Homeಕರ್ನಾಟಕಆಪರೇಷನ್ ಕಮಲಕ್ಕೆ ಬ್ರೇಕ್: ಯಡಿಯೂರಪ್ಪನವರ ಈ ಮಾತಿನ ಹಿಂದಿರುವ ಮರ್ಮವೇನು?

ಆಪರೇಷನ್ ಕಮಲಕ್ಕೆ ಬ್ರೇಕ್: ಯಡಿಯೂರಪ್ಪನವರ ಈ ಮಾತಿನ ಹಿಂದಿರುವ ಮರ್ಮವೇನು?

ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಬೀಳಿಸಿದ ಅಪಖ್ಯಾತಿ ಬಿಜೆಪಿ ಮೇಲೆ ಬಾರದಂತೆ, ಅದನ್ನು ಸಿದ್ದರಾಮಯ್ಯ ಮೇಲೆ ಆರೋಪಿಸಿ, ಒಳಗೊಳಗೇ ಆಪರೇಷನ್ ನಡೆಸುವ ತಂತ್ರಗಾರಿಕೆ ಭಾಗವಾಗಿ ಯಡಿಯೂರಪ್ಪನವರಿಂದ ಇಂಥಾ ಹೇಳಿಕೆ ಹೇಳಿಸಲಾಗಿದೆ ಎನ್ನಲಾಗುತ್ತಿದೆ.

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ದೆಹಲಿಯಿಂದ ಮರಳಿದ ಯಡಿಯೂರಪ್ಪ ತುಂಬಾ ನಿರಾಶೆಯಲ್ಲಿದ್ದಾರೆ. ಪ್ರಚಂಡ ಜಯದಿಂದ ಯಾರ ಮಾತನ್ನೂ ಕೇಳಿಸಿಕೊಳ್ಳದ ಸ್ಥಿತಿಯಲ್ಲಿರುವ `ಮೋದಿ-ಶಾ’ ಹೈಕಮಾಂಡ್ ಸದ್ಯಕ್ಕೆ ಯಾವ ಆಪರೇಷನ್ನೂ ಮಾಡಬೇಡಿ, ಸುಮ್ಮನೇ ವಿರೋಧ ಪಕ್ಷದಲ್ಲಿ ಕೂಡಿ ಎಂದು ಖಡಕ್ ಆದೇಶವನ್ನು ಯಡಿಯೂರಪ್ಪರಿಗೆ ನೀಡಿ ಕಳಿಸಿದೆ. ಇನ್ನೊಂದು ಕಡೆ ಯಡಿಯೂರಪ್ಪ ಸೂಚಿಸಿದ ಬೆಜೆಪಿ ಸಂಸದರಿಗೆ ಒಂದೂ ಸಚಿವ ಸ್ಥಾನ ನೀಡದೇ ಯಡಿಯೂರಪ್ಪರನ್ನು ಹೈಕಮಾಂಡ್ ಮೂಲೆಗೆ ತಳ್ಳಿದೆ. ಬಿಜೆಪಿಯಲ್ಲಿ ಯುಡಿಯೂರಪ್ಪ ಕತೆ ಮುಗಿದೇ ಹೋಯ್ತಾ?

ಮೋದಿಯವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಮುಗಿಸಿಕೊಂಡು ಬೆಂಗಳೂರಿಗೆ ಬಂದಿಳಿದ ಯಡಿಯೂರಪ್ಪನವರ ಮುಖದಲ್ಲಿ ಈ ಮೊದಲಿದ್ದ ಯಾವ ಲವಲವಿಕೆಯೂ ಉಳಿದಿಲ್ಲ. ಮೇ 23ಕ್ಕೆ ರಾಜ್ಯ ಮೈತ್ರಿ ಸರ್ಕಾರ ಮುರಿದುಬಿದ್ದು ಬಿಜೆಪಿ ಸರ್ಕಾರ ಅಧಿಕಾರಕ್ಕೇರಲಿದೆ ಎಂದು ತುಂಬು ಹುಮ್ಮಸ್ಸಿನಲ್ಲಿ ಮಾತಾಡುತ್ತಿದ್ದ ಯಡಿಯೂರಪ್ಪನವರು ದಿಲ್ಲಿಯಿಂದ ಬರುತ್ತಿದ್ದಂತೆಯೇ “ಸದ್ಯಕ್ಕೆ ಸರ್ಕಾರದ ಪತನಕ್ಕೆ ಕೈಯಾಕಬೇಡಿ ಎಂದು ವರಿಷ್ಠರು ಸೂಚಿಸಿದ್ದಾರೆ. ಸರ್ಕಾರ ಅಸ್ಥಿರಗೊಳಿಸುವ ಯತ್ನ ಮಾಡದೇ ವಿರೋಧ ಪಕ್ಷದಲ್ಲಿದ್ದುಕೊಂಡು ಕೆಲಸ ಮಾಡಿ ಎಂದು ನಿರ್ದೇಶನ ನೀಡಿದ್ದಾರೆ” ಎಂಬ ಅಚ್ಚರಿ ಹೇಳಿಕೆ ನೀಡಿ ಅವರ ಹಿಂಬಾಲಕರೇ ತಬ್ಬಿಬ್ಬಾಗುವಂತೆ ಮಾಡಿದ್ದಾರೆ.

