Homeಅಂಕಣಗಳುಇಲಿ ಇಕ್ಕಳದಲ್ಲಿ ಇಡಬಾರದನ್ನ ಇಟ್ಟೋರು

ಇಲಿ ಇಕ್ಕಳದಲ್ಲಿ ಇಡಬಾರದನ್ನ ಇಟ್ಟೋರು

- Advertisement -
- Advertisement -

ಆಘಾತವಾಣಿ |

ನಮಸ್ಕಾರ ಆಘಾತವಾಣಿಗೆ ಸ್ವಾಗತ, ವಾರ್ತೆಗಳು ಓದುತ್ತಿರುವವರು ಅಟ್ಯಾಕ್ ಹನ್ಮಂತ.
ಕರ್ನಾಟಕಕ್ಕೆ ಬಂದಿದ್ದ ಸುಳ್ ಫ್ಯಾಕ್ಟರಿ ಪಕೋಡೇಂದ್ರನು ಉಡುಪಿಯಲ್ಲಿ ಭಾಷಣ ಜಡಿದು ಉಡುಪಿ ಕೃಷ್ಣಮಠಕ್ಕೆ ಹೋಗದೆ ಇದ್ದುದರ ಬಗ್ಗೆ ನಾನಾರೀತಿಯ ಊಹಾಪೋಹಗಳು ಹರಿದಾಡುತ್ತಿವೆ. ಇವೆಲ್ಲ ಗಾಳಿಸುದ್ದಿಗಳಿಗೆ ತೆರೆ ಎಳೆದಿರುವ ಶ್ರೀಮತಿ ಶೋಭಕ್ಕನವರು “ಕೃಷ್ಣಮಠದೊಳಗೆ ಪಕೋಡೇಂದ್ರನಿಗೆ ಜೀವಭಯ ಇದ್ದುದರಿಂದ ಅವರು ಮಠಕ್ಕೆ ಎಡಗಾಲನ್ನೂ ಇಡದೆ ಹಂಗೇ ವಾಪಸ್ ಹೋಗಿದ್ದಾರೆಂದು’’ ತಿಳಿಸಿದ್ದಾರೆ. ಈ ಸುದ್ದಿ ಕೇಳಿದ ಕೃಷ್ಣಮಠದ ಪಿಂಚಣಿಸ್ವಾಮಿಗಳಾದ ‘ತೇಜಾವರ ಶ್ರಿ’ಗಳು “ತನ್ನಂಥ ಕುಪೋಷಣೆ ಪೀಡಿತ ಬಡಕಲು ದೇಹಿಯನ್ನು ಪಕೋಡೇಂದ್ರ ಅವರು ಟೆರರಿಸ್ಟ್ ಎಂದು ಭಯಬಿದ್ದಿರುವುದು ತನಗೆ ಅತ್ಯಂತ ಖೇದವುಂಟಾಗಿದೆ, ಈ ಖೇದವನ್ನು ಹೋಗಲಾಡಿಸಲು ನಾನು ಮುತಾಲಿಕನ ಅರೆಬರೆ ಮೀಸೆಯನ್ನು ತುಟಿಯಿಂದ ಕಿತ್ತು ಯಜ್ಞಕುಂಡಕ್ಕೆ ಹವಿಸ್ಸಾಗಿ ಹಾಕುವ ಮೂಲಕ ದೇವರಿಗೆ ವಿನಂತಿ ಮಾಡುತ್ತೇನೆ ಎಂದು ಇನ್ನೂ ಹೇಳಿಲ್ಲವೆಂದು ವರದಿಯಾಗಿದೆ.
