Homeರಾಜಕೀಯಆಧಾರ ಕಳೆದುಕೊಂಡ ಟ್ರಾಯ್ ಅಧ್ಯಕ್ಷ

ಆಧಾರ ಕಳೆದುಕೊಂಡ ಟ್ರಾಯ್ ಅಧ್ಯಕ್ಷ

- Advertisement -
- Advertisement -

ನಮ್ಮ ಪ್ರಧಾನ ಸೇವಕ ನರೇಂದ್ರ ಮೋದಿ ಸೇರಿದಂತೆ ಸಿನಿಮಾ ಸ್ಟಾರ್‍ಗಳು, ಆಟಗಾರರು ಫಿಟ್ನೆಸ್ ಚಾಲೆಂಜ್ ಮಾಡ್ಕಂಡು ಒಂದಷ್ಟು ದಿನ ಆಟ ಆಡಿದ್ರು, ಅಲ್ಲದೆ ಒಂದು ವಾರದಿಂದ ಕಿಕಿ ಚಾಲೆಂಜ್ ಅಂತ ಹೊಸದೊಂದು ಚಾಲೆಂಜ್ ಟ್ರೆಂಡ್ ಶುರು ಮಾಡ್ಕೊಂಡು ಜನ ಬಿಸಿಯಾಗಿದ್ದಾರೆ. ಇದನ್ನ ನೋಡಿ ಸುಮ್ಮನಿರಲಾರದ ಟ್ರಾಯ್ ಅಧ್ಯಕ್ಷ ಕಂ ಯುಐಡಿಎಐ(ವಿಶಿಷ್ಟ ಗುರುತು ಪ್ರಾಧಿಕಾರ)ನ ಮಾಜಿ ಸಿಇಓ ಆರ್.ಎಸ್.ಶರ್ಮ ಇರಲಾರದೋರು ಇರುವೆ ಬಿಡ್ಕಂಡ್ರು ಅನ್ನೋ ಹಾಗೆ ಹೊಸ ಚಾಲೆಂಜ್ ಶುರು ಮಾಡೋಕೋಗಿ ನಮ್ ಜನರ ಮುಂದೆ ಕಾಮೆಡಿ ಪೀಸಾಗಿದ್ದಾರೆ.
ಅಂತದ್ದೇನಪ್ಪಾ ಮಾಡಿದ್ರು ನಮ್ ಟ್ರಾಯ್ ಅಧ್ಯಕ್ಷರು ಅಂದ್ರೆ, ಆಧಾರ್ ಸಂಖ್ಯೆ ಸೇಫಾಗಿಲ್ಲ ಅನ್ನೋರಿಗೆ ಅಧಾರ್ ಎಷ್ಟು ಸೇಫ್ ಅಂತ ತೋರಿಸ್ತೀನಿ ಅಂತ ಕೆಲವು ದಿನಗಳ ಹಿಂದೆ ತಮ್ಮ ಆಧಾರ್ ನಂಬರ್‍ನ ಟ್ವಿಟರ್‍ನಲ್ಲಿ ಹಂಚಿಕೊಂಡ ಶರ್ಮಾ ಯಾರಿಗಾದ್ರು ಸಾಧ್ಯವಾದ್ರೆ ನನ್ನ ಆಧಾರ್ ನಂಬರ್‍ನ ಬಳಸಿಕೊಂಡು ಹ್ಯಾಕ್ ಮಾಡಿ ಅಂತ ಸವಾಲ್ ಹಾಕಿದ್ರು. ಇದನ್ನ ನೋಡಿದ ಹ್ಯಾಕಿಂಗ್ ಪ್ರವೀಣರು ಸಂಪತ್ತಿಗೆ ಸವಾಲ್ ಅನ್ನೋ ಹಾಗೆ ಮಾಜಿ ಸಿಇಓ ಶರ್ಮಾರವರ ಆಧಾರಗಳನ್ನೆಲ್ಲ ಹೊರತೆಗೆದೇ ಬಿಟ್ಟಿದ್ದಾರೆ. ಶರ್ಮಾರ ಡೀಟೇಲ್ಸ್‍ಗಳನ್ನ ಕದ್ದಿರುವ ಹ್ಯಾಕ್ ಪ್ರವೀಣರು ಅವರ ಪರ್ಸನಲ್ ಡೀಟೆಲ್‍ಗಳನ್ನ ಒಂದೊಂದಾಗಿ ಕಳಿಸಿದ್ದಾರೆ, ಇದು ಆಧಾರ್‍ಸಂಖ್ಯೆ ಗಟ್ಟಿ ಆಧಾರವನ್ನು ಹೊಂದಿಲ್ಲ ಅನ್ನೋದನ್ನ ಖಾತ್ರಿ ಮಾಡಿದೆ.
ಇಷ್ಟಕ್ಕ ಸುಮ್ಮನಾಗದ ಹ್ಯಾಕರ್ಸ್ ಟ್ರಾಯ್ ಅಧ್ಯಕ್ಷರ ಫೋನ್ ನಂಬರ್, ಇ-ಮೇಲ್ ಅಡ್ರೆಸ್, ಪಂಜಾಬ್ ನ್ಯಾಷನಲ್ ಬ್ಯಾಂಕ್ ಖಾತೆ ನಂಬರ್, ಹುಟ್ಟಿದ ದಿನಾಂಕ ಎಲ್ಲವನ್ನೂ ಪಡೆದುಕೊಂಢು ಒಂದೊಂದಾಗಿ ಶರ್ಮಾರಿಗೆ ಕಳಿಸಿದ್ದಾರೆ. ಇಷ್ಟಾದರೂ ಎಚ್ಚೆತ್ತುಕೊಂಡು ಸುಮ್ಮನಿರದ ಶರ್ಮಾ ಸಾಹೇಬರು ನಾನು ಹೇಳಿದ್ದು ನನಗೆ ತೊಂದರೆ ಆಗುವಂತದ್ದನ್ನ ಮಾಡಿ ಎಂದು, ಡೀಟೆಲ್ಸ್ ಕೊಡಿ ಎಂದಲ್ಲ ಎಂದು ಮತ್ತೊಂದು ಟ್ವಿಟ್ ಮಾಡಿದ್ದಾರೆ. ಇದನ್ನ ನೋಡಿ ರೊಚ್ಚಿಗೆದ್ದ ಹ್ಯಾಕರ್ಸ್ ಅವರ ಖಾತೆಯಿಂದ ಹಣ ಪಡೆದರೆ ಅದನ್ನ ಮತ್ತೆ ಪಾಪಸ್ ಪಡೆಯಬಹುದು ಎಂದು ತಿಳಿದಿದ್ದವರು ಹಣ ತೆಗೆದುಕೊಳ್ಳದೆ ಶರ್ಮಾರ ಪಿಎನ್‍ಬಿ ಅಕೌಂಟಿಗೆ ಒಂದು ರೂಪಾಯಿ ಜಮಾ ಮಾಡಿ ಶರ್ಮಾರನ್ನು ಕೀಟಲೆ ಮಾಡಿದ್ದಾರೆ.
ಶರ್ಮಾರ ಇ-ಮೇಲ್ ಖಾತೆಯಿಂದಲೇ ಅವರ ಪುತ್ರಿಗೆ ಮೇಲ್ ಮಾಡಿರುವ ಖತರ್ನಾಕ್ ಪ್ರವೀಣರು ಸಾಮಾಜಿಕ ಮಾಧ್ಯಮದಲ್ಲಿ ಸವಾಲೆಸೆದು ದೇಶಕ್ಕೆ ಮುಜುಗರ ಉಂಟುಮಾಡಿರುವ ನಿಮ್ಮ ತಂದೆ ಹ್ಯಾಕರ್‍ಗಳಿಗೆ ಭರ್ಜರಿ ಬಹುಮಾನ ನೀಡಿದ್ದಾರೆಂದು ಸಂದೇಶ ಕಳಿಸಿದ್ದಾರೆ. ಅಷ್ಟೇ ಅಲ್ಲದೆ ಅವರ ಬ್ಯಾಂಕ್ ಖಾತೆಯು ಶೀಘ್ರದಲ್ಲೇ ಹ್ಯಾಕ್ ಆಗಲಿದೆ, ಒಂದು ವೇಳೆ ಅವರು ತನ್ನ ಖಾತೆಯನ್ನು ಅಳಿಸಿ ಹಾಕದಿದ್ದರೆ ಸೂಕ್ಷ್ಮ ದಾಖಲೆಗಳನ್ನೂ ಬಹಿರಂಗ ಪಡಿಸಲಾಗುವುದು ಎಂದೂ, ಈ ಸೂಚನೆಯನ್ನು ಪಾಲಿಸದಿದ್ದರೆ ಮಾಲ್‍ವೇರ್(ಮಾಹಿತಿ ಕದಿಯುವ ಸಾಫ್ಟ್‍ವೇರ್)ಅನ್ನು ಶರ್ಮಾರ ಮೊಬೈಲ್‍ಗೆ ಇನ್‍ಸ್ಟಾಲ್ ಮಾಡಿ ಅವರ ಸಂವಾದವನ್ನು ಕದಿಯಲಾಗುವುದೆಂದು ಎಚ್ಚರಿಕೆ ಸಂದೇಶವನ್ನೂ ಟ್ರಾಯ್ ಅಧ್ಯಕ್ಷರ ಪುತ್ರಿಗೆ ಕಳಿಸಿದ್ದಾರೆ.
ಇಷ್ಟಾದರೂ ಬುದ್ದಿಕಲಿಯದ ಶರ್ಮಾ ಸಾಹೇಬರು ಡಿಜಿಜಲ್ ಯುಗದಲ್ಲಿ ಖಾಸಗೀ ಡಾಟಾವನ್ನು ರಕ್ಷಿಸಿಕೊಳ್ಳುವುದು ಬಹಳ ಮುಖ್ಯವಾದ ವಿಚಾರ, ಅಂತಹ ಡಾಟಾಗಳನ್ನು ಆಧಾರ್ ಲೀಕ್ ಮಾಡಲಾರದು, ನಾನು ಅದರ ಜತೆಗಿದ್ದೇನೆ ಎಂದು ಮತ್ತೆ ಟ್ವಿಟ್ ಮಾಡಿದ್ದಾರೆ.
ಒಟ್ಟಿನಲ್ಲಿ ಆಧಾರ್‍ಗೆ ಯಾವ ಆಧಾರವೂ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಪ್ರಧಾನ ಸೇವಕ ಮೋದಿ ಸರ್ಕಾರದ ಗೊಡ್ಡು ಆಶ್ವಾಸನೆಗಳಿಂದ ಎಲ್ಲಾ ಖಾಸಗೀ ಡೇಟಾಗಳಿಗೂ ಆಧಾರ್ ಲಿಂಕ್ ಕೊಟ್ಟಿರುವ ಜನರು ತಮ್ಮ ಡೇಟಾಗಳನ್ನು ರಕ್ಷಿಸಿಕೊಳ್ಳಲು ಪೇಚಾಡಬೇಕಾದ ಪರಿಸ್ಥಿತಿಯನ್ನು ಚಾಲೆಂಜಿಂಗ್ ಸ್ಟಾರ್ ಶರ್ಮಾರ ಅವಾಂತರ ಎದುರುಗೊಳಿಸಿದೆ.

– ಸೋಮಶೇಖರ್ ಚಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...