳಲ್ಲಿ ಪುಂಗುವ ಈ ಹಳೇ ದೊಗಳೆಚೆಡ್ಡಿಯು ಪುಸ್ತಕ ನೋಡಿ ಪರೀಕ್ಷೆ ಬರೆಯುವ ಶಿಕ್ಷಣ ಇಲಾಖೆಯ ಹೊಸ ಆಲೋಚನೆಯನ್ನು ಮೀಸಲಾತಿಗೆ ಗಂಟುಹಾಕಿ ತನ್ನ ಪುಳಚಾರ್ ಪಾಲಿಟಿಕ್ಸನ್ನು ಬಟಾಬಯಲು ಮಾಡಿಕೊಂಡಿದೆ. ಮೀಸಲಾತಿ ಅನುಪಾತದ ಹಿಂದುಮುಂದು ಗೊತ್ತಿಲ್ಲದೆ ಕೆಕರುಮಕರು ಪಟ್ಟಿಯೊಂದನ್ನು ಫೇಸ್ಬುಕ್ಕಲ್ಲಿ ಪೋಸ್ಟ್ ಮಾಡಿರುವ ಪವನಜ್ಜ.. ತಾನೆಂಥ ಶ್ರೇಷ್ಟಜಾತಿಯ ಹುಳ ಎಂಬುದನ್ನು ಅಂಡು ತಟ್ಟಿಕೊಂಡು ಘೋಷಿಸಿ ಜನರಿಂದ ಛೀಥೂ ಎಂದು ಉಗಿಸಿಕೊಳ್ಳುತ್ತಿದೆ ಎಂದು ವರದಿಯಾಗಿದೆ.

******

ಬಿಹಾರದಲ್ಲಿ ಲಲ್ಲೂ ಯಾದವ್ ಜೊತೆಗೆ ನೆಟ್ಟಗೆ ನಡೆಯುತ್ತಿದ್ದ ಕೂಡುಸಂಸಾರದ ಸರ್ಕಾರಕ್ಕೆ ಕೈ ಕೊಟ್ಟು ಬ್ಲೂಜೆಪಿಯೆಂಬ ಮಾನಸಿಕ ಅಸ್ವಸ್ಥ ಕತ್ತೆಯೊಂದರ ಜೊತೆಗೆ ಹೊಸ ಸಂಸಾರದ ಸರ್ಕಾರ ಮಾಡಿಕೊಂಡಿದ್ದ ನಿತೀಶ್ ಕುಮಾರ್‍ಗೆ ತಾನು ಓತಿಕ್ಯಾತಕ್ಕೆ ಹೆದರಿ ಹೆಬ್ಬಾವನ್ನು ತಬ್ಬಿಕೊಂಡಿದ್ದೇನೆ ಅಂತ ತಡವಾಗಿ ಅರಿವಾಗಿದೆಯತೆ. ಬ್ಲೂಜೆಪಿ ತಿಕ್ಕಲರು ಕೊಡ್ತಿರೋ ಚಿತ್ರಹಿಂಸೆಯಿಂದ ಹೇಗಾದರೂ ಸರಿ ತಪ್ಪಿಸಿಕೊಳ್ಳಲು ಹೆಣಗುತ್ತಿರೋ ನಿತೀಶ್, ಹಳೇ ಹಸ್ಬೆಂಡಿನ ಲೆಗ್ಗೇ ಗತಿ ಎಂಬ ತೀರ್ಮಾನಕ್ಕೆ ಬಂದು “ಲಲ್ಲೂ ಮಾಮ, ಐ ಲವ್ ಯೂ ಮಾಮಾ “ ಎಂದು ಲಲ್ಲೂ ಯಾದವ್‍ಗೆ ಮೆಸೇಜು ಪಾಸ್ ಮಾಡ್ತಿದ್ದಾರೆಂದು ಗೊತ್ತಾಗಿದೆ. ಹೋದ ಬಂದಲ್ಲೆಲ್ಲ ಮಕಮೂತಿಗೆ ಇಕ್ಕಿಸಿಕೊಂಡು ಏದುಸಿರು ಬಿಡುತ್ತಿರೋ ಹಮೀದ್ ಷಾ ಎಂಬ ಹಳೇ ಕ್ರಿಮಿನಲ್ ಗಿರಾಕಿಗೆ ಈ ಬೆಳವಣಿಗೆಯಿಂದ ಹೊಸದಾಗಿ ಬೇಧಿ ಕಿತ್ಕೊಂಡಿದೆಯೆಂದು ಗುಪ್ತಮೂಲಗಳು ತಿಳಿಸಿವೆ. ಬಿಹಾರದಲ್ಲೇನಾದ್ರೂ ಎಡವಟ್ಟಾದರೆ ಅಕ್ಕಪಕ್ಕದ ರಾಜ್ಯಗಳೂ ಕೈಗೆ ಕೆರ ಎತ್ತಿಕೊಳ್ತವೆ ಅಂತ ಗಾಬರಿಯಾಗಿರುವ ಡ್ರಾಮಾ ಮಾಸ್ಟರ್ ಫಕೀರಪ್ಪ ಪಕೋಡೇಂದ್ರನು ನಿತೀಶ್ ಕುಮಾರ್‍ಗೆ ತಕ್ಷಣ ಫೋನ್ ಮಾಡಿ “ಬಾ.. ಮುತ್ತು ಕೊಡುವೆ ಕಂದನೆ, ನನ್ನ ಮುದ್ದು ರಾಜ” ಎಂಬ ಹಾಡನ್ನು ಹಾಡಿದರಂತೆ.. ಇದಕ್ಕೆ ಉತ್ತರಿಸಿದ ನಿತೀಶ್ ಕುಮಾರ್ “ನಾನು ಆ ಟೈಪ್‍ನವನಲ್ಲ… ಮುಚ್ಕೊಂಡ್ ಫೋನ್ ಮಡಗು” ಎಂದು ಖಡಕ್‍ಆಗಿ ಹೇಳಿ ಫೋನು ಕುಕ್ಕಿದರೆಂದು ಬಲ್ಲ ಮೂಲಗಳು ತಿಳಿಸಿವೆ.

