Homeರಾಜಕೀಯಈ ಚುನಾವಣೆ ಮತ್ತು ಪರ್ಯಾಯ ರಾಜಕಾರಣ

ಈ ಚುನಾವಣೆ ಮತ್ತು ಪರ್ಯಾಯ ರಾಜಕಾರಣ

- Advertisement -
- Advertisement -

ಸಾವಂತ್ರಿ |

ಬಿಎಸ್ಪಿ ಎನ್.ಮಹೇಶ್

ಈ ಸಾರಿಯ ಚುನಾವಣೆಯ ಫಲಿತಾಂಶವು ಹಣ, ಜಾತಿ, ಧರ್ಮಗಳ ರಾಜಕಾರಣ ಮಾಡುವವರಲ್ಲೇ ಅತ್ಯಂತ ದುಷ್ಟರೂ ಪ್ರತಿಗಾಮಿಗಳು ಯಾರೋ ಅವರ ಪಾಲಾಗಿದೆ. ಮೂರು ಮುಖ್ಯ ರಾಜಕೀಯ ಪಕ್ಷಗಳ ನಡುವಿನ ಸ್ಪರ್ಧೆಯೇ ಪ್ರಧಾನವಾಗಿತ್ತು ಮತ್ತು ಅದರ ಫಲಿತಾಂಶ ಇದನ್ನು ಸಾಬೀತುಪಡಿಸಿದೆ. ಜನಪರ ಚಳವಳಿಗಳ ಪ್ರತಿನಿಧಿಗಳಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳ ಅನುಭವ ಈ ವಿಚಾರದಲ್ಲಿ ಇನ್ನಷ್ಟು ಢಾಳಾಗಿದೆ. ಈ ಬಾರಿ ಹಿರಿಯ ಅನುಭವಿ ಹೋರಾಟಗಾರರ ಜೊತೆಗೆ ಹೊಸ ತಲೆಮಾರಿನ ಯುವಕರೂ ಕೂಡಾ ಚಳವಳಿಯ ಹಿನ್ನೆಲೆಯ ಪಕ್ಷಗಳಿಂದ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದರು. ಬಹುಜನ ಸಮಾಜ ಪಕ್ಷದ ಪ್ರಮುಖ ನೇತಾರರಾದ ಎನ್.ಮಹೇಶ್‍ರವರು ಕೊಳ್ಳೇಗಾಲದಲ್ಲಿ, ಸ್ವರಾಜ್ ಇಂಡಿಯಾದ ವತಿಯಿಂದ ದರ್ಶನ್ ಪುಟ್ಟಣ್ಣಯ್ಯ ಮೇಲುಕೋಟೆಯಲ್ಲಿ, ಬಾಗೇಪಲ್ಲಿಯಲ್ಲಿ ಮಾಜಿ ಶಾಸಕರು ಮತ್ತು ಸಿಪಿಐಎಂನ ರಾಜ್ಯ ಕಾರ್ಯದರ್ಶಿ ಜಿ.ವಿ.ಶ್ರೀರಾಮರೆಡ್ಡಿಯವರು ಒಂದೋ ಗೆಲ್ಲುತ್ತಾರೆ ಅಥವಾ ಎರಡನೇ ಸ್ಥಾನಕ್ಕೆ ಬರುತ್ತಾರೆ ಎಂದು ಭಾವಿಸಲಾಗಿತ್ತು. ಇವರಲ್ಲಿ ಎನ್.ಮಹೇಶ್ ಅವರು ಗೆದ್ದಿದ್ದಾರೆ ಮತ್ತು ಉಳಿದಿಬ್ಬರು ಎರಡನೇ ಸ್ಥಾನಕ್ಕೆ ಬಂದಿದ್ದಾರೆ.

