Homeಅಂಕಣಗಳುಆಡಿಯೋ ಬಿಚ್ಚಿಡುತ್ತಿರುವ ಸತ್ಯ; ಮೋದಿ-ಶಾ ಪ್ರಸ್ತಾಪಕ್ಕೆ ಬಿಜೆಪಿಗೆ ಖೇದವೇ ಇಲ್ಲ!

ಆಡಿಯೋ ಬಿಚ್ಚಿಡುತ್ತಿರುವ ಸತ್ಯ; ಮೋದಿ-ಶಾ ಪ್ರಸ್ತಾಪಕ್ಕೆ ಬಿಜೆಪಿಗೆ ಖೇದವೇ ಇಲ್ಲ!

- Advertisement -
- Advertisement -

ಪೀಕೆ |
ಒಂದು ಆಡಿಯೋ ಸುತ್ತ ನಡೆಯುತ್ತಿರುವ ಒಟ್ಟೂ ಪ್ರಹಸನ ಬಿಚ್ಚಿಡುತ್ತಿರುವ ಸತ್ಯ ಏನೆಂದರೆ, ಆಪರೇಷನ್ ಕಮಲಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಬೆಂಬಲವಿದೆ ಎಂಬುದನ್ನು ಪ್ರತ್ಯಕ್ಷವಾಗಿಯೋ, ಪರೋಕ್ಷವಾಗಿಯೋ ಒಪ್ಪಿಕೊಳ್ಳುತ್ತಿದ್ದಾರೆ ಬಿಜೆಪಯ ನಾಯಕರು!

ಸದನದಲ್ಲಿ ಈ ಆಡಿಯೋ ವಿಚಾರವಾಗಿ ಮಾತನಾಡಿದ ಬಿಜೆಪಿಯ ಎಲ್ಲ ನಾಯಕರು ಪದೇ ಪದೇ, ‘ಸ್ಪೀಕರ್ ರಮೇಶಕುಮಾರವರೇ, ನಿಮ್ಮ ಬಗ್ಗೆ ನಮಗೆ ಅಪಾರ ಗೌರವವಿದೆ. ತಮ್ಮ ಹೆಸರು ಉಲ್ಲೇಖವಾದುದಕ್ಕೆ ನಮಗೂ ಬೇಜಾರಾಗಿದೆ’ ಎಂದು ಸ್ಪೀಕರ್ ಅವರ ಪ್ರಾಮಾಣಿಕತೆಗೆ ಸರ್ಟಿಫಿಕೆಟ್ ಕೊಡುತ್ತಿದ್ದಾರೆ. ಆದರೆ, ಆ ಆಡಿಯೋದಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೆಸರೂ ಪ್ರಸ್ತಾಪವಾಗಿದೆಯಲ್ಲ? ಆ ಬಗ್ಗೆ ಇಲ್ಲಿವರೆಗೂ ಯಾವ ಬಿಜೆಪಿ ನಾಯಕನೂ ಖೇದ ವ್ಯಕ್ತಪಡಿಸಿಲ್ಲ, ನೊಂದುಕೊಂಡಿಲ್ಲ. ಅಂದರೆ ಅವರಿಗೆ ಪಕ್ಕಾ ಗೊತ್ತಿದೆ: ಮೋದಿ-ಶಾ ಬೆಂಬಲದಿಂದಲೇ ಇದೆಲ್ಲ ನಡೆಯುತ್ತಿದೆ ಎಂಬುದು. ಆದರೆ ಬಾಹ್ಯವಾಗಿಯಾದರೂ ಈ ಕುರಿತಂತೆ ಮಾತಾಡಬಹುದಿತ್ತಲ್ಲ? ಎಂಟು ತಿಂಗಳಿಂದ ನಡೆದಿರುವ ಅಸಹ್ಯ ಆಪರೇಷನ್ ಕಮಲದಲ್ಲಿ ತಮ್ಮ ರಾಷ್ಟ್ರೀಯ ನಾಯಕರೂ ಭಾಗಿ ಎಂಬುದು ಮನದಟ್ಟಾಗಿರುವುದರಿಂದ ಅರ‍್ಯಾರಿಗೂ ಆಡಿಯೊದಲ್ಲಿ ಬಂದ ‘ಸತ್ಯ’ವನ್ನು ವಿರೋಧಿಸಲು ಆಗುತ್ತಿಲ್ಲವೇ?

ಇಲ್ಲಿ ಒಂದಿಷ್ಟು ಅಂಶಗಳನ್ನು ಸುಮ್ಮನೆ ಗಮನಿಸಿ:

