Homeರಾಜಕೀಯಆಧಾರ ಕಳೆದುಕೊಂಡ ಟ್ರಾಯ್ ಅಧ್ಯಕ್ಷ

ಆಧಾರ ಕಳೆದುಕೊಂಡ ಟ್ರಾಯ್ ಅಧ್ಯಕ್ಷ

- Advertisement -
- Advertisement -

ನಮ್ಮ ಪ್ರಧಾನ ಸೇವಕ ನರೇಂದ್ರ ಮೋದಿ ಸೇರಿದಂತೆ ಸಿನಿಮಾ ಸ್ಟಾರ್‍ಗಳು, ಆಟಗಾರರು ಫಿಟ್ನೆಸ್ ಚಾಲೆಂಜ್ ಮಾಡ್ಕಂಡು ಒಂದಷ್ಟು ದಿನ ಆಟ ಆಡಿದ್ರು, ಅಲ್ಲದೆ ಒಂದು ವಾರದಿಂದ ಕಿಕಿ ಚಾಲೆಂಜ್ ಅಂತ ಹೊಸದೊಂದು ಚಾಲೆಂಜ್ ಟ್ರೆಂಡ್ ಶುರು ಮಾಡ್ಕೊಂಡು ಜನ ಬಿಸಿಯಾಗಿದ್ದಾರೆ. ಇದನ್ನ ನೋಡಿ ಸುಮ್ಮನಿರಲಾರದ ಟ್ರಾಯ್ ಅಧ್ಯಕ್ಷ ಕಂ ಯುಐಡಿಎಐ(ವಿಶಿಷ್ಟ ಗುರುತು ಪ್ರಾಧಿಕಾರ)ನ ಮಾಜಿ ಸಿಇಓ ಆರ್.ಎಸ್.ಶರ್ಮ ಇರಲಾರದೋರು ಇರುವೆ ಬಿಡ್ಕಂಡ್ರು ಅನ್ನೋ ಹಾಗೆ ಹೊಸ ಚಾಲೆಂಜ್ ಶುರು ಮಾಡೋಕೋಗಿ ನಮ್ ಜನರ ಮುಂದೆ ಕಾಮೆಡಿ ಪೀಸಾಗಿದ್ದಾರೆ.
ಅಂತದ್ದೇನಪ್ಪಾ ಮಾಡಿದ್ರು ನಮ್ ಟ್ರಾಯ್ ಅಧ್ಯಕ್ಷರು ಅಂದ್ರೆ, ಆಧಾರ್ ಸಂಖ್ಯೆ ಸೇಫಾಗಿಲ್ಲ ಅನ್ನೋರಿಗೆ ಅಧಾರ್ ಎಷ್ಟು ಸೇಫ್ ಅಂತ ತೋರಿಸ್ತೀನಿ ಅಂತ ಕೆಲವು ದಿನಗಳ ಹಿಂದೆ ತಮ್ಮ ಆಧಾರ್ ನಂಬರ್‍ನ ಟ್ವಿಟರ್‍ನಲ್ಲಿ ಹಂಚಿಕೊಂಡ ಶರ್ಮಾ ಯಾರಿಗಾದ್ರು ಸಾಧ್ಯವಾದ್ರೆ ನನ್ನ ಆಧಾರ್ ನಂಬರ್‍ನ ಬಳಸಿಕೊಂಡು ಹ್ಯಾಕ್ ಮಾಡಿ ಅಂತ ಸವಾಲ್ ಹಾಕಿದ್ರು. ಇದನ್ನ ನೋಡಿದ ಹ್ಯಾಕಿಂಗ್ ಪ್ರವೀಣರು ಸಂಪತ್ತಿಗೆ ಸವಾಲ್ ಅನ್ನೋ ಹಾಗೆ ಮಾಜಿ ಸಿಇಓ ಶರ್ಮಾರವರ ಆಧಾರಗಳನ್ನೆಲ್ಲ ಹೊರತೆಗೆದೇ ಬಿಟ್ಟಿದ್ದಾರೆ. ಶರ್ಮಾರ ಡೀಟೇಲ್ಸ್‍ಗಳನ್ನ ಕದ್ದಿರುವ ಹ್ಯಾಕ್ ಪ್ರವೀಣರು ಅವರ ಪರ್ಸನಲ್ ಡೀಟೆಲ್‍ಗಳನ್ನ ಒಂದೊಂದಾಗಿ ಕಳಿಸಿದ್ದಾರೆ, ಇದು ಆಧಾರ್‍ಸಂಖ್ಯೆ ಗಟ್ಟಿ ಆಧಾರವನ್ನು ಹೊಂದಿಲ್ಲ ಅನ್ನೋದನ್ನ ಖಾತ್ರಿ ಮಾಡಿದೆ.
ಇಷ್ಟಕ್ಕ ಸುಮ್ಮನಾಗದ ಹ್ಯಾಕರ್ಸ್ ಟ್ರಾಯ್ ಅಧ್ಯಕ್ಷರ ಫೋನ್ ನಂಬರ್, ಇ-ಮೇಲ್ ಅಡ್ರೆಸ್, ಪಂಜಾಬ್ ನ್ಯಾಷನಲ್ ಬ್ಯಾಂಕ್ ಖಾತೆ ನಂಬರ್, ಹುಟ್ಟಿದ ದಿನಾಂಕ ಎಲ್ಲವನ್ನೂ ಪಡೆದುಕೊಂಢು ಒಂದೊಂದಾಗಿ ಶರ್ಮಾರಿಗೆ ಕಳಿಸಿದ್ದಾರೆ. ಇಷ್ಟಾದರೂ ಎಚ್ಚೆತ್ತುಕೊಂಡು ಸುಮ್ಮನಿರದ ಶರ್ಮಾ ಸಾಹೇಬರು ನಾನು ಹೇಳಿದ್ದು ನನಗೆ ತೊಂದರೆ ಆಗುವಂತದ್ದನ್ನ ಮಾಡಿ ಎಂದು, ಡೀಟೆಲ್ಸ್ ಕೊಡಿ ಎಂದಲ್ಲ ಎಂದು ಮತ್ತೊಂದು ಟ್ವಿಟ್ ಮಾಡಿದ್ದಾರೆ. ಇದನ್ನ ನೋಡಿ ರೊಚ್ಚಿಗೆದ್ದ ಹ್ಯಾಕರ್ಸ್ ಅವರ ಖಾತೆಯಿಂದ ಹಣ ಪಡೆದರೆ ಅದನ್ನ ಮತ್ತೆ ಪಾಪಸ್ ಪಡೆಯಬಹುದು ಎಂದು ತಿಳಿದಿದ್ದವರು ಹಣ ತೆಗೆದುಕೊಳ್ಳದೆ ಶರ್ಮಾರ ಪಿಎನ್‍ಬಿ ಅಕೌಂಟಿಗೆ ಒಂದು ರೂಪಾಯಿ ಜಮಾ ಮಾಡಿ ಶರ್ಮಾರನ್ನು ಕೀಟಲೆ ಮಾಡಿದ್ದಾರೆ.
ಶರ್ಮಾರ ಇ-ಮೇಲ್ ಖಾತೆಯಿಂದಲೇ ಅವರ ಪುತ್ರಿಗೆ ಮೇಲ್ ಮಾಡಿರುವ ಖತರ್ನಾಕ್ ಪ್ರವೀಣರು ಸಾಮಾಜಿಕ ಮಾಧ್ಯಮದಲ್ಲಿ ಸವಾಲೆಸೆದು ದೇಶಕ್ಕೆ ಮುಜುಗರ ಉಂಟುಮಾಡಿರುವ ನಿಮ್ಮ ತಂದೆ ಹ್ಯಾಕರ್‍ಗಳಿಗೆ ಭರ್ಜರಿ ಬಹುಮಾನ ನೀಡಿದ್ದಾರೆಂದು ಸಂದೇಶ ಕಳಿಸಿದ್ದಾರೆ. ಅಷ್ಟೇ ಅಲ್ಲದೆ ಅವರ ಬ್ಯಾಂಕ್ ಖಾತೆಯು ಶೀಘ್ರದಲ್ಲೇ ಹ್ಯಾಕ್ ಆಗಲಿದೆ, ಒಂದು ವೇಳೆ ಅವರು ತನ್ನ ಖಾತೆಯನ್ನು ಅಳಿಸಿ ಹಾಕದಿದ್ದರೆ ಸೂಕ್ಷ್ಮ ದಾಖಲೆಗಳನ್ನೂ ಬಹಿರಂಗ ಪಡಿಸಲಾಗುವುದು ಎಂದೂ, ಈ ಸೂಚನೆಯನ್ನು ಪಾಲಿಸದಿದ್ದರೆ ಮಾಲ್‍ವೇರ್(ಮಾಹಿತಿ ಕದಿಯುವ ಸಾಫ್ಟ್‍ವೇರ್)ಅನ್ನು ಶರ್ಮಾರ ಮೊಬೈಲ್‍ಗೆ ಇನ್‍ಸ್ಟಾಲ್ ಮಾಡಿ ಅವರ ಸಂವಾದವನ್ನು ಕದಿಯಲಾಗುವುದೆಂದು ಎಚ್ಚರಿಕೆ ಸಂದೇಶವನ್ನೂ ಟ್ರಾಯ್ ಅಧ್ಯಕ್ಷರ ಪುತ್ರಿಗೆ ಕಳಿಸಿದ್ದಾರೆ.
ಇಷ್ಟಾದರೂ ಬುದ್ದಿಕಲಿಯದ ಶರ್ಮಾ ಸಾಹೇಬರು ಡಿಜಿಜಲ್ ಯುಗದಲ್ಲಿ ಖಾಸಗೀ ಡಾಟಾವನ್ನು ರಕ್ಷಿಸಿಕೊಳ್ಳುವುದು ಬಹಳ ಮುಖ್ಯವಾದ ವಿಚಾರ, ಅಂತಹ ಡಾಟಾಗಳನ್ನು ಆಧಾರ್ ಲೀಕ್ ಮಾಡಲಾರದು, ನಾನು ಅದರ ಜತೆಗಿದ್ದೇನೆ ಎಂದು ಮತ್ತೆ ಟ್ವಿಟ್ ಮಾಡಿದ್ದಾರೆ.
ಒಟ್ಟಿನಲ್ಲಿ ಆಧಾರ್‍ಗೆ ಯಾವ ಆಧಾರವೂ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಪ್ರಧಾನ ಸೇವಕ ಮೋದಿ ಸರ್ಕಾರದ ಗೊಡ್ಡು ಆಶ್ವಾಸನೆಗಳಿಂದ ಎಲ್ಲಾ ಖಾಸಗೀ ಡೇಟಾಗಳಿಗೂ ಆಧಾರ್ ಲಿಂಕ್ ಕೊಟ್ಟಿರುವ ಜನರು ತಮ್ಮ ಡೇಟಾಗಳನ್ನು ರಕ್ಷಿಸಿಕೊಳ್ಳಲು ಪೇಚಾಡಬೇಕಾದ ಪರಿಸ್ಥಿತಿಯನ್ನು ಚಾಲೆಂಜಿಂಗ್ ಸ್ಟಾರ್ ಶರ್ಮಾರ ಅವಾಂತರ ಎದುರುಗೊಳಿಸಿದೆ.

– ಸೋಮಶೇಖರ್ ಚಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...