Homeಅಂಕಣಗಳುಆಡಿಯೋ ಬಿಚ್ಚಿಡುತ್ತಿರುವ ಸತ್ಯ; ಮೋದಿ-ಶಾ ಪ್ರಸ್ತಾಪಕ್ಕೆ ಬಿಜೆಪಿಗೆ ಖೇದವೇ ಇಲ್ಲ!

ಆಡಿಯೋ ಬಿಚ್ಚಿಡುತ್ತಿರುವ ಸತ್ಯ; ಮೋದಿ-ಶಾ ಪ್ರಸ್ತಾಪಕ್ಕೆ ಬಿಜೆಪಿಗೆ ಖೇದವೇ ಇಲ್ಲ!

- Advertisement -
- Advertisement -

ಪೀಕೆ |
ಒಂದು ಆಡಿಯೋ ಸುತ್ತ ನಡೆಯುತ್ತಿರುವ ಒಟ್ಟೂ ಪ್ರಹಸನ ಬಿಚ್ಚಿಡುತ್ತಿರುವ ಸತ್ಯ ಏನೆಂದರೆ, ಆಪರೇಷನ್ ಕಮಲಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಬೆಂಬಲವಿದೆ ಎಂಬುದನ್ನು ಪ್ರತ್ಯಕ್ಷವಾಗಿಯೋ, ಪರೋಕ್ಷವಾಗಿಯೋ ಒಪ್ಪಿಕೊಳ್ಳುತ್ತಿದ್ದಾರೆ ಬಿಜೆಪಯ ನಾಯಕರು!

ಸದನದಲ್ಲಿ ಈ ಆಡಿಯೋ ವಿಚಾರವಾಗಿ ಮಾತನಾಡಿದ ಬಿಜೆಪಿಯ ಎಲ್ಲ ನಾಯಕರು ಪದೇ ಪದೇ, ‘ಸ್ಪೀಕರ್ ರಮೇಶಕುಮಾರವರೇ, ನಿಮ್ಮ ಬಗ್ಗೆ ನಮಗೆ ಅಪಾರ ಗೌರವವಿದೆ. ತಮ್ಮ ಹೆಸರು ಉಲ್ಲೇಖವಾದುದಕ್ಕೆ ನಮಗೂ ಬೇಜಾರಾಗಿದೆ’ ಎಂದು ಸ್ಪೀಕರ್ ಅವರ ಪ್ರಾಮಾಣಿಕತೆಗೆ ಸರ್ಟಿಫಿಕೆಟ್ ಕೊಡುತ್ತಿದ್ದಾರೆ. ಆದರೆ, ಆ ಆಡಿಯೋದಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೆಸರೂ ಪ್ರಸ್ತಾಪವಾಗಿದೆಯಲ್ಲ? ಆ ಬಗ್ಗೆ ಇಲ್ಲಿವರೆಗೂ ಯಾವ ಬಿಜೆಪಿ ನಾಯಕನೂ ಖೇದ ವ್ಯಕ್ತಪಡಿಸಿಲ್ಲ, ನೊಂದುಕೊಂಡಿಲ್ಲ. ಅಂದರೆ ಅವರಿಗೆ ಪಕ್ಕಾ ಗೊತ್ತಿದೆ: ಮೋದಿ-ಶಾ ಬೆಂಬಲದಿಂದಲೇ ಇದೆಲ್ಲ ನಡೆಯುತ್ತಿದೆ ಎಂಬುದು. ಆದರೆ ಬಾಹ್ಯವಾಗಿಯಾದರೂ ಈ ಕುರಿತಂತೆ ಮಾತಾಡಬಹುದಿತ್ತಲ್ಲ? ಎಂಟು ತಿಂಗಳಿಂದ ನಡೆದಿರುವ ಅಸಹ್ಯ ಆಪರೇಷನ್ ಕಮಲದಲ್ಲಿ ತಮ್ಮ ರಾಷ್ಟ್ರೀಯ ನಾಯಕರೂ ಭಾಗಿ ಎಂಬುದು ಮನದಟ್ಟಾಗಿರುವುದರಿಂದ ಅರ‍್ಯಾರಿಗೂ ಆಡಿಯೊದಲ್ಲಿ ಬಂದ ‘ಸತ್ಯ’ವನ್ನು ವಿರೋಧಿಸಲು ಆಗುತ್ತಿಲ್ಲವೇ?

