Homeಸಿನಿಮಾಕ್ರೀಡೆಇದು ವಿಶ್ವಕಪ್ ಅಥವಾ ಮಳೆಕಪ್: ಮಳೆಗಾಲದಲ್ಲಿ ವಿಶ್ವಕಪ್ ಟೂರ್ನಿಯಿಡಲು ಕಾರಣವೇನು?

ಇದು ವಿಶ್ವಕಪ್ ಅಥವಾ ಮಳೆಕಪ್: ಮಳೆಗಾಲದಲ್ಲಿ ವಿಶ್ವಕಪ್ ಟೂರ್ನಿಯಿಡಲು ಕಾರಣವೇನು?

- Advertisement -
- Advertisement -

| ನಾನುಗೌರಿ ಡೆಸ್ಕ್ |

ಟಾಸ್ ಗೆದ್ದ ಶ್ರೀಲಂಕಾ ತಂಡ ಮೊದಲು ಈಜಲು ಆಯ್ಕೆ ಮಾಡಿಕೊಂಡಿದೆ. ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಕುರಿತು ಅತ್ಯಂತ ಹೆಚ್ಚು ಷೇರ್ ಆದ ಟ್ರೋಲ್ ಇದು. ಇದೇ ಜೂನ್ 11 ರಂದು ಭಾರೀ ಮಳೆಯಿಂದಾಗಿ ಕ್ರಿಕೆಟ್ ಅಂಗಳದ ತುಂಬ ನೀರು ತುಂಬಿದ್ದರಿಂದ ಮಾಡಿದ ವ್ಯಂಗ್ಯ ಇದಾಗಿತ್ತು.

ಆಡಿದ ನಾಲ್ಕು ಪಂದ್ಯ ಗೆದ್ದು ಮಳೆ ಮೊದಲ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್ ಎರಡನೇಯ ಸ್ಥಾನಕ್ಕೆ ಕುಸಿದಿದೆ ಎಂಬ ಜೋಕ್ ಸಹ ಮಾಡಲಾಯ್ತು. ಒಟ್ಟು ಇದುವರೆಗೆ ವಿಶ್ವಕಪ್‍ನಲ್ಲಿ 17 ಪಂದ್ಯಗಳು ನಡೆದರೆ ಅದರಲ್ಲಿ ಬರೋಬ್ಬರಿ 4 ಪಂದ್ಯಗಳು ಮಳೆಯಿಂದಾಗಿ ರದ್ದಾಗಿವೆ. ಇಂದು ಭಾರತ ಮತ್ತು ನ್ಯೂಜಿಲೆಂಡ್ ಘಟಾನುಘಟಿಗಳ ನಡುವೆ ನಡೆಯಬೇಕಿದ್ದ ಪಂದ್ಯ ಸಹ ಮಳೆಯಿಂದಾಗಿ ರದ್ದಾಗುವ ಅಪಾಯದಲ್ಲಿದೆ.

ವಿಶ್ವಕಪ್ ಟೂರ್ನಿಗೆ ತನ್ನದೇ ಮಹತ್ವವಿದೆ. ಎಲ್ಲಾ ದೇಶಗಳು ವಿಶ್ವಕಪ್ ಗೆದ್ದ ಚಾಂಪಿಯನ್ ಆಗಬೇಕೆಂದು ಹಂಬಲಿಸುತ್ತಿರುತ್ತಾರೆ. ಪ್ರತಿ ಪಂದ್ಯವೂ ಅವರಿಗೇ ಮಹತ್ವದ್ದೆ. ಆದರೆ ಮಳೆಗೆ ಇದ್ಯಾವುದರ ಪರಿವೇಯು ಇಲ್ಲದೇ ಮನಬಂದಂತೆ ಸುರಿದ ಆಟಗಾರರ ಕನಸು ತೊಯ್ದುಬಿಡುತ್ತಿದೆ.

ಇನ್ನು ಅಭಿಮಾನಿಗಳಂತೂ ಎಷ್ಟೋ ದಿನ ಮೊದಲೇ ವಿಶ್ವಕಪ್ ಪಂದ್ಯ ನೋಡಲು ಟಿಕೇಟ್ ಬುಕ್ ಮಾಡಿ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದವರೂ ತೀವ್ರ ನಿರಾಶೆ ಕಾಡುತ್ತಿದೆ. ದುಡ್ಡು ಕೊಟ್ಟು, ರಜೆಹಾಕಿ ಕ್ರಿಕೆಟ್ ಅಂಗಳಕ್ಕೆ ಹೋದರೆ ಮಳೆಯಲ್ಲಿ ನೆನದು ಕಾದು ಸುಸ್ತಾಗಿ ಭಾರವಾದ ಹೆಜ್ಜೆಗಳನ್ನಿಟ್ಟು ವಾಪಸ್ ಮನೆಗೆ ಧಾವಿಸಬೇಕಾಗ ಪರಿಸ್ಥಿತಿ ಬಂದಿದೆ.

