Homeಸಾಮಾಜಿಕಇಟ್ಟಿಹರೆಜ್ಜೆ ನಮ್ಮ ಜನ, ಗೆದ್ದೇ ಗೆಲ್ಲುವೆವು ಮುಂದೊಂದು ದಿನ

ಇಟ್ಟಿಹರೆಜ್ಜೆ ನಮ್ಮ ಜನ, ಗೆದ್ದೇ ಗೆಲ್ಲುವೆವು ಮುಂದೊಂದು ದಿನ

- Advertisement -
- Advertisement -

ಕಳೆದ ಒಂದು ದಶಕದಿಂದ ಇಡೀ ರಾಜ್ಯವೇ ಬರಗಾಲದ ಬೇಗೆಯಲ್ಲಿ ನಲುಗುತ್ತಿದೆ. ಇದಕ್ಕೆ ಮರೆಮಲೆನಾಡು ಪ್ರದೇಶವಾಗಿರುವ ಹಾಸನ ಜಿಲ್ಲೆಯೇನೂ ಹೊರತಾಗಿಲ್ಲ. ಹಾಸನವನ್ನೂ ಒಳಗೊಂಡಂತೆ ಜಿಲ್ಲೆಯ 5 ತಾಲ್ಲೂಕುಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೋದ ವರ್ಷ ಬರ ಪೀಡಿತ ರಾಜ್ಯಗಳ ಪಟ್ಟಿಗೆ ಸೇರಿಸಿವೆ. ಕಳೆದೆರಡು ವರ್ಷಗಳಲ್ಲಿ 200ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡ ದಾರುಣತೆಯೂ ಜೊತೆಗೂಡಿದೆ. ಮಳೆ ಬಾರದಿದ್ದಾಗ ನೀರಿನ ಹಾಹಾಕಾರವಿರುವ ನಗರಪ್ರದೇಶಗಳಿಗೆ, ಹಳ್ಳಿಗಳಿಗೆ ಟ್ಯಾಂಕರ್‍ಗಳ ಮೂಲಕ ಒಂದಷ್ಟು ದಿನಗಳ ಕಾಲ ನೀರುಕೊಟ್ಟು ಕೈತೊಳೆದುಕೊಳ್ಳುತ್ತಿದ್ದ ಜಿಲ್ಲಾಡಳಿತ ಮತ್ತು ಜಿಲ್ಲಾಪಂಚಾಯತ್‍ಗಳ ಮಧ್ಯೆ ಸದ್ದಿಲ್ಲದೆ ಚಿಗುರೊಡೆದದ್ದು ಹಸಿರುಭೂಮಿ ಪ್ರತಿಷ್ಠಾನ.
ಪರಿಸರದ ಬಗೆಗಿನ ಕಾಳಜಿಯುಳ್ಳ ಪರಿಸರ ಸಂಬಂಧಿ ಚಟುವಟಿಕೆಗಳು, ಬರಹಗಳು, ಹೋರಾಟಗಳನ್ನು ಮಾಡುತ್ತಿದ್ದ ಹಾಸನದ ಸಮಾನ ಮನಸ್ಸುಗಳು 2017ರ ಏಪ್ರಿಲ್‍ನಲ್ಲಿ ಒಂದೆಡೆ ಸೇರಿ, ನೀರಿನ ಬಗೆಯ ಅಧ್ಯಯನದೊಂದಿಗೆ, ಬರದ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕುವಲ್ಲಿ ಮುಂದಡಿ ಇಟ್ಟವರು. ಅಮೀರ್‍ಖಾನ್ ಮಹಾರಾಷ್ಟ್ರದಲ್ಲಿ ಬರದ ವಿರುದ್ಧ ಪಾನೀ ಫೌಂಡೇಶನ್ ಮೂಲಕ ನಡೆಸುತ್ತಿರುವ ಕೆಲಸಗಳ ಸಾಕ್ಷ್ಯಚಿತ್ರ ‘ದಿ ಬ್ಯಾಟಲ್ ಎಗೆನೆಸ್ಟ್ ಡ್ರಾಟ್’ ವೀಕ್ಷಿಸಿ, ನಂತರ ನಡೆಸಿದ ಚರ್ಚೆ ಅಲ್ಲಿ ನೆರೆದಿದ್ದ ಸಾಹಿತಿಗಳು, ಹೋರಾಟಗಾರರು, ಅಧಿಕಾರಿಗಳು, ಪತ್ರಕರ್ತರು, ಪರಿಸರಪ್ರೇಮಿಗಳು, ಕಲಾವಿದರಲ್ಲಿ ಕ್ರಿಯಾಶೀಲತೆಯಿಂದ ನೀರಿನ ಕೆಲಸದಲ್ಲಿ ತೊಡಗಲು ‘ಹಸಿರುಭೂಮಿ ಪ್ರತಿಸ್ಠಾನ’ವನ್ನು ಸ್ಥಾಪಿಸುವಂತೆ ಮಾಡಿತು.