ಶ್ರೀರಾಮ ರೆಡ್ಡಿ

ಇವರಲ್ಲದೇ ಲಂಚಮುಕ್ತ ಕರ್ನಾಟಕ ವೇದಿಕೆಯ ರವಿಕೃಷ್ಣಾರೆಡ್ಡಿಯವರು ಸ್ಪರ್ಧಿಸಿದ್ದ ಜಯನಗರದಲ್ಲಿ ಬಿಜೆಪಿ ಅಭ್ಯರ್ಥಿಯ ಸಾವಿನಿಂದಾಗಿ ಚುನಾವಣೆ ಮುಂದಕ್ಕೆ ಹೋಗಿದೆ. ಸಿಪಿಐಎಂನ ಮುನೀರ್ ಕಾಟಿಪಳ್ಳ (ಮಂಗಳೂರು ಉತ್ತರ) ಮತ್ತಿತರರು, ಆಮ್ ಆದ್ಮಿ ಪಕ್ಷದಿಂದ ಪೃಥ್ವಿರೆಡ್ಡಿ (ಸರ್ವಜ್ಞನಗರ), ಮೋಹನ್‍ದಾಸರಿ (ಸಿ.ವಿ.ರಾಮನ್ ನಗರ), ಭಾಸ್ಕರ್ ಪ್ರಸಾದ್ (ಮಹದೇವಪುರ) ಮತ್ತಿತರರು ಸ್ಪರ್ಧಿಸಿದ್ದರು. ಸಿಪಿಐಎಂಎಲ್ ರೆಡ್‍ಸ್ಟಾರ್‍ನ ಮಾನಸಯ್ಯನವರು ಲಿಂಗಸುಗೂರಿನಿಂದ, ಎಸ್‍ಯುಸಿಐ ಪಕ್ಷದ ರಾಮಾಂಜಿನಪ್ಪನವರು ಸಂಡೂರಿನಿಂದ, ವೆಲ್‍ಫೇರ್ ಪಾರ್ಟಿ ಆಫ್ ಇಂಡಿಯಾದ ಅಬ್ದುಲ್ ಬಾರಿಯವರು ಕಲಬುರಗಿ ದಕ್ಷಿಣದಿಂದ ಸ್ಪರ್ಧಿಸಿದ್ದು ಇವರಲ್ಲಿ ಕೆಲವರಿಗೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದ್ದವು. ಇವರುಗಳ ಜೊತೆಗೆ ರಾಜ್ಯದೆಲ್ಲೆಡೆ ಇನ್ನೂ ಹಲವಾರು ಜನ ಚಳವಳಿಯ ಹಿನ್ನೆಲೆಯ ವ್ಯಕ್ತಿಗಳು ಸ್ಪರ್ಧಿಸಿದ್ದರು.

ದರ್ಶನ್ ಪುಟ್ಟಣ್ಣಯ್ಯ

ಇಂತಹವರ ಪೈಕಿ ಇಡೀ ರಾಜ್ಯದಲ್ಲಿ ಗೆದ್ದ ಏಕೈಕ ಅಭ್ಯರ್ಥಿ ಎನ್.ಮಹೇಶ್ ಅವರಾಗಿದ್ದಾರೆ. ಮೇಲುಕೋಟೆಯಲ್ಲಿ ದರ್ಶನ್ ಅವರು 73,779 ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದರು ಮತ್ತು ಶ್ರೀರಾಮರೆಡ್ಡಿಯವರು 51,697 ಮತಗಳನ್ನು ಪಡೆದಿದ್ದಾರೆ. ಉಳಿದಂತೆ ಯಾವ ಅಭ್ಯರ್ಥಿಗಳೂ 2,500 ಮತಗಳನ್ನೂ ಪಡೆದುಕೊಳ್ಳುವುದು ಸಾಧ್ಯವಾಗಿಲ್ಲ. ಇದು ಪರ್ಯಾಯ ರಾಜಕಾರಣದ ಕುರಿತು ಗಂಭೀರವಾದ ಪ್ರಯೋಗಗಳಲ್ಲಿ ತೊಡಗಿರುವ ಪಕ್ಷಗಳು ಮತ್ತು ಅವರನ್ನು ಬೆಂಬಲಿಸುತ್ತಿರುವ ಚಳವಳಿಗಳನ್ನು ಖಂಡಿತಾ ಚಿಂತನೆಗೆ ದೂಡಬೇಕಿದೆ. ಇಂದಿನ ರಾಜಕೀಯ ಸಂದರ್ಭದಲ್ಲಿ ಜನಪರವಾದ ಅಭ್ಯರ್ಥಿಗಳು ಸ್ಪರ್ಧಿಸುವುದರಿಂದ ಬಿಜೆಪಿಗೆ ಅನುಕೂಲವಾಗಬಹುದು ಎಂಬ ಆತಂಕ ಹಲವರಿಗಿತ್ತು. ವಾಸ್ತವದಲ್ಲಿ ಈ ಎಲ್ಲಾ ಕ್ಷೇತ್ರಗಳಲ್ಲಿ ಯಾರಿಗೂ ಅನುಕೂಲ ಅಥವಾ ಅನಾನುಕೂಲವಾಗದಷ್ಟು ನಗಣ್ಯವಾಗಿ ಇವರುಗಳ ಸ್ಪರ್ಧೆ ಇದ್ದುದು ಏಕೆ ಎಂಬುದು ಗಂಭೀರವಾದ ಸಂಗತಿಯೇ.

