Homeಕರ್ನಾಟಕಅವಧಿ ಮುಗಿಯುವವರೆಗೂ ಮೂರು ಶಾಸಕರು ಅನರ್ಹರು. ಉಳಿದವರ ಕುರಿತು ಕೆಲವೇ ದಿನಗಳಲ್ಲಿ ತೀರ್ಮಾನ

ಅವಧಿ ಮುಗಿಯುವವರೆಗೂ ಮೂರು ಶಾಸಕರು ಅನರ್ಹರು. ಉಳಿದವರ ಕುರಿತು ಕೆಲವೇ ದಿನಗಳಲ್ಲಿ ತೀರ್ಮಾನ

ಅನರ್ಹಗೊಂಡ ಶಾಸಕರು ಉಪಚುನಾವಣೆಗಳಲ್ಲೂ ಸ್ಪರ್ಧೆ ಮಾಡುವಂತಿಲ್ಲ

- Advertisement -
- Advertisement -

ಮೂವರು ಶಾಸಕರು ವಿಧಾನಸಭೆಯ ಈ ಅವಧಿ ಮುಗಿಯುವವರೆಗೂ ಅನರ್ಹರು ಎಂದು ಸ್ಪೀಕರ್ ರಮೇಶ್ ಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಸರ್ಕಾರ ಬಿದ್ದು ಹೋಗುತ್ತದೆ ಎಂಬುದು ಸ್ಪಷ್ವವಾದ ಕ್ಷಣದಿಂದ ಇದ್ದ ಕುತೂಹಲಗಳು ಎರಡು. ಒಂದು, ಸ್ಪೀಕರ್ ಅವರ ನಡೆ ಏನಾಗಿರುತ್ತದೆ ಎಂಬುದು, ಅಂದರೆ ಯಾವ್ಯಾವ ಶಾಸಕರನ್ನು ಅನರ್ಹಗೊಳಿಸುತ್ತಾರೆ ಎಂಬ ವಿಚಾರ. ಎರಡನೆಯದ್ದು ಯಡಿಯೂರಪ್ಪನವರು ಕೂಡಲೇ ಮುಖ್ಯಮಂತ್ರಿಯಾಗುತ್ತಾರಾ ಇಲ್ಲವಾ ಎಂಬುದು.

ಇದೀಗ ಮೊದಲನೆಯ ವಿಚಾರಕ್ಕೆ ಪಾಕ್ಷಿಕವಾಗಿ ತೆರೆ ಬಿದ್ದಿದೆ. ಸ್ಪೀಕರ್ ರಮೇಶ್ ಕುಮಾರ್ ಅವರು ಇಂದು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮೂವರು ಶಾಸಕರ ಅನರ್ಹತೆಯ ಕುರಿತಾದ ತಮ್ಮ ತೀರ್ಮಾನಗಳನ್ನು ವಿವರವಾಗಿ ಬಿಡಿಸಿಟ್ಟರು.

ರಾಣಿಬೆನ್ನೂರಿನ ಶಾಸಕ ಶಂಕರ್ ಅವರು ಕೆಪಿಜೆಪಿಯಿಂದ ಆಯ್ಕೆಯಾಗಿದ್ದು, ಎರಡನೆಯ ಸಾರಿ ಮಂತ್ರಿಯಾದಾಗ ಕಾಂಗ್ರೆಸ್ ಪಕ್ಷದೊಂದಿಗೆ (ಜೂನ್ 14ರಂದು) ತನ್ನ ಪಕ್ಷವನ್ನು ವಿಲೀನ ಮಾಡಿದ್ದೇನೆಂದು ಸ್ಪೀಕರ್ ಅವರಿಗೆ ತಿಳಿಸಿದ್ದರು. ಆ ನಂತರ ತಾನು ಬಿಜೆಪಿಗೆ ಬೆಂಬಲಿಸುತ್ತಿದ್ದೇನೆಂದು ತಾನೇ ತಿಳಿಸಿರುವುದರಿಂದ ಸಂದೇಹಕ್ಕೆ ಆಸ್ಪದವಿಲ್ಲದೇ ಪಕ್ಷಾಂತರ ಮಾಡಿರುವುದರಿಂದ ಅವರು ಅನರ್ಹರು ಎಂದು ಘೋಷಿಸಲಾಗಿದೆ.

