Homeಅಂತರಾಷ್ಟ್ರೀಯಅರ್ನಾಬ್ ಗೋಸ್ವಾಮಿ boycott Pakistana ಅಂದ್ರೆ, ಸೌದಿ ರಾಜಕುಮಾರನ ಮುಂದೆ friendship Pakistana ಅಂದ್ರು ಮೋದಿ!

ಅರ್ನಾಬ್ ಗೋಸ್ವಾಮಿ boycott Pakistana ಅಂದ್ರೆ, ಸೌದಿ ರಾಜಕುಮಾರನ ಮುಂದೆ friendship Pakistana ಅಂದ್ರು ಮೋದಿ!

- Advertisement -
- Advertisement -

ಪುಲ್ವಾಮಾ ಭಯೋತ್ಪಾದಾಕ ದಾಳಿ ನಡೆದು ಸರಿಯಾಗಿ ಆರು ದಿನಗಳ ನಂತರ ಫೆಬ್ರವರಿ 20ರಂದು ಪ್ರಧಾನಿ ಮೋದಿಯವರು ಮತ್ತು ಸೌದಿ ಅರೇಬಿಯಾದ ರಾಜಕುಮಾರ ಅಬ್ದುಲ್ಲಾ (ಎಂಬಿಎಸ್) ಜೊತೆಯಾಗಿ ಬಿಡುಗಡೆ ಮಾಡಿದ ಉಭಯ ದೇಶಗಳ ಜಂಟಿ ಹೇಳಿಕೆ ಮೋದಿಯವರ ಸಮರ್ಥಕರಿಗೆ, ಮುಖ್ಯವಾಗಿ ಮೀಡಿಯಾದಲ್ಲಿ ಅವರ ಪರ ಚಿಯರ್ ಮಾಡುವ ಅರ್ನಾಬ್ ಗೋಸ್ವಾಮಿಯಂತಹ ಆಂಕರುಗಳಿಗೆ ಭಾರೀ ನಿರಾಸೆ ಉಂಟುಮಾಡಿತ್ತು. ಯಾಕೆಂದರೆ ಪುಲ್ವಾಮಾ ದಾಳಿಗೆ ಪಾಕಿಸ್ತಾನವನ್ನು ಖಂಡಿಸುವಂತ ಒಂದೇಒಂದು ಸಾಲೂ ಅದರಲ್ಲಿ ಇರಲಿಲ್ಲ. ಅರ್ಥಾತ್, ಸೌದಿ ರಾಜಕುಮಾರನಿಗೆ ಪಾಕಿಸ್ತಾನದ ಡಬಲ್ ಸ್ಟಾಂಡರ್ಡ್ ಅರ್ಥ ಮಾಡಿಸುವ ವಿಚಾರದಲ್ಲಿ ಮೋದಿ ಸಂಪೂರ್ಣವಾಗಿ ಸೋತುಹೋಗಿದ್ದರು. ಬದಲಿಗೆ ಆ ಹೇಳಿಕೆಯಲ್ಲಿ ಭಾರತ-ಪಾಕಿಸ್ತಾನದ ನಡುವೆ ಸಂಬಂಧ ವೃದ್ಧಿಯಾಗಬೇಕು ಎಂಬ ಆಶಯವಿತ್ತು. ದಾಯಾದಿ ದೇಶಗಳ ನಡುವೆ ಸಂಬಂಧ ಸುಧಾರಿಸಬೇಕು ಎನ್ನುವುದೇನೊ ಒಪ್ಪಬಹುದಾದ ಸಂಗತಿ, ಆದರೆ ಇಂಥಾ ಭಯೋತ್ಪಾದನೆ ದಾಳಿ ನಡೆದ ಸಂದರ್ಭದಲ್ಲಿ ಹೇಳುವ ಮಾತಾ ಇದು. ಅದರಲ್ಲು, ಪುಲ್ವಾಮಾ ದಾಳಿಯ ಸುದ್ದಿ ತಿಳಿದ ಮೇಲೆ ಝಾನ್ಸಿ ರ್ಯಾಲಿಯಲ್ಲಿ ಸ್ವತಃ ಮೋದಿಯವರೇ `ಮೋದಿಯ ಆಳ್ವಿಕೆಯಲ್ಲಿ ಭಾರತ ಏಳಿಗೆ ಆಗುತ್ತಿರೋದನ್ನು ಸಹಿಸದ ಹೊಟ್ಟೆಕಿಚ್ಚಿನ ದೇಶದವಾದ ಪಾಕಿಸ್ತಾನ ಇಂಥಾ ದಾಳಿ ನಡೆಸಿದೆ’ ಎಂದು ದೂರಿದ್ದರು. ಹಾಗಿರುವಾಗ ಇಂಡಿಯಾ-ಸೌದಿ ಜಂಟಿ ಹೇಳಿಕೆಯಲ್ಲಿ ಪಾಕಿಸ್ತಾನವನ್ನು ಖಂಡಿಸದೆ ಅದರ ಜೊತೆ ಸಂಬಂಧ ವೃದ್ಧಿಯ ಪ್ರಸ್ತಾಪ ಬಂದಿದೆಯೆಂದರೆ ಮೋದಿ ಜಾಗತಿಕ ವೇದಿಕೆಯಲ್ಲಿ ಸೋತಿದ್ದಾರೆ ಅಂತ ತಾನೇ ಅರ್ಥ!

