Homeಕರ್ನಾಟಕಅವಧಿ ಮುಗಿಯುವವರೆಗೂ ಮೂರು ಶಾಸಕರು ಅನರ್ಹರು. ಉಳಿದವರ ಕುರಿತು ಕೆಲವೇ ದಿನಗಳಲ್ಲಿ ತೀರ್ಮಾನ

ಅವಧಿ ಮುಗಿಯುವವರೆಗೂ ಮೂರು ಶಾಸಕರು ಅನರ್ಹರು. ಉಳಿದವರ ಕುರಿತು ಕೆಲವೇ ದಿನಗಳಲ್ಲಿ ತೀರ್ಮಾನ

ಅನರ್ಹಗೊಂಡ ಶಾಸಕರು ಉಪಚುನಾವಣೆಗಳಲ್ಲೂ ಸ್ಪರ್ಧೆ ಮಾಡುವಂತಿಲ್ಲ

- Advertisement -
- Advertisement -

ಮೂವರು ಶಾಸಕರು ವಿಧಾನಸಭೆಯ ಈ ಅವಧಿ ಮುಗಿಯುವವರೆಗೂ ಅನರ್ಹರು ಎಂದು ಸ್ಪೀಕರ್ ರಮೇಶ್ ಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಸರ್ಕಾರ ಬಿದ್ದು ಹೋಗುತ್ತದೆ ಎಂಬುದು ಸ್ಪಷ್ವವಾದ ಕ್ಷಣದಿಂದ ಇದ್ದ ಕುತೂಹಲಗಳು ಎರಡು. ಒಂದು, ಸ್ಪೀಕರ್ ಅವರ ನಡೆ ಏನಾಗಿರುತ್ತದೆ ಎಂಬುದು, ಅಂದರೆ ಯಾವ್ಯಾವ ಶಾಸಕರನ್ನು ಅನರ್ಹಗೊಳಿಸುತ್ತಾರೆ ಎಂಬ ವಿಚಾರ. ಎರಡನೆಯದ್ದು ಯಡಿಯೂರಪ್ಪನವರು ಕೂಡಲೇ ಮುಖ್ಯಮಂತ್ರಿಯಾಗುತ್ತಾರಾ ಇಲ್ಲವಾ ಎಂಬುದು.

ಇದೀಗ ಮೊದಲನೆಯ ವಿಚಾರಕ್ಕೆ ಪಾಕ್ಷಿಕವಾಗಿ ತೆರೆ ಬಿದ್ದಿದೆ. ಸ್ಪೀಕರ್ ರಮೇಶ್ ಕುಮಾರ್ ಅವರು ಇಂದು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮೂವರು ಶಾಸಕರ ಅನರ್ಹತೆಯ ಕುರಿತಾದ ತಮ್ಮ ತೀರ್ಮಾನಗಳನ್ನು ವಿವರವಾಗಿ ಬಿಡಿಸಿಟ್ಟರು.

ರಾಣಿಬೆನ್ನೂರಿನ ಶಾಸಕ ಶಂಕರ್ ಅವರು ಕೆಪಿಜೆಪಿಯಿಂದ ಆಯ್ಕೆಯಾಗಿದ್ದು, ಎರಡನೆಯ ಸಾರಿ ಮಂತ್ರಿಯಾದಾಗ ಕಾಂಗ್ರೆಸ್ ಪಕ್ಷದೊಂದಿಗೆ (ಜೂನ್ 14ರಂದು) ತನ್ನ ಪಕ್ಷವನ್ನು ವಿಲೀನ ಮಾಡಿದ್ದೇನೆಂದು ಸ್ಪೀಕರ್ ಅವರಿಗೆ ತಿಳಿಸಿದ್ದರು. ಆ ನಂತರ ತಾನು ಬಿಜೆಪಿಗೆ ಬೆಂಬಲಿಸುತ್ತಿದ್ದೇನೆಂದು ತಾನೇ ತಿಳಿಸಿರುವುದರಿಂದ ಸಂದೇಹಕ್ಕೆ ಆಸ್ಪದವಿಲ್ಲದೇ ಪಕ್ಷಾಂತರ ಮಾಡಿರುವುದರಿಂದ ಅವರು ಅನರ್ಹರು ಎಂದು ಘೋಷಿಸಲಾಗಿದೆ.

