Homeಕರ್ನಾಟಕಅವಧಿ ಮುಗಿಯುವವರೆಗೂ ಮೂರು ಶಾಸಕರು ಅನರ್ಹರು. ಉಳಿದವರ ಕುರಿತು ಕೆಲವೇ ದಿನಗಳಲ್ಲಿ ತೀರ್ಮಾನ

ಅವಧಿ ಮುಗಿಯುವವರೆಗೂ ಮೂರು ಶಾಸಕರು ಅನರ್ಹರು. ಉಳಿದವರ ಕುರಿತು ಕೆಲವೇ ದಿನಗಳಲ್ಲಿ ತೀರ್ಮಾನ

ಅನರ್ಹಗೊಂಡ ಶಾಸಕರು ಉಪಚುನಾವಣೆಗಳಲ್ಲೂ ಸ್ಪರ್ಧೆ ಮಾಡುವಂತಿಲ್ಲ

- Advertisement -
- Advertisement -

ಮೂವರು ಶಾಸಕರು ವಿಧಾನಸಭೆಯ ಈ ಅವಧಿ ಮುಗಿಯುವವರೆಗೂ ಅನರ್ಹರು ಎಂದು ಸ್ಪೀಕರ್ ರಮೇಶ್ ಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಸರ್ಕಾರ ಬಿದ್ದು ಹೋಗುತ್ತದೆ ಎಂಬುದು ಸ್ಪಷ್ವವಾದ ಕ್ಷಣದಿಂದ ಇದ್ದ ಕುತೂಹಲಗಳು ಎರಡು. ಒಂದು, ಸ್ಪೀಕರ್ ಅವರ ನಡೆ ಏನಾಗಿರುತ್ತದೆ ಎಂಬುದು, ಅಂದರೆ ಯಾವ್ಯಾವ ಶಾಸಕರನ್ನು ಅನರ್ಹಗೊಳಿಸುತ್ತಾರೆ ಎಂಬ ವಿಚಾರ. ಎರಡನೆಯದ್ದು ಯಡಿಯೂರಪ್ಪನವರು ಕೂಡಲೇ ಮುಖ್ಯಮಂತ್ರಿಯಾಗುತ್ತಾರಾ ಇಲ್ಲವಾ ಎಂಬುದು.

ಇದೀಗ ಮೊದಲನೆಯ ವಿಚಾರಕ್ಕೆ ಪಾಕ್ಷಿಕವಾಗಿ ತೆರೆ ಬಿದ್ದಿದೆ. ಸ್ಪೀಕರ್ ರಮೇಶ್ ಕುಮಾರ್ ಅವರು ಇಂದು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮೂವರು ಶಾಸಕರ ಅನರ್ಹತೆಯ ಕುರಿತಾದ ತಮ್ಮ ತೀರ್ಮಾನಗಳನ್ನು ವಿವರವಾಗಿ ಬಿಡಿಸಿಟ್ಟರು.

ರಾಣಿಬೆನ್ನೂರಿನ ಶಾಸಕ ಶಂಕರ್ ಅವರು ಕೆಪಿಜೆಪಿಯಿಂದ ಆಯ್ಕೆಯಾಗಿದ್ದು, ಎರಡನೆಯ ಸಾರಿ ಮಂತ್ರಿಯಾದಾಗ ಕಾಂಗ್ರೆಸ್ ಪಕ್ಷದೊಂದಿಗೆ (ಜೂನ್ 14ರಂದು) ತನ್ನ ಪಕ್ಷವನ್ನು ವಿಲೀನ ಮಾಡಿದ್ದೇನೆಂದು ಸ್ಪೀಕರ್ ಅವರಿಗೆ ತಿಳಿಸಿದ್ದರು. ಆ ನಂತರ ತಾನು ಬಿಜೆಪಿಗೆ ಬೆಂಬಲಿಸುತ್ತಿದ್ದೇನೆಂದು ತಾನೇ ತಿಳಿಸಿರುವುದರಿಂದ ಸಂದೇಹಕ್ಕೆ ಆಸ್ಪದವಿಲ್ಲದೇ ಪಕ್ಷಾಂತರ ಮಾಡಿರುವುದರಿಂದ ಅವರು ಅನರ್ಹರು ಎಂದು ಘೋಷಿಸಲಾಗಿದೆ.