* ಸೋಮವಾರ ಸ್ಪೀಕರ್ ಈ ವಿಷಯ ಎತ್ತಿದ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿಯ ಮಾಧುಸ್ವಾಮಿ, ‘ಎಲ್ಲೋ ಯಾರೋ ಮಾತಾಡಿದ್ದಕ್ಕೆ ತಾವು (ಸ್ಪೀಕರ್) ನೊಂದುಕೊಳ್ಳಬೇಡಿ. ನಿಮ್ಮ ಬಗ್ಗೆ ನಮಗೆಲ್ಲ ಗೌರವವಿದೆ. ಏನೋ ಅಚಾತುರ್ಯ ನಡೆದಿದೆ, ಅದನ್ನು ಮರೆತುಬಿಡಿ, ಮನ್ನಿಸಿಬಿಡಿ’ ಎಂದರು. ಅಂದರೆ ಈ ‘ಅಚಾತುರ್ಯ’ ನಡೆದಿರುವುದು ಸತ್ಯ ಎಂದು ಪರೋಕ್ಷವಾಗಿ ಅವರು ಒಪ್ಪಿಕೊಂಡರು. ಆದರೆ ರಮೇಶಕುಮಾರ್ ಹೆಸರು ಪ್ರಸ್ತಾಪವಾದುದಕ್ಕೆ ಕಳವಳ ವ್ಯಕ್ತಪಡಿಸಿದ ಅವರಿಗೆ, ಮೋದಿ-ಶಾ ಹೆಸರು ಪ್ರಸ್ತಾಪವಾಗಿದ್ದರ ಬಗ್ಗೆ ಯಾವ ಬೇಜಾರೂ ಇಲ್ಲವೆಂದಾಯಿತಲ್ಲ? ಅವತ್ತು ಮಾತಾಡಿದ ಬಿಜೆಪಿಯ ಎಲ್ಲ ನಾಯಕರೂ ಸ್ಪೀಕರ್ ಹೆಸರು ಬಂದುದಕ್ಕೆ ಬೇಸರ ವ್ಯಕ್ತಪಡಿಸಿದರೆ ಹೊರತು ತಮ್ಮ ರಾಷ್ಟ್ರೀಯ ನಾಯಕರ ಹೆಸರು ಪ್ರಸ್ತಾಪವಾದುದಕ್ಕೆ ಖೇದ ಪಡಲೇ ಇಲ್ಲ!

* ಮಂಗಳವಾರ, ಬುಧವಾರ ಎಸ್‌ಐಟಿ ತನಿಖೆಗೆ ವಿರೋಧ ವ್ಯಕ್ತ ಮಾಡುವಾಗಲೂ, ಆಡಿಯೋದ ಸಣ್ಣ ಭಾಗ ಮಾತ್ರ ರಿಲೀಸ್ ಮಾಡಲಾಗಿದೆ ಎಂದರೆ ಹೊರತು ಅದು ನಕಲಿ ರಂದೂ ಗಟ್ಟಿಯಾಗಿ ಪ್ರತಿಪಾದಿಸಲೇ ಇಲ್ಲ!

* ಶರಣಗೌಡ ಎಂಬ 37 ವರ್ಷದ ಜೆಡಿಎಸ್ ಕಾರ್ಯಕರ್ತನೊಂದಿಗೆ ಒಂದೆರಡು ತಾಸು ಮಾತಾಡಿದ್ದಾರಂತೆ ಯಡಿಯೂರಪ್ಪ ಮತ್ತು ಶಿವನಗೌಡ ನಾಯಕ್. ಆ ‘ಹುಡುಗ’ನ ಜೊತೆ ಮಾತಾಡಿದ ಪೂರ್ತಿ ಆಡಿಯೋ ಬಿಡಿಗಡೆಯಾದರೂ, ಈಗ ರಲೀಸ್ ಆಗಿರುವ ವಿಷಯ ಸತ್ಯ ಎಂಬುದು ಗ್ಯಾರಂಟಿಯಾಯಿತಲ್ಲ. ಅಷ್ಟಕ್ಕೂ ಶರಣಗೌಡನಿಗೆ ಪ್ರಜಾಪ್ರಭುತ್ವದ ಬಗ್ಗೆ, ಸಂವಿಧಾನದ ಬಗ್ಗೆ ಯಡಿಯೂರಪ್ಪ ಬೋಧಿಸುತ್ತ ಕುಳಿತಿದ್ದರೆ? ಮಧ್ಯರಾತ್ರಿಯಲ್ಲಿ ದೇವದುರ್ಗದ ಶಾಸಕ ಶಿವನಗೌಡ, ಸರ್ಕಾರ ತಾನಾಗೇ ಬೀಳುತ್ತೆ. ಆಗ ನಮ್ಮ ಜೊತೆ ನೀನು ಇರು ಸಾಕು. ಎಲ್ಲ ನ್ಯಾಯಯುತವಾಗಿಯೇ ನಡೆಯಲಿದೆ/ ಎಂದು ಶರಣಗೌಡನಿಗೆ ಉಪದೇಶ ಮಾಡುತ್ತಿದ್ದರೆ?

ಹೀಗೆ ಸುಮ್ಮನೆ ಸರಳ ತರ್ಕ ಉಪಯೋಗಿಸಿದರೂ, ಬಿಜೆಪಿಯ ಹಿಪಾಕ್ರಸಿ ಬಯಲಾಗುತ್ತ ಹೋಗುತ್ತದೆ. ಆಡಿಯೋದಲ್ಲಿರುವ ಧ್ವನಿ ತನ್ನದೇ ಎಂದ ಮೇಲೆ, ಎಸ್‌ಐಟಿ ತನ್ನನ್ನು ಹಣಿಯಲಿದೆ ಎಂಬುದು ಖಾತ್ರಿಯಾಗಿದ್ದರಿಂದಲೇ ಯಡಿಯೂರಪ್ಪ ಈಗ ಸದಸನದ ಕಲಾಪಗಳನ್ನೆಲ್ಲ ಹಾಳು ಮಾಡುವ ಕೆಲಸಕ್ಕೆ ಕೈ ಹಾಕಿದ್ದಾರೆ.

ಇದರಲ್ಲಿ ಮಾಧುಸ್ವಾಮಿಯಂತವರು ಸಂಪೂರ್ಣ ಬೆತ್ತಲಾಗುತ್ತಿದ್ದಾರೆ. ಯಡಿಯೂರಪ್ಪ, ಶಿವನಗೌಡರನ್ನು ಬಿಡಿ, ಅವರು ಎಂದೋ ವಿವಸ್ತ್ರರಾಗಿ ಬಿಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...