ವಿಪ್ ಉಲ್ಲಂಘನೆ ಕಾರಣಕ್ಕೆ ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಟಳ್ಳಿ ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಫೆಬ್ರವರಿಯಲ್ಲೇ ದೂರು ನೀಡಲಾಗಿತ್ತು.  ಅವರು ಏನೇನು ಮಾಡಿದರೆಂಬುದನ್ನು ವಿವರಿಸಿ ಅವರನ್ನೂ ಅನರ್ಹರೆಂದು ಘೋಷಿಸಲಾಗಿದೆ.

ಇನ್ನು ಉಳಿದ ಶಾಸಕರುಗಳ ರಾಜೀನಾಮೆ ಪ್ರಕರಣಗಳ ಕುರಿತು ತೀರ್ಮಾನ ಮಾಡಲು ತಾನಿನ್ನೂ ಅಧ್ಯಯನ ಮಾಡಬೇಕಿದೆ. ಹಲವಾರು ಕೋರ್ಟ್ ತೀರ್ಪುಗಳನ್ನು ನೋಡಬೇಕಿದೆ. ಅವರುಗಳ  ರಾಜೀನಾಮೆಯ ಕುರಿತೂ ನನಗಿನ್ನೂ ಮನವರಿಕೆಯಾಗಿಲ್ಲ, ಅವರುಗಳ ರಾಜೀನಾಮೆಯು ಕ್ರಮಬದ್ಧವಾಗಿಲ್ಲ. ಆದರೆ ಅದರ ಕುರಿತು ತೀರ್ಪು ನೀಡಲು ಸಮಯ ಬೇಕಿದೆ ಎಂದರು.

ಈ ತೀರ್ಮಾನ ಕೈಗೊಳ್ಳಲು ಕಾರಣವಾದ ನೈತಿಕ ಹಾಗೂ ಕಾನೂನಿನ ವಿಚಾರಗಳನ್ನೂ ರಮೇಶ್ ಕುಮಾರ್ ವಿವರಿಸಿದ್ದಲ್ಲದೇ, ಶಾಸಕರ ಅನೈತಿಕ ರೀತಿ-ನೀತಿಗಳ ಕುರಿತು ಖಾರವಾಗಿ ಮಾತನಾಡಿದರು.

ಸುಪ್ರೀಂಕೋರ್ಟ್.ಗೆ ಹೋಗುವ ಸಾಧ್ಯತೆ

ಅನರ್ಹಗೊಂಡ ಶಾಸಕರು ಸುಪ್ರೀಂಕೋರ್ಟಿಗೆ ಹೋಗುವ ಎಲ್ಲಾ ಸಾಧ್ಯತೆಗಳೂ ಇವೆ. ಅದನ್ನು ಗಮನದಲ್ಲಿಟ್ಟುಕೊಂಡೇ ರಮೇಶ್ ಕುಮಾರ್ ವಿವರಗಳನ್ನು ತಿಳಿಸಿದರು. ಈ ಮೂರೂ ಶಾಸಕರ ವಿಚಾರದಲ್ಲಿ ತಾಂತ್ರಿಕ ಅಂಶಗಳೂ ಸ್ಪಷ್ಟವಿದ್ದುದರಿಂದ ಸ್ಪಷ್ಟವಾದ ಕ್ರಮ ತೆಗೆದುಕೊಳ್ಳಲು ಹಿಂಜರಿದಿಲ್ಲ ಎಂಬುದು ಗೊತ್ತಾಗಿದೆ. ಅದರಲ್ಲೂ ಶಂಕರ್, ತಾನು ಕಾಂಗ್ರೆಸ್.ನಲ್ಲಿ ವಿಲೀನವಾಗಿದ್ದೆನೆಂದು ಹೇಳಿ ನಂತರ ಬಿಜೆಪಿಗೆ ಬೆಂಬಲ ಕೊಡುತ್ತೇನೆಂದು ಲಿಖಿತವಾಗಿ ತಿಳಿಸಿದ್ದರಿಂದ ಅವರನ್ನು ಅನರ್ಹಗೊಳಿಸಲು ಯಾವುದೇ ಅಡ್ಡಿಗಳಿರಲಿಲ್ಲ.

