Homeಅಂಕಣಗಳುಆಧಾರ್: ಆಷಾಢಭೂತಿ ಕಾಂಗ್ರೆಸ್, ಘಾತುಕ ಬಿಜೆಪಿ

ಆಧಾರ್: ಆಷಾಢಭೂತಿ ಕಾಂಗ್ರೆಸ್, ಘಾತುಕ ಬಿಜೆಪಿ

- Advertisement -
- Advertisement -

ಆಧಾರ್ ಕುರಿತ ಬಹುನಿರೀಕ್ಷಿತ ಸುಪ್ರೀಂಕೋರ್ಟ್ ತೀರ್ಪು ಇಂದು ಹೊರಬಿದ್ದಿದೆ. ಸಾವಿರಕ್ಕೂ ಹೆಚ್ಚು ಪುಟಗಳ ತೀರ್ಪಿನ ವಿವರ ನಾಳೆಯ ಹೊತ್ತಿಗೆ ಸಂಪೂರ್ಣವಾಗಿ ಲಭ್ಯವಾಗಲಿದೆ. ಈ ಸದ್ಯ ಮಾಧ್ಯಮಗಳು ಹೇಳುತ್ತಿರುವುದು – ಬ್ಯಾಂಕ್ ಖಾತೆಗೆ ಮತ್ತು ಮೊಬೈಲ್ ಫೋನ್‍ಗೆ ಇದನ್ನು ಲಿಂಕ್ ಮಾಡಬೇಕೆಂದೇನಿಲ್ಲವೆಂದು. ಆದರೆ, ಮೇಲ್ಮಧ್ಯಮ ವರ್ಗ ಮತ್ತು ಮೇಲ್ವರ್ಗದವರು ಮಾಡಬೇಕಾದ ಆದಾಯ ತೆರಿಗೆ ಸಲ್ಲಿಕೆ ಮತ್ತು ಪ್ಯಾನ್ ಕಾರ್ಡ್‍ಗೆ ಆಧಾರ್ ಕಡ್ಡಾಯ ಎಂಬುದನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಮಧ್ಯಮ ವರ್ಗ (ಕನಿಷ್ಠ ಗ್ಯಾಸ್ ಸಬ್ಸಿಡಿಗೆ ಆಧಾರ್ ಕಾರ್ಡ್ ಬೇಕು) ಹಾಗೂ ಅದಕ್ಕಿಂತ ಕೆಳಗಿನ ಸಮುದಾಯಗಳಿಗೆ ತಲುಪುತ್ತಿರುವ ಸರ್ಕಾರೀ ಸೌಲಭ್ಯಗಳಿಗೆ ಆಧಾರ್ ಕಡ್ಡಾಯ ಮಾಡುವುದನ್ನೂ ಎತ್ತಿ ಹಿಡಿದಿದೆ. ಮಕ್ಕಳನ್ನು ಹೊರತುಪಡಿಸಿ, ದೇಶದ ಎಲ್ಲಾ ಜನರಿಗೂ ಒಂದಲ್ಲಾ ಒಂದು ರೀತಿಯಲ್ಲಿ ಆಧಾರ್ ಕಡ್ಡಾಯವೇ ಆಗಿರುತ್ತದೆ. ಇದನ್ನು ಖಾಸಗಿ ಕಂಪೆನಿಗಳು ಕೇಳುವಂತಿಲ್ಲವೆಂದು ಸರ್ವೋಚ್ಚ ನ್ಯಾಯಾಲಯವು ಹೇಳಿದೆ.
