Homeಸಿನಿಮಾಕ್ರೀಡೆಇದು ವಿಶ್ವಕಪ್ ಅಥವಾ ಮಳೆಕಪ್: ಮಳೆಗಾಲದಲ್ಲಿ ವಿಶ್ವಕಪ್ ಟೂರ್ನಿಯಿಡಲು ಕಾರಣವೇನು?

ಇದು ವಿಶ್ವಕಪ್ ಅಥವಾ ಮಳೆಕಪ್: ಮಳೆಗಾಲದಲ್ಲಿ ವಿಶ್ವಕಪ್ ಟೂರ್ನಿಯಿಡಲು ಕಾರಣವೇನು?

- Advertisement -
- Advertisement -

| ನಾನುಗೌರಿ ಡೆಸ್ಕ್ |

ಟಾಸ್ ಗೆದ್ದ ಶ್ರೀಲಂಕಾ ತಂಡ ಮೊದಲು ಈಜಲು ಆಯ್ಕೆ ಮಾಡಿಕೊಂಡಿದೆ. ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಕುರಿತು ಅತ್ಯಂತ ಹೆಚ್ಚು ಷೇರ್ ಆದ ಟ್ರೋಲ್ ಇದು. ಇದೇ ಜೂನ್ 11 ರಂದು ಭಾರೀ ಮಳೆಯಿಂದಾಗಿ ಕ್ರಿಕೆಟ್ ಅಂಗಳದ ತುಂಬ ನೀರು ತುಂಬಿದ್ದರಿಂದ ಮಾಡಿದ ವ್ಯಂಗ್ಯ ಇದಾಗಿತ್ತು.

ಆಡಿದ ನಾಲ್ಕು ಪಂದ್ಯ ಗೆದ್ದು ಮಳೆ ಮೊದಲ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್ ಎರಡನೇಯ ಸ್ಥಾನಕ್ಕೆ ಕುಸಿದಿದೆ ಎಂಬ ಜೋಕ್ ಸಹ ಮಾಡಲಾಯ್ತು. ಒಟ್ಟು ಇದುವರೆಗೆ ವಿಶ್ವಕಪ್‍ನಲ್ಲಿ 17 ಪಂದ್ಯಗಳು ನಡೆದರೆ ಅದರಲ್ಲಿ ಬರೋಬ್ಬರಿ 4 ಪಂದ್ಯಗಳು ಮಳೆಯಿಂದಾಗಿ ರದ್ದಾಗಿವೆ. ಇಂದು ಭಾರತ ಮತ್ತು ನ್ಯೂಜಿಲೆಂಡ್ ಘಟಾನುಘಟಿಗಳ ನಡುವೆ ನಡೆಯಬೇಕಿದ್ದ ಪಂದ್ಯ ಸಹ ಮಳೆಯಿಂದಾಗಿ ರದ್ದಾಗುವ ಅಪಾಯದಲ್ಲಿದೆ.

ವಿಶ್ವಕಪ್ ಟೂರ್ನಿಗೆ ತನ್ನದೇ ಮಹತ್ವವಿದೆ. ಎಲ್ಲಾ ದೇಶಗಳು ವಿಶ್ವಕಪ್ ಗೆದ್ದ ಚಾಂಪಿಯನ್ ಆಗಬೇಕೆಂದು ಹಂಬಲಿಸುತ್ತಿರುತ್ತಾರೆ. ಪ್ರತಿ ಪಂದ್ಯವೂ ಅವರಿಗೇ ಮಹತ್ವದ್ದೆ. ಆದರೆ ಮಳೆಗೆ ಇದ್ಯಾವುದರ ಪರಿವೇಯು ಇಲ್ಲದೇ ಮನಬಂದಂತೆ ಸುರಿದ ಆಟಗಾರರ ಕನಸು ತೊಯ್ದುಬಿಡುತ್ತಿದೆ.

ಇನ್ನು ಅಭಿಮಾನಿಗಳಂತೂ ಎಷ್ಟೋ ದಿನ ಮೊದಲೇ ವಿಶ್ವಕಪ್ ಪಂದ್ಯ ನೋಡಲು ಟಿಕೇಟ್ ಬುಕ್ ಮಾಡಿ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದವರೂ ತೀವ್ರ ನಿರಾಶೆ ಕಾಡುತ್ತಿದೆ. ದುಡ್ಡು ಕೊಟ್ಟು, ರಜೆಹಾಕಿ ಕ್ರಿಕೆಟ್ ಅಂಗಳಕ್ಕೆ ಹೋದರೆ ಮಳೆಯಲ್ಲಿ ನೆನದು ಕಾದು ಸುಸ್ತಾಗಿ ಭಾರವಾದ ಹೆಜ್ಜೆಗಳನ್ನಿಟ್ಟು ವಾಪಸ್ ಮನೆಗೆ ಧಾವಿಸಬೇಕಾಗ ಪರಿಸ್ಥಿತಿ ಬಂದಿದೆ.

