Homeಅಂಕಣಗಳುಇಲಿ ಇಕ್ಕಳದಲ್ಲಿ ಇಡಬಾರದನ್ನ ಇಟ್ಟೋರು

ಇಲಿ ಇಕ್ಕಳದಲ್ಲಿ ಇಡಬಾರದನ್ನ ಇಟ್ಟೋರು

- Advertisement -
- Advertisement -

ಆಘಾತವಾಣಿ |

ನಮಸ್ಕಾರ ಆಘಾತವಾಣಿಗೆ ಸ್ವಾಗತ, ವಾರ್ತೆಗಳು ಓದುತ್ತಿರುವವರು ಅಟ್ಯಾಕ್ ಹನ್ಮಂತ.
ಕರ್ನಾಟಕಕ್ಕೆ ಬಂದಿದ್ದ ಸುಳ್ ಫ್ಯಾಕ್ಟರಿ ಪಕೋಡೇಂದ್ರನು ಉಡುಪಿಯಲ್ಲಿ ಭಾಷಣ ಜಡಿದು ಉಡುಪಿ ಕೃಷ್ಣಮಠಕ್ಕೆ ಹೋಗದೆ ಇದ್ದುದರ ಬಗ್ಗೆ ನಾನಾರೀತಿಯ ಊಹಾಪೋಹಗಳು ಹರಿದಾಡುತ್ತಿವೆ. ಇವೆಲ್ಲ ಗಾಳಿಸುದ್ದಿಗಳಿಗೆ ತೆರೆ ಎಳೆದಿರುವ ಶ್ರೀಮತಿ ಶೋಭಕ್ಕನವರು “ಕೃಷ್ಣಮಠದೊಳಗೆ ಪಕೋಡೇಂದ್ರನಿಗೆ ಜೀವಭಯ ಇದ್ದುದರಿಂದ ಅವರು ಮಠಕ್ಕೆ ಎಡಗಾಲನ್ನೂ ಇಡದೆ ಹಂಗೇ ವಾಪಸ್ ಹೋಗಿದ್ದಾರೆಂದು’’ ತಿಳಿಸಿದ್ದಾರೆ. ಈ ಸುದ್ದಿ ಕೇಳಿದ ಕೃಷ್ಣಮಠದ ಪಿಂಚಣಿಸ್ವಾಮಿಗಳಾದ ‘ತೇಜಾವರ ಶ್ರಿ’ಗಳು “ತನ್ನಂಥ ಕುಪೋಷಣೆ ಪೀಡಿತ ಬಡಕಲು ದೇಹಿಯನ್ನು ಪಕೋಡೇಂದ್ರ ಅವರು ಟೆರರಿಸ್ಟ್ ಎಂದು ಭಯಬಿದ್ದಿರುವುದು ತನಗೆ ಅತ್ಯಂತ ಖೇದವುಂಟಾಗಿದೆ, ಈ ಖೇದವನ್ನು ಹೋಗಲಾಡಿಸಲು ನಾನು ಮುತಾಲಿಕನ ಅರೆಬರೆ ಮೀಸೆಯನ್ನು ತುಟಿಯಿಂದ ಕಿತ್ತು ಯಜ್ಞಕುಂಡಕ್ಕೆ ಹವಿಸ್ಸಾಗಿ ಹಾಕುವ ಮೂಲಕ ದೇವರಿಗೆ ವಿನಂತಿ ಮಾಡುತ್ತೇನೆ ಎಂದು ಇನ್ನೂ ಹೇಳಿಲ್ಲವೆಂದು ವರದಿಯಾಗಿದೆ.
