Homeರಾಜಕೀಯಈ ಫಲಿತಾಂಶ ಮತ್ತು ಆ ಚುನಾವಣೆ

ಈ ಫಲಿತಾಂಶ ಮತ್ತು ಆ ಚುನಾವಣೆ

- Advertisement -
- Advertisement -

ಗೌತಮ |

ಕರ್ನಾಟಕದ ವಿಧಾನಸಭಾ ಚುನಾವಣೆಯನ್ನು ಮಾಧ್ಯಮಗಳು ಮತ್ತು ರಾಜಕೀಯ ವಿಶ್ಲೇಷಕರು 2019ರ ಲೋಕಸಭಾ ಚುನಾವಣೆಯ ಸೆಮಿಫೈನಲ್ ಎಂದು ಬಿಂಬಿಸಿವೆ. ಮೇಲ್ನೋಟಕ್ಕೆ ಅದು ಸರಿ ಎಂದು ಕೂಡ ಅನ್ನಿಸುತ್ತಿತ್ತು. ಅನ್ನಿಸುತ್ತಿದೆ. ರಾಜಕಾರಣದಲ್ಲಿ ಕಂಡದ್ದು, ಕೇಳಿದ್ದು ಮಾತ್ರ ‘ಸತ್ಯ’ ಅಲ್ಲ. ಹಾಗಾದರೆ ಕರ್ನಾಟಕದ ಚುನಾವಣೆಯು ಸೆಮಿಫೈನಲ್ ಅಲ್ಲವೇ? ಎಂಬ ಪ್ರಶ್ನೆ ಉದ್ಭವಿಸುವುದು ಸಹಜ. ಆಟದ ನಿಯಮಗಳು ರಾಜಕೀಯಕ್ಕೆ ಅನ್ವಯಿಸುವುದಿಲ್ಲ. ಜನ ರಾಜಕೀಯ ಆಯ್ಕೆಯನ್ನು ಆಟದ ರೀತಿಯಲ್ಲಿ ಮನರಂಜನೆ ಎಂದು ಭಾವಿಸುವುದಿಲ್ಲ. ಯಾಕೆಂದರೆ ಅವರಿಗೆ ತಮ್ಮ ಆಯ್ಕೆ ಉಂಟು ಮಾಡುವ ಅಪಾಯದ ಅರಿವು-ಮುನ್ಸೂಚನೆ ಇದ್ದೇ ಇರುತ್ತದೆ. ಎರಡು ಚುನಾವಣೆಯ ನಡುವಿನ ಅವಧಿಯಲ್ಲಿ ‘ಮತದಾರ ಪ್ರಭು’ ಅಸಹಾಯಕ. ಅದು ಅವನಿಗೆ ಗೊತ್ತಿರದ ಸಂಗತಿಯೇನಲ್ಲ. ಸಣ್ಣಪುಟ್ಟ ಬದಲಾವಣೆ-ಘಟನೆ-ಬೆಳವಣಿಗೆಗಳೂ ಸಂಕೇತ-ಸೂಚನೆ ನೀಡುತ್ತವೆ ಎನ್ನುವುದು ಒಂದು ಹಂತದ ಮಟ್ಟಿಗಿನ ತರ್ಕಕ್ಕೆ ಸರಿ. ತರ್ಕವು ಸತ್ಯದ ಸಮೀಪ ಹೋಗಬಹು ದಾದ ದಾರಿ ಮಾತ್ರ. ತರ್ಕದಿಂದಲೇ ಸತ್ಯವನ್ನು ಅರಿಯಲು-ಪಡೆಯಲು ಸಾಧ್ಯವಿಲ್ಲ. ಹಾಗಾದರೆ ಅದು ಹೇಗೆ ಸಿಗುತ್ತದೆ? ಅದನ್ನು ಪಡೆಯುವ ಕ್ರಮ ಏನು? ಅದು ವರ್ತಮಾನವನ್ನು ಹಿಡಿಯುವ ಹಂಬಲದ ಹಾಗೆ. ಸಿಕ್ಕಿತು ಎಂದು ಅನ್ನಿಸುವ ವೇಳೆಗಾಗಲೇ ಅದು ಬದಲಾಗಿ ಬಿಟ್ಟಿರುತ್ತದೆ. ಅದಿರಲಿ.

