Homeರಾಜಕೀಯಈ ಫಲಿತಾಂಶ ಮತ್ತು ಆ ಚುನಾವಣೆ

ಈ ಫಲಿತಾಂಶ ಮತ್ತು ಆ ಚುನಾವಣೆ

- Advertisement -
- Advertisement -

ಗೌತಮ |

ಕರ್ನಾಟಕದ ವಿಧಾನಸಭಾ ಚುನಾವಣೆಯನ್ನು ಮಾಧ್ಯಮಗಳು ಮತ್ತು ರಾಜಕೀಯ ವಿಶ್ಲೇಷಕರು 2019ರ ಲೋಕಸಭಾ ಚುನಾವಣೆಯ ಸೆಮಿಫೈನಲ್ ಎಂದು ಬಿಂಬಿಸಿವೆ. ಮೇಲ್ನೋಟಕ್ಕೆ ಅದು ಸರಿ ಎಂದು ಕೂಡ ಅನ್ನಿಸುತ್ತಿತ್ತು. ಅನ್ನಿಸುತ್ತಿದೆ. ರಾಜಕಾರಣದಲ್ಲಿ ಕಂಡದ್ದು, ಕೇಳಿದ್ದು ಮಾತ್ರ ‘ಸತ್ಯ’ ಅಲ್ಲ. ಹಾಗಾದರೆ ಕರ್ನಾಟಕದ ಚುನಾವಣೆಯು ಸೆಮಿಫೈನಲ್ ಅಲ್ಲವೇ? ಎಂಬ ಪ್ರಶ್ನೆ ಉದ್ಭವಿಸುವುದು ಸಹಜ. ಆಟದ ನಿಯಮಗಳು ರಾಜಕೀಯಕ್ಕೆ ಅನ್ವಯಿಸುವುದಿಲ್ಲ. ಜನ ರಾಜಕೀಯ ಆಯ್ಕೆಯನ್ನು ಆಟದ ರೀತಿಯಲ್ಲಿ ಮನರಂಜನೆ ಎಂದು ಭಾವಿಸುವುದಿಲ್ಲ. ಯಾಕೆಂದರೆ ಅವರಿಗೆ ತಮ್ಮ ಆಯ್ಕೆ ಉಂಟು ಮಾಡುವ ಅಪಾಯದ ಅರಿವು-ಮುನ್ಸೂಚನೆ ಇದ್ದೇ ಇರುತ್ತದೆ. ಎರಡು ಚುನಾವಣೆಯ ನಡುವಿನ ಅವಧಿಯಲ್ಲಿ ‘ಮತದಾರ ಪ್ರಭು’ ಅಸಹಾಯಕ. ಅದು ಅವನಿಗೆ ಗೊತ್ತಿರದ ಸಂಗತಿಯೇನಲ್ಲ. ಸಣ್ಣಪುಟ್ಟ ಬದಲಾವಣೆ-ಘಟನೆ-ಬೆಳವಣಿಗೆಗಳೂ ಸಂಕೇತ-ಸೂಚನೆ ನೀಡುತ್ತವೆ ಎನ್ನುವುದು ಒಂದು ಹಂತದ ಮಟ್ಟಿಗಿನ ತರ್ಕಕ್ಕೆ ಸರಿ. ತರ್ಕವು ಸತ್ಯದ ಸಮೀಪ ಹೋಗಬಹು ದಾದ ದಾರಿ ಮಾತ್ರ. ತರ್ಕದಿಂದಲೇ ಸತ್ಯವನ್ನು ಅರಿಯಲು-ಪಡೆಯಲು ಸಾಧ್ಯವಿಲ್ಲ. ಹಾಗಾದರೆ ಅದು ಹೇಗೆ ಸಿಗುತ್ತದೆ? ಅದನ್ನು ಪಡೆಯುವ ಕ್ರಮ ಏನು? ಅದು ವರ್ತಮಾನವನ್ನು ಹಿಡಿಯುವ ಹಂಬಲದ ಹಾಗೆ. ಸಿಕ್ಕಿತು ಎಂದು ಅನ್ನಿಸುವ ವೇಳೆಗಾಗಲೇ ಅದು ಬದಲಾಗಿ ಬಿಟ್ಟಿರುತ್ತದೆ. ಅದಿರಲಿ.