ಡಿಜಿಟಲ್ ತಂತ್ರಜ್ಞಾನದ ಮೂಲಕ ಈಗಾಗಲೇ ಪ್ರತಿಯೊಬ್ಬ ವ್ಯಕ್ತಿಯ ಆನ್‍ಲೈನ್ ವ್ಯವಹಾರಗಳ ಮೂಲಕ ಅವರ ಇಷ್ಟಾನಿಷ್ಟಗಳನ್ನು, ವ್ಯವಹಾರಗಳ ಮೇಲೆ ನಿಗಾ ಇಟ್ಟು ಅವರ ವಿವರಗಳನ್ನು ಖಾಸಗಿಯವರು ಪಡೆದುಕೊಂಡಾಗಿದೆ. ಸರ್ಕಾರವು ಬಯಸಿದಲ್ಲಿ ಎಲ್ಲರ ಮೇಲೆ ನಿಗಾ ಇಡಲು ಸಾಧ್ಯವಾಗುವಂತೆ ಆಧಾರ್ ಕಡ್ಡಾಯವೂ ಆಗಿರುತ್ತದೆ. ನಿಗಾ ಇಡಲು ಆಧಾರ್ ಸಹಾ ಬೇಕಿಲ್ಲ; ಮೊಬೈಲ್ ಫೋನೇ ಸಾಕಾಗುತ್ತದೆ. ಆ ಅರ್ಥದಲ್ಲಿ ಈ ತೀರ್ಪಿನಿಂದ ಮಹತ್ತರವಾದುದೇನೋ ಸಾಧನೆಯಾದಂತೆ ಕಾಣುತ್ತಿಲ್ಲ. ಇದಕ್ಕೂ ಹಿಂದೆ ಸುಪ್ರೀಂಕೋರ್ಟ್ ಖಾಸಗಿತನದ ರಕ್ಷಣೆಯ ಕುರಿತು ನೀಡಿದ ತೀರ್ಪನ್ನು ಇದರಿಂದ ಆಧಾರ್ ವಿಚಾರದಲ್ಲಿ ಭಾಗಶಃ (ಖಾಸಗಿ ವ್ಯಕ್ತಿಗಳ ಕೈಗೆ ಆಧಾರ್ ವಿವರಗಳು ಹೋಗದಂತೆ ತಡೆಯುವ ಮೂಲಕ) ಅಷ್ಟೇ ಅನುಷ್ಠಾನ ಮಾಡಿದಂತಾಗುತ್ತದೆ.
ಈಗಾಗಲೇ ಖಾಸಗಿ ಕಂಪೆನಿಗಳು ಸಂಗ್ರಹಿಸಿಟ್ಟುಕೊಂಡಿರುವ ಆಧಾರ್ ಮಾಹಿತಿಯನ್ನು ನಾಶ ಮಾಡಬೇಕೆಂದು ಹೇಳಿದಾಗ್ಗ್ಯೂ ಆ ಪ್ರಕ್ರಿಯೆಯನ್ನು ಯಾರು, ಹೇಗೆ ಖಾತರಿಗೊಳಿಸುತ್ತಾರೆಂಬ ವಿವರಗಳು ಇನ್ನಷ್ಟೇ ಹೊರಬೀಳಬೇಕಿದೆ.
ಮುಖ್ಯ ನ್ಯಾಯಾಧೀಶ ನ್ಯಾ.ದೀಪಕ್ ಮಿಶ್ರಾ ಮತ್ತು ನ್ಯಾ.ಎ.ಕೆ.ಸಿಕ್ರಿ, ನ್ಯಾ.ಎ.ಎಂ.ಖಾನ್ವಿಲ್ಕರ್, ನ್ಯಾ.ಡಿ.ವೈ.ಚಂದ್ರಚೂಡ್ ಮತ್ತು ನ್ಯಾ.ಅಶೋಕ್ ಭೂಷಣ್‍ರಿದ್ದ ನ್ಯಾಯಪೀಠದಲ್ಲಿ ನ್ಯಾ.ಚಂದ್ರಚೂಡ್‍ರು ಮಾತ್ರ ತುಂಬಾ ಕಠಿಣ ಮಾತುಗಳಲ್ಲಿ ಕೆಲವು ಅಂಶಗಳನ್ನು ತೆರೆದಿಟ್ಟಿದ್ದಾರೆ. ಅವರೂ ಸಹಾ ಆಧಾರ್ ಪ್ರಕ್ರಿಯೆಯನ್ನೇ ರದ್ದುಗೊಳಿಸಬೇಕು ಎಂದು ಹೇಳಿರದಿದ್ದರೂ, ಆಧಾರ್ ಕಡ್ಡಾಯವಾಗುವುದರಿಂದ ಆಗುವ ಸಮಸ್ಯೆಗಳನ್ನು ಎತ್ತಿ ಹೇಳಿದ್ದಾರೆ. ಇದನ್ನು ಜಾರಿಗೆ ತಂದ ಪ್ರಕ್ರಿಯೆಯು ಅಸಾಂವಿಧಾನಿಕ ಎಂದೂ ಸ್ಪಷ್ಟವಾಗಿ ಮುಂದಿಟ್ಟಿದ್ದಾರೆ. ಈ ರೀತಿಯ ಅಲ್ಪಸಂಖ್ಯಾತ ತೀರ್ಪು ಬಂದಾಗ ಅದನ್ನು ಹಿಡಿದು, ಇನ್ನೂ ದೊಡ್ಡ ಪೀಠ ರಚನೆಗೆ ಕೇಳಬಹುದಾಗಿದೆ. ಅದನ್ನೇ ಮಾಡುತ್ತೇವೆಂದು ಕಾಂಗ್ರೆಸ್‍ನ ನಾಯಕ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಈಗಾಗಲೇ ಘೋಷಿಸಿದ್ದಾರೆ.