******

ಕಳೆದ ಮುವ್ವತ್ತು ವರ್ಷಗಳಿಂದಲೂ ‘ಮಂದಿರ್ ವಹೀ ಬನಾಯೇಂಗೆ, ಇಟ್ಟಿಗೆ ಕೊಡಿ, ಚಪ್ಪಡಿ ಕೊಡಿ, ಮಣ್ಣು ಕೊಡಿ, ಸಿಮೆಂಟು ಕೊಡಿ’ ಅಂತ ಗಂಟಲು ಹರಿದುಕೊಳ್ತಿದ್ದ ದೊಗಳೆಚಡ್ಡಿಗಳು 2014ರಲ್ಲಿ ತಮ್ಮದೇ ಮೆಜಾರಿಟಿ ಸರ್ಕಾರ ಬಂದ ತಕ್ಷಣ ತಮ್ಮ ನವರಂಧ್ರಗಳಿಗೂ ಮಂದಿರದ ಹೆಸರಿನಲ್ಲಿ ಕಲೆಕ್ಷನ್ ಮಾಡಿದ ಐಟಂಗಳನ್ನು ಇಟ್ಟುಕೊಂಡು ಗಪ್ ಚುಪ್ ಆಗಿದ್ದರು. 4 ವರ್ಷ ಇದೇ “ಗಪ್ ಚುಪ್ಪಾಸನ” ಮಾಡುತ್ತಿದ್ದ ಇದೇ ದೊಗಳೆಚಡ್ಡಿಗಳು, ಎಲೆಕ್ಷನ್ ಹತ್ತಿರ ಬರುತ್ತಿದ್ದಂತೆ. ಮತ್ತೆ “ಮಂದಿರ್ ವಹೀ ಬನಾಯೇಂಗೆ” ಎಂದು ಥಕಥಕ ಕುಣಿಯುತ್ತಿವೆ. ನಿಮ್ಮದೇ ಸರ್ಕಾರ, ನಿಮ್ಮದೇ ಕಾನೂನು, ನಿಮ್ಮದೇ ಆಡಳಿತ, ನಿಮ್ಮದೇ ರಾಜ್ಯ, ನಿಮ್ಮದೇ ಮುಖ್ಯಮಂತ್ರಿ, ಇಷ್ಟೆಲ್ಲ ಇದ್ದು ಮಂದಿರ ಕಟ್ಟದೇ ಇಷ್ಟು ವರ್ಷ ಎಲ್ಲಿ ಎಂಜಲೆತ್ತೋಕೆ ಹೋಗಿದ್ರಿ ಅಂತ ದೊಗಳೆ ಚಡ್ಡಿಗಳಿಗೆ ಜನ ಉಗಿಯುತ್ತಿದ್ದಾರೆ. ಇದನ್ನು ಕೇರು ಮಾಡದ ದೊಗಳೆಚಡ್ಡಿಗಳು ಅದೇ ಚಡ್ಡಿಯಲ್ಲಿ ಉಗುಳುಬಿದ್ದ ಮುಖವನ್ನು ಒರೆಸಿಕೊಂಡು “ಮಂದಿರ್ ವಹೀ….” ಅಂತ ತಲೆ ಮೇಲೆ ಟವೆಲ್ ಹಾಕಿಕೊಂಡು ಹತ್ತಿರದ ವೈನ್ ಸ್ಟೋರ್ ಕಡೆಗೆ ಠೀವಿಯಿಂದ ಹೆಜ್ಜೆಹಾಕಿದರು ಎಂಬ ಸುದ್ದಿ ಲಭ್ಯವಾಗಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಬೇಟಿ ಮುಂದಿನವಾರ. ಅಲ್ಲೀತನಕ ನೀವೂ ನೆಮ್ದಿಯಾಗಿರಿ, ನಾವೂ ನೆಮ್ದಿಯಾಗಿರುತ್ತೇವೆ ಅಂತ ಹೇಳುತ್ತ, ವಾರ್ತಾಪ್ರಸಾರಕ್ಕೆ ಮಂಗಳ ಹಾಡುತ್ತಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ತೀರ್ಪಿನೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ಬರಲು ಬಿಡುತ್ತೇವೆ; ಕಾಂಗ್ರೆಸ್‌ ಜೊತೆಗೆ ಮೈತ್ರಿ ಇಲ್ಲ: ಕೇರಳ ಸಿಪಿಐ(ಎಂ) ಮುಖ್ಯಸ್ಥ

ಕೇರಳದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಂದು ಕಾರ್ಪೊರೇಷನ್ ಮತ್ತು ಪುರಸಭೆಯಲ್ಲಿ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ, ಎರಡು ಪ್ರತಿಸ್ಪರ್ಧಿ ರಂಗಗಳಾದ ಯುಡಿಎಫ್ ಮತ್ತು ಎಲ್‌ಡಿಎಫ್ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು...

ಕೊಂದವರು ಯಾರು: ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲಾ ಹತ್ಯೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು: ಮಲ್ಲಿಗೆ ಸಿರಿಮನೆ

“ನಾವು ಕೊಂದವರು ಯಾರು’ ಆಂದೋಲನದಿಂದ ‘ಮಹಿಳಾ ನ್ಯಾಯ ಸಮಾವೇಶ’ವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಬೇಕು ಎಂದುಕೊಂಡಾಗ ನೂರಾರು ಪ್ರಶ್ನೆಗಳು, ನೂರಾರು ಆಪಾದನೆಗಳು, ಆರೋಪಗಳು ಬಂದವು. ಯಾಕೆ ಇಲ್ಲಿಗೆ ಬರುತ್ತಿದ್ದಾರೆ, ಇಲ್ಲಿಗೇ ಬಂದು ಏನು ಮಾಡುತ್ತಾರೆ ಅನ್ನುವ...

ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸೋಮವಾರ (ಡಿ.15) ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇಮಕಾತಿ ಪತ್ರಗಳನ್ನು ಹಸ್ತಾಂತರಿದ್ದು, ಇದೇ ಸಂದರ್ಭದಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಅನ್ನು ತೆಗೆದಿರುವ ವಿಡಿಯೋವೊಂದು ವೈರಲ್...