ವಿಪ್ ಉಲ್ಲಂಘನೆ ಕಾರಣಕ್ಕೆ ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಟಳ್ಳಿ ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಫೆಬ್ರವರಿಯಲ್ಲೇ ದೂರು ನೀಡಲಾಗಿತ್ತು.  ಅವರು ಏನೇನು ಮಾಡಿದರೆಂಬುದನ್ನು ವಿವರಿಸಿ ಅವರನ್ನೂ ಅನರ್ಹರೆಂದು ಘೋಷಿಸಲಾಗಿದೆ.

ಇನ್ನು ಉಳಿದ ಶಾಸಕರುಗಳ ರಾಜೀನಾಮೆ ಪ್ರಕರಣಗಳ ಕುರಿತು ತೀರ್ಮಾನ ಮಾಡಲು ತಾನಿನ್ನೂ ಅಧ್ಯಯನ ಮಾಡಬೇಕಿದೆ. ಹಲವಾರು ಕೋರ್ಟ್ ತೀರ್ಪುಗಳನ್ನು ನೋಡಬೇಕಿದೆ. ಅವರುಗಳ  ರಾಜೀನಾಮೆಯ ಕುರಿತೂ ನನಗಿನ್ನೂ ಮನವರಿಕೆಯಾಗಿಲ್ಲ, ಅವರುಗಳ ರಾಜೀನಾಮೆಯು ಕ್ರಮಬದ್ಧವಾಗಿಲ್ಲ. ಆದರೆ ಅದರ ಕುರಿತು ತೀರ್ಪು ನೀಡಲು ಸಮಯ ಬೇಕಿದೆ ಎಂದರು.

ಈ ತೀರ್ಮಾನ ಕೈಗೊಳ್ಳಲು ಕಾರಣವಾದ ನೈತಿಕ ಹಾಗೂ ಕಾನೂನಿನ ವಿಚಾರಗಳನ್ನೂ ರಮೇಶ್ ಕುಮಾರ್ ವಿವರಿಸಿದ್ದಲ್ಲದೇ, ಶಾಸಕರ ಅನೈತಿಕ ರೀತಿ-ನೀತಿಗಳ ಕುರಿತು ಖಾರವಾಗಿ ಮಾತನಾಡಿದರು.

ಸುಪ್ರೀಂಕೋರ್ಟ್.ಗೆ ಹೋಗುವ ಸಾಧ್ಯತೆ

ಅನರ್ಹಗೊಂಡ ಶಾಸಕರು ಸುಪ್ರೀಂಕೋರ್ಟಿಗೆ ಹೋಗುವ ಎಲ್ಲಾ ಸಾಧ್ಯತೆಗಳೂ ಇವೆ. ಅದನ್ನು ಗಮನದಲ್ಲಿಟ್ಟುಕೊಂಡೇ ರಮೇಶ್ ಕುಮಾರ್ ವಿವರಗಳನ್ನು ತಿಳಿಸಿದರು. ಈ ಮೂರೂ ಶಾಸಕರ ವಿಚಾರದಲ್ಲಿ ತಾಂತ್ರಿಕ ಅಂಶಗಳೂ ಸ್ಪಷ್ಟವಿದ್ದುದರಿಂದ ಸ್ಪಷ್ಟವಾದ ಕ್ರಮ ತೆಗೆದುಕೊಳ್ಳಲು ಹಿಂಜರಿದಿಲ್ಲ ಎಂಬುದು ಗೊತ್ತಾಗಿದೆ. ಅದರಲ್ಲೂ ಶಂಕರ್, ತಾನು ಕಾಂಗ್ರೆಸ್.ನಲ್ಲಿ ವಿಲೀನವಾಗಿದ್ದೆನೆಂದು ಹೇಳಿ ನಂತರ ಬಿಜೆಪಿಗೆ ಬೆಂಬಲ ಕೊಡುತ್ತೇನೆಂದು ಲಿಖಿತವಾಗಿ ತಿಳಿಸಿದ್ದರಿಂದ ಅವರನ್ನು ಅನರ್ಹಗೊಳಿಸಲು ಯಾವುದೇ ಅಡ್ಡಿಗಳಿರಲಿಲ್ಲ.

