Homeಅಂಕಣಗಳುಇದು ಲವ್ ಜಿಹಾದ್ ಅಲ್ಲವಂತೆ

ಇದು ಲವ್ ಜಿಹಾದ್ ಅಲ್ಲವಂತೆ

- Advertisement -
- Advertisement -
ಇಸ್ಮತ್ ಪಜೀರ್ |
ಮೊನ್ನೆ ಪುಲ್ವಾಮಾ ಭಯೋತ್ಪಾದಕ ದಾಳಿ ನಡೆದು ಮೂರನೇ ದಿನಕ್ಕೆ ಅಂದರೆ ದೇಶಕ್ಕೆ ದೇಶವೇ ಸೂತಕದ ಛಾಯೆಯಲ್ಲಿದ್ದಾಗ ಉತ್ತರ ಪ್ರದೇಶದಲ್ಲೊಂದು ಹೈ ಪ್ರೊಫೈಲ್ ಮದುವೆ ನಡೆಯಿತು.
ಮದುವೆ ಯಾರದ್ದು ಗೊತ್ತೇ…?
ಉತ್ತರ ಪ್ರದೇಶದ ಮಂತ್ರಿ ರಾಮಲಾಲ್ ರ ಸೊಸೆ ಶ್ರೇಯಾ ಗುಪ್ತಾಳದ್ದು.. ವರನ್ಯಾರು ಗೊತ್ತೇ…? ಉತ್ತರ ಪ್ರದೇಶದ ಮುಖ್ಯ ಮಂತ್ರಿ ಯೋಗಿಯ ತವರು ಕ್ಷೇತ್ರ ಗೋರಖ್ ಪುರದ ಶ್ರೀಮಂತ ಯುವಕ ಫೈಝಾನ್ ಕರೀಂ..! ಈ ಮದುವೆಯೇನು ಕದ್ದು ಮುಚ್ಚಿಯೋ.. ಗಂಡು ಹೆಣ್ಣು ಪರಾರಿಯಾಗಿಯೋ ನಡೆದದ್ದಲ್ಲ. ಇದು ಲವ್ ಕಂ ಅರೇಂಜ್ಡ್ ಮ್ಯಾರೇಜ್. ಅಂದರೆ ಶ್ರೇಯಾ ಗುಪ್ತಾ ಮತ್ತು ಫೈಝಾನ್ ಕರೀಂ ಮಧ್ಯೆ ಪ್ರೇಮಾಂಕುರವಾಯಿತು.

ಅವರು ಬಾಳ ಸಂಗಾತಿಗಳಾಗಲು ನಿರ್ಧರಿಸಿದರು. ಹಿರಿಯರು ಒಪ್ಪಿ ಮದುವೆ ಮಾಡಿ ಕೊಟ್ಟರು. ಒಂದು ವೇಳೆ ಹಿರಿಯರ ವಿರೋಧ ಈ ಮದುವೆಗೆ ಇದ್ದಿದ್ದರೆ  ಅಷ್ಟೊಂದು ಅದ್ದೂರಿ ಮದುವೆ ನಡೆಯುತ್ತಿರಲಿಲ್ಲ ಎಂಬುವುದು ಕಾಮನ್‌ ಸೆನ್ಸ್ ಗೆ ನಿಲುಕುವ ವಿಚಾರ. ಆ ಮದುವೆಯಲ್ಲಿ ಬಿಜೆಪಿಯ ಅತಿರಥ ಮಹಾರಥ ನಾಯಕರೆಲ್ಲಾ ಭಾಗವಹಿಸಿದ್ದರು. ಬಿಜೆಪಿ ಪಕ್ಷದ ಮಾತ್ರವಲ್ಲದೇ ವಿವಿಧ ರಾಜ್ಯಗಳ ಬಿಜೆಪಿ ಸರಕಾರಗಳ ಅಧಿಕಾರಸ್ಥರೂ ಭಾಗವಹಿಸಿದ್ದರು. ವಧೂ ವರರನ್ನು ಆಶೀರ್ವದಿಸುವುದರಲ್ಲಿ ಆರೆಸ್ಸೆಸ್ ಮುಖಂಡರೂ ಹಿಂದೆ ಬೀಳಲಿಲ್ಲ. ಯಾಕೆಂದರೆ ಅವರೀರ್ವರೂ ಮದುವೆ ಪ್ರಾಯವಾದವರೇ…