 ಒಮ್ಮೆ ಓಟು ಕೊಟ್ಟ ಮೇಲೆ ಮತದಾರ ಮೂಕಪ್ರೇಕ್ಷಕ ಆಗುತ್ತಾನೆ. ಐದು ವರ್ಷದವರೆಗೆ ಬರಿ ನೋಡುವುದಷ್ಟೇ ಅವನ ಕೆಲಸ. ಸಾಕ್ಷಿ ಆಗಿ ಉಳಿಯುತ್ತಾನೆ. ಭಾಗಿ ಆಗಲು ಅವಕಾಶವೇ ಇಲ್ಲದ ಮೇಲೆ ಸಾಕ್ಷಿ ಮಾತ್ರ ಆಗಿ ಉಳಿಯುವ ಅನಿವಾರ್ಯ ಸ್ಥಿತಿ ಅವನ ಮುಂದಿರುತ್ತದೆ. ಮಧ್ಯೆ ಬರುವ ರಾಜ್ಯಗಳ ಚುನಾವಣೆಗಳು ಆಯಾಭಾಗದ ಮನಸ್ಥಿತಿ ಮಾತ್ರ ಆಗಿರುತ್ತದೆ. ಇಡೀ ಇಂಡಿಯಾದ ಆಯ್ಕೆ ಆಗಿರುವುದಿಲ್ಲ. ಮತದಾರನಿಗೆ ತಾನು ಆಯ್ಕೆ ಮಾಡುತ್ತಿರುವುದು ‘ಲೋಕಸಭೆ’ ಮತ್ತು ‘ವಿಧಾನಸಭೆ’ಗೆ ಎಂಬುದರ ಸ್ಪಷ್ಟ ಅರಿವು ಇದ್ದೇ ಇದೆ. ಇರುತ್ತದೆ. ಅದಕ್ಕಾಗಿ ಭಾರತೀಯ ಮತದಾರರನ್ನು ಅನಕ್ಷರಸ್ಥ ಆದರೆ ಪ್ರಜ್ಞಾವಂತ ಎಂದು ಗುರುತಿಸುವುದು. ಕೋಟೆಯನ್ನು ಪ್ರಬಲಗೊಳಿಸಲು ಬಿಟ್ಟು ನೋಡುತ್ತ ಕುಳಿತು ಕೊಳ್ಳುವ ಮತದಾರನಿಗೆ ಕೋಟೆ ಕಟ್ಟಿದವ ತನ್ನ ಮುಂದೆ ಬಂದು ನಿಲ್ಲುತ್ತಾನೆ ಎಂದು ಗೊತ್ತಿದೆ. ಅದಕ್ಕಾಗಿ ಕೋಟೆಯ ನಿರ್ಮಾಣ ಕಾರ್ಯ ಎಷ್ಟೇ ಪ್ರಬಲವಾಗಿ ನಡೆದರೂ ನೋಡಿಯೇ ಇಲ್ಲದಂತೆ ಸುಮ್ಮನಿರುತ್ತಾನೆ. ನಿರ್ಣಾಯಕ ಹಂತ ಬರುವವರೆಗೆ ಕಾಯುವ ಆಟ ರಾಜಕಾರಣಿಗಳಿಗಿಂತ ಮತದಾರನಿಗೆ ಚೆನ್ನಾಗಿ ಗೊತ್ತಿದೆ. ಭಾರತದಲ್ಲಿ ಅಂತಹ ಹಲವು ನಿರ್ಣಯಗಳನ್ನು ತೋರಿಸಿದ್ದನ್ನು ನಾವು ನೋಡಿದ್ದೇವೆ. ನೋಡುತ್ತಿದ್ದೇವೆ.