ಇದಕ್ಕೆ ಅವರು ಕೊಡುತ್ತಿರುವ ಕಾರಣ, “ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವ ಸಿದ್ದರಾಮಯ್ಯ ತಮ್ಮ ಪಕ್ಷದ ನಾಲ್ಕು ಶಾಸಕರನ್ನು ಅತೃಪ್ತರಂತೆ ಮುಂದೆ ಬಿಟ್ಟು ಬಿಜೆಪಿಗೆ ಕಳುಹಿಸುವ ಹುನ್ನಾರ ನಡೆಸಿದ್ದಾರೆ. ಆದ್ದರಿಂದ ನೀವು ಸರ್ಕಾರ ಪತನದ ಯತ್ನಕ್ಕೆ ಕೈಹಾಕಬೇಡಿ ಎಂಬ ಸಲಹೆ ನೀಡಿದ್ದಾರೆ” ಎನ್ನುತ್ತಿದ್ದಾರೆ.

ಆದರೆ ದಿಲ್ಲಿಯ ಬಲ್ಲ ಮೂಲಗಳು ಹೇಳುವಂತೆ ಯಡಿಯೂರಪ್ಪನವರು ಪ್ರಮಾಣವಚನ ಕಾರ್ಯಕ್ರಮದ ನೆಪದಲ್ಲಿ ದಿಲ್ಲಿಗೆ ಬಂದಿದ್ದೇ ಎರಡು ಅಜೆಂಡಾ ಇಟ್ಟುಕೊಂಡು. ಮೊದಲನೆಯದ್ದು, ತಮ್ಮ ಬೆಂಬಲಿಗ ಸಂಸದರಿಗೆ ಮೋದಿ ಸಂಪುಟದಲ್ಲಿ ಮಂತ್ರಿ ಮಾಡಿಸುವುದು. ಎರಡನೆಯದ್ದು, ಆಪರೇಷನ್ ಕಮಲಕ್ಕೆ ಅಧಿಕೃತ ಸಮ್ಮತಿ ಪಡೆದುಕೊಂಡು ಬರುವುದು. ಆದರೆ ಇವೆರಡೂ ಈಡೇರಿಲ್ಲ ಮಾತ್ರವಲ್ಲ, ಇನ್ನುಮುಂದೆ ಬಿಜೆಪಿಯಲ್ಲಿ ನಿಮ್ಮ ಪ್ರಾಧಾನ್ಯತೆ ಸಾಕು ಎಂಬ ಸ್ಪಷ್ಟ ಸುಳಿವನ್ನೂ ಅಮಿತ್ ಶಾ ನೀಡಿ ಕಳಿಸಿದ್ದಾರೆ ಎನ್ನುತ್ತವೆ ದಿಲ್ಲಿ ಮೂಲಗಳು.