ಆದರೂ ಸದರಿ ಶಾಸಕರು ಸುಪ್ರೀಂಕೋರ್ಟಿಗೆ ಹೋಗುವ ಎಲ್ಲಾ ಸಾಧ್ಯತೆಗಳೂ ಇವೆ.

ಸ್ಪೀಕರ್ ಅವರು ವಹಿಸಿದ ಎಚ್ಚರಿಕೆ

ಪ್ರತಿಯೊಬ್ಬರ ವಿಚಾರದಲ್ಲೂ ನಡೆದ ಘಟನಾವಳಿಗಳನ್ನು ದಿನಾಂಕವಾರು ವಿವರಿಸಿದ್ದಲ್ಲದೇ, ಅದು ಕಾನೂನು ಪ್ರಕಾರ ಹೇಗೆ ಸರಿ ಅಥವಾ ತಪ್ಪು ಎಂಬುದನ್ನೂ ಸ್ಪೀಕರ್ ಮುಂದಿಟ್ಟಿದ್ದಾರೆ. ಆ ಮೂಲಕ ತಾನು ಪಕ್ಷಪಾತದಿಂದ ವರ್ತಿಸಿಲ್ಲ, ಪಕ್ಷಾಂತರ ನಿಷೇಧ ಕಾಯ್ದೆಯನ್ವಯವೇ ಕ್ರಮ ತೆಗೆದುಕೊಂಡಿದ್ದೇನೆ ಎಂಬುದಕ್ಕೆ ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ತಾನು ತರಾತುರಿಯೂ ಮಾಡಲಿಲ್ಲ, ಕಾಯ್ದೆಯ ಉದ್ದೇಶವನ್ನು ಈಡೇರಿಸುವ ನಿಟ್ಟಿನಲ್ಲಿ ತಡವೂ ಮಾಡಲಿಲ್ಲ ಎಂಬುದನ್ನೂ ವಿವರಿಸಿದರು.

ತಾನು ರಾಜೀನಾಮೆ ಅಂಗೀಕಾರಕ್ಕೆ ತಡಮಾಡುತ್ತಿದ್ದೇನೆಂದು ಸುಪ್ರೀಂಕೋರ್ಟಿಗೆ ಸುಳ್ಳು ಹೇಳಿದರೆಂಬುದನ್ನು ಘಟನಾವಳಿಗಳ ಮೂಲಕ ಸ್ಪೀಕರ್ ಬಿಚ್ಚಿಟ್ಟರು. ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸಭಾಪತಿ ವೆಂಕಯ್ಯನಾಯ್ಡು ಅವರು ಶರದ್ ಯಾದವ್ ಅವರ ಪ್ರಕರಣದಲ್ಲಿ ನೀಡಿದ ತೀರ್ಪನ್ನೂ ಉಲ್ಲೇಖಿಸಿದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಆರಂಭದಿಂದಲೂ ಸ್ಪೀಕರ್ ರಮೇಶ್ ಕುಮಾರ್ ಅವರು ಹಾಲಿ ಅಡ್ವೋಕೇಟ್ ಜನರಲ್ ಉದಯ್ ಹೊಳ್ಳ ಮತ್ತು ಮಾಜಿ ಅಡ್ವೋಕೇಟ್ ಜನರಲ್ ರವಿವರ್ಮಕುಮಾರ್ ಅವರಿಂದ ಕಾನೂನು ಸಲಹೆಯನ್ನು ಪಡೆದುಕೊಂಡಿದ್ದರು ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...