Homeಕರ್ನಾಟಕಇಬ್ಬರಿಗೆ ಖಾತೆ ಹಂಚಿಕೆ: ಅದೂ ಒಂದು ಬಿಕ್ಕಟ್ಟೇ!

ಇಬ್ಬರಿಗೆ ಖಾತೆ ಹಂಚಿಕೆ: ಅದೂ ಒಂದು ಬಿಕ್ಕಟ್ಟೇ!

- Advertisement -
- Advertisement -

| ಮಲ್ಲನಗೌಡರ್ |

ಈ ಸಮ್ಮಿಶ್ರ ಸರ್ಕಾರದ ಪ್ರತಿ ಹೆಜ್ಜೆಯಲ್ಲೂ ಬಿಕ್ಕಟ್ಟುಗಳೇ ಇವೆ. ನೇರವಾದ, ಸುಲಲಿತವಾಗಿ ಯಾವುದೂ ಆಗುತ್ತಿಲ್ಲ. ಮೈತ್ರಿ ಪಕ್ಷಗಳ ನಾಯಕರು ದಿನವೂ ರಾಜಕೀಯದ ಬಗ್ಗೆಯೇ ಹೆಚ್ಚು ತಲೆ ಕೆಡಿಸಿಕೊಂಡಿರುವುದರಿಂದ ಇಬ್ಬರು ಹೊಸ ಸಚಿವರಿಗೆ ಖಾತೆ ನೀಡುವುದು ಒಂದು ಸಣ್ಣ ಬಿಕ್ಕಟ್ಟೇ ಆಗಿರುವಂತಿದೆ.

ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ಸೇರಿದ ಇಬ್ಬರು ಪಕ್ಷೇತರರಿಗೆ 11-12 ದಿನವಾದರೂ ಖಾತೆ ಹಂಚಿಕೆ ಆಗಿಲ್ಲ. ಈಗ ವಿ. ಶಂಕರ್ ಕಾಂಗ್ರೆಸ್ ಸದಸ್ಯರು. ಅವರಿಗೆ ಕಾಂಗ್ರೆಸ್ ಪಾಲಿನ ಖಾತೆಯನ್ನೇ ಕೊಡದೇ ಬೇರೆ ದಾರಿಯೇ ಇಲ್ಲದಂತಾಗಿದೆ. ಮುಳಬಾಗಿಲು ಪಕ್ಷೇತರ ಶಾಸಕ ಎಚ್. ನಾಗೇಶರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆಯೇ ಬೇಕೆಂದು ಎಂದು ಪಟ್ಟು ಹಿಡಿದಿದ್ದಾರೆ.

ಆರಂಭದಲ್ಲಿ ತಾವು ನಿಭಾಯಿಸಿದ್ದ ಅರಣ್ಯ ಖಾತೆಯೇ ಬೇಕು ಎಂದು ಶಂಕರ್ ಪಟ್ಟು ಹಿಡಿದಿದ್ದಾರೆ. ರಮೇಶ ಜಾರಕಿಹೊಳಿ ನಿಭಾಯಿಸಿದ್ದ ಪೌರಾಡಳಿತ ಖಾತೆಯನ್ನು ನಂತರ ಕಾಗ್ರೆಸ್‍ನ ಸಿ.ಎಸ್ ಶಿವಳ್ಳಿ ನಿರ್ವಹಿಸಿದ್ದರು. ಅವರ ನಿಧನದ ನಂತರ ಖಾಲಿ ಇರುವ ಆ ಸ್ಥಾನವನ್ನು ಒಪ್ಪಲು ಶಂಕರ್ ಸಿದ್ದರಿಲ್ಲ. ಈಗ ಅರಣ್ಯ ಖಾತೆಗೆ ಪ್ರಬಲ ನಾಯಕ ಕಾಂಗ್ರೆಸ್‍ನ ಸತೀಶ ಜಾರಕಿಹೊಳಿ ಸಚಿವರಿದ್ದು ಅವರಿಂದ ಈ ಖಾತೆ ಕಿತ್ತು ಕೊಡಲೂ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್‍ನ ಹಿರಿಯ ನಾಯಕರೂ ಒಪ್ಪುವುದಿಲ್ಲ. ಶಂಕರ್‍ಗೆ ಅರಣ್ಯ ಸಚಿವ ಖಾತೆ ನೀಡಲು ಒಂದು ಮಟ್ಟಿನ ಪುನರಾರಚನೆ ಮಾಡಬೇಕು ಇದರಿಂದ ಸಚಿವರಲ್ಲಿ ಖಾತೆಗಾಗಿ ಮತ್ತೆ ಸ್ಪರ್ಧೆ ಏರ್ಪಡಬಹುದು. ಅದರಿಂದಾಗಿ ಶಂಕರ್ ಅವರು ಪೌರಾಡಳಿತ ಖಾತೆ ಒಪ್ಪದೇ ಬೇರೆ ದಾರಿಯೇ ಇಲ್ಲ. ಇಂಥದ್ದೇ ಖಾತೆ ಎಂದು ಒತ್ತಾಯಿಸುತ್ತಾ ಕೂತರೆ ಇನ್ನಷ್ಟು ದಿನ ಖಾತೆ ರಹಿತ ಸಚಿವರಾಗಿಯೇ ಮುಂದುವರೆಯಬೇಕಾಗುತ್ತೆ ಎಂದು ಸಿಎಂ ಸೂಚನೆ ನೀಡಿದ್ದಾರೆಂದು ಹೇಳಲಾಗುತ್ತಿದೆ.