< < < <
ಬಿಜೆಪಿ ಪಕ್ಷದಲ್ಲಿ ನೆಪಕ್ಕೊಂದು ಅಧ್ಯಕ್ಷನಿರಲಿ ಎಂದು ಇಟ್ಟುಕೊಳ್ಳದ ‘ಧಡಿಯೂರಪ್ಪ’ನನ್ನು ನಂಬಿಕೊಂಡರೆ ತಮ್ಮ ಕೈಗೆ ಮಟನ್ ಬಿರಿಯಾನಿ ಬೇಯಿಸುವ ಹಂಡೆ ಮಾತ್ರ ಸಿಗಲು ಸಾಧ್ಯ ಎಂದು ಚಿಂತೆಗೊಳಗಾಗಿರುವ ‘ಹಮೀದ್ ಷಾ’ ಇದಕ್ಕೊಂದು ಹೊಸ ಪ್ಲಾನು ರೆಡಿ ಮಾಡಿದ್ದಾರೆಂದು ಗೊತ್ತಾಗಿದೆ. ಎಲ್ಲೇ ಬಿಜೆಪಿ ಪಕ್ಷದ ಪ್ರಚಾರವಿರಲಿ ಅಲ್ಲಿ ಈ ಬುಡ್ಡಾಗಿರಾಕಿಯನ್ನು ಶೋಕೇಸ್ ಪೀಸಿನಂತೆ ಬಳಸಿಕೊಂಡು ಆಕಾಶ ಪಾತಾಳವಾಗಿ, ಪಾತಾಳ ಆಕಾಶವೇನಾದರೂ ಆಗಿ ಬಿಜೆಪಿ ಅಧಿಕಾರಕ್ಕೆ ಬಂದರೆ ‘ಹಾರೆಸ್ಸೆಸ್’ ವಯೋವೃದ್ಧರ ಕೊಂಪೆಯಿಂದ ‘ಚಂತೋಷ್ ಜೀ’ಯನ್ನು ದರದರನೆ ಕರೆತಂದು ಸಿಎಂ ಮಾಡುವುದಾಗಿ ‘ಹಮೀದ್ ಷಾ’ ಅವರು ನಿದ್ದೆಗಣ್ಣಿನಲ್ಲಿ ಕನವರಿಸಿಕೊಳ್ಳುತ್ತಿದ್ದರು ಎಂಬ ಸುದ್ದಿ ಬಹಿರಂಗವಾಗಿದೆ.
< < < <
ಕಾಂಗ್ರೆಸ್ ಪಕ್ಷದ ‘ಲಾಹುಲ್ ಗಾಂಧಿ’ ಬಸವಣ್ಣನವರ ವಚನವನ್ನು ಉಚ್ಚರಿಸಲು ಹೋಗಿ ಇವನರ್ವ, ಇವನರ್ವ ಎಂದು ತೆದ್ದೊದ್ದೊ ಬೊದ್ದೊದ್ದೊ ಮಾಡಿದ ಮೇಲೆ ಕಾಂಗ್ರೆಸ್ಸಿಗರನ್ನು ಬಿಜೆಪಿಗರು ಹುರಿದು ಉಪ್ಪಾಕಿಕೊಂಡು ನುಂಗಿ ನೆಕ್ಕಿದ್ದ ವಿಷಯ ತಮಗೆ ತಿಳಿದಿರಬಹುದು. ಅದೇ ಬಗೆಯಲ್ಲಿ ಉತ್ತರದ ಹಿಂದಿಗರ ಮನೆಯ ಜೀತದಾಳಾದ ‘ಪಕೋಡೇಂದ್ರ’ನು ತಾನೇನೋ ಕನ್ನಡ ಪಂಡಿತನೆಂಬಂತೆ ಪೋಸು ಕೊಡಲು ಹೋಗಿ ‘ಇಲಿ ಇಕ್ಕಳದೊಳಗೆ ಇಡಬಾರದ್ದನ್ನು ಇಟ್ಟಂತೆ’ ಕೊಯಯೊ ಪಯಯೋ ಎಂದು ವದರಿಬಿಟ್ಟಿದ್ದಾನೆ. ‘ಭಗವಾನ್ ಮಂತೆಸಾಮಿ, ದೇವಿ ಮಾರವಬ್ಯಾ, ಮಲ ಮೇವದೇಶ್ವರ್, ಬಿಲ್ಲಿಗಿರಿ ರಂಗ, ಚಾಮರಾಜೇಶ್ವರ್, ಹಿಮ್ಮದ್ ಗೋಪಾಲ್ ಸಾಮಿ’ ಅಂತೆಲ್ಲ ದೇವರುಗಳ ಹೆಸರು ಹೇಳಿದ್ದನ್ನು ಕೇಳಿದ ಜನ.. ಇವನೇನು ದೇವರ ಹೆಸರು ಹೇಳುತ್ತಿದ್ದಾನೋ, ಈಗಾಗಲೇ ಪರಲೋಕಕ್ಕೆ ಪಾರ್ಸೆಲ್ ಆಗಿರೋ ಇವನ ಚಿಕ್ಕಪ್ಪ-ದೊಡ್ಡಪ್ಪಂದಿರ ಹೆಸರು ಹೇಳುತ್ತಿದ್ದಾರೆ ಎಂದು ಗಾಬರಿಯಾಗಿರುವ ಸುದ್ದಿ ಇದೀಗ ತಾನೇ ಬಂದಿದೆ.