ಅದೇ ಸಂದರ್ಭದಲ್ಲಿ ಗೆದ್ದ ಅಥವಾ ಗೆಲುವಿನ ಸಮೀಪ ಬಂದಿರುವ ಈ ಮೂರು ಕ್ಷೇತ್ರಗಳಲ್ಲಿ ಆ ಸಾಧನೆಗೆ ಏನು ಕಾರಣ ಎಂಬುದನ್ನೂ ನೋಡಬೇಕು. ಈ ಕ್ಷೇತ್ರಗಳಲ್ಲಿ ಆಯಾ ಪಕ್ಷಗಳು/ಸಂಘಟನೆಗಳು ಕನಿಷ್ಠ 20 ವರ್ಷಗಳಿಂದ 50 ವರ್ಷಗಳವರೆಗೆ ಅಸ್ತಿತ್ವದಲ್ಲಿವೆ. ನಿರಂತರವಾಗಿ ಅಲ್ಲಿ ಕ್ಷೇತ್ರಗಳನ್ನು ಮ್ಯಾನೇಜ್ ಮಾಡುತ್ತಿರಲಾಗುತ್ತದೆ. ಉಳಿದವರೆಲ್ಲರೂ ಚುನಾವಣೆಗೆ ಮುಂಚೆ ಅಲ್ಲಿ ಹೋಗಿ ಅಥವಾ ಕೆಲವು ತಿಂಗಳುಗಳ ಪ್ರಚಾರ ನಡೆಸಿದ ಮ್ಯಾಜಿಕ್ ನಿರೀಕ್ಷಿಸಿದವರು. ಈ ಸಾರಿ ಪ್ರಯೋಗಾತ್ಮಕವಾಗಿ ಸ್ಪರ್ಧಿಸಿದ್ದೇವೆಂದು ಹೇಳಿದರೆ ತೊಂದರೆಯಿಲ್ಲ. ಈ ಅನುಭವವೂ ಕೆಲಸಕ್ಕೆ ಬರುತ್ತದೆ. ಆದರೆ, ಚುನಾವಣೆ ನಡೆದ ಮರುದಿನದಿಂದ ಅಲ್ಲಿ ಏನು ಮಾಡುತ್ತಾರೆಂಬುದು ಮುಖ್ಯ. ಅದನ್ನು ಮಾಡದೇ, ತಾವು ನಡೆಸಿದ ಒಂದು ಸಣ್ಣ ಜನವಿಭಾಗಕ್ಕೆ ಸೀಮಿತವಾದ ಚಳವಳಿಯ ಕಾರಣದಿಂದ ತಮ್ಮನ್ನು ಗೆಲ್ಲಿಸಬೇಕೆಂದು ಬಯಸಿದರೆ, ಇತರ ರಾಜಕಾರಣಿಗಳಿಗಿಂತ ಉಡಾಫೆಯಿಂದ ರಾಜಕಾರಣವನ್ನು ತೆಗೆದುಕೊಂಡಿದ್ದಾರೆಂದು ಅರ್ಥವಾಗುತ್ತದೆ.