ವಿಧಾನಸಭಾ ಚುನಾವಣೆಗಳು ಸಂಕೇತ-ಸೂಚನೆ ನೀಡುತ್ತವೆ. ಕರ್ನಾಟಕದ ಚುನಾವಣೆಯೂ 2019ಕ್ಕೆ ಸಂಬಂಧಿಸಿದಂತೆ ಸೂಚನೆ ನೀಡಿದೆ. ಕೇಂದ್ರದಲ್ಲಿರುವ ಸರ್ಕಾರದ ಬಗ್ಗೆ ಅಸಮಾಧಾನ ಇದ್ದರೂ ಅದು ವಿರೋಧಿ ಮತವಾಗಿ ಪರಿವರ್ತನೆ ಆಗಿಲ್ಲ. ಹಾಗೆಯೇ ಆಗದೇ ಇರುವುದಕ್ಕೆ ತನಗಾದ-ಆಗುತ್ತಿರುವ ತೊಂದರೆಗಿಂತ ಮುಸ್ಲಿಮರು ಮತ್ತು ದಲಿತರ ವಿರೋಧಿ ನಿಲುವೇ ಕಾರಣ. ಅಸ್ಪೃಶ್ಯರನ್ನು ಸಮಾನವಾಗಿ ನೋಡಬಯಸದ ಮನಸ್ಥಿತಿ ಹಾಗೂ ಮುಸ್ಲಿಮರ ಬಗ್ಗೆ ಇರುವ ಅನೂಹ್ಯ ಭೀತಿ ಇವೆರಡನ್ನೂ ಹುಟ್ಟಿಸುವಲ್ಲಿ ಮತ್ತು ಅದು ತಳಹಂತದವರೆಗೂ ಹರಡುವಂತೆ ಮಾಡುವಲ್ಲಿ ಕೇಂದ್ರದ ಆಡಳಿತಾರೂಢ ಪಕ್ಷ ಯಶಸ್ವಿಯಾಗಿದೆ. ಅದು ಕೇಂದ್ರದಲ್ಲಿ ರಾಜಕೀಯ ಪಕ್ಷದ ‘ಸಾಧನೆ’ ಎನ್ನುವುದಕ್ಕಿಂತ ಹೆಚ್ಚಾಗಿ ಅದನ್ನು ರೂಪಿಸುತ್ತಿರುವ ‘ಚಿಂತನಾ ಕ್ರಮ’ದ ‘ಗೆಲುವು’ ಎನ್ನುವುದರಲ್ಲಿ ಎರಡು ಮಾತಿಲ್ಲ. ಕರ್ನಾಟಕದ ವಿಧಾನಸಭಾ ಚುನಾವಣೆಯ ಫಲಿತಾಂಶವು ಬಹುಜನರ ಪರವಾಗಿ ರಾಜಕಾರಣ ಮಾಡುವುದರ ಅಪಾಯದ ಮುನ್ಸೂಚನೆ ನೀಡಿದೆ. ಹಾಗೆ ಅವರನ್ನು ಬಿಟ್ಟುಕೊಡದೇ ಪ್ರಬಲರ ಮತಗಳನ್ನು ಬುಟ್ಟಿಗೆ ಹಾಕಿಕೊಳ್ಳುವ ಬಗ್ಗೆ ಕಂಡುಕೊಳ್ಳಬೇಕಾದ ದಾರಿಯ ಬಗ್ಗೆ ಯೋಚಿಸಲು ವಿರೊಧಪಕ್ಷಗಳಿಗೆ ಇದು ಸಕಾಲ.

ವಾಸ್ತವವಾಗಿ ವಿಧಾನಸಭೆಯ ಚುನಾವಣೆಗೂ ಲೋಕಸಭಾ ಚುನಾವಣೆಗೂ ನೇರ ಸಂಬಂಧ ಇಲ್ಲ. ವಿಧಾನಸಭಾ ಚುನಾವಣೆಗಳು ಮತ್ತು ಅದರ ಫಲಿತಾಂಶಗಳು ಕೇಂದ್ರದಲ್ಲಿರುವ ಸರ್ಕಾರದ-ಪಕ್ಷದ ಆತ್ಮವಿಶ್ವಾಸ ಮತ್ತು ಓಟದ ವೇಗ ಹೆಚ್ಚಿಸುವ- ಕಡಿಮೆ ಮಾಡಲು ಕಾರಣವಾಗುತ್ತವೆ. ಹಾಗಂತ ವಿಧಾನಸಭಾ ಚುನಾವಣೆಗಳ ಫಲಿತಾಂಶವೇ ಲೋಕಸಭೆಯಲ್ಲಿ ಪ್ರತಿಧ್ವನಿಸುತ್ತದೆ ಎಂದು ಭಾವಿಸಬೇಕಿಲ್ಲ. ವಿಧಾನಸಭಾ ಚುನಾವಣೆಗಳಲ್ಲಿ ತೋರಿದ ನಿಲುವಿಗೆ ತೀರಾ ವ್ಯತಿರಿಕ್ತವಾದ ನಿಲುವು ತೋರಿಸಿದ ನೂರಾರು ಉದಾಹರಣೆಗಳು ನಮ್ಮ ಮುಂದಿವೆ. ಅಧಿಕಾರದಲ್ಲಿ ಇರುವವರ ಆತ್ಮವಿಶ್ವಾಸ ಹೆಚ್ಚುವಂತೆ ಮಾಡುವುದು ಕೂಡ ಮತದಾರ ತೋರಿಸುವ ‘ಜಾಣ ನಡೆ’ ಎಂದು ವ್ಯಾಖ್ಯಾನಿಸಬೇಕಾಗುತ್ತದೆ.

