Homeಅಂಕಣಗಳುಈ ಬಡ ಭಾರತೀಯರು ಸರ್ಕಾರಕ್ಕೆ ಮೊದಲು ಕಾಣಬೇಕಿತ್ತು

ಈ ಬಡ ಭಾರತೀಯರು ಸರ್ಕಾರಕ್ಕೆ ಮೊದಲು ಕಾಣಬೇಕಿತ್ತು

- Advertisement -
- Advertisement -

ಬಡವರಿಗೆ ಕೊಡುವ ರೇಷನ್‍ನಲ್ಲಿ ಪೌಷ್ಟಿಕಾಂಶದ ಕೊರತೆ ಅತ್ಯಧಿಕ. ಆರೋಗ್ಯ ಇಲಾಖೆಯು ಕೋಟ್ಯಾಂತರ ರೂಪಾಯಿ ಖರ್ಚು ತೋರಿಸುತ್ತದೆ. ಆದರೆ ಬಡವರಿಗೆ ನೀಡುವ ಆಹಾರ ಪದಾರ್ಥ ಸತ್ವಹೀನವಾಗಿರುತ್ತವೆ. ಇದರ ಪರಿಣಾಮವಾಗಿ ಬಡವರಲ್ಲಿ ಅಪೌಷ್ಠಿಕತೆಯಿಂದ ನರಳುವ ಮತ್ತು ಸಾಯುವವರ ಸಂಖ್ಯೆ ಅತ್ಯಧಿಕವಾಗಿರುತ್ತದೆ. ಆದರೆ ಆರೋಗ್ಯ ಇಲಾಖೆ ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ.

ಒಬ್ಬ ವಿಧವೆ ಕೂಲಿ ಕಾಸು ಸಿಕ್ಕದೆ ತನ್ನ ತಲೆಗೂದಲನ್ನೆ ಮಾರಿಕೊಂಡಿದ್ದಾಳೆ. ಒಂದು ಬಡಕುಟುಂಬದವರು ಹೊಟ್ಟೆಪಾಡಿಗಾಗಿ ತಮ್ಮ ಮಗುವನ್ನೇ ಮಾರಿಕೊಂಡರು. ಒಂದು ಒಡಸಂಸಾರದ ಒಬ್ಬ 7 ವರ್ಷದ ಹುಡುಗ ಹಸಿವನ್ನು ತಾಳಲಾರದೇ ಮನೆಬಿಟ್ಟು ಓಡಿಹೋಗಿ ಬಸ್‍ಸ್ಟಾಂಡಿನಲ್ಲಿ ಭಿಕ್ಷೆ ಬೇಡುತ್ತಾನೆ. ಕೂಲಿ ಕೆಲಸ ಮಾಡಿ ಹೊಟ್ಟೆ ಹೊರೆಯುತ್ತಾನೆ. ಅನೇಕ ಗರ್ಭಿಣಿ ಹೆಣ್ಣು ಮಕ್ಕಳು ಆಹಾರದ ಭದ್ರತೆ ಇಲ್ಲದೆ, ಅಪೌಷ್ಟಿಕತೆಯ ಕಾರಣದಿಂದ ಮಕ್ಕಳನ್ನು ಹಡೆದು ಸಾವನ್ನಪುತ್ತಾರೆ. ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ 12 ಮಕ್ಕಳು ಒಮ್ಮೆಗೇ ಸಾಯುತ್ತಾರೆ. ಅನೇಕ ಸಂಸಾರಗಳು ಊರುಬಿಟ್ಟು ಬಂದು ಬೆಂಗಳೂರಿನಲ್ಲಿ ಫುಟ್‍ಪಾತಿನ ಮೇಲೆ ವಾಸಿಸುತ್ತಾರೆ. ರಾತ್ರಿ ಮಲಗುತ್ತಾರೆ. ತಿರುಪೆ ಮಾಡಿ ಜೀವನ ನಿರ್ವಹಿಸುತ್ತಾರೆ. ಹಳ್ಳಿಗಳಲ್ಲಿ ರೈತ ಕಾರ್ಮಿಕರು, ಅನೇಕ ದಿನ ಹೊಟ್ಟೆಗಿಲ್ಲದೆ ಮಲಗುವುದು ಭೂಮಿ ವಸತಿ ವಂಚಿತರಾಗಿ ಬಾಳ್ವೆ ನಡೆಸುತ್ತಿರುವುದೂ ನಡೆದೇ ಇದೆ.

