Homeರಾಜಕೀಯಈ ಫಲಿತಾಂಶ ಮತ್ತು ಆ ಚುನಾವಣೆ

ಈ ಫಲಿತಾಂಶ ಮತ್ತು ಆ ಚುನಾವಣೆ

- Advertisement -
- Advertisement -

ಗೌತಮ |

ಕರ್ನಾಟಕದ ವಿಧಾನಸಭಾ ಚುನಾವಣೆಯನ್ನು ಮಾಧ್ಯಮಗಳು ಮತ್ತು ರಾಜಕೀಯ ವಿಶ್ಲೇಷಕರು 2019ರ ಲೋಕಸಭಾ ಚುನಾವಣೆಯ ಸೆಮಿಫೈನಲ್ ಎಂದು ಬಿಂಬಿಸಿವೆ. ಮೇಲ್ನೋಟಕ್ಕೆ ಅದು ಸರಿ ಎಂದು ಕೂಡ ಅನ್ನಿಸುತ್ತಿತ್ತು. ಅನ್ನಿಸುತ್ತಿದೆ. ರಾಜಕಾರಣದಲ್ಲಿ ಕಂಡದ್ದು, ಕೇಳಿದ್ದು ಮಾತ್ರ ‘ಸತ್ಯ’ ಅಲ್ಲ. ಹಾಗಾದರೆ ಕರ್ನಾಟಕದ ಚುನಾವಣೆಯು ಸೆಮಿಫೈನಲ್ ಅಲ್ಲವೇ? ಎಂಬ ಪ್ರಶ್ನೆ ಉದ್ಭವಿಸುವುದು ಸಹಜ. ಆಟದ ನಿಯಮಗಳು ರಾಜಕೀಯಕ್ಕೆ ಅನ್ವಯಿಸುವುದಿಲ್ಲ. ಜನ ರಾಜಕೀಯ ಆಯ್ಕೆಯನ್ನು ಆಟದ ರೀತಿಯಲ್ಲಿ ಮನರಂಜನೆ ಎಂದು ಭಾವಿಸುವುದಿಲ್ಲ. ಯಾಕೆಂದರೆ ಅವರಿಗೆ ತಮ್ಮ ಆಯ್ಕೆ ಉಂಟು ಮಾಡುವ ಅಪಾಯದ ಅರಿವು-ಮುನ್ಸೂಚನೆ ಇದ್ದೇ ಇರುತ್ತದೆ. ಎರಡು ಚುನಾವಣೆಯ ನಡುವಿನ ಅವಧಿಯಲ್ಲಿ ‘ಮತದಾರ ಪ್ರಭು’ ಅಸಹಾಯಕ. ಅದು ಅವನಿಗೆ ಗೊತ್ತಿರದ ಸಂಗತಿಯೇನಲ್ಲ. ಸಣ್ಣಪುಟ್ಟ ಬದಲಾವಣೆ-ಘಟನೆ-ಬೆಳವಣಿಗೆಗಳೂ ಸಂಕೇತ-ಸೂಚನೆ ನೀಡುತ್ತವೆ ಎನ್ನುವುದು ಒಂದು ಹಂತದ ಮಟ್ಟಿಗಿನ ತರ್ಕಕ್ಕೆ ಸರಿ. ತರ್ಕವು ಸತ್ಯದ ಸಮೀಪ ಹೋಗಬಹು ದಾದ ದಾರಿ ಮಾತ್ರ. ತರ್ಕದಿಂದಲೇ ಸತ್ಯವನ್ನು ಅರಿಯಲು-ಪಡೆಯಲು ಸಾಧ್ಯವಿಲ್ಲ. ಹಾಗಾದರೆ ಅದು ಹೇಗೆ ಸಿಗುತ್ತದೆ? ಅದನ್ನು ಪಡೆಯುವ ಕ್ರಮ ಏನು? ಅದು ವರ್ತಮಾನವನ್ನು ಹಿಡಿಯುವ ಹಂಬಲದ ಹಾಗೆ. ಸಿಕ್ಕಿತು ಎಂದು ಅನ್ನಿಸುವ ವೇಳೆಗಾಗಲೇ ಅದು ಬದಲಾಗಿ ಬಿಟ್ಟಿರುತ್ತದೆ. ಅದಿರಲಿ.