< < < <
ಬಿಜೆಪಿ ಪಕ್ಷದಲ್ಲಿ ನೆಪಕ್ಕೊಂದು ಅಧ್ಯಕ್ಷನಿರಲಿ ಎಂದು ಇಟ್ಟುಕೊಳ್ಳದ ‘ಧಡಿಯೂರಪ್ಪ’ನನ್ನು ನಂಬಿಕೊಂಡರೆ ತಮ್ಮ ಕೈಗೆ ಮಟನ್ ಬಿರಿಯಾನಿ ಬೇಯಿಸುವ ಹಂಡೆ ಮಾತ್ರ ಸಿಗಲು ಸಾಧ್ಯ ಎಂದು ಚಿಂತೆಗೊಳಗಾಗಿರುವ ‘ಹಮೀದ್ ಷಾ’ ಇದಕ್ಕೊಂದು ಹೊಸ ಪ್ಲಾನು ರೆಡಿ ಮಾಡಿದ್ದಾರೆಂದು ಗೊತ್ತಾಗಿದೆ. ಎಲ್ಲೇ ಬಿಜೆಪಿ ಪಕ್ಷದ ಪ್ರಚಾರವಿರಲಿ ಅಲ್ಲಿ ಈ ಬುಡ್ಡಾಗಿರಾಕಿಯನ್ನು ಶೋಕೇಸ್ ಪೀಸಿನಂತೆ ಬಳಸಿಕೊಂಡು ಆಕಾಶ ಪಾತಾಳವಾಗಿ, ಪಾತಾಳ ಆಕಾಶವೇನಾದರೂ ಆಗಿ ಬಿಜೆಪಿ ಅಧಿಕಾರಕ್ಕೆ ಬಂದರೆ ‘ಹಾರೆಸ್ಸೆಸ್’ ವಯೋವೃದ್ಧರ ಕೊಂಪೆಯಿಂದ ‘ಚಂತೋಷ್ ಜೀ’ಯನ್ನು ದರದರನೆ ಕರೆತಂದು ಸಿಎಂ ಮಾಡುವುದಾಗಿ ‘ಹಮೀದ್ ಷಾ’ ಅವರು ನಿದ್ದೆಗಣ್ಣಿನಲ್ಲಿ ಕನವರಿಸಿಕೊಳ್ಳುತ್ತಿದ್ದರು ಎಂಬ ಸುದ್ದಿ ಬಹಿರಂಗವಾಗಿದೆ.
< < < <
ಕಾಂಗ್ರೆಸ್ ಪಕ್ಷದ ‘ಲಾಹುಲ್ ಗಾಂಧಿ’ ಬಸವಣ್ಣನವರ ವಚನವನ್ನು ಉಚ್ಚರಿಸಲು ಹೋಗಿ ಇವನರ್ವ, ಇವನರ್ವ ಎಂದು ತೆದ್ದೊದ್ದೊ ಬೊದ್ದೊದ್ದೊ ಮಾಡಿದ ಮೇಲೆ ಕಾಂಗ್ರೆಸ್ಸಿಗರನ್ನು ಬಿಜೆಪಿಗರು ಹುರಿದು ಉಪ್ಪಾಕಿಕೊಂಡು ನುಂಗಿ ನೆಕ್ಕಿದ್ದ ವಿಷಯ ತಮಗೆ ತಿಳಿದಿರಬಹುದು. ಅದೇ ಬಗೆಯಲ್ಲಿ ಉತ್ತರದ ಹಿಂದಿಗರ ಮನೆಯ ಜೀತದಾಳಾದ ‘ಪಕೋಡೇಂದ್ರ’ನು ತಾನೇನೋ ಕನ್ನಡ ಪಂಡಿತನೆಂಬಂತೆ ಪೋಸು ಕೊಡಲು ಹೋಗಿ ‘ಇಲಿ ಇಕ್ಕಳದೊಳಗೆ ಇಡಬಾರದ್ದನ್ನು ಇಟ್ಟಂತೆ’ ಕೊಯಯೊ ಪಯಯೋ ಎಂದು ವದರಿಬಿಟ್ಟಿದ್ದಾನೆ. ‘ಭಗವಾನ್ ಮಂತೆಸಾಮಿ, ದೇವಿ ಮಾರವಬ್ಯಾ, ಮಲ ಮೇವದೇಶ್ವರ್, ಬಿಲ್ಲಿಗಿರಿ ರಂಗ, ಚಾಮರಾಜೇಶ್ವರ್, ಹಿಮ್ಮದ್ ಗೋಪಾಲ್ ಸಾಮಿ’ ಅಂತೆಲ್ಲ ದೇವರುಗಳ ಹೆಸರು ಹೇಳಿದ್ದನ್ನು ಕೇಳಿದ ಜನ.. ಇವನೇನು ದೇವರ ಹೆಸರು ಹೇಳುತ್ತಿದ್ದಾನೋ, ಈಗಾಗಲೇ ಪರಲೋಕಕ್ಕೆ ಪಾರ್ಸೆಲ್ ಆಗಿರೋ ಇವನ ಚಿಕ್ಕಪ್ಪ-ದೊಡ್ಡಪ್ಪಂದಿರ ಹೆಸರು ಹೇಳುತ್ತಿದ್ದಾರೆ ಎಂದು ಗಾಬರಿಯಾಗಿರುವ ಸುದ್ದಿ ಇದೀಗ ತಾನೇ ಬಂದಿದೆ.