ಆದರೆ, ನಿರಂತರವಾಗಿ ಜನಪರವಾಗಿದ್ದು ಸರಳವಾಗಿ ಸ್ವಚ್ಛವಾಗಿ ಬದುಕುತ್ತಿರುವ ವೈ.ಎಸ್.ವಿ.ದತ್ತಾರನ್ನೂ ಜನರು ಸೋಲಿಸಿದ್ದಾರೆ. ದತ್ತಾ ಕೆಲಸ ಮಾಡಿಲ್ಲ ಎಂದು ಸ್ಥಳೀಯರು ಹೇಳುತ್ತಾರಂತೆ. ನಿರಂತರವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಾ ಬಂದಿದ್ದ ರೈತಸಂಘದ ಕೆ.ಎಸ್.ನಂಜುಂಡೇಗೌಡರು ಸತತವಾಗಿ 6 ಚುನಾವಣೆಗಳಲ್ಲಿ ಸೋತರು. ಸೋತ ಮರುದಿನದಿಂದಲೇ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತಾ ಕಚೇರಿಗಳಿಗೆ ಅಲೆಯುತ್ತಿದ್ದರು. ಆದರೂ ಸತತವಾಗಿ ಸೋಲಬೇಕಾಗಿ ಬಂದುದು ಅವರನ್ನು ಕಂಗೆಡಿಸಿತ್ತು. ಜೆಡಿಎಸ್ ಎಂಎಲ್‍ಎ ಕಾಂಗ್ರೆಸ್‍ಗೆ ಪಕ್ಷಾಂತರ ಮಾಡುವುದು ಖಾತರಿಯಾದಾಗ, ಜೆಡಿಎಸ್ ಸೇರಿದರು. ಅಲ್ಲಿ ಟಿಕೆಟ್ ದೊರಕುವುದಿಲ್ಲ ಎಂಬುದು ಖಾತ್ರಿಯಾದಾಗ ಬಿಜೆಪಿಗೂ ಹೋಗಿ ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದರು. ಹಿಂದೊಮ್ಮೆ 2-3 ಸಾವಿರ ಮತಗಳ ಅಂತರದಿಂದ ಸ್ಪರ್ಧಿಸಿ ಸೋಲುಂಡಿದ್ದ ನಂಜುಂಡೇಗೌಡರಿಗೆ ಬೀಳುವ ಮತಗಳ ಪ್ರಮಾಣ ಚುನಾವಣೆಯಿಂದ ಚುನಾವಣೆಗೆ ಕಡಿಮೆಯಾಗುತ್ತಾ ಬಂದಿತ್ತು. ಈ ಸಾರಿ ಬಿಜೆಪಿ ಅಭ್ಯರ್ಥಿಯಾದರೂ 11,326 ಮತಗಳಷ್ಟೇ ಬಿದ್ದವು. ಕೊಳ್ಳೇಗಾಲದಲ್ಲೂ ಯಾವ್ಯಾವ ಅಂಶಗಳು ಗೆಲುವಿಗೆ ಕಾರಣವಾಗಿವೆ ಮತ್ತು ಹಣ ಎಷ್ಟು ಖರ್ಚಾಗಿದೆ ಎಂಬುದನ್ನು ಪ್ರತ್ಯೇಕವಾಗಿ ಖಾಸಗಿಯಾಗಿ ಎನ್.ಮಹೇಶ್ ಅವರ ಜೊತೆ ಚರ್ಚಿಸಿಕೊಳ್ಳಬೇಕಿದೆ.

ಆಗ ಪರ್ಯಾಯ ರಾಜಕಾರಣಕ್ಕೆ ಬೇಕಾದ ಪಾಠಗಳು ಸಿಗುತ್ತವೆ ಮತ್ತು ಇಂದಿನ ಕಾಲಮಾನದಲ್ಲಿ ಪರ್ಯಾಯ ರಾಜಕಾರಣ ಸಾಧ್ಯವೇ? ಇಲ್ಲವೇ? ಎಂಬುದು ತಿಳಿಯುತ್ತದೆ. ಈ ಚುನಾವಣಾ ಮಾದರಿಯಲ್ಲಿಯೇ ಇರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳದೇ ಪರ್ಯಾಯ ಸಾಧ್ಯವೇ ಎಂಬುದು ಚರ್ಚೆಯ ಒಂದು ಸಂಗತಿಯಾಗಿದ್ದರೆ, ಪರ್ಯಾಯ ಜನಾಂದೋಲನವಿಲ್ಲದೇ ಪರ್ಯಾಯ ರಾಜಕಾರಣ ಸಾಧ್ಯವೇ ಎಂಬುದು ಇನ್ನೊಂದು ಚರ್ಚಾಸ್ಪದ ಸಂಗತಿಯಾಗಿದೆ. ಇದನ್ನು ಈ ಸಾರಿಯ ಚುನಾವಣೆಯೂ ಸಾಬೀತುಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...