ಅವರ ಬದುಕು ಅವರ ವೈಯಕ್ತಿಕ ನಿರ್ಧಾರ. ಅವರ ಕುಟಂಬಕ್ಕೂ ಸಮ್ಮತಿಯಿದೆ. ಅದರಲ್ಲೇನು ತಪ್ಪು… ಅಲ್ವಾ…?
ಹೌದು, ತಪ್ಪೇನಿಲ್ಲ. ಹೇಳಿ ಕೇಳಿ ಲವ್ ಅಂದರೆ ಮೊದಲು ಒಂದು‌ ಆಕರ್ಷಣೆ… ಆ ಬಳಿಕ ಸ್ನೇಹ…‌ಆ ಬಳಿಕ ಆತ್ಮೀಯತೆ…..ಆ ಬಳಿಕ ಸುಖ ದುಃಖ ಹಂಚಿಕೊಳ್ಳುವಿಕೆ… ಮತ್ತೆ ಒಂದು ಗಟ್ಟಿ ನಿರ್ಧಾರಕ್ಕೆ ಬಂದರೆ ಮದುವೆ. ಇದು ಭಾರತದಲ್ಲಿ ಉಳ್ಳವರಿಗೆ, ಅಧಿಕಾರಸ್ಥರಿಗೆ ಅನ್ವಯವಾಗುವ ಅಲಖಿತ ಕಾನೂನು. ಆದರೆ… ಬಡ, ಮಧ್ಯಮ ವರ್ಗದವರಾದರೆ, ಅಧಿಕಾರಸ್ಥರಲ್ಲದಿದ್ದರೆ ಅಲ್ಲಿ ಜಾತಿ ಧರ್ಮಗಳ ಹಸ್ತಕ್ಷೇಪ ಇರಲೇಬೇಕು. ಯಾಕೆಂದರೆ ಅದೊಂದು ಮತ ಕೊಯ್ಲು ಮಾಡಲು ಸಾಧ್ಯವಾಗಬಲ್ಲ ರಾಜಕೀಯ ಇಶ್ಯೂ….
ಉಳ್ಳವರಾದರೆ, ಅಧಿಕಾರಸ್ಥರಾದರೆ ಲವ್ ಮ್ಯಾರೇಜ್….
ಬಡವರು, ಮಧ್ಯಮ ವರ್ಗಿಗಳಾದರೆ ಲವ್ ಜಿಹಾದ್…
ಈ ಪ್ರಕ್ರಿಯೆ ಇದು ಮೊದಲೂ ಅಲ್ಲ, ಕೊನೆಯೂ ಅಲ್ಲ…
ಅಡ್ವಾಣಿ, ಮುರಳೀ ಮನೋಹರ ಜೋಶಿ, ಅಶೋಕ್ ಸಿಂಘಾಲ್, ಮುಕ್ತಾರ್ ಅಬ್ಬಾಸ್ ನಖ್ವಿ, ಉಮರ್ ಅಬ್ದುಲ್ಲಾ, ಶಾನವಾಝ್ ಹುಸೇನ್, ಬಾಳಾ ಠಾಕ್ರೆ, ಸುಬ್ರಹ್ಮಣ್ಯ ಸ್ವಾಮಿ… ಹೀಗೆ ಇದಕ್ಕೊಂದು ದೊಡ್ಡ ಪರಂಪರೆಯೇ ಇದೆ. ಇದು ಮುಂದುವರಿಯುತ್ತದೆ ಸಹೋದರರೇ…ನಾವು ಮಾತ್ರ ಜಾತಿ, ಧರ್ಮ ಎಂದು ಕಚ್ಚಾಡುತ್ತಿರೋಣ…
(ಕೃಪೆ : ರಿಯಲ್ ಫ್ಲೇವರ್ ನ್ಯೂಸ್)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....