ಇಲ್ಲಿ ಆಶ್ಚರ್ಯವೆಂದರೆ, ಸದರಿ ಆಧಾರ್‍ಅನ್ನು ಮೊದಲು ತರಲು ಹೊರಟಿದ್ದೇ ಕಾಂಗ್ರೆಸ್ ಪಕ್ಷ. ಆದರೆ, ಇಂದು ರಾಹುಲ್‍ಗಾಂಧಿಯಾದಿಯಾಗಿ ಎಲ್ಲಾ ಕಾಂಗ್ರೆಸ್ಸಿಗರೂ ಈ ತೀರ್ಪನ್ನು ಸ್ವಾಗತಿಸಿದ್ದಾರೆ. ಅವರ ಪ್ರಕಾರ ಇದು ಯುಪಿಎ ತರಲು ಹೊರಟಿದ್ದ ಆಧಾರ್ ಪ್ರಕ್ರಿಯೆಗೆ ಸಂದ ಜಯ. ವಾಸ್ತವದಲ್ಲಿ ನಂದನ್ ನಿಲೇಕಣಿ ನೇತೃತ್ವದಲ್ಲಿ ಇದರ ಪರಿಕಲ್ಪನೆ ರೂಪುಗೊಂಡಾಗಲೇ ಇಂದು ಎನ್‍ಡಿಎ ಯಾವ ರೀತಿಯಲ್ಲಿ ಜಾರಿ ಮಾಡುತ್ತಿದೆಯೋ ಆ ಎಲ್ಲಾ ಸಾಧ್ಯತೆಗಳು/ಅಪಾಯಗಳು ಇದ್ದೇ ಇತ್ತು. ಜಾರಿಗೆ ತರುವ ಪ್ರಕ್ರಿಯೆಯನ್ನು ಸಂಸತ್ತಿನೊಳಗೆ ಇನ್ನೂ ‘ಪ್ರಜಾತಾಂತ್ರಿಕ’ಗೊಳಿಸುವ ಕೆಲಸವನ್ನಷ್ಟೇ ಕಾಂಗ್ರೆಸ್ ಮಾಡಬಯಸಿತ್ತು ಮತ್ತು ಹಂತಹಂತವಾಗಿ ಅದನ್ನು ಹೇರಲಾಗುತ್ತಿತ್ತು. ಆದರೆ, ಇಂದು ತನ್ನ ರೀತಿಯೇ ಬೇರೆ ಎಂದು ಅದು ಹೇಳುತ್ತಿದೆ. ಇದು ಕಾಂಗ್ರೆಸ್‍ನ ಆಷಾಢಭೂತಿತನಕ್ಕೆ ಸಾಕ್ಷಿ.
ಅದೇ ಹೊತ್ತಿನಲ್ಲಿ ಬಿಜೆಪಿಯಂತೂ ಈ ವಿಚಾರದಲ್ಲಿ ಭಾರೀ ದೊಡ್ಡ ಯುಟರ್ನ್ ಮಾಡಿದೆ. ಆಧಾರ್ ತರುವುದಕ್ಕೇ ಅದು ವಿರೋಧ ವ್ಯಕ್ತಪಡಿಸಿತ್ತು. ಆಧಾರ್ ಜನಕ ನಿಲೇಕಣಿ ಕಾಂಗ್ರೆಸ್‍ನಿಂದ ಸ್ಪರ್ಧೆ ಮಾಡಿದಾಗ, ಅವರನ್ನು ವಿರೋಧಿಸಲೂ ಇದನ್ನೊಂದು ಅಸ್ತ್ರವಾಗಿ ಮಾಡಿಕೊಂಡಿತ್ತು. ನಂತರ ಸುಲಭವಾಗಿ ಖಾಸಗಿಯವರ ಕೈಗೂ ಆಧಾರ್ ಸಿಗುವ ರೀತಿ ಮಾಡಿ ಜಾರಿ ಮಾಡಲು ಹೊರಟಿದ್ದು ಇದೇ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ.