2014ರ ಲೋಕಸಭಾ ಚುನಾವಣೆಯ ನಂತರ ದೆಹಲಿಯಲ್ಲಿ ತೀವ್ರ ಪ್ರತಿಕ್ರಿಯೆ ವ್ಯಕ್ತದಾದದ್ದು ಬಿಟ್ಟರೆ ಉಳಿದಂತೆ ಎಲ್ಲ ಕಡೆಗಳಲ್ಲಿಯೂ ‘ಪ್ರಭುತ್ವ’ ತನ್ನ ಹಸ್ತ ಚಾಚುವಲ್ಲಿ ಯಶ ಕಂಡಂತೆ ಭಾಸವಾಗುತ್ತದೆ. ಬಿಹಾರದ ಮತದಾರ ನೀಡಿದ ಫಲಿತಾಂಶವೂ ಆಡಳಿತಾರೂಢರ ಪರವಾಗುವಂತೆ ಮಾಡಿದ್ದು ‘ಮುತ್ಸದ್ದಿ’ ರಾಜಕಾರಣಿಯೇ. ಉತ್ತರ ಪ್ರದೇಶದಲ್ಲಿ ಕೋಮುಭಾವನೆ ಕೆರಳಿಸುವ ಮೂಲಕ ವಿರೋಧಿಗಳನ್ನು ‘ಅಸಹಾಯಕ’ ಮಾಡುವಲ್ಲಿ ಕೇಂದ್ರ ಯಶಸ್ವಿಯಾದಂತೆ ಭಾಸವಾಗುತ್ತಿದೆ. ಪಂಜಾಬ್, ಗೋವಾ, ಅರುಣಾಚಲ ಪ್ರದೇಶ, ಸಿಕ್ಕಿಂಗಳಲ್ಲಿ ಕೇಂದ್ರದಲ್ಲಿ ಅಧಿಕಾರದಲ್ಲಿ ಇರುವ ಪಕ್ಷದ ವಿರುದ್ಧ ಮತ ಚಲಾವಣೆಯಾದರೂ ‘ತಂತ್ರ’ದಿಂದ ಅಧಿಕಾರ ಅನುಭವಿಸುವಲ್ಲಿ ಯಶಸ್ವಿಯಾಗಿದೆ. ಕರ್ನಾಟಕದ ಚುನಾವಣಾ ಫಲಿತಾಂಶವು ಕೂಡ ಮೇಲ್ನೋಟಕ್ಕೆ ಕೇಂದ್ರದಲ್ಲಿ ಅಧಿಕಾರದಲ್ಲಿ ಇರುವ ಪಕ್ಷದ ಪರವಾದ ನಿಲುವು ಎಂಬಂತೆ ಭಾಸವಾಗುತ್ತದೆ. ಕೇಂದ್ರದ ನಾಯಕರ ಆರ್ಭಟ- ತೋರಿದ ಆಸಕ್ತಿ ಹಾಗೆ ಅನ್ನಿಸುವಂತೆ ಮಾಡಿದೆ. ಲೋಕಸಭಾ ಚುನಾವಣೆಗೂ ಮುನ್ನ ನಡೆಯಲಿರುವ ಮಧ್ಯಪ್ರದೇಶ ಮತ್ತು ರಾಜಸ್ತಾನ ಚುನಾವಣೆಗಳು ಕೂಡ ನೀಡುವ ‘ಸಂಕೇತ’ವನ್ನೂ ಗಮನಿಸಬೇಕು. ಆದರೆ, ಸಂಕೇತಗಳೇ ಸತ್ಯವಾಗಿ ಪರಿವರ್ತನೆ ಆಗುತ್ತವೆ ಎಂದು ಭಾವಿಸಬೇಕಿಲ್ಲ. ತೋರುದೀಪ ಮಾತ್ರ ಗುರಿಯಲ್ಲ.