 ಒಮ್ಮೆ ಓಟು ಕೊಟ್ಟ ಮೇಲೆ ಮತದಾರ ಮೂಕಪ್ರೇಕ್ಷಕ ಆಗುತ್ತಾನೆ. ಐದು ವರ್ಷದವರೆಗೆ ಬರಿ ನೋಡುವುದಷ್ಟೇ ಅವನ ಕೆಲಸ. ಸಾಕ್ಷಿ ಆಗಿ ಉಳಿಯುತ್ತಾನೆ. ಭಾಗಿ ಆಗಲು ಅವಕಾಶವೇ ಇಲ್ಲದ ಮೇಲೆ ಸಾಕ್ಷಿ ಮಾತ್ರ ಆಗಿ ಉಳಿಯುವ ಅನಿವಾರ್ಯ ಸ್ಥಿತಿ ಅವನ ಮುಂದಿರುತ್ತದೆ. ಮಧ್ಯೆ ಬರುವ ರಾಜ್ಯಗಳ ಚುನಾವಣೆಗಳು ಆಯಾಭಾಗದ ಮನಸ್ಥಿತಿ ಮಾತ್ರ ಆಗಿರುತ್ತದೆ. ಇಡೀ ಇಂಡಿಯಾದ ಆಯ್ಕೆ ಆಗಿರುವುದಿಲ್ಲ. ಮತದಾರನಿಗೆ ತಾನು ಆಯ್ಕೆ ಮಾಡುತ್ತಿರುವುದು ‘ಲೋಕಸಭೆ’ ಮತ್ತು ‘ವಿಧಾನಸಭೆ’ಗೆ ಎಂಬುದರ ಸ್ಪಷ್ಟ ಅರಿವು ಇದ್ದೇ ಇದೆ. ಇರುತ್ತದೆ. ಅದಕ್ಕಾಗಿ ಭಾರತೀಯ ಮತದಾರರನ್ನು ಅನಕ್ಷರಸ್ಥ ಆದರೆ ಪ್ರಜ್ಞಾವಂತ ಎಂದು ಗುರುತಿಸುವುದು. ಕೋಟೆಯನ್ನು ಪ್ರಬಲಗೊಳಿಸಲು ಬಿಟ್ಟು ನೋಡುತ್ತ ಕುಳಿತು ಕೊಳ್ಳುವ ಮತದಾರನಿಗೆ ಕೋಟೆ ಕಟ್ಟಿದವ ತನ್ನ ಮುಂದೆ ಬಂದು ನಿಲ್ಲುತ್ತಾನೆ ಎಂದು ಗೊತ್ತಿದೆ. ಅದಕ್ಕಾಗಿ ಕೋಟೆಯ ನಿರ್ಮಾಣ ಕಾರ್ಯ ಎಷ್ಟೇ ಪ್ರಬಲವಾಗಿ ನಡೆದರೂ ನೋಡಿಯೇ ಇಲ್ಲದಂತೆ ಸುಮ್ಮನಿರುತ್ತಾನೆ. ನಿರ್ಣಾಯಕ ಹಂತ ಬರುವವರೆಗೆ ಕಾಯುವ ಆಟ ರಾಜಕಾರಣಿಗಳಿಗಿಂತ ಮತದಾರನಿಗೆ ಚೆನ್ನಾಗಿ ಗೊತ್ತಿದೆ. ಭಾರತದಲ್ಲಿ ಅಂತಹ ಹಲವು ನಿರ್ಣಯಗಳನ್ನು ತೋರಿಸಿದ್ದನ್ನು ನಾವು ನೋಡಿದ್ದೇವೆ. ನೋಡುತ್ತಿದ್ದೇವೆ.