ಎಸ್‌ಐಆರ್ ಬಳಿಕ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟ : 58 ಲಕ್ಷ ಹೆಸರು ಡಿಲೀಟ್!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ಮಂಗಳವಾರ (ಡಿಸೆಂಬರ್ 16) ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಸಾವು, ವಲಸೆ ಮತ್ತು ಎಣಿಕೆ ನಮೂನೆಗಳನ್ನು ಸಲ್ಲಿಸದಿರುವುದು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ಇಡಿ ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಹಣ ಅಕ್ರಮ ವರ್ಗಾವಣೆ ದೂರನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

ಕಾನೂನುಗಳಿಗೆ ಹಿಂದಿ ಬಳಸುವುದರಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ಪಿ.ಚಿದಂಬರಂ

ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಗಳ ಶೀರ್ಷಿಕೆಗಳಲ್ಲಿ ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಅಭ್ಯಾಸ ಹೆಚ್ಚುತ್ತಿದೆ. ಈ ಪ್ರವೃತ್ತಿಯಿಂದ ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯವಾಗಿದೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದರು. ಈ...

ಸಿಡ್ನಿ ಶೂಟೌಟ್‌: ಭಾರತೀಯ ಪಾಸ್‌ಪೋರ್ಟ್‌ ಬಳಸಿ ಫಿಲಿಪೈನ್ಸ್‌ಗೆ ಪ್ರಯಾಣಿಸಿದ್ದ ತಂದೆ-ಮಗ?

ಸಿಡ್ನಿಯಲ್ಲಿ ಹದಿನೈದು ಜನರನ್ನು ಗುಂಡಿಕ್ಕಿ ಕೊಂದ ತಂದೆ ಮತ್ತು ಮಗನನ್ನು ಪಾಕಿಸ್ತಾನಿ ಪ್ರಜೆಗಳು ಎಂದು ಈಗಾಗಲೇ ಗುರುತಿಸಲಾಗಿದೆ ಎಂಬ ಹಿಂದಿನ ವರದಿಗಳಿಗೆ ವಿರುದ್ಧವಾಗಿ, ಇಬ್ಬರೂ ಕಳೆದ ತಿಂಗಳು ನವೆಂಬರ್‌ನಲ್ಲಿ ಭಾರತೀಯ ಪಾಸ್‌ಪೋರ್ಟ್‌ಗಳನ್ನು ಬಳಸಿ...

ವರದಕ್ಷಿಣೆ ನಿರ್ಮೂಲನೆ ತುರ್ತು ಸಾಂವಿಧಾನಿಕ, ಸಾಮಾಜಿಕ ಅಗತ್ಯ: ಸುಪ್ರೀಂ ಕೋರ್ಟ್

ನವದೆಹಲಿ: ವರದಕ್ಷಿಣೆ ನಿರ್ಮೂಲನೆ ತುರ್ತು ಸಾಂವಿಧಾನಿಕ ಮತ್ತು ಸಾಮಾಜಿಕ ಅಗತ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಸ್ತಿತ್ವದಲ್ಲಿರುವ ಕಾನೂನುಗಳು "ನಿಷ್ಪರಿಣಾಮಕಾರಿತ್ವ" ಮತ್ತು "ದುರುಪಯೋಗ" ಎರಡರಿಂದಲೂ ಬಳಲುತ್ತಿವೆ ಮತ್ತು ದುಷ್ಟ ಪದ್ಧತಿ ಇನ್ನೂ ವ್ಯಾಪಕವಾಗಿ...

ಕೇರಳ ಚಲನಚಿತ್ರೋತ್ಸವ : ಪ್ಯಾಲೆಸ್ತೀನ್ ಕುರಿತ 4 ಸಿನಿಮಾಗಳು ಸೇರಿ 19 ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ ಕೇಂದ್ರ

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ 2025ರ ಕೇರಳ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 19 ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದೆ ಎಂದು ರಾಜ್ಯದ ಆಡಳಿತಾರೂಢ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಮರಿಯನ್...

ಮಣಿಪುರ ಹಿಂಸಾಚಾರ: ಸೋರಿಕೆಯಾದ ಸಂಪೂರ್ಣ ಆಡಿಯೋ ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2023ರ ಜನಾಂಗೀಯ ಹಿಂಸಾಚಾರದಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪಾತ್ರವನ್ನು ಸೂಚಿಸಿರುವ ಅರ್ಜಿಯಲ್ಲಿ ಲಭ್ಯವಿರುವ ಸಂಪೂರ್ಣ ಸೋರಿಕೆಯಾದ ಆಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಲಿಲ್ಲ ಎಂದು...