Homeಅಂತರಾಷ್ಟ್ರೀಯಅರ್ನಾಬ್ ಗೋಸ್ವಾಮಿ boycott Pakistana ಅಂದ್ರೆ, ಸೌದಿ ರಾಜಕುಮಾರನ ಮುಂದೆ friendship Pakistana ಅಂದ್ರು ಮೋದಿ!

ಅರ್ನಾಬ್ ಗೋಸ್ವಾಮಿ boycott Pakistana ಅಂದ್ರೆ, ಸೌದಿ ರಾಜಕುಮಾರನ ಮುಂದೆ friendship Pakistana ಅಂದ್ರು ಮೋದಿ!

- Advertisement -
- Advertisement -

ಪುಲ್ವಾಮಾ ಭಯೋತ್ಪಾದಾಕ ದಾಳಿ ನಡೆದು ಸರಿಯಾಗಿ ಆರು ದಿನಗಳ ನಂತರ ಫೆಬ್ರವರಿ 20ರಂದು ಪ್ರಧಾನಿ ಮೋದಿಯವರು ಮತ್ತು ಸೌದಿ ಅರೇಬಿಯಾದ ರಾಜಕುಮಾರ ಅಬ್ದುಲ್ಲಾ (ಎಂಬಿಎಸ್) ಜೊತೆಯಾಗಿ ಬಿಡುಗಡೆ ಮಾಡಿದ ಉಭಯ ದೇಶಗಳ ಜಂಟಿ ಹೇಳಿಕೆ ಮೋದಿಯವರ ಸಮರ್ಥಕರಿಗೆ, ಮುಖ್ಯವಾಗಿ ಮೀಡಿಯಾದಲ್ಲಿ ಅವರ ಪರ ಚಿಯರ್ ಮಾಡುವ ಅರ್ನಾಬ್ ಗೋಸ್ವಾಮಿಯಂತಹ ಆಂಕರುಗಳಿಗೆ ಭಾರೀ ನಿರಾಸೆ ಉಂಟುಮಾಡಿತ್ತು. ಯಾಕೆಂದರೆ ಪುಲ್ವಾಮಾ ದಾಳಿಗೆ ಪಾಕಿಸ್ತಾನವನ್ನು ಖಂಡಿಸುವಂತ ಒಂದೇಒಂದು ಸಾಲೂ ಅದರಲ್ಲಿ ಇರಲಿಲ್ಲ. ಅರ್ಥಾತ್, ಸೌದಿ ರಾಜಕುಮಾರನಿಗೆ ಪಾಕಿಸ್ತಾನದ ಡಬಲ್ ಸ್ಟಾಂಡರ್ಡ್ ಅರ್ಥ ಮಾಡಿಸುವ ವಿಚಾರದಲ್ಲಿ ಮೋದಿ ಸಂಪೂರ್ಣವಾಗಿ ಸೋತುಹೋಗಿದ್ದರು. ಬದಲಿಗೆ ಆ ಹೇಳಿಕೆಯಲ್ಲಿ ಭಾರತ-ಪಾಕಿಸ್ತಾನದ ನಡುವೆ ಸಂಬಂಧ ವೃದ್ಧಿಯಾಗಬೇಕು ಎಂಬ ಆಶಯವಿತ್ತು. ದಾಯಾದಿ ದೇಶಗಳ ನಡುವೆ ಸಂಬಂಧ ಸುಧಾರಿಸಬೇಕು ಎನ್ನುವುದೇನೊ ಒಪ್ಪಬಹುದಾದ ಸಂಗತಿ, ಆದರೆ ಇಂಥಾ ಭಯೋತ್ಪಾದನೆ ದಾಳಿ ನಡೆದ ಸಂದರ್ಭದಲ್ಲಿ ಹೇಳುವ ಮಾತಾ ಇದು. ಅದರಲ್ಲು, ಪುಲ್ವಾಮಾ ದಾಳಿಯ ಸುದ್ದಿ ತಿಳಿದ ಮೇಲೆ ಝಾನ್ಸಿ ರ್ಯಾಲಿಯಲ್ಲಿ ಸ್ವತಃ ಮೋದಿಯವರೇ `ಮೋದಿಯ ಆಳ್ವಿಕೆಯಲ್ಲಿ ಭಾರತ ಏಳಿಗೆ ಆಗುತ್ತಿರೋದನ್ನು ಸಹಿಸದ ಹೊಟ್ಟೆಕಿಚ್ಚಿನ ದೇಶದವಾದ ಪಾಕಿಸ್ತಾನ ಇಂಥಾ ದಾಳಿ ನಡೆಸಿದೆ’ ಎಂದು ದೂರಿದ್ದರು. ಹಾಗಿರುವಾಗ ಇಂಡಿಯಾ-ಸೌದಿ ಜಂಟಿ ಹೇಳಿಕೆಯಲ್ಲಿ ಪಾಕಿಸ್ತಾನವನ್ನು ಖಂಡಿಸದೆ ಅದರ ಜೊತೆ ಸಂಬಂಧ ವೃದ್ಧಿಯ ಪ್ರಸ್ತಾಪ ಬಂದಿದೆಯೆಂದರೆ ಮೋದಿ ಜಾಗತಿಕ ವೇದಿಕೆಯಲ್ಲಿ ಸೋತಿದ್ದಾರೆ ಅಂತ ತಾನೇ ಅರ್ಥ!