ಜಂಟಿ ಹೇಳಿಕೆಯಲ್ಲಿ ಪುಲ್ವಾಮ ದಾಳಿಯನ್ನು ಖಂಡಿಸಲಾಗಿದೆಯಾದರು, ಅದಕ್ಕೆ ಪಾಕಿಸ್ತಾನವನ್ನು ಹೊಣೆ ಎಂದು ಎಲ್ಲೂ ಕರೆದಿಲ್ಲ. “ಜಮ್ಮು ಮತ್ತು ಕಾಶ್ಮೀರಾದ ಪುಲ್ವಾಮಾದಲ್ಲಿ 14 ಫೆಬ್ರವರಿ 2019ರಂದು ಭಾರತ ಭದ್ರತಾ ಪಡೆಗಳ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನ ಮಂತ್ರಿಗಳು ಮತ್ತು ಘನತೆವೆತ್ತ ದೊರೆಗಳು ಖಂಡಿಸುತ್ತಾರೆ” ಎಂದಷ್ಟೇ ಅದರಲ್ಲಿದೆ.

ಇದೇ ಜಂಟಿ ಹೇಳಿಕೆಯಲ್ಲಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತಿರುವ ರಾಷ್ಟ್ರಗಳ ಬಗ್ಗೆ ಮಾತಾಡುವಾಗಲೂ ಪಾಕಿಸ್ತಾನದ ಹೆಸರನ್ನು ಪ್ರಸ್ತಾಪಿಸಿಲ್ಲ! “ಭಯೋತ್ಪಾದನೆಯನ್ನು ತಮ್ಮ ಆಡಳಿತ ನೀತಿಯ ಒಂದು ಅಸ್ತ್ರವನ್ನಾಗಿ ಮಾಡಿಕೊಂಡ ಎಲ್ಲಾ ರಾಷ್ಟ್ರಗಳು ಅದನ್ನು ತ್ಯಜಿಸಬೇಕು ಎಂದು ಉಭಯ ದೇಶಗಳು ಕರೆಕೊಡುತ್ತವೆ. ಬೇರೆ ದೇಶಗಳ ಮೇಲೆ ಭಯೋತ್ಪಾದಕ ದಾಳಿಗಳನ್ನು ನಡೆಸಲು ಮಿಸೈಲ್ ಮತ್ತು ಡ್ರೋಣ್ ಗಳನ್ನು ಒಳಗೊಂಡಂತೆ ಯಾವ ಶಸ್ತ್ರಾಸ್ತ್ರಗಳನ್ನೂ ಪೂರೈಕೆ ಮಾಡಬಾರದು ಎಂಬುದಾಗಿಯೂ ನಾವು ಕರೆಕೊಡುತ್ತೇವೆ”.