ವಿಧಾನಸಭಾ ಚುನಾವಣೆಗಳು ಸಂಕೇತ-ಸೂಚನೆ ನೀಡುತ್ತವೆ. ಕರ್ನಾಟಕದ ಚುನಾವಣೆಯೂ 2019ಕ್ಕೆ ಸಂಬಂಧಿಸಿದಂತೆ ಸೂಚನೆ ನೀಡಿದೆ. ಕೇಂದ್ರದಲ್ಲಿರುವ ಸರ್ಕಾರದ ಬಗ್ಗೆ ಅಸಮಾಧಾನ ಇದ್ದರೂ ಅದು ವಿರೋಧಿ ಮತವಾಗಿ ಪರಿವರ್ತನೆ ಆಗಿಲ್ಲ. ಹಾಗೆಯೇ ಆಗದೇ ಇರುವುದಕ್ಕೆ ತನಗಾದ-ಆಗುತ್ತಿರುವ ತೊಂದರೆಗಿಂತ ಮುಸ್ಲಿಮರು ಮತ್ತು ದಲಿತರ ವಿರೋಧಿ ನಿಲುವೇ ಕಾರಣ. ಅಸ್ಪೃಶ್ಯರನ್ನು ಸಮಾನವಾಗಿ ನೋಡಬಯಸದ ಮನಸ್ಥಿತಿ ಹಾಗೂ ಮುಸ್ಲಿಮರ ಬಗ್ಗೆ ಇರುವ ಅನೂಹ್ಯ ಭೀತಿ ಇವೆರಡನ್ನೂ ಹುಟ್ಟಿಸುವಲ್ಲಿ ಮತ್ತು ಅದು ತಳಹಂತದವರೆಗೂ ಹರಡುವಂತೆ ಮಾಡುವಲ್ಲಿ ಕೇಂದ್ರದ ಆಡಳಿತಾರೂಢ ಪಕ್ಷ ಯಶಸ್ವಿಯಾಗಿದೆ. ಅದು ಕೇಂದ್ರದಲ್ಲಿ ರಾಜಕೀಯ ಪಕ್ಷದ ‘ಸಾಧನೆ’ ಎನ್ನುವುದಕ್ಕಿಂತ ಹೆಚ್ಚಾಗಿ ಅದನ್ನು ರೂಪಿಸುತ್ತಿರುವ ‘ಚಿಂತನಾ ಕ್ರಮ’ದ ‘ಗೆಲುವು’ ಎನ್ನುವುದರಲ್ಲಿ ಎರಡು ಮಾತಿಲ್ಲ. ಕರ್ನಾಟಕದ ವಿಧಾನಸಭಾ ಚುನಾವಣೆಯ ಫಲಿತಾಂಶವು ಬಹುಜನರ ಪರವಾಗಿ ರಾಜಕಾರಣ ಮಾಡುವುದರ ಅಪಾಯದ ಮುನ್ಸೂಚನೆ ನೀಡಿದೆ. ಹಾಗೆ ಅವರನ್ನು ಬಿಟ್ಟುಕೊಡದೇ ಪ್ರಬಲರ ಮತಗಳನ್ನು ಬುಟ್ಟಿಗೆ ಹಾಕಿಕೊಳ್ಳುವ ಬಗ್ಗೆ ಕಂಡುಕೊಳ್ಳಬೇಕಾದ ದಾರಿಯ ಬಗ್ಗೆ ಯೋಚಿಸಲು ವಿರೊಧಪಕ್ಷಗಳಿಗೆ ಇದು ಸಕಾಲ.