< < < <
ಕರ್ನಾಟಕದ ಚುನಾವಣೆಯ ಖರ್ಚಿಗೆ ಕಾಸು ಪೀಕಲೆಂದು ಗಣಿರೆಡ್ಡಿಗಳನ್ನೆಲ್ಲ ಸಿಬಿಐ ಕೋರ್ಟಿನ ನೇಣಿನ ಕುಣಿಕೆಯಿಂದ ಬಿಡಿಸಿ ಕರೆತಂದು ಪ್ರಚಾರ ಕಾರ್ಯದಲ್ಲಿ ತೊಡಗಿಸಿರುವ ‘ಭಾರತೀಯ ಜನಾರ್ದನರೆಡ್ಡಿ ಪಾರ್ಟಿಯು’ ಮಿನಿಮಂ ಲೆವೆಲ್ ನಾಚಿಕೆ ಮಾನಮರ್ಯಾದೆಯಿಲ್ಲದೆ ಬಳ್ಳಾರಿ ಅದಿರಿನ ಭೂದರೋಡೆಯ ದುಡ್ಡಿನಲ್ಲಿ ಮಜಾ ಉಡಾಯಿಸುತ್ತಿದೆ ಎಂದು ತಿಳಿದುಬಂದಿದೆ. ಪಕ್ಷದ ಅಧ್ಯಕ್ಷರೂ ಸೇರಿದಂತೆ ಜನಾರ್ದನ ರೆಡ್ಡಿ ಪಕ್ಷದ ಶಾಸಕರೆಲ್ಲರಿಗೂ ಗಣಿರೆಡ್ಡಿಗಳು ಶರ್ಟುಪ್ಯಾಂಟು ಅಂದ್ರುವೇರು ಹೊಲಿಸಿಕೊಟ್ಟು ಅವರ ಪತ್ನಿಯರಿಗೆ ಲಂಗಜಾಕೀಟನ್ನೂ ಹೊಲಿಸಿಕೊಟ್ಟಿದ್ದಾರೆಂದು ಇನ್ನೂ ವರದಿಯಾಗಿಲ್ಲ. ಈ ಸುದ್ದಿ ತಿಳಿದ ಬ್ಲೂಜೆಪಿ ಶಾಸಕರ ಪತ್ನಿಯರು ತಮ್ಮ ಮನೆಯ ಬಟ್ಟೆ ಬೀರುವಿನ ಕದ ತೆರೆದು ಅಯ್ಯೋ ನನ್ನತ್ರ ಒಂದು ಸೀರೇನೂ ಇಲ್ಲ ಎಂದು ಗೋಳಾಡುತ್ತಿಲ್ಲವೆಂದು ಬಲ್ಲ ಮೂಲಗಳು ತಿಳಿಸಿವೆ.