< < < <
ಕರ್ನಾಟಕದ ಚುನಾವಣೆಯ ಖರ್ಚಿಗೆ ಕಾಸು ಪೀಕಲೆಂದು ಗಣಿರೆಡ್ಡಿಗಳನ್ನೆಲ್ಲ ಸಿಬಿಐ ಕೋರ್ಟಿನ ನೇಣಿನ ಕುಣಿಕೆಯಿಂದ ಬಿಡಿಸಿ ಕರೆತಂದು ಪ್ರಚಾರ ಕಾರ್ಯದಲ್ಲಿ ತೊಡಗಿಸಿರುವ ‘ಭಾರತೀಯ ಜನಾರ್ದನರೆಡ್ಡಿ ಪಾರ್ಟಿಯು’ ಮಿನಿಮಂ ಲೆವೆಲ್ ನಾಚಿಕೆ ಮಾನಮರ್ಯಾದೆಯಿಲ್ಲದೆ ಬಳ್ಳಾರಿ ಅದಿರಿನ ಭೂದರೋಡೆಯ ದುಡ್ಡಿನಲ್ಲಿ ಮಜಾ ಉಡಾಯಿಸುತ್ತಿದೆ ಎಂದು ತಿಳಿದುಬಂದಿದೆ. ಪಕ್ಷದ ಅಧ್ಯಕ್ಷರೂ ಸೇರಿದಂತೆ ಜನಾರ್ದನ ರೆಡ್ಡಿ ಪಕ್ಷದ ಶಾಸಕರೆಲ್ಲರಿಗೂ ಗಣಿರೆಡ್ಡಿಗಳು ಶರ್ಟುಪ್ಯಾಂಟು ಅಂದ್ರುವೇರು ಹೊಲಿಸಿಕೊಟ್ಟು ಅವರ ಪತ್ನಿಯರಿಗೆ ಲಂಗಜಾಕೀಟನ್ನೂ ಹೊಲಿಸಿಕೊಟ್ಟಿದ್ದಾರೆಂದು ಇನ್ನೂ ವರದಿಯಾಗಿಲ್ಲ. ಈ ಸುದ್ದಿ ತಿಳಿದ ಬ್ಲೂಜೆಪಿ ಶಾಸಕರ ಪತ್ನಿಯರು ತಮ್ಮ ಮನೆಯ ಬಟ್ಟೆ ಬೀರುವಿನ ಕದ ತೆರೆದು ಅಯ್ಯೋ ನನ್ನತ್ರ ಒಂದು ಸೀರೇನೂ ಇಲ್ಲ ಎಂದು ಗೋಳಾಡುತ್ತಿಲ್ಲವೆಂದು ಬಲ್ಲ ಮೂಲಗಳು ತಿಳಿಸಿವೆ.