ಇಲ್ಲಿ ಒಂದಿಷ್ಟು ಅಂಶಗಳನ್ನು ಸುಮ್ಮನೆ ಗಮನಿಸಿ:

* ಸೋಮವಾರ ಸ್ಪೀಕರ್ ಈ ವಿಷಯ ಎತ್ತಿದ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿಯ ಮಾಧುಸ್ವಾಮಿ, ‘ಎಲ್ಲೋ ಯಾರೋ ಮಾತಾಡಿದ್ದಕ್ಕೆ ತಾವು (ಸ್ಪೀಕರ್) ನೊಂದುಕೊಳ್ಳಬೇಡಿ. ನಿಮ್ಮ ಬಗ್ಗೆ ನಮಗೆಲ್ಲ ಗೌರವವಿದೆ. ಏನೋ ಅಚಾತುರ್ಯ ನಡೆದಿದೆ, ಅದನ್ನು ಮರೆತುಬಿಡಿ, ಮನ್ನಿಸಿಬಿಡಿ’ ಎಂದರು. ಅಂದರೆ ಈ ‘ಅಚಾತುರ್ಯ’ ನಡೆದಿರುವುದು ಸತ್ಯ ಎಂದು ಪರೋಕ್ಷವಾಗಿ ಅವರು ಒಪ್ಪಿಕೊಂಡರು. ಆದರೆ ರಮೇಶಕುಮಾರ್ ಹೆಸರು ಪ್ರಸ್ತಾಪವಾದುದಕ್ಕೆ ಕಳವಳ ವ್ಯಕ್ತಪಡಿಸಿದ ಅವರಿಗೆ, ಮೋದಿ-ಶಾ ಹೆಸರು ಪ್ರಸ್ತಾಪವಾಗಿದ್ದರ ಬಗ್ಗೆ ಯಾವ ಬೇಜಾರೂ ಇಲ್ಲವೆಂದಾಯಿತಲ್ಲ? ಅವತ್ತು ಮಾತಾಡಿದ ಬಿಜೆಪಿಯ ಎಲ್ಲ ನಾಯಕರೂ ಸ್ಪೀಕರ್ ಹೆಸರು ಬಂದುದಕ್ಕೆ ಬೇಸರ ವ್ಯಕ್ತಪಡಿಸಿದರೆ ಹೊರತು ತಮ್ಮ ರಾಷ್ಟ್ರೀಯ ನಾಯಕರ ಹೆಸರು ಪ್ರಸ್ತಾಪವಾದುದಕ್ಕೆ ಖೇದ ಪಡಲೇ ಇಲ್ಲ!

* ಮಂಗಳವಾರ, ಬುಧವಾರ ಎಸ್‌ಐಟಿ ತನಿಖೆಗೆ ವಿರೋಧ ವ್ಯಕ್ತ ಮಾಡುವಾಗಲೂ, ಆಡಿಯೋದ ಸಣ್ಣ ಭಾಗ ಮಾತ್ರ ರಿಲೀಸ್ ಮಾಡಲಾಗಿದೆ ಎಂದರೆ ಹೊರತು ಅದು ನಕಲಿ ರಂದೂ ಗಟ್ಟಿಯಾಗಿ ಪ್ರತಿಪಾದಿಸಲೇ ಇಲ್ಲ!

* ಶರಣಗೌಡ ಎಂಬ 37 ವರ್ಷದ ಜೆಡಿಎಸ್ ಕಾರ್ಯಕರ್ತನೊಂದಿಗೆ ಒಂದೆರಡು ತಾಸು ಮಾತಾಡಿದ್ದಾರಂತೆ ಯಡಿಯೂರಪ್ಪ ಮತ್ತು ಶಿವನಗೌಡ ನಾಯಕ್. ಆ ‘ಹುಡುಗ’ನ ಜೊತೆ ಮಾತಾಡಿದ ಪೂರ್ತಿ ಆಡಿಯೋ ಬಿಡಿಗಡೆಯಾದರೂ, ಈಗ ರಲೀಸ್ ಆಗಿರುವ ವಿಷಯ ಸತ್ಯ ಎಂಬುದು ಗ್ಯಾರಂಟಿಯಾಯಿತಲ್ಲ. ಅಷ್ಟಕ್ಕೂ ಶರಣಗೌಡನಿಗೆ ಪ್ರಜಾಪ್ರಭುತ್ವದ ಬಗ್ಗೆ, ಸಂವಿಧಾನದ ಬಗ್ಗೆ ಯಡಿಯೂರಪ್ಪ ಬೋಧಿಸುತ್ತ ಕುಳಿತಿದ್ದರೆ? ಮಧ್ಯರಾತ್ರಿಯಲ್ಲಿ ದೇವದುರ್ಗದ ಶಾಸಕ ಶಿವನಗೌಡ, ಸರ್ಕಾರ ತಾನಾಗೇ ಬೀಳುತ್ತೆ. ಆಗ ನಮ್ಮ ಜೊತೆ ನೀನು ಇರು ಸಾಕು. ಎಲ್ಲ ನ್ಯಾಯಯುತವಾಗಿಯೇ ನಡೆಯಲಿದೆ/ ಎಂದು ಶರಣಗೌಡನಿಗೆ ಉಪದೇಶ ಮಾಡುತ್ತಿದ್ದರೆ?