ಹೀಗೆ ಮುಂದುವರೆಯುವ ಹೇಳಿಕೆಯು, “ಉಗ್ರವಾದ ಮತ್ತು ಭಯೋತ್ಪಾದನೆಗಳು ಎಲ್ಲಾ ದೇಶಗಳು ಮತ್ತು ಸಮಾಜಗಳಿಗೆ ಕಂಟಕ ಪ್ರಾಯವಾದವು ಎಂಬುದನ್ನು ದೃಢಪಡಿಸುತ್ತಲೇ, ಈ ಜಾಗತಿಕ ಪಿಡುಗನ್ನು ಯಾವುದೇ ನಿರ್ದಿಷ್ಟ ಜನಾಂಗ, ಧರ್ಮ ಅಥವಾ ಸಂಸ್ಕೃತಿಗೆ ತಳುಕು ಹಾಕುವ ಯಾವುದೇ ಪ್ರಯತ್ನವನ್ನು ಉಭಯ ರಾಷ್ಟ್ರಗಳು ತಿರಸ್ಕರಿಸುತ್ತವೆ. ಇತರೆ ದೇಶಗಳ ಮೇಲೆ ಭಯೋತ್ಪಾದನೆಯನ್ನು ಒಂದು ಅಸ್ತ್ರವಾಗಿ ಪ್ರಯೋಗಿಸದಂತೆ; ಈಗಾಗಲೇ ತಮ್ಮ ಒಳಗೆ ಭಯೋತ್ಪಾದಕ ಸಂಘಟನೆಗಳು ಇದ್ದರೆ ಅವುಗಳನ್ನು ನಾಶ ಮಾಡುವಂತೆ ಮತ್ತು ಬೇರೆ ರಾಷ್ಟ್ರಗಳ ಮೇಲೆ ಭಯೋತ್ಪಾದನಾ ದಾಳಿಗೆ ಯಾವುದೇ ರೀತಿಯ ನೆರವು, ಹಣಕಾಸು ನೀಡದಂತೆ; ಮತ್ತು ಭಯೋತ್ಪಾದಕ ಕೃತ್ಯಗಳನ್ನು ನಡೆಸುವ ಸಮಾಜಘಾತುಕರನ್ನು ನ್ಯಾಯಾಲಯದ ವ್ಯಾಪ್ತಿಗೆ ತರುವಂತೆ ಎಲ್ಲಾ ದೇಶಗಳಿಗೆ ಉಭಯ ದೇಶಗಳು ಕರೆಕೊಡುತ್ತೇವೆ.”

ಇಲ್ಲು ಸಹಾ ಎಲ್ಲೂ ಪಾಕಿಸ್ತಾನದ ಹೆಸರನ್ನೇ ತರಲಾಗಿಲ್ಲ. ಪುಲ್ವಾಮಾ ದಾಳಿ ನಡೆಯುತ್ತಿದ್ದಂತೆಯೇ ಸ್ವತಃ ಪ್ರಧಾನಿ ಮೋದಿಯವರಲ್ಲದೆ ಅವರ ಹಿಂಬಾಲಕರೆಲ್ಲ ಪಾಕಿಸ್ತಾನವೇ ಇದನ್ನು ಮಾಡಿಸಿರುವುದಾಗಿ ಬಹಳ ಸ್ಪಷ್ಟವಾಗಿ ಹೇಳುತ್ತಾ ಬಂದಿದ್ದಾರೆ. ಈಗಲೂ ಬಿಜೆಪಿಯ ಸಂಬಂಧಿತ ಸೋಶಿಯಲ್ ನೆಟ್ ವರ್ಕ್ ಗಳು ಪಾಕಿಸ್ತಾನವನ್ನು ಮುಂದಿಟ್ಟುಕೊಂಡು ದೇಶಪ್ರೇಮದ ಹೆಸರಲ್ಲಿ ಲೋಡುಗಟ್ಟಲೆ ಮೆಸೇಜುಗಳನ್ನು ಹರಿಬಿಡುತ್ತಿವೆ. ಆದರೆ ಸ್ವತಃ ಮೋದಿಯವರೇ ಸೌದಿ ಅರೇಬಿಯಾದ ರಾಜನಿಗೆ ಇದನ್ನು ಮನವರಿಕೆ ಮಾಡಿಕೊಡಲು ಸೋತು ಹೋಗಿದ್ದಾರೆ.