ಬಿಎಸ್‍ಪಿಯ ಎನ್. ಮಹೇಶ್ ಸಚಿನ ಸ್ಥಾನಕ್ಕೆ ರಾಜಿನಾಮೆ ನೀಡಿದಾಗಿನಿಂದಲೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಖಾಲಿಯೇ ಇದೆ. ಸದ್ಯ ಅದನ್ನೇ ತಮಗೆ ನೀಡಲಿ ಎಂದು ನಾಗೇಶ ಪಟ್ಟು ಹಿಡಿದಿದ್ದಾರೆ. ಜೆಡಿಎಸ್ ಪಾಲಿನ ಖಾತೆಗಳಲ್ಲಿಯೇ ಮಹೇಶರಿಗೆ ನೀಡಲಾಗಿತ್ತು. ಈಗ ನಾಗೇಶರಿಗೆ ಕೊಡಲು ಹೋದರೆ, ಜೆಡಿಎಸ್‍ನ ಯಾವುದಾದರೂ ಸಚಿವರು ತಮಗೆ ಅದನ್ನು ಕೊಡಿ ಎಂದು ಬೇಡಿಕೆ ಇಡಬಹುದೇನೋ. ಬಹಳಷ್ಟು ಸಮಯದಿಂದ ಖಾಲಿಯೇ ಇರುವ ಶಿಕ್ಷಣ ಖಾತೆಯ ಬಗ್ಗೆ ಸರ್ಕಾರ ತಲೆ ಕೆಡಿಸಿಕೊಂಡಿಯೇ ಇಲ್ಲ. ಶಾಲೆಗಳು ಪುನರಾರಂಭವಾದರೂ ಅಧಿಕಾರಿಗಳ ನಿರ್ದೇಶನದಂತೆ ಎಲ್ಲವೂ ನಡೆಯುತ್ತಿದೆ. ನಾಗೇಶರಿಗೆ ಶಿಕ್ಷಣ ಖಾತೆ ಕೊಡದಿದ್ದರೆ, ಕುಮಾರಸ್ವಾಮಿ ತಮ್ಮಲ್ಲೇ ಇರವ ಹಲವು ಖಾತೆಗಳ ಪೈಕಿ ಒಂದನ್ನು ನೀಡಬೇಕಾಗುತ್ತದೆ.

 

ಶಂಕರ್ ಮತ್ತು ನಾಗೇಶರನ್ನು ಸಚಿವರನ್ನಾಗಿ ಮಾಡಿದ ಕಾಂಗ್ರೆಸ್‍ನ ನಾಯಕರಿಗೆ ಖಾತೆಗಳ ಬಗ್ಗೆ ಗಮನ ಹರಿಸಲು ಪೂರೈಸುತ್ತಿಲ್ಲ. ಅತೃಪ್ತ ಶಾಸಕರನ್ನು ಓಲೈಸುವ ಯತ್ನದಲ್ಲೂ ಕಾಂಗ್ರೆಸ್‍ಗೆ ಆಸಕ್ತಿ ಹೋದಂತಿದೆ. ಚಿಂಚೋಳಿಯ ಗೆಲುವಿನಿಂದ ಒಂದು ಸೀಟು ಹೆಚ್ಚು ಕಡಿಮೆ ಮಾಡಿಕೊಂಡಿರುವ ಬಿಜೆಪಿ ಸದಕ್ಕೆ ಶಂಕರ್, ನಾಗೇಶರ ಮೇಲೆ ಅಶೆ ಬಿಟ್ಟಿದೆ ಎಂಬುದು ಸತ್ಯ. ರೋಶನ್ ಬೇಗ್‍ರಿಂದ ಖಾಲಿಯಾದ ಸ್ಥಾನವನ್ನು ಶಂಕರ್ ಸೇರಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಸಮಾಧಾನ ಹೊಂದಿದೆ.

ಸತೀಶ್ ಜಾರಕಿಹೊಳಿ

ಅರಣ್ಯ ಇಲಾಖೆಯ ನೇಮಕಾತಿಗಳಲ್ಲಿ ಶೇ 30ರಷ್ಟನ್ನು ಅರಣ್ಯವಾಸಿಗಳಿಗೆ ಮೀಸಲು ಇರುವಂತೆ ಕ್ರಮ ಕೈಗೊಂಡ ಸತೀಶ ಜಾರಕಿಹೊಳಿ ಆ ಖಾತೆಯನ್ನು ಬಿಟ್ಟು ಕೊಡಲಾರರು. ಹೀಗಾಗಿ ಶಂಕರ್ ಅನಿವಾರ್ಯವಾಗಿ ಪೌರಾಡಳಿತ ಖಾತೆ ಒಪ್ಪಿಕೊಳ್ಳಲೇ ಬೇಕಾಗಬಹುದು. ಸದ್ಯಕ್ಕೆ ಮೈತ್ರಿಯ ನಾಯಕರಿಗೆ ಶಂಕರ್ ಮತ್ತು ನಾಗೇಶರ ಖಾತೆಗಳ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಹೀಗಾಗಿ ಇನ್ನಷ್ಟು ಅವಧಿಗೆ ಶಂಕರ್ ಮತ್ತು ನಾಗೇಶ ಖಾತೆರಹಿತ ಸಚಿವರಾಗಿಯೇ ಮುಂದುವರೆಯಬೇಕು ಅಥವಾ ಈಗ ಸೂಚಿಸಿದ ಖಾತೆಗಳನ್ನು ಒಪ್ಪಿಕೊಳ್ಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...