ಯಡಿಯೂರಪ್ಪನವರು, ತಮ್ಮ ಆಪ್ತರಾದ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಬಾಗಲಕೋಟೆಯ ಗದ್ದಿಗೌಡರ್, ಹಾವೇರಿ ಶಿವಕುಮಾರ್ ಉದಾಸಿ, ಕೊಪ್ಪಳದ ಕರಡಿ ಸಂಗಣ್ಣ ಮತ್ತು ತುಮಕೂರಿನ ಬಸವರಾಜು- ಇವರಲ್ಲಿ ಒಬ್ಬಿಬ್ಬರಿಗೆ ಸಚಿವ ಸ್ಥಾನ ಅಪೇಕ್ಷಿಸಿದ್ದರು! ಇದಕ್ಕೆ ತಣ್ಣೀರು ಎರಚಿದ ಹೈಕಮಾಂಡ್ ಯಡಿಯೂರಪ್ಪ ಬಣದಿಂದ ಹೊರಗಡೆ ಗುರುತಿಸಿಕೊಂಡಿರುವ ಪ್ರಹ್ಲಾದ್ ಜೋಷಿ, ಸದಾನಂದಗೌಡ, ಸುರೇಶ್ ಅಂಗಡಿಗೆ ಮಾತ್ರ ಸಚಿವಗಿರಿ ದಯಪಾಲಿಸಿದೆ. ರಾಜ್ಯದಿಂದ ಈ ಹೆಸರುಗಳನ್ನು ಆರೆಸ್ಸೆಸ್ ಪರವಾಗಿ ಶಿಫಾರಸ್ಸು ಮಾಡಿದ್ದೇ ಸಂತೋಷ್‍ಜೀ ಎಂಬ ಸತ್ಯ ಯಡಿಯೂರಪ್ಪನವರನ್ನು ಮತ್ತಷ್ಟು ದಿಗ್ಭ್ರಮೆ ಗೊಳಿಸಿರಲಿಕ್ಕೂ ಸಾಕು.

ಎಂಪಿ ಎಲೆಕ್ಷನ್ನಿಗೆ ಟಿಕೇಟ್ ಹಂಚಿಕೆಯಲ್ಲೂ ಯಡಿಯೂರಪ್ಪನವರ ಶಿಫಾರಸ್ಸಿಗೆ ಹೈಕಮಾಂಡ್ ಮಣೆ ಹಾಕರಲಿಲ್ಲ ಎನ್ನುವುದನ್ನು ನಾವಿಲ್ಲಿ ಸ್ಮರಿಸಿಕೊಳ್ಳಬಹುದು. ಅಲ್ಲೂ ತೇಜಸ್ವಿ ಸೂರ್ಯನಂತ ಸಂತೋಷ್‍ಜಿ ಶಿಷ್ಯರಿಗೇ ಮಣೆ ಹಾಕಲಾಗಿತ್ತು. ಶೋಭಾ ಕರಂದ್ಲಾಜೆ ಮತ್ತು ಕರಡಿ ಸಂಗಣ್ಣರಿಗೆ ಟಿಕೇಟು ತರಲು ಯಡಿಯೂರಪ್ಪ ಹರಸಾಹಸ ಪಡಬೇಕಾಗಿ ಬಂದಿತ್ತು. ಅಲ್ಲದೇ ಚಿಕ್ಕೋಡಿ ಕ್ಷೇತ್ರದಲ್ಲಿ ತಮ್ಮ ಬೆಂಬಲಿಗ ಶಾಸಕ ಉಮೇಶ ಕತ್ತಿಯ ಸಹೋದರ ರಮೇಶ ಕತ್ತಿಗೂ ಟಿಕೆಟ್ ತರುವಲ್ಲಿ ಯಡಿಯೂರಪ್ಪ ಮುಗ್ಗರಿಸಿದ್ದರು.

ಕುಂದಗೋಳ ಉಪ ಚುನಾವಣೆಯಲ್ಲೂ ಯಡಿಯೂರಪ್ಪ ಬೀಗ ಚಿಕ್ಕನಗೌಡರಿಗೆ ಟಿಕೆಟ್ ತಪ್ಪಿಸುವ ಯತ್ನ ಮಾಡಲಾಗಿತ್ತು. ಕೊನೆಗೂ ಯಡಿಯೂರಪ್ಪ ಟಿಕೆಟ್ ತಂದರಾದರೂ ಹುಬ್ಬಳ್ಳಿ-ಧಾರವಾಡದ ಬಿಜೆಪಿ ನಾಯಕರು ಚಿಕ್ಕನಗೌಡರ ಪರ ಮನಪೂರ್ವಕ ಪ್ರಚಾರ ಮಾಡದೇ ಯಡಿಯೂರಪ್ಪ ಬೀಗನಿಗೆ ಸೋಲು ತಂದಿಟ್ಟರು. ಚಿಂಚೋಳಿಯಲ್ಲಿ ತಮ್ಮ ಶಿಷ್ಯ, ತಮ್ಮ ಸಂಪುಟದಲ್ಲಿ ಸಚಿವ ಸ್ಥಾನವನ್ನೂ ನೀಡಿದ್ದ ಸುನೀಲ್ ವಲ್ಯಾಪುರೆಗೆ ಟಿಕೆಟ್ ಕೊಡಿಸುವ ಯಡಿಯೂರಪ್ಪರ ಯತ್ನಕ್ಕೆ ಹಿನ್ನಡೆ ಮಾಡಿದ ಸಂತೋಷ್‍ಜಿ ಬಣ ಅಲ್ಲಿ ವಲಸಿಗ ಉಮೇಶ ಜಾಧವರ ಮಗ ಅವಿನಾಶ ಜಾಧವ್‍ಗೆ ಟಿಕೆಟು ನೀಡಿತ್ತು.