ಯಾಕೀಗೆ ಆಗುತ್ತಿದೆ? ಈ ಮುಂಚೆ ಆಗದ್ದು ವಿಶ್ವಕಪ್ ನಡೆಯುವಾಗಲೇ ಹೀಗೇಕೆ ಇಷ್ಟು ಮಳೆ ಸುರಿಯುತ್ತಿದೆ? ಪ್ರಶ್ನೆಯಲ್ಲಿ ತಪ್ಪಿದೆ. ಅಂದರೆ ಮಳೆ ಸುರಿಯುವಾಗಲೇ ಏಕೆ ವಿಶ್ವಕಪ್ ಟೂರ್ನಿ ನಡೆಯುತ್ತಿದೆ? ಎಂಬುದು ಅಸಲಿ ಪ್ರಶ್ನೆಯಾಗಬೇಕಿದೆ. ಅಂದರೆ ಮಳೆಗಾಲದಲ್ಲಿ ಟೂರ್ನಿಮೆಂಟ್ ಆಯೋಜಿಸಿದ್ದು ಏಕೆ?

ಹೌದು ಕಳೆದೆರೆಡು ವಿಶ್ವಕಪ್ ಟೂರ್ನಿಗಳನ್ನು ನೋಡಿ ಬರೋಣ. ಭಾರತ ಚಾಂಪಿಯನ್ ಆದ 2011ರಲ್ಲಿ ಫೆಬ್ರವರಿ-ಮಾರ್ಚ್ ನಲ್ಲಿ ಟೂರ್ನಿಮೆಂಟ್ ನಡೆದಿದ್ದರೆ, 2015ರಲ್ಲಿಯೂ ಸಹ ಫೆಬ್ರವರಿ-ಮಾರ್ಚ್ ತಿಂಗಳಿನಲ್ಲಿಯೇ ಟೂರ್ನಿಮೆಂಟ್ ಸರಾಗವಾಗಿ ನಡೆದಿತ್ತು. ಆದರೆ ಈ ಬಾರಿ ಜೂನ್-ಜುಲೈನಲ್ಲಿ ಏಕೆ ಆಯೋಜಿಸಲಾಗಿದೆ ಗೊತ್ತೇ?

ತುಂಬಾ ತಲೆಕೆಡಿಸಿಕೊಳ್ಳುವುದು ಬೇಡ. ಈ ವರ್ಷ ಫೆಬ್ರವರಿ- ಮಾರ್ಚ್‍ನಲ್ಲಿ ಏನು ನಡೆಯಿತು ನೋಡಿ.. ಏನು ಘನಂದಾರಿ ಕೆಲಸವೇನಿರಲಿಲ್ಲ ಬದಲಿಗೆ ಐಪಿಎಲ್ ಎಂದ ಬಂಡವಾಳಿಗರ ಖಾಸಗಿ ಟೂರ್ನಿಮೆಂಟ್ ನಡಿದಿತ್ತು. ಹಾಗಾಗಿ ವಿಶ್ವಕಪ್ ಎಂಬ ಮಹತ್ವದ ಟೂರ್ನಿಯನ್ನೇ ಮುಂದೂಡಲಾಗಿದೆ. ಐಪಿಎಲ್ ಎಂಬುದು ಅಷ್ಟರಮಟ್ಟಿಗೆ ಬೆಳೆದುನಿಂತಿದೆ.

ಮಾರ್ಚ್ ಏಪ್ರಿಲ್ ನಲ್ಲಿ ಐಪಿಎಲ್ ಪಂದ್ಯಗಳು ನಡೆದ ಕಾರಣ ವಿಶ್ವಕಪ್ ಈ ಮಳೆಕಪ್ ಆಗಿದೆ ಅಷ್ಟೇ. ಮಳೆ ಈ ಮಟ್ಟಗೆ ಛಂಡಿ ಹಿಡಿದಿರುವುದು ನೋಡಿದರೆ ಮುಂದಿನ ಹಲವು ಪಂದ್ಯಗಳು ಸಹ ರದ್ದಾಗಬಹುದು. ಆಗ ಕ್ರಿಕೆಟ್ ಬದಲಿಗೆ ಈಜು ಸ್ಪರ್ಧೆಯೇ ನಡೆಯಬೇಕಾಗುತ್ತದೆ ಅಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...