Homeಅಂಕಣಗಳುಆಡಿಯೋ ಬಿಚ್ಚಿಡುತ್ತಿರುವ ಸತ್ಯ; ಮೋದಿ-ಶಾ ಪ್ರಸ್ತಾಪಕ್ಕೆ ಬಿಜೆಪಿಗೆ ಖೇದವೇ ಇಲ್ಲ!

ಆಡಿಯೋ ಬಿಚ್ಚಿಡುತ್ತಿರುವ ಸತ್ಯ; ಮೋದಿ-ಶಾ ಪ್ರಸ್ತಾಪಕ್ಕೆ ಬಿಜೆಪಿಗೆ ಖೇದವೇ ಇಲ್ಲ!

- Advertisement -
- Advertisement -

ಪೀಕೆ |
ಒಂದು ಆಡಿಯೋ ಸುತ್ತ ನಡೆಯುತ್ತಿರುವ ಒಟ್ಟೂ ಪ್ರಹಸನ ಬಿಚ್ಚಿಡುತ್ತಿರುವ ಸತ್ಯ ಏನೆಂದರೆ, ಆಪರೇಷನ್ ಕಮಲಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಬೆಂಬಲವಿದೆ ಎಂಬುದನ್ನು ಪ್ರತ್ಯಕ್ಷವಾಗಿಯೋ, ಪರೋಕ್ಷವಾಗಿಯೋ ಒಪ್ಪಿಕೊಳ್ಳುತ್ತಿದ್ದಾರೆ ಬಿಜೆಪಯ ನಾಯಕರು!

ಸದನದಲ್ಲಿ ಈ ಆಡಿಯೋ ವಿಚಾರವಾಗಿ ಮಾತನಾಡಿದ ಬಿಜೆಪಿಯ ಎಲ್ಲ ನಾಯಕರು ಪದೇ ಪದೇ, ‘ಸ್ಪೀಕರ್ ರಮೇಶಕುಮಾರವರೇ, ನಿಮ್ಮ ಬಗ್ಗೆ ನಮಗೆ ಅಪಾರ ಗೌರವವಿದೆ. ತಮ್ಮ ಹೆಸರು ಉಲ್ಲೇಖವಾದುದಕ್ಕೆ ನಮಗೂ ಬೇಜಾರಾಗಿದೆ’ ಎಂದು ಸ್ಪೀಕರ್ ಅವರ ಪ್ರಾಮಾಣಿಕತೆಗೆ ಸರ್ಟಿಫಿಕೆಟ್ ಕೊಡುತ್ತಿದ್ದಾರೆ. ಆದರೆ, ಆ ಆಡಿಯೋದಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೆಸರೂ ಪ್ರಸ್ತಾಪವಾಗಿದೆಯಲ್ಲ? ಆ ಬಗ್ಗೆ ಇಲ್ಲಿವರೆಗೂ ಯಾವ ಬಿಜೆಪಿ ನಾಯಕನೂ ಖೇದ ವ್ಯಕ್ತಪಡಿಸಿಲ್ಲ, ನೊಂದುಕೊಂಡಿಲ್ಲ. ಅಂದರೆ ಅವರಿಗೆ ಪಕ್ಕಾ ಗೊತ್ತಿದೆ: ಮೋದಿ-ಶಾ ಬೆಂಬಲದಿಂದಲೇ ಇದೆಲ್ಲ ನಡೆಯುತ್ತಿದೆ ಎಂಬುದು. ಆದರೆ ಬಾಹ್ಯವಾಗಿಯಾದರೂ ಈ ಕುರಿತಂತೆ ಮಾತಾಡಬಹುದಿತ್ತಲ್ಲ? ಎಂಟು ತಿಂಗಳಿಂದ ನಡೆದಿರುವ ಅಸಹ್ಯ ಆಪರೇಷನ್ ಕಮಲದಲ್ಲಿ ತಮ್ಮ ರಾಷ್ಟ್ರೀಯ ನಾಯಕರೂ ಭಾಗಿ ಎಂಬುದು ಮನದಟ್ಟಾಗಿರುವುದರಿಂದ ಅರ‍್ಯಾರಿಗೂ ಆಡಿಯೊದಲ್ಲಿ ಬಂದ ‘ಸತ್ಯ’ವನ್ನು ವಿರೋಧಿಸಲು ಆಗುತ್ತಿಲ್ಲವೇ?

ಇಲ್ಲಿ ಒಂದಿಷ್ಟು ಅಂಶಗಳನ್ನು ಸುಮ್ಮನೆ ಗಮನಿಸಿ:

