Homeಕರ್ನಾಟಕಮಧ್ಯಂತರ ಚುನಾವಣೆಗೆ ಸಿದ್ದತೆ ಆರಂಭಿಸಿದ ಸಿದ್ದರಾಮಯ್ಯ, ವೀಕ್ಷಕರ ನೇಮಕ

ಮಧ್ಯಂತರ ಚುನಾವಣೆಗೆ ಸಿದ್ದತೆ ಆರಂಭಿಸಿದ ಸಿದ್ದರಾಮಯ್ಯ, ವೀಕ್ಷಕರ ನೇಮಕ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ‘ಆಪರೇಷನ್ ಕಮಲದ ಅನೈತಿಕ ಕೂಸು’. ಹಣ, ಆಮಿಷ, ಒತ್ತಡ ತಂತ್ರ ಉಪಯೋಗಿಸಿ ಶಾಸಕರನ್ನು ಕೊಂಡು, ವಾಮಮಾರ್ಗದ ಮೂಲಕ ಅಧಿಕಾರ ಹಿಡಿದಿರುವ ಯಡಿಯೂರಪ್ಪನವರ ಸರ್ಕಾರಕ್ಕೆ ಸ್ಪಷ್ಟ ಜನಾದೇಶವಿಲ್ಲ. ಈ ಸರ್ಕಾರ ಯಾವ ಕ್ಷಣದಲ್ಲಾದರೂ ಬಿದ್ದು, ಮಧ್ಯಂತರ ಚುನಾವಣೆ ಬರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.

ಗೋಕಾಕ, ಕಾಗವಾಡ ಮತ್ತು ಅಥಣಿ ಉಪಚುನಾವಣೆಗೆ ಸಂಬಂಧಿಸಿದಂತೆ ನಮ್ಮ‌ ಪಕ್ಷದಿಂದ ವೀಕ್ಷಕರನ್ನು ನೇಮಿಸಲಾಗಿದೆ. ಅವರು ಈ ಕ್ಷೇತ್ರಗಳ ಕಾರ್ಯಕರ್ತರು ಹಾಗೂ ಮುಖಂಡರನ್ನು ಭೇಟಿ ಮಾಡಿ, ಅವರ ಅಭಿಪ್ರಾಯ ಸಂಗ್ರಹಿಸಿ ನಮಗೆ ವರದಿ ಸಲ್ಲಿಸುತ್ತಾರೆ. ಆ ವರದಿಯ ಆಧಾರದ ಮೇಲೆ ನಾವು ನಮ್ಮ‌ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ ಎಂದು ಮಧ್ಯಂತರ ಚುನಾವಣೆಗೆ ಸಿದ್ದತೆ ನಡೆಸುತ್ತಿದ್ದಾರೆ.

ನಮ್ಮದು ಹೈಕಮಾಂಡ್ ಪಕ್ಷ ಅಲ್ಲ ಅಂದಿದ್ದ ಬಿಜೆಪಿ ನಾಯಕರು ಈಗ ಮಾಡುತ್ತಿರುವುದು ಏನು? ವಾರದಲ್ಲಿ 3 ದಿನ ದೆಹಲಿಗೆ ಓಡಿ ಹೋಗುತ್ತಿದ್ದಾರೆ. ಅಮಿತ್ ಶಾ ಅನುಮತಿಯಿಲ್ಲದೆ ಯಡಿಯೂರಪ್ಪನವರು ಏನೂ ಮಾಡದಂತಹ ಅಸಹಾಯಕ ಸ್ಥಿತಿಯಲ್ಲಿದ್ದಾರೆ. ಪ್ರತಿಯೊಂದಕ್ಕೂ ಹೈಕಮಾಂಡ್ ಒಪ್ಪಿಗೆ ಪಡೆಯಬೇಕಾಗಿದೆ. ಇದೇ ಬಿಜೆಪಿಗರ ನಿಜಬಣ್ಣ ಎಂದ ವ್ಯಂಗ್ಯವಾಡಿದ್ದಾರೆ.

ನಾವೀಗ ಅಧಿಕೃತ ವಿರೋಧ ಪಕ್ಷದ ಸ್ಥಾನದಲ್ಲಿದ್ದೇವೆ. ನಮ್ಮ ವಿರೋಧಿ ಕೋಮುವಾದಿ ಬಿಜೆಪಿ ಪಕ್ಷವೇ ಹೊರತು ಜೆಡಿಎಸ್ ಅಲ್ಲ. ನಾವ್ಯಾರು ಜೆಡಿಎಸ್ ಪಕ್ಷದವರ ಮೇಲೆ ಹಗೆ ಸಾಧಿಸುತ್ತಿಲ್ಲ. ಜಾತ್ಯಾತೀತ ಶಕ್ತಿಗೆ ಕೋಮುವಾದಿ ಶಕ್ತಿ ವಿರೋಧಿಯಾಗಿರುತ್ತದೆಯೇ ಹೊರತು, ಇನ್ನೊಂದು ಜಾತ್ಯಾತೀತ ಶಕ್ತಿಯಲ್ಲ ಎಂದು ಹೇಳುವ ಮೂಲಕ ಬಿಜೆಪಿಯನ್ನು ಟಾರ್ಗೆಟ್ ಮಾಡಲು ಸಿದ್ದರಾಮಯ್ಯನವರು ಮುಂದಾಗಿದ್ದಾರೆ.