ಭಾರತಕ್ಕೆ ಸ್ವಾತಂತ್ರ್ಯ ಬಂದು 72 ವರ್ಷಗಳೇ ಸಂದರೂ ಈ ಎಲ್ಲ ಬಡವರಿಗೆ ಮಾಡಲು ಉದ್ಯೋಗವಿಲ್ಲ. ಅವರ ಮಕ್ಕಳಿಗೆ ವಿದ್ಯೆ ಇಲ್ಲ. ಇನ್ನೊಂದು ಚಿತ್ರ ನೋಡಿ. ಭಾರತದಲ್ಲಿ ಲಕ್ಷ ಕೋಟ್ಯಾಧಿಪತಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರುತ್ತಿದೆ. ಅಂಬಾನಿ ಅದಾನಿ ಮುಂತಾದ ಕೋಟ್ಯಾಧಿಪತಿಗಳು ಕೋಟಿ ಕೋಟಿ ಮಾಡಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸುತ್ತದೆ. ಅವರ ಕೋಟಿ-ಕೋಟಿ ಹಳೆ ಸಾಲದ ಮೇಲಿನ ಬಡ್ಡಿಯನ್ನು ಸರ್ಕಾರ ಮನ್ನಾ ಮಾಡಿದೆ. ಬಡವ ಬಲ್ಲಿದರ ನಡುವಿನ ಕಂದಕ ದೊಡ್ಡದಾಗುತ್ತಿದೆ.

ಕೇಂದ್ರ ಸರ್ಕಾರ ಬಡ ಜನರಿಗಾಗಿ 30 ಯೋಜನೆಗಳನ್ನು ಜಾರಿಗೆ ತಂದಿದೆ. ರಾಷ್ಟೀಯ ಸಾಮಾಜಿಕ ಸೇವೆ ಒದಗಿಸುವ ಸಂಸ್ಥೆಯೂ ಅವುಗಳಲ್ಲಿ ಒಂದು. ಅದು ಸಮಾಜದಲ್ಲಿ ಊಟ, ಉದ್ಯೋಗಗಳಿಂದ ವಂಚಿತರಾಗಿ ಸಾವನ್ನಪ್ಪಲು ಹೊರಟವರನ್ನು ತಡೆಗಟ್ಟುವುದಕ್ಕಾಗಿಯೇ ಈ ಸಂಸ್ಥೆ ಇರುವುದು. ಈ ಯೋಜನೆ ಬಡತನದ ಸೀಮಾರೇಖೆಯ ಕೆಳಗಿರುವರಿಗಾಗಿಯೇ ಸಾಮಾಜಿಕ ಭದ್ರತೆಯ ಯೋಜನೆ. ಈ ಯೋಜನೆಯಡಿಯಲ್ಲಿ 5 ಪ್ರತ್ಯೇಕ ಒಳಿತನ್ನು ಕೋರುವ ಯೋಜನೆಗಳಿವೆ. ಇವುಗಳೆಂದರೆ ಇಂದಿರಾಗಾಂಧಿ ರಾಷ್ಟ್ರೀಯ ಮನೆ ತಪ್ಪಿದವರ ಪಿಂಚಣಿ ಯೋಜನೆ, ಇಂದಿರಾಗಾಂಧಿ ವೃದ್ಧರ ಪಿಂಚಣಿ ಯೋಜನೆ, ಇಂದಿರಾಗಾಂಧಿ ಅಶಕ್ತರ ಪಿಂಚಣಿ ಯೋಜನೆ, ರಾಷ್ಟೀಯ ಫ್ಯಾಮಿಲಿ ಬೆನಿಫಿಟ್ ಸ್ಕೀಂ ಮತ್ತು ಅನ್ನಪೂರ್ಣ ಯೋಜನೆಗಳಿವೆ.

