Homeಮುಖಪುಟಅಲಿ, ಭಜರಂಗಬಲಿ: ಯೋಗಿಗೆ ತಿರುಗೇಟು ಕೊಟ್ಟ ಮಾಯಾವತಿ

ಅಲಿ, ಭಜರಂಗಬಲಿ: ಯೋಗಿಗೆ ತಿರುಗೇಟು ಕೊಟ್ಟ ಮಾಯಾವತಿ

- Advertisement -
- Advertisement -

ಹಿಂದೂ-ಮುಸ್ಲಿಂ ಕೋಮುಧ್ರುವೀಕರಣದ ಪ್ರಯತ್ನದಲ್ಲಿರುವ ಯಾವ ಅವಕಾಶವನ್ನೂ ಕಳೆದುಕೊಳ್ಳದ ಯೋಗಿ ಆದಿತ್ಯನಾಥ್ ಮತ್ತೊಮ್ಮೆ ಅಲಿ, ಭಜರಂಗಬಲಿಯ ಮಾತನ್ನು 3 ದಿನಗಳ ಹಿಂದೆ ಪುನರುಚ್ಚರಿಸಿದ್ದರು. ಇದು ಮಾಯಾವತಿಯವರ ಬಹುಜನ ಧ್ರುವೀಕರಣದ ಪ್ರಯತ್ನದ ಕರೆಗೆ ಪ್ರತಿಯಾಗಿ ಯೋಗಿ ಆದಿತ್ಯನಾಥ್ ಆಡಿದ ಮಾತಾಗಿತ್ತು. ಮಾಯಾವತಿಯವರು ಉತ್ತರ ಪ್ರದೇಶದ ಮುಸ್ಲಿಮರಿಗೆ ಕರೆ ನೀಡಿ, ‘ನೀವು ಕಾಂಗ್ರೆಸ್‍ಗೆ ಮತ ನೀಡಿ ನಿಮ್ಮ ಮತವನ್ನು ವ್ಯರ್ಥ ಮಾಡಿಕೊಳ್ಳಬೇಡಿ’ ಎಂದು ಹೇಳಿದ್ದರು. ಈಗಾಗಲೇ ಸಮಾಜವಾದಿ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಬಿಎಸ್‍ಪಿಯು, ದಲಿತರು ಮತ್ತು ಹಿಂದುಳಿದ ವರ್ಗಗಳ ಬೆಂಬಲ ಪಡೆದಿರುವ ಪಕ್ಷಗಳ ಧ್ರುವೀಕರಣಕ್ಕೆ ನಾಂದಿ ಹಾಡಿತ್ತು. ಆದರೆ, ಕಾಂಗ್ರೆಸ್‍ನ ಕಡೆಗೆ ಮುಸ್ಲಿಮರ ಮತಗಳು ಹೋಗಬಹುದೆನ್ನುವ ಕಾರಣಕ್ಕೆ ಮೇಲಿನ ಕರೆ ನೀಡಿದ್ದರು.

ಈ ಹೇಳಿಕೆ ಬಂದ ತಕ್ಷಣವೇ ಯೋಗಿ ಆದಿತ್ಯನಾಥ್, ‘ನೋಡಿ ನೋಡಿ, ಅವರು ಅಲಿಯ ಕಡಯವರು. ನಾವು ಭಜರಂಗಬಲಿಯ ಕಡೆಯವರು’ ಎಂದಿದ್ದರು. ಅದಕ್ಕೆ ಇಂದು ಬದಾಯೂನಲ್ಲಿ ನಡೆದ ಎರಡನೇ ಜಂಟಿ ರ್ಯಾಲಿಯಲ್ಲಿ, ಅಖಿಲೇಶ್ ಯಾದವ್‍ಗಿಂತ ಮುಂಚೆ ಮಾತಾಡಿದ ಮಾಯಾವತಿ ತಿರುಗೇಟು ನೀಡಿದ್ದಾರೆ. ‘ನಮಗೆ ಅಲಿ ಮತ್ತು ಭಜರಂಗಬಲಿ ಎರಡೂ ಬೇಕು. ಏಕೆಂದರೆ ಅಲಿಯನ್ನು ಪ್ರವಾದಿ ಮಹಮ್ಮದರ ಉತ್ತರಾಧಿಕಾರಿಯಾಗಿ ಮಹಮ್ಮದೀಯರು ಆರಾಧಿಸುತ್ತಾರೆ, ಇನ್ನು ಭಜರಂಗಬಲಿ ನಮ್ಮ ಜಾತಿಯವನೇ. ಹಾಗಾಗಿ ಇಬ್ಬರೂ ನಮ್ಮವರೇ’.ಮತ್ತು ಇಬ್ಬರಲ್ಲಿ ಯಾರನ್ನೂ ಅನ್ಯರನ್ನಾಗಿಸಲು ಸಾಧ್ಯವಿಲ್ಲ ಎಂದಿದ್ದಾರೆ.

‘ಭಜರಂಗಬಲಿ ದಲಿತರು ಎಂದು ಯೋಗಿ ಆದಿತ್ಯನಾಥರೇ ಹೇಳಿದ್ದಾರೆ. ಹಾಗಾಗಿ ಇಬ್ಬರೂ ನಮ್ಮವರೇ’ ಎಂದು ಮಾಯಾವತಿ ಯೋಗಿಯನ್ನು ಕುಟುಕಿದರು.

ಮುಸ್ಲಿಮರ ಮತ ಕೇಳಿದ ಮಾಯಾವತಿಯವರಿಗೆ ಚುನಾವಣಾ ಆಯೋಗ ನೋಟೀಸ್ ನೀಡಿದೆ. ಆದರೆ, ಅಲಿ, ಭಜರಂಗಬಲಿಯ ಮಾತಾಡಿದ ಯೋಗಿ ಆದಿತ್ಯನಾಥ್‍ರಿಗೆ ನೋಟೀಸ್ ನೀಡಿಲ್ಲ.

ಹನುಮಂತ ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿ ಎಂದು ಈ ಹಿಂದೆ ಯೋಗಿಯವರು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...