ಪರಿಸರ ಮತ್ತು ಅಂತರ್ಜಲದ ಬಗೆಗೆ ನಾಡಿನ ಖ್ಯಾತ ಜಲ ಮತ್ತು ಅಂತರ್ಜಲ ತಜ್ಞರ ಮೂಲಕ ತರಬೇತಿ ಪಡೆದ ಹಸಿರುಭೂಮಿ ಪ್ರತಿಸ್ಠಾನದ ತಂಡ, ಆನಂತರ ಹೂಳು ತುಂಬಿ ಬತ್ತಿಹೋದ ಕೆರೆಗಳಲ್ಲಿ ಅಂತರ್ಜಲ ಹುಡುಕಿ ಕೆರೆ-ಕಲ್ಯಾಣಿಗಳಲ್ಲಿ ಹೂಳೆತ್ತುವ ಕಾರ್ಯದಲ್ಲಿ ತೊಡಗಿಕೊಂಡಿದ್ದು ಈಗ ಇತಿಹಾಸ. 2017ರ ಮೇ 1ರ ಕಾರ್ಮಿಕ ದಿನದಂದು ಹಾಸನ ತಾಲ್ಲೂಕಿನ ದೊಡ್ಡಕೊಂಡಗುಳ ಗ್ರಾಮದಲ್ಲಿ ಗ್ರಾಮಸ್ಥರನ್ನು ಸೇರಿಸಿಕೊಂಡು ಹೋಯ್ಸಳರ ಕಾಲದ 2 ಕಲ್ಯಾಣಿಗಳನ್ನು ಪುನಶ್ಚೇತನಗೊಳಿಸುವ ಕೆಲಸವನ್ನು ಆರಂಭಿಸಿತು. ಹೂಳು ತುಂಬಿದ್ದ ಕಲ್ಯಾಣಿಗಳ ತಳಮಟ್ಟಕ್ಕೆ ಹೂಳು ತೆಗೆಯುತ್ತಿದ್ದಂತೆ ಜಲಚಿಲುಮೆ ಪಸರಿಸಿತು. ಆನಂತರ ಅದೇ ಊರಿನ ಕೆರೆಯನ್ನೂ ದಾನಿಗಳ ನೆರವಿನಿಂದ ಸುಮಾರು 6 ಲಕ್ಷ ಹಣವನ್ನು ವಿನಿಯೋಗಿಸಿ 20 ದಿನಗಳಲ್ಲಿ ಯಮತ್ರಗಳ ನೆರವಿನಿಂದ ಪುನಶ್ಚೇತನಗೊಳಿಸಿ ದಾಖಲೆ ಬರೆಯಿತು. ಆರಂಭದ ಮೊದಲನೆಯ ಪ್ರಯೋಗ ಯಶಸ್ಸು ಕಂಡ ಹುಮ್ಮಸ್ಸಿನಲ್ಲಿ ಮುನ್ನಡೆದ ತಂಡ ಹಾಸನ, ಚನ್ನರಾಯಪಟ್ಟಣ, ಅರಕಲಗೂಡು, ಬೇಲೂರು ತಾಲ್ಲೂಕುಗಳ ಹಲವಾರು ಹಳ್ಳಿಗಳಲ್ಲಿ ಸ್ಥಳೀಯರ ನೆರವಿನೊಂದಿಗೆ ತಂಡ ಕಟ್ಟಿ, ಜಲದ ಜಾಡನ್ನು ಹಿಡಿದು 35ಕ್ಕೂ ಹೆಚ್ಚಿನ ಕಲ್ಯಾಣಿಗಳನ್ನು ಪುನಶ್ಚೇತನಗೊಳಿಸಿತು. ಹಾಗೂ ದಾನಿಗಳು, ಖಾಸಗಿ ಸಂಸ್ಥೆಗಳ ಸಾಮಾಜಿಕ ನಿಧಿಯ ನೆರವಿನೊಂದಿಗೆ 5ಕೆರೆಗಳನ್ನು 10ಅಡಿಗಳಷ್ಟು ಆಳಕ್ಕೆ ಹೂಳು ತೆಗೆದು ಪುನಶ್ಚೇತನಗೊಳಿಸುವಲ್ಲಿ ಹಸಿರುಭೂಮಿ ಪ್ರತಿಸ್ಠಾನ ಯಶಸ್ಸು ಕಂಡಿದೆ.