ಜಂಟಿ ಹೇಳಿಕೆಯಲ್ಲಿ ಪುಲ್ವಾಮ ದಾಳಿಯನ್ನು ಖಂಡಿಸಲಾಗಿದೆಯಾದರು, ಅದಕ್ಕೆ ಪಾಕಿಸ್ತಾನವನ್ನು ಹೊಣೆ ಎಂದು ಎಲ್ಲೂ ಕರೆದಿಲ್ಲ. “ಜಮ್ಮು ಮತ್ತು ಕಾಶ್ಮೀರಾದ ಪುಲ್ವಾಮಾದಲ್ಲಿ 14 ಫೆಬ್ರವರಿ 2019ರಂದು ಭಾರತ ಭದ್ರತಾ ಪಡೆಗಳ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನ ಮಂತ್ರಿಗಳು ಮತ್ತು ಘನತೆವೆತ್ತ ದೊರೆಗಳು ಖಂಡಿಸುತ್ತಾರೆ” ಎಂದಷ್ಟೇ ಅದರಲ್ಲಿದೆ.

ಇದೇ ಜಂಟಿ ಹೇಳಿಕೆಯಲ್ಲಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತಿರುವ ರಾಷ್ಟ್ರಗಳ ಬಗ್ಗೆ ಮಾತಾಡುವಾಗಲೂ ಪಾಕಿಸ್ತಾನದ ಹೆಸರನ್ನು ಪ್ರಸ್ತಾಪಿಸಿಲ್ಲ! “ಭಯೋತ್ಪಾದನೆಯನ್ನು ತಮ್ಮ ಆಡಳಿತ ನೀತಿಯ ಒಂದು ಅಸ್ತ್ರವನ್ನಾಗಿ ಮಾಡಿಕೊಂಡ ಎಲ್ಲಾ ರಾಷ್ಟ್ರಗಳು ಅದನ್ನು ತ್ಯಜಿಸಬೇಕು ಎಂದು ಉಭಯ ದೇಶಗಳು ಕರೆಕೊಡುತ್ತವೆ. ಬೇರೆ ದೇಶಗಳ ಮೇಲೆ ಭಯೋತ್ಪಾದಕ ದಾಳಿಗಳನ್ನು ನಡೆಸಲು ಮಿಸೈಲ್ ಮತ್ತು ಡ್ರೋಣ್ ಗಳನ್ನು ಒಳಗೊಂಡಂತೆ ಯಾವ ಶಸ್ತ್ರಾಸ್ತ್ರಗಳನ್ನೂ ಪೂರೈಕೆ ಮಾಡಬಾರದು ಎಂಬುದಾಗಿಯೂ ನಾವು ಕರೆಕೊಡುತ್ತೇವೆ”.