ಯಾಕೀಗೆ ಆಗುತ್ತಿದೆ? ಈ ಮುಂಚೆ ಆಗದ್ದು ವಿಶ್ವಕಪ್ ನಡೆಯುವಾಗಲೇ ಹೀಗೇಕೆ ಇಷ್ಟು ಮಳೆ ಸುರಿಯುತ್ತಿದೆ? ಪ್ರಶ್ನೆಯಲ್ಲಿ ತಪ್ಪಿದೆ. ಅಂದರೆ ಮಳೆ ಸುರಿಯುವಾಗಲೇ ಏಕೆ ವಿಶ್ವಕಪ್ ಟೂರ್ನಿ ನಡೆಯುತ್ತಿದೆ? ಎಂಬುದು ಅಸಲಿ ಪ್ರಶ್ನೆಯಾಗಬೇಕಿದೆ. ಅಂದರೆ ಮಳೆಗಾಲದಲ್ಲಿ ಟೂರ್ನಿಮೆಂಟ್ ಆಯೋಜಿಸಿದ್ದು ಏಕೆ?

ಹೌದು ಕಳೆದೆರೆಡು ವಿಶ್ವಕಪ್ ಟೂರ್ನಿಗಳನ್ನು ನೋಡಿ ಬರೋಣ. ಭಾರತ ಚಾಂಪಿಯನ್ ಆದ 2011ರಲ್ಲಿ ಫೆಬ್ರವರಿ-ಮಾರ್ಚ್ ನಲ್ಲಿ ಟೂರ್ನಿಮೆಂಟ್ ನಡೆದಿದ್ದರೆ, 2015ರಲ್ಲಿಯೂ ಸಹ ಫೆಬ್ರವರಿ-ಮಾರ್ಚ್ ತಿಂಗಳಿನಲ್ಲಿಯೇ ಟೂರ್ನಿಮೆಂಟ್ ಸರಾಗವಾಗಿ ನಡೆದಿತ್ತು. ಆದರೆ ಈ ಬಾರಿ ಜೂನ್-ಜುಲೈನಲ್ಲಿ ಏಕೆ ಆಯೋಜಿಸಲಾಗಿದೆ ಗೊತ್ತೇ?

ತುಂಬಾ ತಲೆಕೆಡಿಸಿಕೊಳ್ಳುವುದು ಬೇಡ. ಈ ವರ್ಷ ಫೆಬ್ರವರಿ- ಮಾರ್ಚ್‍ನಲ್ಲಿ ಏನು ನಡೆಯಿತು ನೋಡಿ.. ಏನು ಘನಂದಾರಿ ಕೆಲಸವೇನಿರಲಿಲ್ಲ ಬದಲಿಗೆ ಐಪಿಎಲ್ ಎಂದ ಬಂಡವಾಳಿಗರ ಖಾಸಗಿ ಟೂರ್ನಿಮೆಂಟ್ ನಡಿದಿತ್ತು. ಹಾಗಾಗಿ ವಿಶ್ವಕಪ್ ಎಂಬ ಮಹತ್ವದ ಟೂರ್ನಿಯನ್ನೇ ಮುಂದೂಡಲಾಗಿದೆ. ಐಪಿಎಲ್ ಎಂಬುದು ಅಷ್ಟರಮಟ್ಟಿಗೆ ಬೆಳೆದುನಿಂತಿದೆ.

ಮಾರ್ಚ್ ಏಪ್ರಿಲ್ ನಲ್ಲಿ ಐಪಿಎಲ್ ಪಂದ್ಯಗಳು ನಡೆದ ಕಾರಣ ವಿಶ್ವಕಪ್ ಈ ಮಳೆಕಪ್ ಆಗಿದೆ ಅಷ್ಟೇ. ಮಳೆ ಈ ಮಟ್ಟಗೆ ಛಂಡಿ ಹಿಡಿದಿರುವುದು ನೋಡಿದರೆ ಮುಂದಿನ ಹಲವು ಪಂದ್ಯಗಳು ಸಹ ರದ್ದಾಗಬಹುದು. ಆಗ ಕ್ರಿಕೆಟ್ ಬದಲಿಗೆ ಈಜು ಸ್ಪರ್ಧೆಯೇ ನಡೆಯಬೇಕಾಗುತ್ತದೆ ಅಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ಗಂಟೆಗೂ ಮೊದಲೆ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...