< < < <
ದಲಿತರ ಮನೆಗಳಿಗೆ ಹೋಗಿ ಎಮ್ಮೆ ಮೇದಂತೆ ಮೇಯ್ದು ಬರುವುದನ್ನು ರೂಢಿ ಮಾಡಿಕೊಂಡಿರುವ ‘ಭಾರತೀಯ ಜಲ್ಸಾ ಪಾರ್ಟಿ’ಯ ಉತ್ತರ ಪ್ರದೇಶ ಸರ್ಕಾರದಿಂದ ಹೊಸ ನ್ಯೂಸೊಂದು ಓಡೋಡಿ ಬಂದಿದೆ. ಬ್ಲೂಜೆಪಿ ಪಕ್ಷದ ಶಾಸಕರು ದಲಿತರ ಮನೆಗಳಿಗೆ ಶ್ರೀರಾಮಚಂದ್ರನಂತೆ ಹೋಗಿ ಅಲ್ಲೇ ಕೂಳುಬಾಕರಂತೆ ಗಡದ್ದಾಗಿ ಉಂಡು, ದಲಿತರಿಗೆ ಆಶೀರ್ವಾದ ಮಾಡಿ ಬರುತ್ತಿದ್ದಾರೆ ಎಂದಿದ್ದಾನೆ ಶಾಸಕ. ಈ ಸುದ್ದಿ ಕೇಳಿದ ಉತ್ತರಪ್ರದೇಶದ ದಲಿತರು, ಇನ್ನೊಂದ್ಸಲ ಯಾವೋನಾದ್ರೂ ‘ಉಣ್ಣಕ್ಕೆ ಏನಾರ ಐತಾ’ ಅಂತ ‘ಉಣ್ಣಲು’ ಬಂದರೆ ಬರ್ರಿ ಊಟ ಮಾಡ್ರಿ ಅಂತ ಒಳಗೆ ಕರೆದು ಅಗುಣಿ ಹಾಕಿ ಆ ಬ್ಲೂಜೆಪಿ ಶಾಸಕರನ್ನು ಕಚಪಚ ಪಚಪಚ ಎಂದು ತುಳಿದು ಕಾಲು ಹಿಡಿದು ತಿಪ್ಪೆಗೆಸೆಯಬೇಕೆಂದು ಇನ್ನೂ ಪ್ರತಿಜ್ಞೆ ಮಾಡಿಲ್ಲವೆಂದು ವರದಿಯಾಗಿದೆ.
< < < <
ಹೋದಲ್ಲಿ ಬಂದಲ್ಲಿ ಹಾರೆಕೋಲು ಹಿಡಿದುಕೊಂಡು ಓಡಾಡುತ್ತ ಬ್ಲೂಜೆಪಿ ಪಕ್ಷದವರ ಪೃಷ್ಟಕ್ಕೆ ಹೆಟ್ಟಿಕೊಂಡು ಓಡಾಡುತ್ತಿರುವ ಪ್ರಕಾಶ್ ರೈ ಅವರು ಪಕ್ಷಕ್ಕೆ ತೀವ್ರ ತಲೆನೋವಾಗಿ ಪರಿಣಮಿಸಿದ್ದಾರೆಂದು ಬ್ಲೂಜೆಪಿ ಮೂಲಗಳು ತಿಳಿಸಿವೆ. ರೈ ಅವರ ಮೇಲೆ ಪಕ್ಷವು ಸಾಕಿಕೊಂಡಿರುವ ಅಲ್ಸೇಷಿಯನ್ ನಾಯಿ ಪ್ರುತಾಪ್ ತಿಮ್ಮನನ್ನು ಛೂ ಬಿಟ್ಟರೂ ರೈ ಪ್ರುತಾಪನಿಗೇ ಹಾರೆಕೋಲು ಹೆಟ್ಟಿ ಎಸೆದಿರುವುದು ಆಘಾತಕಾರಿಯೆಂದು ಧಡಿಯೂರಪ್ಪನವರು ತಮ್ಮ ಮನೆದೇವರು ‘ಬಂದಿದೆಲ್ಲ ಬಳ್ಕೊಳೇ ಬಂಡಿಭಾಗ್ಯಮ್ಮ’ನ ಬಳಿ ಕಷ್ಟ ತೋಡಿಕೊಂಡಿದ್ದಾರೆ. ಈ ಬಗ್ಗೆ ತುರ್ತಾಗಿ ಗಮನ ಹರಿಸಿ ತಮ್ಮದೇ ಪಾರ್ಟಿಯ ಪ್ರೊಡ್ಯೂಸರ್ ಒಬ್ಬನ ಕೈಲಿ ಹಾಲಿವುಡ್ ಚಿತ್ರವನ್ನು ಬೇರೆ ದೇಶದಲ್ಲಿ ಪ್ರೊಡ್ಯೂಸ್ ಮಾಡಲು ಹೇಳಿ ಪ್ರಕಾಶ್ ರೈಗೆ ಶೂಟಿಂಗ್ ನೆಪದಲ್ಲಾದರೂ ಬೇರೆ ದೇಶಕ್ಕೆ ರವಾನೆ ಮಾಡಿದರೆ ತಾನು ನೆಮ್ಮದಿಯಾಗಿ ಜಶೋಧಹೆನ್ ಸವಿನೆನಪಿನಲ್ಲಿ ಮಲಗುತ್ತೇನೆಂದು ಪಕೋಡೇಂದ್ರನು ಧಡಿಯೂರಪ್ಪನಿಗೆ ವಾಟ್ಸಾಪ್ ಮೆಸೇಜ್ ಕಳಿಸಿದ್ದಾರೆಂದು ಖಚಿತ ಮಾಹಿತಿಗಳು ತಿಳಿಸಿವೆ.