ಹೀಗೆ ಸುಮ್ಮನೆ ಸರಳ ತರ್ಕ ಉಪಯೋಗಿಸಿದರೂ, ಬಿಜೆಪಿಯ ಹಿಪಾಕ್ರಸಿ ಬಯಲಾಗುತ್ತ ಹೋಗುತ್ತದೆ. ಆಡಿಯೋದಲ್ಲಿರುವ ಧ್ವನಿ ತನ್ನದೇ ಎಂದ ಮೇಲೆ, ಎಸ್‌ಐಟಿ ತನ್ನನ್ನು ಹಣಿಯಲಿದೆ ಎಂಬುದು ಖಾತ್ರಿಯಾಗಿದ್ದರಿಂದಲೇ ಯಡಿಯೂರಪ್ಪ ಈಗ ಸದಸನದ ಕಲಾಪಗಳನ್ನೆಲ್ಲ ಹಾಳು ಮಾಡುವ ಕೆಲಸಕ್ಕೆ ಕೈ ಹಾಕಿದ್ದಾರೆ.

ಇದರಲ್ಲಿ ಮಾಧುಸ್ವಾಮಿಯಂತವರು ಸಂಪೂರ್ಣ ಬೆತ್ತಲಾಗುತ್ತಿದ್ದಾರೆ. ಯಡಿಯೂರಪ್ಪ, ಶಿವನಗೌಡರನ್ನು ಬಿಡಿ, ಅವರು ಎಂದೋ ವಿವಸ್ತ್ರರಾಗಿ ಬಿಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

MGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ 2005ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಮತ್ತು ಅದರಡಿ ರೂಪಿಸಲಾದ ನರೇಗಾ ಯೋಜನೆಯ ಹೆಸರನ್ನು ಬದಲಿಸಲು ಕೇಂದ್ರ...

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್...

‘ಇಂಡಿಯಾ ಬಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ’: ಕಾಂಗ್ರೆಸ್‌ನ ‘ವೋಟ್ ಚೋರಿ’ ಅಭಿಯಾನದ ಬಗ್ಗೆ ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕಾಂಗ್ರೆಸ್‌ನ "ಮತ ಚೋರಿ" ಅಭಿಯಾನದಿಂದ ದೂರ ಉಳಿದಿದ್ದಾರೆ, ಈ ವಿಷಯವು ಒಟ್ಟಾರೆಯಾಗಿ ವಿರೋಧ ಪಕ್ಷದ ಇಂಡಿಯಾ ಬಣದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ...

ಇಂಡಿಗೋ ವಿಮಾನ ರದ್ದತಿಗೆ ಸಂಬಂಧಿಸಿದ ಪಿಐಎಲ್ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನೂರಾರು ಇಂಡಿಗೋ ವಿಮಾನಗಳ ರದ್ದತಿಗೆ ನ್ಯಾಯಾಂಗ ಹಸ್ತಕ್ಷೇಪ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸೋಮವಾರ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿದಾರರು ತಮ್ಮ ದೂರುಗಳೊಂದಿಗೆ ದೆಹಲಿ ಹೈಕೋರ್ಟ್ ಅನ್ನು...