ವಿಪ್ ಉಲ್ಲಂಘನೆ ಕಾರಣಕ್ಕೆ ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಟಳ್ಳಿ ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಫೆಬ್ರವರಿಯಲ್ಲೇ ದೂರು ನೀಡಲಾಗಿತ್ತು.  ಅವರು ಏನೇನು ಮಾಡಿದರೆಂಬುದನ್ನು ವಿವರಿಸಿ ಅವರನ್ನೂ ಅನರ್ಹರೆಂದು ಘೋಷಿಸಲಾಗಿದೆ.

ಇನ್ನು ಉಳಿದ ಶಾಸಕರುಗಳ ರಾಜೀನಾಮೆ ಪ್ರಕರಣಗಳ ಕುರಿತು ತೀರ್ಮಾನ ಮಾಡಲು ತಾನಿನ್ನೂ ಅಧ್ಯಯನ ಮಾಡಬೇಕಿದೆ. ಹಲವಾರು ಕೋರ್ಟ್ ತೀರ್ಪುಗಳನ್ನು ನೋಡಬೇಕಿದೆ. ಅವರುಗಳ  ರಾಜೀನಾಮೆಯ ಕುರಿತೂ ನನಗಿನ್ನೂ ಮನವರಿಕೆಯಾಗಿಲ್ಲ, ಅವರುಗಳ ರಾಜೀನಾಮೆಯು ಕ್ರಮಬದ್ಧವಾಗಿಲ್ಲ. ಆದರೆ ಅದರ ಕುರಿತು ತೀರ್ಪು ನೀಡಲು ಸಮಯ ಬೇಕಿದೆ ಎಂದರು.

ಈ ತೀರ್ಮಾನ ಕೈಗೊಳ್ಳಲು ಕಾರಣವಾದ ನೈತಿಕ ಹಾಗೂ ಕಾನೂನಿನ ವಿಚಾರಗಳನ್ನೂ ರಮೇಶ್ ಕುಮಾರ್ ವಿವರಿಸಿದ್ದಲ್ಲದೇ, ಶಾಸಕರ ಅನೈತಿಕ ರೀತಿ-ನೀತಿಗಳ ಕುರಿತು ಖಾರವಾಗಿ ಮಾತನಾಡಿದರು.

ಸುಪ್ರೀಂಕೋರ್ಟ್.ಗೆ ಹೋಗುವ ಸಾಧ್ಯತೆ

ಅನರ್ಹಗೊಂಡ ಶಾಸಕರು ಸುಪ್ರೀಂಕೋರ್ಟಿಗೆ ಹೋಗುವ ಎಲ್ಲಾ ಸಾಧ್ಯತೆಗಳೂ ಇವೆ. ಅದನ್ನು ಗಮನದಲ್ಲಿಟ್ಟುಕೊಂಡೇ ರಮೇಶ್ ಕುಮಾರ್ ವಿವರಗಳನ್ನು ತಿಳಿಸಿದರು. ಈ ಮೂರೂ ಶಾಸಕರ ವಿಚಾರದಲ್ಲಿ ತಾಂತ್ರಿಕ ಅಂಶಗಳೂ ಸ್ಪಷ್ಟವಿದ್ದುದರಿಂದ ಸ್ಪಷ್ಟವಾದ ಕ್ರಮ ತೆಗೆದುಕೊಳ್ಳಲು ಹಿಂಜರಿದಿಲ್ಲ ಎಂಬುದು ಗೊತ್ತಾಗಿದೆ. ಅದರಲ್ಲೂ ಶಂಕರ್, ತಾನು ಕಾಂಗ್ರೆಸ್.ನಲ್ಲಿ ವಿಲೀನವಾಗಿದ್ದೆನೆಂದು ಹೇಳಿ ನಂತರ ಬಿಜೆಪಿಗೆ ಬೆಂಬಲ ಕೊಡುತ್ತೇನೆಂದು ಲಿಖಿತವಾಗಿ ತಿಳಿಸಿದ್ದರಿಂದ ಅವರನ್ನು ಅನರ್ಹಗೊಳಿಸಲು ಯಾವುದೇ ಅಡ್ಡಿಗಳಿರಲಿಲ್ಲ.