< < < <
ಕತ್ತೆ-ಎಮ್ಮೆಗಳಿಗೆ ಹೂನಾರ ಹಾಕಿ ಮೆರವಣಿಗೆ ಮಾಡುವುದೇ ರಾಜಕೀಯ ಎಂದು ನಂಬಿಕೊಂಡಿರುವ ‘ಪಾಟಾಳ್ ನಾಗರಾಜ್’ ಅವರು ತಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಜನರ ಗ್ರಾಚಾರ ಕೆಟ್ಟು ತಮ್ ಪಕ್ಷ ಏನಾದ್ರೂ ಅಪ್ಪಿತಪ್ಪಿ ಅಧಿಕಾರಕ್ಕೆ ಬಂದರೆ ಉಚಿತವಾಗಿ ಕಟಿಂಗ್ ಶೇವಿಂಗ್ ಮಾಡಿಸುತ್ತೇವೆ ಎಂದು ಭರವಸೆ ಕೊಟ್ಟಿದ್ದಾರೆ ಪಾಟಾಳ್ ನಾಗರಾಜ್. ಈ ಸುದ್ದಿಯನ್ನು ಸಂಜೆಪತ್ರಿಕೆಯಲ್ಲಿ ಓದಿದ ಧಡಿಯೂರಪ್ಪನವರು ಮುಖವೇ ಕಾಣದಂತೆ ಗಡ್ಡ ಬೆಳೆಸಿಕೊಂಡು ಕಾಡುಮನುಷ್ಯನಂತೆ ಅಂಡಲೆಯುತ್ತಿರುವ ಸ್ತ್ರೀರಾಮುಲುಗೆ ಫೋನ್ ಮಾಡಿ “ನಿನ್ನ ಟಾರ್ಜನ್ ಮುಸುಡಿ ನೋಡಿಯೇ ಪಾಟಾಳ್ ನಾಗರಾಜ್ ಈ ಉಚಿತ ಕಟಿಂಗ್ ಶೇವಿಂಗ್ ಚುನಾವಣಾ ಭರವಸೆ ಕೊಟ್ಟಿದ್ದಾನೆ, ಮೊದಲು ನುಣ್ಣಗೆ ಶೇವಿಂಗ್ ಮಾಡಿಸಿಕೊಂಡು ನಂತರ ಬಂದು ನಿನ್ನ ಮುಖ ಮಾತ್ರ ತೋರಿಸು ಇನ್ನೇನೂ ತೋರಿಸಬೇಡ ಎಂದು ಗದರಿಕೊಂಡಿದ್ದಾರೆ. ಶೇವಿಂಗ್ ಮಾಡಿಸಿಕೊಂಡರೆ ನನ್ನ ಹೆಂಡತಿಯೇ ನನ್ನ ಮುಖ ನೋಡಿ ಕಿಟಾರನೆ ಕಿರುಚುತ್ತಾಳೆಂದು ಸ್ತ್ರೀರಾಮುಲು ಎಷ್ಟು ಸಮಜಾಯಿಷಿ ಕೊಟ್ಟರೂ ಧಡಿಯೂರಪ್ಪನವರು ತಾವು ಕೈಲಿ ಹಿಡಕೊಂಡಿದ್ದ ಧಡಿಯನ್ನು ಕೆಳಗೇ ಇಳಿಸಲಿಲ್ಲವೆಂದು ತಿಳಿದುಬಂದಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಭೇಟಿ ಇದೇ ಜಾಗದಲ್ಲಿ ಇದೇ ವಾರದಲ್ಲಿ. ಇಲ್ಲೇ ಡ್ರಾ, ಇಲ್ಲೇ ಬಹುಮಾನ. ಮೇಯಕ್ಕೆ ಹೋಗಿರೋ ದನಗಳು ಹಟ್ಟಿ ಸೇರ್ಕಳೋ ಹೊತ್ತಾತು, ನಾನಿನ್ನ ಬತ್ತಿನಿ. ಬಾಯ್ ಬಾಯ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...