* ಸೋಮವಾರ ಸ್ಪೀಕರ್ ಈ ವಿಷಯ ಎತ್ತಿದ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿಯ ಮಾಧುಸ್ವಾಮಿ, ‘ಎಲ್ಲೋ ಯಾರೋ ಮಾತಾಡಿದ್ದಕ್ಕೆ ತಾವು (ಸ್ಪೀಕರ್) ನೊಂದುಕೊಳ್ಳಬೇಡಿ. ನಿಮ್ಮ ಬಗ್ಗೆ ನಮಗೆಲ್ಲ ಗೌರವವಿದೆ. ಏನೋ ಅಚಾತುರ್ಯ ನಡೆದಿದೆ, ಅದನ್ನು ಮರೆತುಬಿಡಿ, ಮನ್ನಿಸಿಬಿಡಿ’ ಎಂದರು. ಅಂದರೆ ಈ ‘ಅಚಾತುರ್ಯ’ ನಡೆದಿರುವುದು ಸತ್ಯ ಎಂದು ಪರೋಕ್ಷವಾಗಿ ಅವರು ಒಪ್ಪಿಕೊಂಡರು. ಆದರೆ ರಮೇಶಕುಮಾರ್ ಹೆಸರು ಪ್ರಸ್ತಾಪವಾದುದಕ್ಕೆ ಕಳವಳ ವ್ಯಕ್ತಪಡಿಸಿದ ಅವರಿಗೆ, ಮೋದಿ-ಶಾ ಹೆಸರು ಪ್ರಸ್ತಾಪವಾಗಿದ್ದರ ಬಗ್ಗೆ ಯಾವ ಬೇಜಾರೂ ಇಲ್ಲವೆಂದಾಯಿತಲ್ಲ? ಅವತ್ತು ಮಾತಾಡಿದ ಬಿಜೆಪಿಯ ಎಲ್ಲ ನಾಯಕರೂ ಸ್ಪೀಕರ್ ಹೆಸರು ಬಂದುದಕ್ಕೆ ಬೇಸರ ವ್ಯಕ್ತಪಡಿಸಿದರೆ ಹೊರತು ತಮ್ಮ ರಾಷ್ಟ್ರೀಯ ನಾಯಕರ ಹೆಸರು ಪ್ರಸ್ತಾಪವಾದುದಕ್ಕೆ ಖೇದ ಪಡಲೇ ಇಲ್ಲ!

* ಮಂಗಳವಾರ, ಬುಧವಾರ ಎಸ್‌ಐಟಿ ತನಿಖೆಗೆ ವಿರೋಧ ವ್ಯಕ್ತ ಮಾಡುವಾಗಲೂ, ಆಡಿಯೋದ ಸಣ್ಣ ಭಾಗ ಮಾತ್ರ ರಿಲೀಸ್ ಮಾಡಲಾಗಿದೆ ಎಂದರೆ ಹೊರತು ಅದು ನಕಲಿ ರಂದೂ ಗಟ್ಟಿಯಾಗಿ ಪ್ರತಿಪಾದಿಸಲೇ ಇಲ್ಲ!

* ಶರಣಗೌಡ ಎಂಬ 37 ವರ್ಷದ ಜೆಡಿಎಸ್ ಕಾರ್ಯಕರ್ತನೊಂದಿಗೆ ಒಂದೆರಡು ತಾಸು ಮಾತಾಡಿದ್ದಾರಂತೆ ಯಡಿಯೂರಪ್ಪ ಮತ್ತು ಶಿವನಗೌಡ ನಾಯಕ್. ಆ ‘ಹುಡುಗ’ನ ಜೊತೆ ಮಾತಾಡಿದ ಪೂರ್ತಿ ಆಡಿಯೋ ಬಿಡಿಗಡೆಯಾದರೂ, ಈಗ ರಲೀಸ್ ಆಗಿರುವ ವಿಷಯ ಸತ್ಯ ಎಂಬುದು ಗ್ಯಾರಂಟಿಯಾಯಿತಲ್ಲ. ಅಷ್ಟಕ್ಕೂ ಶರಣಗೌಡನಿಗೆ ಪ್ರಜಾಪ್ರಭುತ್ವದ ಬಗ್ಗೆ, ಸಂವಿಧಾನದ ಬಗ್ಗೆ ಯಡಿಯೂರಪ್ಪ ಬೋಧಿಸುತ್ತ ಕುಳಿತಿದ್ದರೆ? ಮಧ್ಯರಾತ್ರಿಯಲ್ಲಿ ದೇವದುರ್ಗದ ಶಾಸಕ ಶಿವನಗೌಡ, ಸರ್ಕಾರ ತಾನಾಗೇ ಬೀಳುತ್ತೆ. ಆಗ ನಮ್ಮ ಜೊತೆ ನೀನು ಇರು ಸಾಕು. ಎಲ್ಲ ನ್ಯಾಯಯುತವಾಗಿಯೇ ನಡೆಯಲಿದೆ/ ಎಂದು ಶರಣಗೌಡನಿಗೆ ಉಪದೇಶ ಮಾಡುತ್ತಿದ್ದರೆ?

ಹೀಗೆ ಸುಮ್ಮನೆ ಸರಳ ತರ್ಕ ಉಪಯೋಗಿಸಿದರೂ, ಬಿಜೆಪಿಯ ಹಿಪಾಕ್ರಸಿ ಬಯಲಾಗುತ್ತ ಹೋಗುತ್ತದೆ. ಆಡಿಯೋದಲ್ಲಿರುವ ಧ್ವನಿ ತನ್ನದೇ ಎಂದ ಮೇಲೆ, ಎಸ್‌ಐಟಿ ತನ್ನನ್ನು ಹಣಿಯಲಿದೆ ಎಂಬುದು ಖಾತ್ರಿಯಾಗಿದ್ದರಿಂದಲೇ ಯಡಿಯೂರಪ್ಪ ಈಗ ಸದಸನದ ಕಲಾಪಗಳನ್ನೆಲ್ಲ ಹಾಳು ಮಾಡುವ ಕೆಲಸಕ್ಕೆ ಕೈ ಹಾಕಿದ್ದಾರೆ.

ಇದರಲ್ಲಿ ಮಾಧುಸ್ವಾಮಿಯಂತವರು ಸಂಪೂರ್ಣ ಬೆತ್ತಲಾಗುತ್ತಿದ್ದಾರೆ. ಯಡಿಯೂರಪ್ಪ, ಶಿವನಗೌಡರನ್ನು ಬಿಡಿ, ಅವರು ಎಂದೋ ವಿವಸ್ತ್ರರಾಗಿ ಬಿಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...