ಗಾಯದ ಮೇಲೆ ಬರೆ ಎಂಬಂತೆ, ಈಗ ಆಪರೇಷನ್ ಕಮಲ ಮಾಡಬೇಡಿ, ಸರ್ಕಾರ ಕೆಡವಿ ಬಿಜೆಪಿ ಸರ್ಕಾರ ರಚಿಸುವ ದುಸ್ಸಾಹಸಕ್ಕೆ ಕೈ ಹಾಕಬೇಡಿ, ತೆಪ್ಪಗೆ ವಿರೋಧ ಪಕ್ಷವಾಗಿ ಕೆಲಸ ಮಾಡಿ ಎಂದು ಹೈಕಮಾಂಡ್ ಸೂಚನೆ ನೀಡಿದೆ ಎಂದು ಸ್ವತಃ ಯಡಿಯೂರಪ್ಪನವರೇ ಹೇಳಿಕೊಳ್ಳುತ್ತಿದ್ದಾರೆ. ಅಂದರೆ ಮುಖ್ಯಮಂತ್ರಿಯಾಗುವ ಯಡಿಯೂರಪ್ಪ ಕನಸಿಗೆ ಹೈಕಮಾಂಡ್ ಅಂತಿಮ ಮೊಳೆ ಹೊಡೆಯಿತೇ? ಎಂಬ ಅನುಮಾನ ಮೂಡದಿರದು.

ಲಿಂಗಾಯತ ಪ್ರಾಬಲ್ಯವಿರುವ ಉತ್ತರ ಕರ್ನಾಟಕಕ್ಕಷ್ಟೇ ಸೀಮಿತವಾಗಿದ್ದ ಬಿಜೆಪಿ ಈ ಚುನಾವಣೆಯಲ್ಲಿ ಮೋದಿ ಅಲೆಯಲ್ಲಿ ಒಕ್ಕಲಿಗ ಪ್ರಾಬಲ್ಯದ ಹಳೇ ಮೈಸೂರು ಪ್ರಾಂತ್ಯದಲ್ಲೂ ಕಾಂಗ್ರೆಸ್-ಜೆಡಿಎಸ್ ಹಿಂದಿಕ್ಕಿ ಅದ್ಭುತ ಯಶಸ್ಸು ಗಳಿಸಿರುವುದರಿಂದ ಇನ್ಮುಂದೆ ಕರ್ನಾಟಕದ ರಾಜಕಾರಣಕ್ಕೆ ಯಡಿಯೂರಪ್ಪ ತಮಗೆ ತೀರಾ ಅನಿವಾರ್ಯ ಆಗಲಾರರು ಎಂಬ ತರ್ಕಕ್ಕೆ ಬಿಜೆಪಿ ಹೈಕಮಾಂಡನ್ನು ಸಂತೋಷ್‍ಜಿ ಪಡೆ ತಂದು ನಿಲ್ಲಿಸಿದೆ ಎನ್ನುವುದು ಲೇಟೆಸ್ಟ್ ವರ್ತಮಾನ.