ಹಣ ಅಕ್ರಮ ವರ್ಗಾವಣೆ ಪ್ರಕರಣ : ಪತ್ರಕರ್ತ ಮಹೇಶ್ ಲಾಂಗಾಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ವಂಚನೆ ಆರೋಪದ ಮೇಲೆ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾ ಅವರಿಗೆ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ (ಡಿ.15) ಮಧ್ಯಂತರ ಜಾಮೀನು ನೀಡಿದೆ. ಜಿಎಸ್‌ಟಿ ವಂಚನೆ...

‘ಮಹಿಳೆಯರು ಗಂಡಂದಿರ ಜೊತೆ ಮಲಗಲು ಮಾತ್ರ’: ಸಿಪಿಎಂ ನಾಯಕನ ಅಸೂಕ್ಷ್ಮ ಹೇಳಿಕೆಗೆ ವ್ಯಾಪಕ ಆಕ್ರೋಶ

ಮಲಪ್ಪುರಂ ಜಿಲ್ಲೆಯಲ್ಲಿ ಸಿಪಿಎಂ ಪ್ರಾದೇಶಿಕ ನಾಯಕ ಸಯೀದ್ ಅಲಿ ಮಜೀದ್ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವಾಗ ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡಿದ ನಂತರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.  ಸಯೀದ್ ಅಲಿ ಮಜೀದ್, ತೆನ್ನೆಲಾ ಪಂಚಾಯತ್ ವಾರ್ಡ್ ಅನ್ನು...

ಅಖ್ಲಾಕ್ ಹತ್ಯೆ ಪ್ರಕರಣ ಹಿಂತೆಗೆದುಕೊಳ್ಳುವುದು ನ್ಯಾಯಾಂಗ ಪ್ರಕ್ರಿಯೆ ಹಳಿತಪ್ಪಿಸುವ ಪ್ರಯತ್ನ: ಬೃಂದಾ ಕಾರಟ್

ರಾಜ್ಯಪಾಲರ ಅನುಮತಿಯೊಂದಿಗೆ ಮೊಹಮ್ಮದ್ ಅಖ್ಲಾಕ್ ಅವರ ಕೊಲೆ ಮತ್ತು ಗುಂಪು ಹತ್ಯೆಗೆ ಸಂಬಂಧಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಖಂಡಿಸಿ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಹಿರಿಯ ನಾಯಕಿ ಬೃಂದಾ ಕಾರಟ್...

ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. 2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ...

‘ಮನರೇಗಾ’ ಯೋಜನೆಯಿಂದ ಮಹಾತ್ಮಾ ಗಾಂಧಿ ಹೆಸರು ಕೈಬಿಡಲು ಮುಂದಾದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ

ಹೆಸರು ಬದಲಾವಣೆಗೆ ಹೆಸರುವಾಸಿಯಾಗಿರುವ ಮೋದಿ ಮೋದಿ ನೇತೃತ್ವದ ಆಡಳಿತ, ವಿಶ್ವದ ಅತಿದೊಡ್ಡ ಗ್ರಾಮೀಣ ಉದ್ಯೋಗ ಯೋಜನೆಯನ್ನು ಮರುನಾಮಕರಣ ಮಾಡಲು ಸಜ್ಜಾಗಿದೆ. ಮಹತ್ತರ ಯೋಜನೆಯಿಂದ ಮಹಾತ್ಮ ಗಾಂಧಿಯವರ ಹೆಸರನ್ನು ತೆಗೆದುಹಾಲು ಮುಂದಾಗಿದೆ ಎಂದು 'ದಿ...

ನಟ ದಿಲೀಪ್ ಖುಲಾಸೆ: ತೀರ್ಪು ಹೊರಬಿದ್ದ ನಂತರ ಮೊದಲ ಪ್ರತಿಕ್ರಿಯೆ ನೀಡಿದ ಸಂತ್ರಸ್ತೆ: ನ್ಯಾಯಾಲದಲ್ಲಿ ನಂಬಿಕೆ ಕಳೆದುಕೊಂಡಿದ್ದೇನೆ ಎಂದ ನಟಿ

ಕೊಚ್ಚಿ: ಕೇರಳ ನಟಿಯ ಮೇಲೆ ಹಲ್ಲೆ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿ, ಇತರ ಆರು ಮಂದಿಯನ್ನು ದೋಷಿಗಳು ಎಂದು ಘೋಷಿಸಿದ ತೀರ್ಪು ಹೊರಬಿದ್ದ ಸುಮಾರು ಒಂದು ವಾರದ ನಂತರ, ಸಂತ್ರಸ್ತ ನಟಿ ...