ಇದೀಗ ಒಂದೆರಡು ಅಂಶಗಳನ್ನು ಹೊರತುಪಡಿಸಿ, ಉಳಿದಂತೆ ಆಧಾರ್‍ಅನ್ನು ಕೋರ್ಟ್ ಎತ್ತಿಹಿಡಿದಿದ್ದರೂ, ಒಟ್ಟಾರೆ ಇದರಲ್ಲಿ ಹಲವು ಅಪಾಯಕಾರಿ ಸಂಗತಿಗಳಿವೆ ಎಂಬುದನ್ನು ಕೋರ್ಟ್ ಗುರುತಿಸಿದೆ. ನ್ಯಾ.ಚಂದ್ರಚೂಡ್ ಅವರ ತೀರ್ಪಿನ ಅಂಶಗಳಂತೂ ಇದರ ಮಾನ್ಯತೆಯನ್ನು ಪ್ರಶ್ನಿಸಿದೆ. ಆದರೂ, ಇದೊಂದು ‘ಐತಿಹಾಸಿಕ’ ತೀರ್ಪು ಎಂದು ಬಿಜೆಪಿ ಹೇಳುತ್ತಿದೆ.
ಭಾರತವೆಂಬ ದೇಶದಲ್ಲಿ ‘ಸ್ಟ್ರೀಮ್‍ಲೈನ್’ ಮಾಡಬೇಕಾದ್ದು ಬಡವರಿಗೆ ಸಿಗುವ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳನ್ನಷ್ಟೇ ಎಂದು ಸರ್ಕಾರವು ತಿಳಿದಿದೆ. ಯಾವ ಕಲ್ಯಾಣ ಕಾರ್ಯಕ್ರಮಗಳು ಸಂವಿಧಾನದ ಕಲಂ 21ರ ‘ಘನತೆಯಿಂದ ಬದುಕುವ ಹಕ್ಕ’ನ್ನು ಖಾತರಿಗೊಳಿಸಲು ಕಡ್ಡಾಯವೋ, ರಾಜ್ಯ ನಿರ್ದೇಶನ ತತ್ವಗಳ ಹಲವು ಕಲಂಗಳನ್ನು ಖಾತರಿಗೊಳಿಸಲು ಕಡ್ಡಾಯವೋ, ಅವು ಸಾಧ್ಯವಾದಷ್ಟೂ ಎಲ್ಲರಿಗೂ ಸಿಗದಂತೆ ಮಾಡುವುದರಲ್ಲಿ ಅಧಿಕಾರಶಾಹಿಗೆ ಎಲ್ಲಿಲ್ಲದ ಮುತುವರ್ಜಿ. ದೇಶದ ಇಡೀ ಬೊಕ್ಕಸವೇ ಜನಸಾಮಾನ್ಯರಿಗೆ ನೀಡುವ ಸಬ್ಸಿಡಿಗಳಿಗೆ ಹೋಗುತ್ತಿದೆ ಎಂಬುದು ಅವರ ಅಳಲು. ವಾಸ್ತವದಲ್ಲಿ ಕನಿಷ್ಠ ಮಟ್ಟಕ್ಕಾದರೂ ಬದುಕಿ ದುಡಿಯಲು ಈ ಸಮುದಾಯಗಳಿಗೆ ಸರ್ಕಾರವು ಕೆಲವು ಸಬ್ಸಿಡಿಗಳನ್ನು ನೀಡುತ್ತಿದೆ. ಅದರ ಮೂಲಕ ಕಡಿಮೆ ಕೂಲಿಯಲ್ಲಿ ಉಳ್ಳವರ ಉತ್ಪಾದನಾ ಘಟಕಗಳಲ್ಲಿ ಈ ಜನರು ದುಡಿಯುತ್ತಿದ್ದಾರೆ. ಆ ಅರ್ಥದಲ್ಲಿ ಅಗ್ಗದ ಕೂಲಿಗಳನ್ನು ಸರಬರಾಜು ಮಾಡಲು ಬೇಕಾದಷ್ಟು ಸಬ್ಸಿಡಿಯಷ್ಟೇ ಜನರಿಗೆ ಸಿಗುತ್ತಿದೆ. ಘನತೆಯಿಂದ ಬದುಕಲು ಬೇಕಾದಷ್ಟು ಕಲ್ಯಾಣ ಕಾರ್ಯಕ್ರಮಗಳು ಈ ದೇಶದಲ್ಲಿ ಜಾರಿಯಾಗಿಯೇ ಇಲ್ಲ.