ರಾಜ್ಯಗಳ ದಂಡಯಾತ್ರೆಯಲ್ಲಿ ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿಗೆ ಅಧಿಕಾರ ಸಿಗದಂತೆ ಮಾಡುವ ಪ್ರಯತ್ನಗಳು ತೀರಾ ವೇಗವಾಗಿ ನಡೆಯುತ್ತಿವೆ. ಅದು ಬಹುತೇಕ ಸಫಲವಾಗುವ ಸಾಧ್ಯತೆಗಳೇ ಹೆಚ್ಚು. ವಿಧಾನಸಭೆ ಚುನಾವಣೆಗಳ ಫಲಿತಾಂಶಗಳ ಆಧಾರದ ಮೇಲೆ ‘ಭಾರತ’ ನಿರ್ಧರಿಸುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಮುಂದೆ ನಿರ್ಣಾಯಕ ಗಳಿಗೆಯಲ್ಲಿ ‘ಮಾರಿಹಬ್ಬ’ ಮಾಡುವುದಕ್ಕಾಗಿಯೇ ಗುಟ್ಟು ಬಿಟ್ಟುಕೊಡದೆ ಕಾಯುತ್ತಿರುತ್ತಾನೆ ಎಂಬುದು ಸುಳ್ಳೇನಲ್ಲ. ಸಣ್ಣಪುಟ್ಟ ಸಂಗತಿಗಳಿಗೆ ಪ್ರತಿಕ್ರಿಯೆ ನೀಡಿ ಕೈ ಸುಟ್ಟುಕೊಳ್ಳಲು ಮತದಾರರು ಬಯಸುವುದಿಲ್ಲ. ನಿರ್ಣಾಯಕ ಘಟ್ಟಕ್ಕಾಗಿ ಕಾಯುತ್ತಾರೆ. 2019 ಅಂತಹ ‘ಕಾಯುವಿಕೆ’ಗೆ ಅಂತ್ಯ ಹಾಡಲಿದೆ. ಅದಕ್ಕಿಂತ ಮೊದಲಿನವುಗಳೆಲ್ಲ ಪ್ರಕ್ರಿಯೆ ಮಾತ್ರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

ಆಗಸ್ಟ್‌ 18 2025ರಂದು ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಯನ್ನು ದಾಖಲಿಸಿತ್ತು. ರಾಜ್ಯ ಸರ್ಕಾರ...

ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ಪೌರತ್ವ ತ್ಯಜಿಸಿದ್ದಾರೆ: ಎಂಇಎ

ಕಳೆದ ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ. ಜಾಗತಿಕ ಚಲನಶೀಲತೆ ಹೆಚ್ಚಾದಂತೆ ಮತ್ತು ವೈಯಕ್ತಿಕ ಆಯ್ಕೆಗಳು ವಲಸೆ ಪ್ರವೃತ್ತಿಯನ್ನು ರೂಪಿಸುತ್ತಿರುವುದರಿಂದ ವಾರ್ಷಿಕವಾಗಿ ಸಂಖ್ಯೆಗಳು ಗಮನಾರ್ಹವಾಗಿ ಬದಲಾಗಿವೆ...

ನಟ ದಿಲೀಪ್ ಖುಲಾಸೆ: ನ್ಯಾಯಾಲಯದ ಕಲಾಪವನ್ನು ವಿರೂಪಗೊಳಿಸಬೇಡಿ ಎಂದು ಮಾಧ್ಯಮ ಮತ್ತು ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾದೀಶೆ ಹನಿ ವರ್ಗೀಸ್ 

2017 ರಲ್ಲಿ ದಕ್ಷಿಣ ಭಾರತದ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಧೀಶೆ ಹನಿ ಎಂ ವರ್ಗೀಸ್, ತಮ್ಮ ತೀರ್ಪಿನ...

ರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಏಳು ವರ್ಷದ ಬಾಲಕಿ ಅತ್ಯಾಚಾರ ಹಾಗೂ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್‌ ಮೇವಾನಿ; ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಕುರಿತು...

ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲು BJP ಕಾರ್ಯಕರ್ತರ ಮನವಿ

ಮಂಡ್ಯ:  ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಶಾದಿ ಭಾಗ್ಯ’ದಂತೆ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದ ವತಿಯಿಂದ ರೂ.5ಲಕ್ಷ ಪ್ರೋತ್ಸಾಹಧನ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರ ಮೂಲಕ...