ಹೀಗೆ ಮುಂದುವರೆಯುವ ಹೇಳಿಕೆಯು, “ಉಗ್ರವಾದ ಮತ್ತು ಭಯೋತ್ಪಾದನೆಗಳು ಎಲ್ಲಾ ದೇಶಗಳು ಮತ್ತು ಸಮಾಜಗಳಿಗೆ ಕಂಟಕ ಪ್ರಾಯವಾದವು ಎಂಬುದನ್ನು ದೃಢಪಡಿಸುತ್ತಲೇ, ಈ ಜಾಗತಿಕ ಪಿಡುಗನ್ನು ಯಾವುದೇ ನಿರ್ದಿಷ್ಟ ಜನಾಂಗ, ಧರ್ಮ ಅಥವಾ ಸಂಸ್ಕೃತಿಗೆ ತಳುಕು ಹಾಕುವ ಯಾವುದೇ ಪ್ರಯತ್ನವನ್ನು ಉಭಯ ರಾಷ್ಟ್ರಗಳು ತಿರಸ್ಕರಿಸುತ್ತವೆ. ಇತರೆ ದೇಶಗಳ ಮೇಲೆ ಭಯೋತ್ಪಾದನೆಯನ್ನು ಒಂದು ಅಸ್ತ್ರವಾಗಿ ಪ್ರಯೋಗಿಸದಂತೆ; ಈಗಾಗಲೇ ತಮ್ಮ ಒಳಗೆ ಭಯೋತ್ಪಾದಕ ಸಂಘಟನೆಗಳು ಇದ್ದರೆ ಅವುಗಳನ್ನು ನಾಶ ಮಾಡುವಂತೆ ಮತ್ತು ಬೇರೆ ರಾಷ್ಟ್ರಗಳ ಮೇಲೆ ಭಯೋತ್ಪಾದನಾ ದಾಳಿಗೆ ಯಾವುದೇ ರೀತಿಯ ನೆರವು, ಹಣಕಾಸು ನೀಡದಂತೆ; ಮತ್ತು ಭಯೋತ್ಪಾದಕ ಕೃತ್ಯಗಳನ್ನು ನಡೆಸುವ ಸಮಾಜಘಾತುಕರನ್ನು ನ್ಯಾಯಾಲಯದ ವ್ಯಾಪ್ತಿಗೆ ತರುವಂತೆ ಎಲ್ಲಾ ದೇಶಗಳಿಗೆ ಉಭಯ ದೇಶಗಳು ಕರೆಕೊಡುತ್ತೇವೆ.”

ಇಲ್ಲು ಸಹಾ ಎಲ್ಲೂ ಪಾಕಿಸ್ತಾನದ ಹೆಸರನ್ನೇ ತರಲಾಗಿಲ್ಲ. ಪುಲ್ವಾಮಾ ದಾಳಿ ನಡೆಯುತ್ತಿದ್ದಂತೆಯೇ ಸ್ವತಃ ಪ್ರಧಾನಿ ಮೋದಿಯವರಲ್ಲದೆ ಅವರ ಹಿಂಬಾಲಕರೆಲ್ಲ ಪಾಕಿಸ್ತಾನವೇ ಇದನ್ನು ಮಾಡಿಸಿರುವುದಾಗಿ ಬಹಳ ಸ್ಪಷ್ಟವಾಗಿ ಹೇಳುತ್ತಾ ಬಂದಿದ್ದಾರೆ. ಈಗಲೂ ಬಿಜೆಪಿಯ ಸಂಬಂಧಿತ ಸೋಶಿಯಲ್ ನೆಟ್ ವರ್ಕ್ ಗಳು ಪಾಕಿಸ್ತಾನವನ್ನು ಮುಂದಿಟ್ಟುಕೊಂಡು ದೇಶಪ್ರೇಮದ ಹೆಸರಲ್ಲಿ ಲೋಡುಗಟ್ಟಲೆ ಮೆಸೇಜುಗಳನ್ನು ಹರಿಬಿಡುತ್ತಿವೆ. ಆದರೆ ಸ್ವತಃ ಮೋದಿಯವರೇ ಸೌದಿ ಅರೇಬಿಯಾದ ರಾಜನಿಗೆ ಇದನ್ನು ಮನವರಿಕೆ ಮಾಡಿಕೊಡಲು ಸೋತು ಹೋಗಿದ್ದಾರೆ.