ಹೀಗಿರುವಾಗ, ಸರ್ಕಾರದ ಸವಲತ್ತುಗಳು ‘ಸೋರಿಕೆ’ಯಾಗಿ ಕಡುಬಡವರಿಗೆ ಮಾತ್ರ ಸಿಗಬೇಕಾದವು ‘ಅನರ್ಹ’ರಿಗೆ ಸಿಕ್ಕಿಬಿಡುತ್ತಿದೆಯೆಂದು ಇಂತಹವರು ವಾದಿಸುತ್ತಿದ್ದರು. ಅವರ ಕೈಗೆ ಅಸ್ತ್ರವಾಗಿ ಸಿಕ್ಕಿದ್ದು ತಂತ್ರಜ್ಞಾನ. ಅದನ್ನು ಬಳಸಿಕೊಂಡು ಸೃಷ್ಟಿಸಲಾದ ಆಧಾರ್ ಈಗ ಬಡವರ ಅನ್ನಕ್ಕೆ ಕತ್ತರಿ ಹಾಕುವುದಷ್ಟೇ ಅಲ್ಲದೇ, ದೇಶದ ಎಲ್ಲಾ ಜನರ ಮೇಲೂ ನಿಗಾ ಇಡುವ ‘ನಿಗಾ ಪ್ರಭುತ್ವ’ವನ್ನು ಆಧಾರ್ ಸೃಷ್ಟಿ ಮಾಡಲು ಹೊರಟಿತ್ತು. ಅದರ ಕುರಿತು ಎದ್ದ ಪ್ರಶ್ನೆಗಳನ್ನು ಸುಪ್ರೀಂಕೋರ್ಟ್ ಗಮನಿಸಿದೆ ಮತ್ತು ಆ ಆತಂಕವನ್ನು ಒಂದಷ್ಟು ಮಟ್ಟಿಗೆ ಒಪ್ಪಿಕೊಂಡಿದೆ.
ಆದರೆ, ಆಧಾರ್‍ನ ಸಮಸ್ಯೆಯನ್ನು ನಿಜಕ್ಕೂ ಇಲ್ಲವಾಗಿಸುವ ನಿಟ್ಟಿನಲ್ಲಿ ಈ ಪ್ರಕ್ರಿಯೆಯು ಮುಂದುವರೆಯುತ್ತದೆಯಾ? ನ್ಯಾ.ಚಂದ್ರಚೂಡ್ ಅವರ ತೀರ್ಪಿನ ಅಂಶಗಳ ಕುರಿತಾಗಿ ಯಾರಾದರೂ ಇನ್ನೂ ದೊಡ್ಡ ಪೀಠಕ್ಕೆ ಕೊಂಡೊಯ್ದರೆ ಆಗೇನಾದರೂ ಉಳಿದ ವಿಚಾರಗಳಿಗೂ ಒಂದು ಪರಿಹಾರ ಕಾಣಿಸುತ್ತದೆಯಾ? ಖಾಸಗಿತನವೂ ಜನರ ಮೂಲಭೂತ ಹಕ್ಕು ಮತ್ತು ಸಂವಿಧಾನದ ಕಲಂ 21ರ ಭಾಗ ಎಂದು ಹೇಳಿದ್ದರ ಸೂಕ್ತವಾದ ವ್ಯಾಖ್ಯಾನ ಮತ್ತು ಆಧಾರ್ ಹಾಗೂ ಡಿಜಿಟಲ್ ಗೌಪ್ಯತೆ ವಿಚಾರಕ್ಕೂ ಅನ್ವಯವಾಗುತ್ತದೆಯಾ ನೋಡಬೇಕು.
ಆದರೆ, ಒಂದಂತೂ ಸ್ಪಷ್ಟ. ಕಾಂಗ್ರೆಸ್ ಮತ್ತು ಬಿಜೆಪಿಯಂತಹ ಪಕ್ಷಗಳಿಂದ ಈ ವಿಚಾರದಲ್ಲಿ ಸೂಕ್ತ ಪರಿಹಾರ ನಿರೀಕ್ಷಿಸುವುದು ಮೂರ್ಖತನ. ಮೋದಿ ಜೇಟ್ಲಿಯವರ ಧೋರಣೆಯಂತೂ ಅಪಾಯಕಾರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...