ಇಡೀ ಜಂಟಿ ಹೇಳಿಕೆಯಲ್ಲಿ ಪಾಕಿಸ್ತಾನದ ಹೆಸರು ಕಾಣಿಸಿಕೊಂಡಿರುವುದು ಒಂದೇ ಕಡೆ, ಅದೂ `ಭಾರತ-ಪಾಕಿಸ್ತಾನ’ ನಡುವೆ ಮತ್ತೆ ಮಾತುಕತೆ ಶುರುವಾಗಬೇಕೆಂಬ ಫ್ರೆಂಡ್ಲಿ ಅಡ್ವೈಸಿಂಗ್ ನ ಬಿಟ್ಟಿ ಸಲಹೆಯಲ್ಲಿ. “ಉಭಯ ದೇಶಗಳು ಪ್ರಾದೇಶಿಕ ಸ್ಥಿರತೆ ಮತ್ತು ನೆರೆ ರಾಷ್ಟ್ರಗಳ ಜೊತೆ ಸೌಹಾರ್ದಯುತ ಸಂಬಂಧದ ಪ್ರಾಮುಖ್ಯತೆಗೆ ಒತ್ತು ನೀಡುತ್ತವೆ. ಈ ನಿಟ್ಟಿನಲ್ಲಿ ಪಾಕಿಸ್ತಾನದ ಜೊತೆ ಸ್ನೇಹವನ್ನು ವೃದ್ಧಿಸಲು ಮೇ 2014ರಲ್ಲಿ ತಾವು ಅಧಿಕಾರ ವಹಿಸಿಕೊಂಡ  ನಂತರ ಪ್ರಧಾನಿ ಮೋದಿಯವರು   ಕೈಗೊಂಡಿರುವ ನಿರಂತರ ಪ್ರಯತ್ನಗಳನ್ನು ಘನತೆವೆತ್ತ ರಾಜಕುಮಾರರು ಪ್ರಶಂಸಿಸುತ್ತಾರೆ. ಇದಕ್ಕೆ ಸಂಬಂಧಿಸಿದಂತೆ, ಭಾರತ ಮತ್ತು ಪಾಕಿಸ್ತಾನಗಳ ನಡುವೆ ಸಮಗ್ರ ಮಾತುಕತೆಗಳು ಪುನರಾರಂಭಗೊಳ್ಳುವಂತಹ ವಾತಾವರಣ ನಿರ್ಮಿಸಲು ಉಭಯ ರಾಷ್ಟ್ರಗಳು ಬಯಸುತ್ತವೆ”.

ಒಟ್ಟಿನಲ್ಲಿ ಮೋದಿ ಪರ ಮೀಡಿಯಾ ಚಿಯರ್ ಆಂಕರುಗಳು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು `ಸಮರ್ಥ ನಾಯಕ’ ಭಾರತಕ್ಕೆ ಬೇಕಾಗಿದೆ ಅಂತ ಮೋದಿಯನ್ನೇ ಮತ್ತೊಮ್ಮೆ ಕದ್ದುಮುಚ್ಚಿ ಪ್ರೊಜೆಕ್ಟ್ ಮಾಡಲು ಹೆಣಗಾಡುತ್ತಿರುವಾಗಲೇ, ಹಿಂದೊಮ್ಮೆ (ಪ್ರಧಾನಿಯಾಗುವುದಕ್ಕೂ ಮುನ್ನ) `ಪಾಕಿಸ್ತಾನಕ್ಕೆ ಅದರದೇ ಭಾಷೆಯಲ್ಲಿ ಉತ್ತರ ಕೊಡಬೇಕು’ ಎಂದು ಗುಡುಗಿದ್ದ ಮೋದಿ, ಭಾರತದ ಪ್ರಧಾನಿಯ ಹುದ್ದೆಯಲ್ಲಿ ಕೂತುಕೊಂಡು ­ದೇಶದ ಮೇಲೆ ಮತ್ತೊಂದು ಡಿಪ್ಲೊಮ್ಯಾಟಿಕ್ ದುರಂತವನ್ನು ಎಳೆದುಬಿಟ್ಟಿದ್ದಾರೆ! ಪಾಪಾ, ಪುಲ್ವಾಮ ಘಟನೆಯಲ್ಲಿ ಮಡಿದ ನಮ್ಮ 45 ಸೈನಿಕರ ಜೀವಗಳನ್ನೇ ಬಂಡವಾಳ ಮಾಡಿಕೊಂಡು #boycottpakistan ಅನ್ನೋ ಹ್ಯಾಷ್‌ಟ್ಯಾಗ್ ಓಡಿಸುತ್ತಿದ್ದ ಅರ್ನಾಬ್ ಗೋಸ್ವಾಮಿ ಥರದ ಚಿಯರ್ ಆಂಕರುಗಳು ಮೋದಿಯ ಜಂಟಿ ಹೇಳಿಕೆಯಿಂದ ಗಪ್.ಚುಪ್ ಆಗಿದ್ದಾರೆ.

ಆಧಾರ: janta ka reporter

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...