< < < <
ದಲಿತರ ಮನೆಗಳಿಗೆ ಹೋಗಿ ಎಮ್ಮೆ ಮೇದಂತೆ ಮೇಯ್ದು ಬರುವುದನ್ನು ರೂಢಿ ಮಾಡಿಕೊಂಡಿರುವ ‘ಭಾರತೀಯ ಜಲ್ಸಾ ಪಾರ್ಟಿ’ಯ ಉತ್ತರ ಪ್ರದೇಶ ಸರ್ಕಾರದಿಂದ ಹೊಸ ನ್ಯೂಸೊಂದು ಓಡೋಡಿ ಬಂದಿದೆ. ಬ್ಲೂಜೆಪಿ ಪಕ್ಷದ ಶಾಸಕರು ದಲಿತರ ಮನೆಗಳಿಗೆ ಶ್ರೀರಾಮಚಂದ್ರನಂತೆ ಹೋಗಿ ಅಲ್ಲೇ ಕೂಳುಬಾಕರಂತೆ ಗಡದ್ದಾಗಿ ಉಂಡು, ದಲಿತರಿಗೆ ಆಶೀರ್ವಾದ ಮಾಡಿ ಬರುತ್ತಿದ್ದಾರೆ ಎಂದಿದ್ದಾನೆ ಶಾಸಕ. ಈ ಸುದ್ದಿ ಕೇಳಿದ ಉತ್ತರಪ್ರದೇಶದ ದಲಿತರು, ಇನ್ನೊಂದ್ಸಲ ಯಾವೋನಾದ್ರೂ ‘ಉಣ್ಣಕ್ಕೆ ಏನಾರ ಐತಾ’ ಅಂತ ‘ಉಣ್ಣಲು’ ಬಂದರೆ ಬರ್ರಿ ಊಟ ಮಾಡ್ರಿ ಅಂತ ಒಳಗೆ ಕರೆದು ಅಗುಣಿ ಹಾಕಿ ಆ ಬ್ಲೂಜೆಪಿ ಶಾಸಕರನ್ನು ಕಚಪಚ ಪಚಪಚ ಎಂದು ತುಳಿದು ಕಾಲು ಹಿಡಿದು ತಿಪ್ಪೆಗೆಸೆಯಬೇಕೆಂದು ಇನ್ನೂ ಪ್ರತಿಜ್ಞೆ ಮಾಡಿಲ್ಲವೆಂದು ವರದಿಯಾಗಿದೆ.
< < < <
ಹೋದಲ್ಲಿ ಬಂದಲ್ಲಿ ಹಾರೆಕೋಲು ಹಿಡಿದುಕೊಂಡು ಓಡಾಡುತ್ತ ಬ್ಲೂಜೆಪಿ ಪಕ್ಷದವರ ಪೃಷ್ಟಕ್ಕೆ ಹೆಟ್ಟಿಕೊಂಡು ಓಡಾಡುತ್ತಿರುವ ಪ್ರಕಾಶ್ ರೈ ಅವರು ಪಕ್ಷಕ್ಕೆ ತೀವ್ರ ತಲೆನೋವಾಗಿ ಪರಿಣಮಿಸಿದ್ದಾರೆಂದು ಬ್ಲೂಜೆಪಿ ಮೂಲಗಳು ತಿಳಿಸಿವೆ. ರೈ ಅವರ ಮೇಲೆ ಪಕ್ಷವು ಸಾಕಿಕೊಂಡಿರುವ ಅಲ್ಸೇಷಿಯನ್ ನಾಯಿ ಪ್ರುತಾಪ್ ತಿಮ್ಮನನ್ನು ಛೂ ಬಿಟ್ಟರೂ ರೈ ಪ್ರುತಾಪನಿಗೇ ಹಾರೆಕೋಲು ಹೆಟ್ಟಿ ಎಸೆದಿರುವುದು ಆಘಾತಕಾರಿಯೆಂದು ಧಡಿಯೂರಪ್ಪನವರು ತಮ್ಮ ಮನೆದೇವರು ‘ಬಂದಿದೆಲ್ಲ ಬಳ್ಕೊಳೇ ಬಂಡಿಭಾಗ್ಯಮ್ಮ’ನ ಬಳಿ ಕಷ್ಟ ತೋಡಿಕೊಂಡಿದ್ದಾರೆ. ಈ ಬಗ್ಗೆ ತುರ್ತಾಗಿ ಗಮನ ಹರಿಸಿ ತಮ್ಮದೇ ಪಾರ್ಟಿಯ ಪ್ರೊಡ್ಯೂಸರ್ ಒಬ್ಬನ ಕೈಲಿ ಹಾಲಿವುಡ್ ಚಿತ್ರವನ್ನು ಬೇರೆ ದೇಶದಲ್ಲಿ ಪ್ರೊಡ್ಯೂಸ್ ಮಾಡಲು ಹೇಳಿ ಪ್ರಕಾಶ್ ರೈಗೆ ಶೂಟಿಂಗ್ ನೆಪದಲ್ಲಾದರೂ ಬೇರೆ ದೇಶಕ್ಕೆ ರವಾನೆ ಮಾಡಿದರೆ ತಾನು ನೆಮ್ಮದಿಯಾಗಿ ಜಶೋಧಹೆನ್ ಸವಿನೆನಪಿನಲ್ಲಿ ಮಲಗುತ್ತೇನೆಂದು ಪಕೋಡೇಂದ್ರನು ಧಡಿಯೂರಪ್ಪನಿಗೆ ವಾಟ್ಸಾಪ್ ಮೆಸೇಜ್ ಕಳಿಸಿದ್ದಾರೆಂದು ಖಚಿತ ಮಾಹಿತಿಗಳು ತಿಳಿಸಿವೆ.