ಮೊದಲ ಯಶಸ್ಸು ಕಂಡ ದೊಡ್ಡಕೊಂಡಗುಳ ಕೆರೆಗೆ ನೀರು ಭರ್ತಿಯಾಗಿ ಸುತ್ತಮುತ್ತಲಿನ ಜಮೀನಿಗೆ, ಜಲಚರಗಳಿಗೆ, ಪ್ರಾಣಿ ಪಕ್ಷಿಗಳಿಗೆ, ಜನಜಾನುವಾರುಗಳಿಗೆ ಕುಡಿಯುವ ನೀರಿನ ಬವಣೆಯನ್ನು ನೀಗಿಸಿದೆ. ಅಲ್ಲದೆ ತೆರೆದ ಬಾವಿಗಳು, ಕೊಳವೆಬಾವಿಗಳು ಅಂತರ್ಜಲ ವೃದ್ಧಿಸಿದ ಕಾರಣ ಭರ್ತಿಯಾಗಿವೆ. ಪ್ರತಿಷ್ಠಾನವು ಹಲವು ಗ್ರಾವiಗಳಲ್ಲಿ ಗ್ರಾಮ ಸ್ವರಾಜ್ ಸಮಿತಿಯನ್ನು ರಚನೆ ಮಾಡಿ ಇಂತಹ ಕೆಲಸಗಳಲ್ಲಿ ತೊಡಗಿಸಲು ಶ್ರಮಿಸುತ್ತಿದೆ. ದೊಡ್ಡಕೊಂಡಗುಳ ಗ್ರಾಮಸ್ವರಾಜ್ ಸಮಿತಿಯು ಹೋದ ವರ್ಷ ಕೆರೆಗೆ 15000 ಮೀನಿನ ಮರಿಗಳನ್ನು ಬಿಟ್ಟಿದ್ದು, ಕೆರೆಯನ್ನು ಸ್ವಚ್ಛವಾಗಿಸಿ, ಮೀನುಗಳ ಪೋಷಣೆ ಮಾಡಿದ್ದರ ಫಲವಾಗಿ ಮೀನುಗಳು ಅಭಿವೃದ್ಧಿಗೊಂಡು ಕಳೆದ ತಿಂಗಳು ಈ ಕೆರೆಯಲ್ಲಿ ಮೀನಗಳನ್ನು ಹಿಡಿದು ಕನಿಷ್ಠ ಬೆಲೆಗೆ ಮಾರಾಟ ಮಾಡಿದ್ದು ಒಂದು ಸಂತೋಷದ ವಿಚಾರ. ಈಗ 350 ಕೆ.ಜಿ ಇಂದ 35000 ರೂ ಆದಾಯ ತೊರೆತಿದೆ. ಮುಂದೆ ಒಂದೂವರೆ ಲಕ್ಷ ಆದಾಯದ ನಿರೀಕ್ಷೆಯಿದೆ. ಈ ಹಣವನ್ನು ಸಮಿತಿಯವರು ಗ್ರಾಮದ ಅಭಿವೃದ್ಧಿ ಕಾರ್ಯಗಳಿಗೆ ಬಳೆಸಿಕೊಳ್ಳುವುದಾಗಿ ನಿರ್ಧರಿಸಿದ್ದಾರೆ. ಸಮಿತಿಯು ಪ್ರತಿಷ್ಠಾನದೊಂದಿಗೆ ಕೈ ಜೋಡಿಸಿ ಶಾಲಾವರಣ, ಕೆರೆಯ ಸುತ್ತಮುತ್ತ, ಗುಂಡುತೋಪಿನಲ್ಲಿ ಗಿಡಗಳನ್ನು ನೆಟ್ಟು ಪೋಷಿಸುತ್ತಿದ್ದು ಇದೂ ಕೂಡ ಗ್ರಾಮಕ್ಕೆ ಆದಾಯದ ಮೂಲವಾಗಿದ್ದು ಗ್ರಾಮವು ಸ್ವಾವಲಂಬಿ ಹಾಗೂ ಮಾದರಿ ಗ್ರಾವiವಾಗಿ ಪರಿವರ್ತನೆಗೊಳ್ಳಲು ಹಸಿರುಭೂಮಿ ಪ್ರತಿಷ್ಠಾನ ಅಹರ್ನಿಶಿ ಶ್ರಮಿಸುತ್ತಿದೆ.