ವಾಸ್ತವವಾಗಿ ವಿಧಾನಸಭೆಯ ಚುನಾವಣೆಗೂ ಲೋಕಸಭಾ ಚುನಾವಣೆಗೂ ನೇರ ಸಂಬಂಧ ಇಲ್ಲ. ವಿಧಾನಸಭಾ ಚುನಾವಣೆಗಳು ಮತ್ತು ಅದರ ಫಲಿತಾಂಶಗಳು ಕೇಂದ್ರದಲ್ಲಿರುವ ಸರ್ಕಾರದ-ಪಕ್ಷದ ಆತ್ಮವಿಶ್ವಾಸ ಮತ್ತು ಓಟದ ವೇಗ ಹೆಚ್ಚಿಸುವ- ಕಡಿಮೆ ಮಾಡಲು ಕಾರಣವಾಗುತ್ತವೆ. ಹಾಗಂತ ವಿಧಾನಸಭಾ ಚುನಾವಣೆಗಳ ಫಲಿತಾಂಶವೇ ಲೋಕಸಭೆಯಲ್ಲಿ ಪ್ರತಿಧ್ವನಿಸುತ್ತದೆ ಎಂದು ಭಾವಿಸಬೇಕಿಲ್ಲ. ವಿಧಾನಸಭಾ ಚುನಾವಣೆಗಳಲ್ಲಿ ತೋರಿದ ನಿಲುವಿಗೆ ತೀರಾ ವ್ಯತಿರಿಕ್ತವಾದ ನಿಲುವು ತೋರಿಸಿದ ನೂರಾರು ಉದಾಹರಣೆಗಳು ನಮ್ಮ ಮುಂದಿವೆ. ಅಧಿಕಾರದಲ್ಲಿ ಇರುವವರ ಆತ್ಮವಿಶ್ವಾಸ ಹೆಚ್ಚುವಂತೆ ಮಾಡುವುದು ಕೂಡ ಮತದಾರ ತೋರಿಸುವ ‘ಜಾಣ ನಡೆ’ ಎಂದು ವ್ಯಾಖ್ಯಾನಿಸಬೇಕಾಗುತ್ತದೆ.

2014ರ ಲೋಕಸಭಾ ಚುನಾವಣೆಯ ನಂತರ ದೆಹಲಿಯಲ್ಲಿ ತೀವ್ರ ಪ್ರತಿಕ್ರಿಯೆ ವ್ಯಕ್ತದಾದದ್ದು ಬಿಟ್ಟರೆ ಉಳಿದಂತೆ ಎಲ್ಲ ಕಡೆಗಳಲ್ಲಿಯೂ ‘ಪ್ರಭುತ್ವ’ ತನ್ನ ಹಸ್ತ ಚಾಚುವಲ್ಲಿ ಯಶ ಕಂಡಂತೆ ಭಾಸವಾಗುತ್ತದೆ. ಬಿಹಾರದ ಮತದಾರ ನೀಡಿದ ಫಲಿತಾಂಶವೂ ಆಡಳಿತಾರೂಢರ ಪರವಾಗುವಂತೆ ಮಾಡಿದ್ದು ‘ಮುತ್ಸದ್ದಿ’ ರಾಜಕಾರಣಿಯೇ. ಉತ್ತರ ಪ್ರದೇಶದಲ್ಲಿ ಕೋಮುಭಾವನೆ ಕೆರಳಿಸುವ ಮೂಲಕ ವಿರೋಧಿಗಳನ್ನು ‘ಅಸಹಾಯಕ’ ಮಾಡುವಲ್ಲಿ ಕೇಂದ್ರ ಯಶಸ್ವಿಯಾದಂತೆ ಭಾಸವಾಗುತ್ತಿದೆ. ಪಂಜಾಬ್, ಗೋವಾ, ಅರುಣಾಚಲ ಪ್ರದೇಶ, ಸಿಕ್ಕಿಂಗಳಲ್ಲಿ ಕೇಂದ್ರದಲ್ಲಿ ಅಧಿಕಾರದಲ್ಲಿ ಇರುವ ಪಕ್ಷದ ವಿರುದ್ಧ ಮತ ಚಲಾವಣೆಯಾದರೂ ‘ತಂತ್ರ’ದಿಂದ ಅಧಿಕಾರ ಅನುಭವಿಸುವಲ್ಲಿ ಯಶಸ್ವಿಯಾಗಿದೆ. ಕರ್ನಾಟಕದ ಚುನಾವಣಾ ಫಲಿತಾಂಶವು ಕೂಡ ಮೇಲ್ನೋಟಕ್ಕೆ ಕೇಂದ್ರದಲ್ಲಿ ಅಧಿಕಾರದಲ್ಲಿ ಇರುವ ಪಕ್ಷದ ಪರವಾದ ನಿಲುವು ಎಂಬಂತೆ ಭಾಸವಾಗುತ್ತದೆ. ಕೇಂದ್ರದ ನಾಯಕರ ಆರ್ಭಟ- ತೋರಿದ ಆಸಕ್ತಿ ಹಾಗೆ ಅನ್ನಿಸುವಂತೆ ಮಾಡಿದೆ. ಲೋಕಸಭಾ ಚುನಾವಣೆಗೂ ಮುನ್ನ ನಡೆಯಲಿರುವ ಮಧ್ಯಪ್ರದೇಶ ಮತ್ತು ರಾಜಸ್ತಾನ ಚುನಾವಣೆಗಳು ಕೂಡ ನೀಡುವ ‘ಸಂಕೇತ’ವನ್ನೂ ಗಮನಿಸಬೇಕು. ಆದರೆ, ಸಂಕೇತಗಳೇ ಸತ್ಯವಾಗಿ ಪರಿವರ್ತನೆ ಆಗುತ್ತವೆ ಎಂದು ಭಾವಿಸಬೇಕಿಲ್ಲ. ತೋರುದೀಪ ಮಾತ್ರ ಗುರಿಯಲ್ಲ.