ಯಡಿಯೂರಪ್ಪ, ಬಡವನ ಹಸಿವಿನ ಬಗ್ಗೆ ನೀವು ಅರಿಯದಷ್ಟು ನಿಮ್ಮ ಹೊಟ್ಟೆ ತುಂಬಿದೆಯೇ? ಅಥವಾ ನಿಮ್ಮ ಪಕ್ಷವು ಗಣ್ಯರ ಹಸಿವನ್ನು ಮಾತ್ರ ಪೂರೈಸುತ್ತದೆಯೇ? ಇಂದಿರಾ ಕ್ಯಾಂಟೀನ್ ಅನ್ನು ಮುಚ್ಚುವ ಯಾವುದೇ ಪ್ರಯತ್ನವನ್ನು ನಾವು ಎಂದಿಗೂ ಸಹಿಸುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ಅನ್ನಭಾಗ್ಯ ಮತ್ತು ಇಂದಿರಾ ಕ್ಯಾಂಟೀನ್ ನಂತಹ ಜನಪರವಾದ ಯೋಜನೆಗಳು ಮತ್ತು ನೀತಿಗಳನ್ನು ಕಡಿಮೆ ಮಾಡಲು ಅಥವಾ ನಾಶಮಾಡಲು ಬಿಜೆಪಿ ಸರ್ಕಾರ ಮುಂದಾಗುತ್ತಿದೆ. ನಮ್ಮ ಬೆದರಿಕೆಯ ನಂತರ ಅನ್ನ ಭಾಗ್ಯ ನಿಲ್ಲಿಸುವ ನಿರ್ಧಾರವನ್ನು ಹಿಂತೆಗೆದುಕೊಳ್ಳಲಾಯಿತು. ಇಂದಿರಾ ಕ್ಯಾಂಟೀನ್ ಬಗ್ಗೆಯೂ ಸಹ ನಮ್ಮ ನಿಲುವು ಭಿನ್ನವಾಗಿರುವುದಿಲ್ಲ. ಹಾಗಾಗಿ ಇಂದಿರಾ ಕ್ಯಾಂಟೀನ್ ಮುಚ್ಚಲು ಹೋದರೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿಯೇ ಪ್ರತಿದಿನ 3 ಲಕ್ಷಕ್ಕೂ ಹೆಚ್ಚು ಜನರಿಗೆ ಇಂದಿರಾ ಕ್ಯಾಂಟೀನ್ ಹೊಟ್ಟೆ ತುಂಬಿಸುತ್ತಿದೆ. ಸಾಮಾಜಿಕ ಮತ್ತು ಆರ್ಥಿಕ ಅನ್ಯಾಯಗಳಿಗೆ ಬಲಿಯಾದ ಅನೇಕ ಅಂಚಿನಲ್ಲಿರುವ ವರ್ಗಗಳ ಹಸಿವನ್ನು ನೀಗಿಸುವ ಕಾರ್ಯಕ್ರಮವಿದು. ಕ್ಯಾಂಟೀನ್‌ಗಳನ್ನು ಮುಚ್ಚುವ ಯಾವುದೇ ಪ್ರಯತ್ನವು ನಗರ ಬಡತನ ಮತ್ತು ಬಡ ಕುಟುಂಬಗಳ ಜೀವನೋಪಾಯವನ್ನು ಇನ್ನಷ್ಟು ಹದಗೆಡಿಸುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ ಬಜೆಟ್ 2.3 ಲಕ್ಷಕ್ಕಿಂತ ಹೆಚ್ಚಿನದಾಗಿದೆ. ಅದರಲ್ಲಿ ಯಡಿಯುರಪ್ಪನವರು ಕೇವಲ 300-400 ಕೋಟಿ ನೀಡುವ ಮೂಲಕ ಇಂದಿರಾ ಕ್ಯಾಂಟೀನ್ ನಡೆಯಲು ಅವಕಾಶ ಕಲ್ಪಿಸುವುದು ಕಷ್ಟವೇ ಎಂದು ಪ್ರಶ್ನಿಸಿರುವ ಸಿದ್ದರಾಮಯ್ಯನವರು ನಿರ್ಗತಿಕರಿಗೆ ಆಹಾರಕ್ಕಾಗಿ ಸಬ್ಸಿಡಿಯ ಅರ್ಹತೆ ಇಲ್ಲವೆನ್ನುವುದಾದರೆ, ಮುಂದುವರಿದು ವರ್ಗಗಳಿಗೂ ಸಹ ಸಬ್ಸಿಡಿಯನ್ನು ಕೊಡಬಾರದು ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...