< < < <
ಕತ್ತೆ-ಎಮ್ಮೆಗಳಿಗೆ ಹೂನಾರ ಹಾಕಿ ಮೆರವಣಿಗೆ ಮಾಡುವುದೇ ರಾಜಕೀಯ ಎಂದು ನಂಬಿಕೊಂಡಿರುವ ‘ಪಾಟಾಳ್ ನಾಗರಾಜ್’ ಅವರು ತಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಜನರ ಗ್ರಾಚಾರ ಕೆಟ್ಟು ತಮ್ ಪಕ್ಷ ಏನಾದ್ರೂ ಅಪ್ಪಿತಪ್ಪಿ ಅಧಿಕಾರಕ್ಕೆ ಬಂದರೆ ಉಚಿತವಾಗಿ ಕಟಿಂಗ್ ಶೇವಿಂಗ್ ಮಾಡಿಸುತ್ತೇವೆ ಎಂದು ಭರವಸೆ ಕೊಟ್ಟಿದ್ದಾರೆ ಪಾಟಾಳ್ ನಾಗರಾಜ್. ಈ ಸುದ್ದಿಯನ್ನು ಸಂಜೆಪತ್ರಿಕೆಯಲ್ಲಿ ಓದಿದ ಧಡಿಯೂರಪ್ಪನವರು ಮುಖವೇ ಕಾಣದಂತೆ ಗಡ್ಡ ಬೆಳೆಸಿಕೊಂಡು ಕಾಡುಮನುಷ್ಯನಂತೆ ಅಂಡಲೆಯುತ್ತಿರುವ ಸ್ತ್ರೀರಾಮುಲುಗೆ ಫೋನ್ ಮಾಡಿ “ನಿನ್ನ ಟಾರ್ಜನ್ ಮುಸುಡಿ ನೋಡಿಯೇ ಪಾಟಾಳ್ ನಾಗರಾಜ್ ಈ ಉಚಿತ ಕಟಿಂಗ್ ಶೇವಿಂಗ್ ಚುನಾವಣಾ ಭರವಸೆ ಕೊಟ್ಟಿದ್ದಾನೆ, ಮೊದಲು ನುಣ್ಣಗೆ ಶೇವಿಂಗ್ ಮಾಡಿಸಿಕೊಂಡು ನಂತರ ಬಂದು ನಿನ್ನ ಮುಖ ಮಾತ್ರ ತೋರಿಸು ಇನ್ನೇನೂ ತೋರಿಸಬೇಡ ಎಂದು ಗದರಿಕೊಂಡಿದ್ದಾರೆ. ಶೇವಿಂಗ್ ಮಾಡಿಸಿಕೊಂಡರೆ ನನ್ನ ಹೆಂಡತಿಯೇ ನನ್ನ ಮುಖ ನೋಡಿ ಕಿಟಾರನೆ ಕಿರುಚುತ್ತಾಳೆಂದು ಸ್ತ್ರೀರಾಮುಲು ಎಷ್ಟು ಸಮಜಾಯಿಷಿ ಕೊಟ್ಟರೂ ಧಡಿಯೂರಪ್ಪನವರು ತಾವು ಕೈಲಿ ಹಿಡಕೊಂಡಿದ್ದ ಧಡಿಯನ್ನು ಕೆಳಗೇ ಇಳಿಸಲಿಲ್ಲವೆಂದು ತಿಳಿದುಬಂದಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಭೇಟಿ ಇದೇ ಜಾಗದಲ್ಲಿ ಇದೇ ವಾರದಲ್ಲಿ. ಇಲ್ಲೇ ಡ್ರಾ, ಇಲ್ಲೇ ಬಹುಮಾನ. ಮೇಯಕ್ಕೆ ಹೋಗಿರೋ ದನಗಳು ಹಟ್ಟಿ ಸೇರ್ಕಳೋ ಹೊತ್ತಾತು, ನಾನಿನ್ನ ಬತ್ತಿನಿ. ಬಾಯ್ ಬಾಯ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...