ರಾಜ್ಯಗಳ ದಂಡಯಾತ್ರೆಯಲ್ಲಿ ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿಗೆ ಅಧಿಕಾರ ಸಿಗದಂತೆ ಮಾಡುವ ಪ್ರಯತ್ನಗಳು ತೀರಾ ವೇಗವಾಗಿ ನಡೆಯುತ್ತಿವೆ. ಅದು ಬಹುತೇಕ ಸಫಲವಾಗುವ ಸಾಧ್ಯತೆಗಳೇ ಹೆಚ್ಚು. ವಿಧಾನಸಭೆ ಚುನಾವಣೆಗಳ ಫಲಿತಾಂಶಗಳ ಆಧಾರದ ಮೇಲೆ ‘ಭಾರತ’ ನಿರ್ಧರಿಸುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಮುಂದೆ ನಿರ್ಣಾಯಕ ಗಳಿಗೆಯಲ್ಲಿ ‘ಮಾರಿಹಬ್ಬ’ ಮಾಡುವುದಕ್ಕಾಗಿಯೇ ಗುಟ್ಟು ಬಿಟ್ಟುಕೊಡದೆ ಕಾಯುತ್ತಿರುತ್ತಾನೆ ಎಂಬುದು ಸುಳ್ಳೇನಲ್ಲ. ಸಣ್ಣಪುಟ್ಟ ಸಂಗತಿಗಳಿಗೆ ಪ್ರತಿಕ್ರಿಯೆ ನೀಡಿ ಕೈ ಸುಟ್ಟುಕೊಳ್ಳಲು ಮತದಾರರು ಬಯಸುವುದಿಲ್ಲ. ನಿರ್ಣಾಯಕ ಘಟ್ಟಕ್ಕಾಗಿ ಕಾಯುತ್ತಾರೆ. 2019 ಅಂತಹ ‘ಕಾಯುವಿಕೆ’ಗೆ ಅಂತ್ಯ ಹಾಡಲಿದೆ. ಅದಕ್ಕಿಂತ ಮೊದಲಿನವುಗಳೆಲ್ಲ ಪ್ರಕ್ರಿಯೆ ಮಾತ್ರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...