ಆದರೂ ಸದರಿ ಶಾಸಕರು ಸುಪ್ರೀಂಕೋರ್ಟಿಗೆ ಹೋಗುವ ಎಲ್ಲಾ ಸಾಧ್ಯತೆಗಳೂ ಇವೆ.

ಸ್ಪೀಕರ್ ಅವರು ವಹಿಸಿದ ಎಚ್ಚರಿಕೆ

ಪ್ರತಿಯೊಬ್ಬರ ವಿಚಾರದಲ್ಲೂ ನಡೆದ ಘಟನಾವಳಿಗಳನ್ನು ದಿನಾಂಕವಾರು ವಿವರಿಸಿದ್ದಲ್ಲದೇ, ಅದು ಕಾನೂನು ಪ್ರಕಾರ ಹೇಗೆ ಸರಿ ಅಥವಾ ತಪ್ಪು ಎಂಬುದನ್ನೂ ಸ್ಪೀಕರ್ ಮುಂದಿಟ್ಟಿದ್ದಾರೆ. ಆ ಮೂಲಕ ತಾನು ಪಕ್ಷಪಾತದಿಂದ ವರ್ತಿಸಿಲ್ಲ, ಪಕ್ಷಾಂತರ ನಿಷೇಧ ಕಾಯ್ದೆಯನ್ವಯವೇ ಕ್ರಮ ತೆಗೆದುಕೊಂಡಿದ್ದೇನೆ ಎಂಬುದಕ್ಕೆ ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ತಾನು ತರಾತುರಿಯೂ ಮಾಡಲಿಲ್ಲ, ಕಾಯ್ದೆಯ ಉದ್ದೇಶವನ್ನು ಈಡೇರಿಸುವ ನಿಟ್ಟಿನಲ್ಲಿ ತಡವೂ ಮಾಡಲಿಲ್ಲ ಎಂಬುದನ್ನೂ ವಿವರಿಸಿದರು.

ತಾನು ರಾಜೀನಾಮೆ ಅಂಗೀಕಾರಕ್ಕೆ ತಡಮಾಡುತ್ತಿದ್ದೇನೆಂದು ಸುಪ್ರೀಂಕೋರ್ಟಿಗೆ ಸುಳ್ಳು ಹೇಳಿದರೆಂಬುದನ್ನು ಘಟನಾವಳಿಗಳ ಮೂಲಕ ಸ್ಪೀಕರ್ ಬಿಚ್ಚಿಟ್ಟರು. ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸಭಾಪತಿ ವೆಂಕಯ್ಯನಾಯ್ಡು ಅವರು ಶರದ್ ಯಾದವ್ ಅವರ ಪ್ರಕರಣದಲ್ಲಿ ನೀಡಿದ ತೀರ್ಪನ್ನೂ ಉಲ್ಲೇಖಿಸಿದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಆರಂಭದಿಂದಲೂ ಸ್ಪೀಕರ್ ರಮೇಶ್ ಕುಮಾರ್ ಅವರು ಹಾಲಿ ಅಡ್ವೋಕೇಟ್ ಜನರಲ್ ಉದಯ್ ಹೊಳ್ಳ ಮತ್ತು ಮಾಜಿ ಅಡ್ವೋಕೇಟ್ ಜನರಲ್ ರವಿವರ್ಮಕುಮಾರ್ ಅವರಿಂದ ಕಾನೂನು ಸಲಹೆಯನ್ನು ಪಡೆದುಕೊಂಡಿದ್ದರು ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...