 ಒಮ್ಮೆ ಓಟು ಕೊಟ್ಟ ಮೇಲೆ ಮತದಾರ ಮೂಕಪ್ರೇಕ್ಷಕ ಆಗುತ್ತಾನೆ. ಐದು ವರ್ಷದವರೆಗೆ ಬರಿ ನೋಡುವುದಷ್ಟೇ ಅವನ ಕೆಲಸ. ಸಾಕ್ಷಿ ಆಗಿ ಉಳಿಯುತ್ತಾನೆ. ಭಾಗಿ ಆಗಲು ಅವಕಾಶವೇ ಇಲ್ಲದ ಮೇಲೆ ಸಾಕ್ಷಿ ಮಾತ್ರ ಆಗಿ ಉಳಿಯುವ ಅನಿವಾರ್ಯ ಸ್ಥಿತಿ ಅವನ ಮುಂದಿರುತ್ತದೆ. ಮಧ್ಯೆ ಬರುವ ರಾಜ್ಯಗಳ ಚುನಾವಣೆಗಳು ಆಯಾಭಾಗದ ಮನಸ್ಥಿತಿ ಮಾತ್ರ ಆಗಿರುತ್ತದೆ. ಇಡೀ ಇಂಡಿಯಾದ ಆಯ್ಕೆ ಆಗಿರುವುದಿಲ್ಲ. ಮತದಾರನಿಗೆ ತಾನು ಆಯ್ಕೆ ಮಾಡುತ್ತಿರುವುದು ‘ಲೋಕಸಭೆ’ ಮತ್ತು ‘ವಿಧಾನಸಭೆ’ಗೆ ಎಂಬುದರ ಸ್ಪಷ್ಟ ಅರಿವು ಇದ್ದೇ ಇದೆ. ಇರುತ್ತದೆ. ಅದಕ್ಕಾಗಿ ಭಾರತೀಯ ಮತದಾರರನ್ನು ಅನಕ್ಷರಸ್ಥ ಆದರೆ ಪ್ರಜ್ಞಾವಂತ ಎಂದು ಗುರುತಿಸುವುದು. ಕೋಟೆಯನ್ನು ಪ್ರಬಲಗೊಳಿಸಲು ಬಿಟ್ಟು ನೋಡುತ್ತ ಕುಳಿತು ಕೊಳ್ಳುವ ಮತದಾರನಿಗೆ ಕೋಟೆ ಕಟ್ಟಿದವ ತನ್ನ ಮುಂದೆ ಬಂದು ನಿಲ್ಲುತ್ತಾನೆ ಎಂದು ಗೊತ್ತಿದೆ. ಅದಕ್ಕಾಗಿ ಕೋಟೆಯ ನಿರ್ಮಾಣ ಕಾರ್ಯ ಎಷ್ಟೇ ಪ್ರಬಲವಾಗಿ ನಡೆದರೂ ನೋಡಿಯೇ ಇಲ್ಲದಂತೆ ಸುಮ್ಮನಿರುತ್ತಾನೆ. ನಿರ್ಣಾಯಕ ಹಂತ ಬರುವವರೆಗೆ ಕಾಯುವ ಆಟ ರಾಜಕಾರಣಿಗಳಿಗಿಂತ ಮತದಾರನಿಗೆ ಚೆನ್ನಾಗಿ ಗೊತ್ತಿದೆ. ಭಾರತದಲ್ಲಿ ಅಂತಹ ಹಲವು ನಿರ್ಣಯಗಳನ್ನು ತೋರಿಸಿದ್ದನ್ನು ನಾವು ನೋಡಿದ್ದೇವೆ. ನೋಡುತ್ತಿದ್ದೇವೆ.