ನಿವೃತ್ತಿ ನಿರ್ಧಾರ ಹಿಂತೆಗೆದುಕೊಂಡ ವಿನೇಶ್ ಫೋಗಟ್; ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ತಯಾರಿ

ಕುಸ್ತಿಪಟು ವಿನೇಶ್ ಫೋಗಟ್ ಸ್ಪರ್ಧಾತ್ಮಕ ಕ್ರೀಡೆಗೆ ಮರಳುವುದಾಗಿ ಘೋಷಿಸುವ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂತೆಗೆದುಕೊಂಡಿದ್ದಾರೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಅನ್ನು ಗುರಿಯಾಗಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಕುರಿತ ಹೇಳಿಕೆ ಬಿಡುಗಡೆ ಮಾಡಿರುವ...

ಗುಜರಾತ್‌ನ ವಲ್ಸಾದ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಐವರು ಕಾರ್ಮಿಕರಿಗೆ ಗಾಯ

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಔರಂಗ ನದಿಗೆ ನಿರ್ಮಾಣ ಹಂತದಲ್ಲಿರುವ ಸೇತುವೆಯ ಮೇಲಿನ ಗಿರ್ಡರ್ ಕುಸಿದಿದ್ದು, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.  ಹಳೆಯ ಸೇತುವೆಗೆ ಸಮಾನಾಂತರವಾಗಿ ಹೊಸ ಸೇತುವೆಯನ್ನು ನಿರ್ಮಿಸಲಾಗುತ್ತಿರುವ ಕೈಲಾಶ್ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ 8...

ಆಮದು ಸುಂಕ ಹೆಚ್ಚಿಸಿದ ಮೆಕ್ಸಿಕೊ: ಭಾರತದ ವಾಹನ-ಉಕ್ಕು ರಫ್ತಿನ ವೆಚ್ಚ ಹೆಚ್ಚಳ ಸಾಧ್ಯತೆ

ಸ್ಥಳೀಯ ಕೈಗಾರಿಕೆಗಳನ್ನು ರಕ್ಷಿಸುವ ಗುರಿಯ ಭಾಗವಾಗಿ, ಭಾರತ, ಚೀನಾ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಏಷ್ಯಾದ ದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲಿನ ಹೆಚ್ಚಿನ ಸುಂಕ ಹೆಚ್ಚಳ ನಿರ್ಧಾರವನ್ನು ಮೆಕ್ಸಿಕೋ ಅನುಮೋದಿಸಿದೆ. ಮೆಕ್ಸಿಕನ್...

Cognizant ಕಂಪನಿಗೆ 99 ಪೈಸೆಗೆ ಒಂದು ಎಕರೆ ಭೂಮಿ: ವಿಶಾಖಪಟ್ಟಣದಲ್ಲಿ ತಾತ್ಕಾಲಿಕ ಕಛೇರಿ ಉದ್ಘಾಟನೆ

ಕಳೆದ ಜೂನ್‌ ನಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ Cognizant ಕಂಪನಿಯು 1582 ಕೋಟಿ ಹೂಡಿಕೆ ಮಾಡಿ 8 ಸಾವಿರ ಉದ್ಯೋಗ ಸೃಷ್ಠಿ ಮಾಡಲಾಗುವುದೆಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರ ಘೋಷಿಸಿತ್ತು....

ಅಲ್ಪಸಂಖ್ಯಾತ ಶಾಲೆಗಳಿಗೆ ಆರ್.ಟಿ.ಇ ಕಾಯ್ದೆಯಿಂದ ವಿನಾಯಿತಿ ತೀರ್ಪಿನ ವಿರುದ್ಧ ಅರ್ಜಿ; ಎನ್.ಜಿ.ಒಗೆ ದಂಡ ವಿಧಿಸಿದ ಸುಪ್ರೀಂ  

ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಇ) ನಿಬಂಧನೆಗಳಿಂದ ಅಲ್ಪಸಂಖ್ಯಾತ ಶಾಲೆಗಳಿಗೆ ವಿನಾಯಿತಿ ನೀಡಿದ್ದ, ತನ್ನ ಹಿಂದಿನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರವಾಗಿ ಖಂಡಿಸಿದೆ.  ಜಸ್ಟೀಸ್ ಬಿ.ವಿ. ನಾಗರತ್ನ ಮತ್ತು...