ಆದರೂ ಸದರಿ ಶಾಸಕರು ಸುಪ್ರೀಂಕೋರ್ಟಿಗೆ ಹೋಗುವ ಎಲ್ಲಾ ಸಾಧ್ಯತೆಗಳೂ ಇವೆ.

ಸ್ಪೀಕರ್ ಅವರು ವಹಿಸಿದ ಎಚ್ಚರಿಕೆ

ಪ್ರತಿಯೊಬ್ಬರ ವಿಚಾರದಲ್ಲೂ ನಡೆದ ಘಟನಾವಳಿಗಳನ್ನು ದಿನಾಂಕವಾರು ವಿವರಿಸಿದ್ದಲ್ಲದೇ, ಅದು ಕಾನೂನು ಪ್ರಕಾರ ಹೇಗೆ ಸರಿ ಅಥವಾ ತಪ್ಪು ಎಂಬುದನ್ನೂ ಸ್ಪೀಕರ್ ಮುಂದಿಟ್ಟಿದ್ದಾರೆ. ಆ ಮೂಲಕ ತಾನು ಪಕ್ಷಪಾತದಿಂದ ವರ್ತಿಸಿಲ್ಲ, ಪಕ್ಷಾಂತರ ನಿಷೇಧ ಕಾಯ್ದೆಯನ್ವಯವೇ ಕ್ರಮ ತೆಗೆದುಕೊಂಡಿದ್ದೇನೆ ಎಂಬುದಕ್ಕೆ ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ತಾನು ತರಾತುರಿಯೂ ಮಾಡಲಿಲ್ಲ, ಕಾಯ್ದೆಯ ಉದ್ದೇಶವನ್ನು ಈಡೇರಿಸುವ ನಿಟ್ಟಿನಲ್ಲಿ ತಡವೂ ಮಾಡಲಿಲ್ಲ ಎಂಬುದನ್ನೂ ವಿವರಿಸಿದರು.

ತಾನು ರಾಜೀನಾಮೆ ಅಂಗೀಕಾರಕ್ಕೆ ತಡಮಾಡುತ್ತಿದ್ದೇನೆಂದು ಸುಪ್ರೀಂಕೋರ್ಟಿಗೆ ಸುಳ್ಳು ಹೇಳಿದರೆಂಬುದನ್ನು ಘಟನಾವಳಿಗಳ ಮೂಲಕ ಸ್ಪೀಕರ್ ಬಿಚ್ಚಿಟ್ಟರು. ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸಭಾಪತಿ ವೆಂಕಯ್ಯನಾಯ್ಡು ಅವರು ಶರದ್ ಯಾದವ್ ಅವರ ಪ್ರಕರಣದಲ್ಲಿ ನೀಡಿದ ತೀರ್ಪನ್ನೂ ಉಲ್ಲೇಖಿಸಿದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಆರಂಭದಿಂದಲೂ ಸ್ಪೀಕರ್ ರಮೇಶ್ ಕುಮಾರ್ ಅವರು ಹಾಲಿ ಅಡ್ವೋಕೇಟ್ ಜನರಲ್ ಉದಯ್ ಹೊಳ್ಳ ಮತ್ತು ಮಾಜಿ ಅಡ್ವೋಕೇಟ್ ಜನರಲ್ ರವಿವರ್ಮಕುಮಾರ್ ಅವರಿಂದ ಕಾನೂನು ಸಲಹೆಯನ್ನು ಪಡೆದುಕೊಂಡಿದ್ದರು ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...