ವಿಧಾನಸಭಾ ಚುನಾವಣೆಗಳು ಸಂಕೇತ-ಸೂಚನೆ ನೀಡುತ್ತವೆ. ಕರ್ನಾಟಕದ ಚುನಾವಣೆಯೂ 2019ಕ್ಕೆ ಸಂಬಂಧಿಸಿದಂತೆ ಸೂಚನೆ ನೀಡಿದೆ. ಕೇಂದ್ರದಲ್ಲಿರುವ ಸರ್ಕಾರದ ಬಗ್ಗೆ ಅಸಮಾಧಾನ ಇದ್ದರೂ ಅದು ವಿರೋಧಿ ಮತವಾಗಿ ಪರಿವರ್ತನೆ ಆಗಿಲ್ಲ. ಹಾಗೆಯೇ ಆಗದೇ ಇರುವುದಕ್ಕೆ ತನಗಾದ-ಆಗುತ್ತಿರುವ ತೊಂದರೆಗಿಂತ ಮುಸ್ಲಿಮರು ಮತ್ತು ದಲಿತರ ವಿರೋಧಿ ನಿಲುವೇ ಕಾರಣ. ಅಸ್ಪೃಶ್ಯರನ್ನು ಸಮಾನವಾಗಿ ನೋಡಬಯಸದ ಮನಸ್ಥಿತಿ ಹಾಗೂ ಮುಸ್ಲಿಮರ ಬಗ್ಗೆ ಇರುವ ಅನೂಹ್ಯ ಭೀತಿ ಇವೆರಡನ್ನೂ ಹುಟ್ಟಿಸುವಲ್ಲಿ ಮತ್ತು ಅದು ತಳಹಂತದವರೆಗೂ ಹರಡುವಂತೆ ಮಾಡುವಲ್ಲಿ ಕೇಂದ್ರದ ಆಡಳಿತಾರೂಢ ಪಕ್ಷ ಯಶಸ್ವಿಯಾಗಿದೆ. ಅದು ಕೇಂದ್ರದಲ್ಲಿ ರಾಜಕೀಯ ಪಕ್ಷದ ‘ಸಾಧನೆ’ ಎನ್ನುವುದಕ್ಕಿಂತ ಹೆಚ್ಚಾಗಿ ಅದನ್ನು ರೂಪಿಸುತ್ತಿರುವ ‘ಚಿಂತನಾ ಕ್ರಮ’ದ ‘ಗೆಲುವು’ ಎನ್ನುವುದರಲ್ಲಿ ಎರಡು ಮಾತಿಲ್ಲ. ಕರ್ನಾಟಕದ ವಿಧಾನಸಭಾ ಚುನಾವಣೆಯ ಫಲಿತಾಂಶವು ಬಹುಜನರ ಪರವಾಗಿ ರಾಜಕಾರಣ ಮಾಡುವುದರ ಅಪಾಯದ ಮುನ್ಸೂಚನೆ ನೀಡಿದೆ. ಹಾಗೆ ಅವರನ್ನು ಬಿಟ್ಟುಕೊಡದೇ ಪ್ರಬಲರ ಮತಗಳನ್ನು ಬುಟ್ಟಿಗೆ ಹಾಕಿಕೊಳ್ಳುವ ಬಗ್ಗೆ ಕಂಡುಕೊಳ್ಳಬೇಕಾದ ದಾರಿಯ ಬಗ್ಗೆ ಯೋಚಿಸಲು ವಿರೊಧಪಕ್ಷಗಳಿಗೆ ಇದು ಸಕಾಲ.

ವಾಸ್ತವವಾಗಿ ವಿಧಾನಸಭೆಯ ಚುನಾವಣೆಗೂ ಲೋಕಸಭಾ ಚುನಾವಣೆಗೂ ನೇರ ಸಂಬಂಧ ಇಲ್ಲ. ವಿಧಾನಸಭಾ ಚುನಾವಣೆಗಳು ಮತ್ತು ಅದರ ಫಲಿತಾಂಶಗಳು ಕೇಂದ್ರದಲ್ಲಿರುವ ಸರ್ಕಾರದ-ಪಕ್ಷದ ಆತ್ಮವಿಶ್ವಾಸ ಮತ್ತು ಓಟದ ವೇಗ ಹೆಚ್ಚಿಸುವ- ಕಡಿಮೆ ಮಾಡಲು ಕಾರಣವಾಗುತ್ತವೆ. ಹಾಗಂತ ವಿಧಾನಸಭಾ ಚುನಾವಣೆಗಳ ಫಲಿತಾಂಶವೇ ಲೋಕಸಭೆಯಲ್ಲಿ ಪ್ರತಿಧ್ವನಿಸುತ್ತದೆ ಎಂದು ಭಾವಿಸಬೇಕಿಲ್ಲ. ವಿಧಾನಸಭಾ ಚುನಾವಣೆಗಳಲ್ಲಿ ತೋರಿದ ನಿಲುವಿಗೆ ತೀರಾ ವ್ಯತಿರಿಕ್ತವಾದ ನಿಲುವು ತೋರಿಸಿದ ನೂರಾರು ಉದಾಹರಣೆಗಳು ನಮ್ಮ ಮುಂದಿವೆ. ಅಧಿಕಾರದಲ್ಲಿ ಇರುವವರ ಆತ್ಮವಿಶ್ವಾಸ ಹೆಚ್ಚುವಂತೆ ಮಾಡುವುದು ಕೂಡ ಮತದಾರ ತೋರಿಸುವ ‘ಜಾಣ ನಡೆ’ ಎಂದು ವ್ಯಾಖ್ಯಾನಿಸಬೇಕಾಗುತ್ತದೆ.

2014ರ ಲೋಕಸಭಾ ಚುನಾವಣೆಯ ನಂತರ ದೆಹಲಿಯಲ್ಲಿ ತೀವ್ರ ಪ್ರತಿಕ್ರಿಯೆ ವ್ಯಕ್ತದಾದದ್ದು ಬಿಟ್ಟರೆ ಉಳಿದಂತೆ ಎಲ್ಲ ಕಡೆಗಳಲ್ಲಿಯೂ ‘ಪ್ರಭುತ್ವ’ ತನ್ನ ಹಸ್ತ ಚಾಚುವಲ್ಲಿ ಯಶ ಕಂಡಂತೆ ಭಾಸವಾಗುತ್ತದೆ. ಬಿಹಾರದ ಮತದಾರ ನೀಡಿದ ಫಲಿತಾಂಶವೂ ಆಡಳಿತಾರೂಢರ ಪರವಾಗುವಂತೆ ಮಾಡಿದ್ದು ‘ಮುತ್ಸದ್ದಿ’ ರಾಜಕಾರಣಿಯೇ. ಉತ್ತರ ಪ್ರದೇಶದಲ್ಲಿ ಕೋಮುಭಾವನೆ ಕೆರಳಿಸುವ ಮೂಲಕ ವಿರೋಧಿಗಳನ್ನು ‘ಅಸಹಾಯಕ’ ಮಾಡುವಲ್ಲಿ ಕೇಂದ್ರ ಯಶಸ್ವಿಯಾದಂತೆ ಭಾಸವಾಗುತ್ತಿದೆ. ಪಂಜಾಬ್, ಗೋವಾ, ಅರುಣಾಚಲ ಪ್ರದೇಶ, ಸಿಕ್ಕಿಂಗಳಲ್ಲಿ ಕೇಂದ್ರದಲ್ಲಿ ಅಧಿಕಾರದಲ್ಲಿ ಇರುವ ಪಕ್ಷದ ವಿರುದ್ಧ ಮತ ಚಲಾವಣೆಯಾದರೂ ‘ತಂತ್ರ’ದಿಂದ ಅಧಿಕಾರ ಅನುಭವಿಸುವಲ್ಲಿ ಯಶಸ್ವಿಯಾಗಿದೆ. ಕರ್ನಾಟಕದ ಚುನಾವಣಾ ಫಲಿತಾಂಶವು ಕೂಡ ಮೇಲ್ನೋಟಕ್ಕೆ ಕೇಂದ್ರದಲ್ಲಿ ಅಧಿಕಾರದಲ್ಲಿ ಇರುವ ಪಕ್ಷದ ಪರವಾದ ನಿಲುವು ಎಂಬಂತೆ ಭಾಸವಾಗುತ್ತದೆ. ಕೇಂದ್ರದ ನಾಯಕರ ಆರ್ಭಟ- ತೋರಿದ ಆಸಕ್ತಿ ಹಾಗೆ ಅನ್ನಿಸುವಂತೆ ಮಾಡಿದೆ. ಲೋಕಸಭಾ ಚುನಾವಣೆಗೂ ಮುನ್ನ ನಡೆಯಲಿರುವ ಮಧ್ಯಪ್ರದೇಶ ಮತ್ತು ರಾಜಸ್ತಾನ ಚುನಾವಣೆಗಳು ಕೂಡ ನೀಡುವ ‘ಸಂಕೇತ’ವನ್ನೂ ಗಮನಿಸಬೇಕು. ಆದರೆ, ಸಂಕೇತಗಳೇ ಸತ್ಯವಾಗಿ ಪರಿವರ್ತನೆ ಆಗುತ್ತವೆ ಎಂದು ಭಾವಿಸಬೇಕಿಲ್ಲ. ತೋರುದೀಪ ಮಾತ್ರ ಗುರಿಯಲ್ಲ.