ಇಡೀ ಜಂಟಿ ಹೇಳಿಕೆಯಲ್ಲಿ ಪಾಕಿಸ್ತಾನದ ಹೆಸರು ಕಾಣಿಸಿಕೊಂಡಿರುವುದು ಒಂದೇ ಕಡೆ, ಅದೂ `ಭಾರತ-ಪಾಕಿಸ್ತಾನ’ ನಡುವೆ ಮತ್ತೆ ಮಾತುಕತೆ ಶುರುವಾಗಬೇಕೆಂಬ ಫ್ರೆಂಡ್ಲಿ ಅಡ್ವೈಸಿಂಗ್ ನ ಬಿಟ್ಟಿ ಸಲಹೆಯಲ್ಲಿ. “ಉಭಯ ದೇಶಗಳು ಪ್ರಾದೇಶಿಕ ಸ್ಥಿರತೆ ಮತ್ತು ನೆರೆ ರಾಷ್ಟ್ರಗಳ ಜೊತೆ ಸೌಹಾರ್ದಯುತ ಸಂಬಂಧದ ಪ್ರಾಮುಖ್ಯತೆಗೆ ಒತ್ತು ನೀಡುತ್ತವೆ. ಈ ನಿಟ್ಟಿನಲ್ಲಿ ಪಾಕಿಸ್ತಾನದ ಜೊತೆ ಸ್ನೇಹವನ್ನು ವೃದ್ಧಿಸಲು ಮೇ 2014ರಲ್ಲಿ ತಾವು ಅಧಿಕಾರ ವಹಿಸಿಕೊಂಡ  ನಂತರ ಪ್ರಧಾನಿ ಮೋದಿಯವರು   ಕೈಗೊಂಡಿರುವ ನಿರಂತರ ಪ್ರಯತ್ನಗಳನ್ನು ಘನತೆವೆತ್ತ ರಾಜಕುಮಾರರು ಪ್ರಶಂಸಿಸುತ್ತಾರೆ. ಇದಕ್ಕೆ ಸಂಬಂಧಿಸಿದಂತೆ, ಭಾರತ ಮತ್ತು ಪಾಕಿಸ್ತಾನಗಳ ನಡುವೆ ಸಮಗ್ರ ಮಾತುಕತೆಗಳು ಪುನರಾರಂಭಗೊಳ್ಳುವಂತಹ ವಾತಾವರಣ ನಿರ್ಮಿಸಲು ಉಭಯ ರಾಷ್ಟ್ರಗಳು ಬಯಸುತ್ತವೆ”.

ಒಟ್ಟಿನಲ್ಲಿ ಮೋದಿ ಪರ ಮೀಡಿಯಾ ಚಿಯರ್ ಆಂಕರುಗಳು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು `ಸಮರ್ಥ ನಾಯಕ’ ಭಾರತಕ್ಕೆ ಬೇಕಾಗಿದೆ ಅಂತ ಮೋದಿಯನ್ನೇ ಮತ್ತೊಮ್ಮೆ ಕದ್ದುಮುಚ್ಚಿ ಪ್ರೊಜೆಕ್ಟ್ ಮಾಡಲು ಹೆಣಗಾಡುತ್ತಿರುವಾಗಲೇ, ಹಿಂದೊಮ್ಮೆ (ಪ್ರಧಾನಿಯಾಗುವುದಕ್ಕೂ ಮುನ್ನ) `ಪಾಕಿಸ್ತಾನಕ್ಕೆ ಅದರದೇ ಭಾಷೆಯಲ್ಲಿ ಉತ್ತರ ಕೊಡಬೇಕು’ ಎಂದು ಗುಡುಗಿದ್ದ ಮೋದಿ, ಭಾರತದ ಪ್ರಧಾನಿಯ ಹುದ್ದೆಯಲ್ಲಿ ಕೂತುಕೊಂಡು ­ದೇಶದ ಮೇಲೆ ಮತ್ತೊಂದು ಡಿಪ್ಲೊಮ್ಯಾಟಿಕ್ ದುರಂತವನ್ನು ಎಳೆದುಬಿಟ್ಟಿದ್ದಾರೆ! ಪಾಪಾ, ಪುಲ್ವಾಮ ಘಟನೆಯಲ್ಲಿ ಮಡಿದ ನಮ್ಮ 45 ಸೈನಿಕರ ಜೀವಗಳನ್ನೇ ಬಂಡವಾಳ ಮಾಡಿಕೊಂಡು #boycottpakistan ಅನ್ನೋ ಹ್ಯಾಷ್‌ಟ್ಯಾಗ್ ಓಡಿಸುತ್ತಿದ್ದ ಅರ್ನಾಬ್ ಗೋಸ್ವಾಮಿ ಥರದ ಚಿಯರ್ ಆಂಕರುಗಳು ಮೋದಿಯ ಜಂಟಿ ಹೇಳಿಕೆಯಿಂದ ಗಪ್.ಚುಪ್ ಆಗಿದ್ದಾರೆ.

ಆಧಾರ: janta ka reporter

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....