ಈ ಕ್ಷಣದಲ್ಲೇ ಆಪರೇಷನ್ ಕಮಲ ನಡೆಸಿ ಸರ್ಕಾರ ರಚಿಸಲು ಮುಂದಾದರೆ ಅನಿವಾರ್ಯವಾಗಿ ಯಡಿಯೂರಪ್ಪನವರನ್ನೇ ಸಿಎಂ ಮಾಡಬೇಕಾಗುತ್ತೆ. ಅದರ ಬದಲು ಅದನ್ನು ಕೊಂಚ ಮುಂದೂಡಿದರೆ, ಈಗ ಶುರುವಾಗಿರುವ ಮೋದಿ ಪರ್ವವನ್ನು ಕರ್ನಾಟಕದಲ್ಲಿ ಇನ್ನಷ್ಟೂ ಬಿಗಿಗೊಳಿಸುತ್ತಲೇ ಯಡಿಯೂರಪ್ಪನವರನ್ನು ರಾಜಕಾರಣದಲ್ಲಿ ಸಂಪೂರ್ಣ ಅಪ್ರಸ್ತುತಗೊಳಿಸಿದ ನಂತರ ತಮಗಿಷ್ಟ ಬಂದ ವ್ಯಕ್ತಿಯನ್ನು, (ಸಂತೋಷ್‍ರನ್ನು) ಸಿಎಂ ಮಾಡಬಹುದೆನ್ನುವ ಲೆಕ್ಕಾಚಾರವನ್ನು ಬಿಜೆಪಿ ಹೆಣೆದು ಕೂತಿದೆ ಎನ್ನಲಾಗುತ್ತಿದೆ. ಅಷ್ಟರೊಳಗೆ ಮೈತ್ರಿ ನಾಯಕರ ನಡುವಿನ ಕಿತ್ತಾಟ ತಾರಕಕ್ಕೇರಿ ಸರ್ಕಾರ ಬಿದ್ದರೆ, ಬಿಜೆಪಿಗೆ ಅಪಖ್ಯಾತಿಯೂ ತಟ್ಟುವುದಿಲ್ಲ ಎಂಬ ತರ್ಕ ಇಲ್ಲಿ ಕೆಲಸ ಮಾಡಿರುವ ಸಾಧ್ಯತೆಯೇ ಹೆಚ್ಚು.

ಮತ್ತೊಂದು ತರ್ಕದ ಪ್ರಕಾರ ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಬೀಳಿಸಿದ ಅಪಖ್ಯಾತಿ ಬಿಜೆಪಿ ಮೇಲೆ ಬಾರದಂತೆ, ಅದನ್ನು ಸಿದ್ದರಾಮಯ್ಯ ಮೇಲೆ ಆರೋಪಿಸಿ, ಒಳಗೊಳಗೇ ಆಪರೇಷನ್ ನಡೆಸುವ ತಂತ್ರಗಾರಿಕೆ ಭಾಗವಾಗಿ ಯಡಿಯೂರಪ್ಪನವರಿಂದ ಇಂಥಾ ಹೇಳಿಕೆ ಹೇಳಿಸಲಾಗಿದೆ ಎನ್ನಲಾಗುತ್ತಿದೆ. ಅದೇನೆ ಇರಲಿ, ದಿಲ್ಲಿಯಿಂದ ವಾಪಾಸು ಬಂದ ಯಡಿಯೂರಪ್ಪನವರ ಮುಖದಲ್ಲಿ ಮೊದಲಿದ್ದ ಹುಮ್ಮಸ್ಸು ನಾಪತ್ತೆಯಾಗಿರುವುದು ಮಾತ್ರ ಸತ್ಯ.

ಲೋಕಸಭಾ ಚುನಾವಣೆ ನಡೆದು ತಿಂಗಳೊಪ್ಪತ್ತಿನಲ್ಲೇ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಕಾಂಗ್ರೆಸ್ 509 ಸ್ಥಾನ ಗೆದ್ದು ಚೇತರಿಸಿಕೊಂಡಿದ್ದರೆ, 25 ಸಂಸದರನ್ನು ಗೆದ್ದುಕೊಂಡ ಖುಷಿಯಲ್ಲಿದ್ದ ಬಿಜೆಪಿ ಕೇವಲ 366 ಲೋಕಲ್ ಬಾಡಿ ಸ್ಥಾನಗಳಿಗಷ್ಟೇ ಸೀಮಿತಗೊಂಡು ಆಘಾತಕ್ಕೆ ತುತ್ತಾಗಿರೋದು ಕೂಡಾ ಯಡಿಯೂರಪ್ಪನವರ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಲಕ್ಷಣವಲ್ಲ ಎನ್ನಲಾಗುತ್ತಿದೆ.

ಇದನ್ನು ಓದಿ: ಲಿಂಗಾಯಿತರಿಗೆ ಬಿಜೆಪಿ ಕೊಟ್ಟಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...