ಹಾಸನದ ಉಪವಿಭಾಗಾಧಿಕಾರಿಗಳಾದ ಡಾ. ಎಚ್.ಎಲ್.ನಾಗರಾಜ್, ಚಿಂತಕರಾದ ರೂಪ ಹಾಸನ, ಪತ್ರಕರ್ತರಾದ ಆರ್.ಪಿ.ವೆಂಕಟೇಶಮೂರ್ತಿ, ಪರಿಸರಪ್ರಿಯ ಚ.ನಾ.ಅಶೋಕ್, ಇಂಜಿನಿಯರ್ ಸುಬ್ಬಸ್ವಾಮಿ, ವೆಂಕಟೇಗೌಡ, ದಾನಿಗಳಾದ ಡಾ.ಸಾವಿತ್ರಿ, ನಿವೃತ್ತ ಉಪನ್ಯಾಸಕರಾದ ಶಿವಶಂಕರಪ್ಪ, ಅಪ್ಪಾಜಿಗೌಡ, ಹಿರಿಯರಾದ ಪುಟ್ಟಯ್ಯ, ಸದ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ರಾಜೀವೇಗೌಡ, ಅಹರ್ನಿಶಿ ಪ್ರತಿಷ್ಠಾನದ ಕೆಲಸದಲ್ಲಿ ತೊಡಗಿರುವ ಡಾ.ಮಂಜುನಾಥ್, ಮಂಜುನಾಥ್ ಮೋರೆ, ಅಹಮದ್, ಸೌಭಾಗ್ಯ, ಬಿ.ಎಸ್.ದೇಸಾಯಿ, ತಿಮ್ಮೇಶ್‍ಪ್ರಭು, ಚಿನ್ನೇನಹಳ್ಳಿಸ್ವಾಮಿ, ಎಸ್.ಎಸ್.ಪಾಷಾ, ಪ್ರಸನ್ನ….. ಹೀಗೆ ಹಲವು ಪ್ರಜ್ಞಾವಂತ ಸದಸ್ಯರು ತಮ್ಮ ಉಳಿದೆಲ್ಲ ಕಾರ್ಯಗಳು, ಭಾಷಣಗಳನ್ನು ಬಿಟ್ಟು ಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದರ ಫಲವಾಗಿ ಇಂದು ಹಾಸನ ಜಿಲ್ಲೆಯ ಕೆಲವು ಹಳ್ಳಿಗಳು ಬರದ ಮಧ್ಯೆಯೂ ಜೀವಂತವಾಗಿ ಉಸಿರಾಡಲು ಸಾಧ್ಯವಾಗಿದೆ. ಇಂತಹ ಸ್ಫೂರ್ತಿ ನಾಡಿನ ಉದ್ದಕ್ಕೂ ಹಬ್ಬಲಿ, ರೈತರ ಬದುಕು ಹಸನಾಗಲಿ ಎಂಬುದು ನಮ್ಮ ಹಾರೈಕೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...