ರಾಜ್ಯಗಳ ದಂಡಯಾತ್ರೆಯಲ್ಲಿ ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿಗೆ ಅಧಿಕಾರ ಸಿಗದಂತೆ ಮಾಡುವ ಪ್ರಯತ್ನಗಳು ತೀರಾ ವೇಗವಾಗಿ ನಡೆಯುತ್ತಿವೆ. ಅದು ಬಹುತೇಕ ಸಫಲವಾಗುವ ಸಾಧ್ಯತೆಗಳೇ ಹೆಚ್ಚು. ವಿಧಾನಸಭೆ ಚುನಾವಣೆಗಳ ಫಲಿತಾಂಶಗಳ ಆಧಾರದ ಮೇಲೆ ‘ಭಾರತ’ ನಿರ್ಧರಿಸುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಮುಂದೆ ನಿರ್ಣಾಯಕ ಗಳಿಗೆಯಲ್ಲಿ ‘ಮಾರಿಹಬ್ಬ’ ಮಾಡುವುದಕ್ಕಾಗಿಯೇ ಗುಟ್ಟು ಬಿಟ್ಟುಕೊಡದೆ ಕಾಯುತ್ತಿರುತ್ತಾನೆ ಎಂಬುದು ಸುಳ್ಳೇನಲ್ಲ. ಸಣ್ಣಪುಟ್ಟ ಸಂಗತಿಗಳಿಗೆ ಪ್ರತಿಕ್ರಿಯೆ ನೀಡಿ ಕೈ ಸುಟ್ಟುಕೊಳ್ಳಲು ಮತದಾರರು ಬಯಸುವುದಿಲ್ಲ. ನಿರ್ಣಾಯಕ ಘಟ್ಟಕ್ಕಾಗಿ ಕಾಯುತ್ತಾರೆ. 2019 ಅಂತಹ ‘ಕಾಯುವಿಕೆ’ಗೆ ಅಂತ್ಯ ಹಾಡಲಿದೆ. ಅದಕ್ಕಿಂತ ಮೊದಲಿನವುಗಳೆಲ್ಲ ಪ್ರಕ್ರಿಯೆ ಮಾತ್ರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...