ಭಾರತ ವಿಶ್ವದಲ್ಲೆ ದೊಡ್ಡದಾದ ಆಹಾರ ಭದ್ರತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಅದಕ್ಕಾಗಿ ವರ್ಷಕ್ಕೆ 1.8 ಲಕ್ಷಕೋಟಿ ವ್ಯಯ ಮಾಡುತ್ತಿದೆ. ಮಹಾತ್ಮಾಗಾಂಧಿ ಗ್ರಾಮೀಣ ರೋಜ್‍ಗಾರ್ ಯೋಜನೆಯ ಉಳಿವಿಗಾಗಿ ದಿನಗೂಲಿ ಒದಗಿಸಲು 2019-20ರಲ್ಲಿ ಭಾರತ ಸರ್ಕಾರ 60000 ಕೋಟಿ ಖರ್ಚು ಮಾಡಿದೆ. ಕೇಂದ್ರದ ಈ ವರ್ಷದ ಸಬ್ಸಿಡಿ ಬಿಲ್ 3.38 ಲಕ್ಷ ಕೋಟಿ ರೂಪಾಯಿಗಳು. ಅಂದರೆ ದಿನಕ್ಕೆ 900 ಕೋಟಿ. ಸಾಮಾಜಿಕ ಸೆಕ್ಟರ್ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಿಕೊಂಡು ಈ ವರ್ಷ 13.9 ಲಕ್ಷ ಕೋಟಿ ಖರ್ಚುಮಾಡುತ್ತಿವೆ. ಈ ಮೊತ್ತದಲ್ಲಿ ಪ್ರಾಕೃತಿಕ ವಿಕೋಪದಿಂದ ಜನಸಮುದಾಯಕ್ಕಾಗುವ ಹಾನಿಯನ್ನು ತುಂಬಿಕೊಡಲು 5.5 ಲಕ್ಷ ಕೋಟಿ ತೆಗೆದಿರಿಸಲಾಗಿದೆ. ಬಡತನದ ಇಂಡೆಕ್ಸ್ 54ರಿಂದ 50ಕ್ಕೆ ಇಳಿದಿದೆ. ಆದರೆ ರಾಷ್ಟೀಯ ಸರಾಸರಿಗಿಂತ ಕಡಿಮೆ ಇರುವ ರಾಜ್ಯಗಳು ಹಿಂದೆ 10 ಇದ್ದದ್ದು ಈಗ 14ಕ್ಕೆ ಏರಿವೆ.

ದೊಡ್ಡ ರಾಜ್ಯಗಳ ಪೈಕಿ 10 ರಾಜ್ಯಗಳು ಬಡತನದ ಸೀಮಾರೇಖೆಯ ತಳಗಿದ್ದು ಅವುಗಳಲ್ಲಿ ಆರಂತೂ ತುಂಬಾ ದುರವಸ್ಥೆಯಲ್ಲಿವೆ. ಇಷ್ಟೆಲ್ಲಾ ಅನಾಹುತಕ್ಕೆ ಕಾರಣವಾಗಿರುವುದು ಬಡತನ ನಿವಾರಣಾ ಕಾರ್ಯಾಚರಣೆಯ ಯೋಜನೆ ಅಭಾವದಿಂದಲ್ಲ; ಅವು ಅಪಾರ ಸಂಖ್ಯೆಯಲ್ಲಿವೆ.

ಈ ಸಾಮಾಜಿಕ ಕಾರ್ಯಕ್ರಮಗಳ ಕಾರ್ಯ ಕ್ಷಮತೆಯ ಅಭಾವದಿಂದಾಗಿ ಬಡತನ ಹೆಚ್ಚುತ್ತಿದೆ. ರಾಜ್ಯಗಳ ಆಡಳಿತಗಾರರ ದಕ್ಷತೆಯ ಕೊರತೆಯಿಂದ ಆಡಳಿತದ ಜ್ಞಾನದ ಕೊರತೆಯಿಂದ ಬಡತನ ನಿವಾರಣೆಯ ಕೆಲಸ ಹಿಂದೆ ಬಿದ್ದಿದೆ.

ದೇಶದಲ್ಲಿ ಅನೇಕ ಕಡೆ ಬಡತನ ಹಸಿವು ಕಾಡುತ್ತಿದೆ. ಆಹಾರದ ಅಪೌಷ್ಠಿಕತೆ ಇಡೀ ದೇಶವನ್ನು ಕಾಡುತ್ತಿದೆ. ಭಾರತದಲ್ಲಿ 58.3 ದಶಲಕ್ಷ ಮಕ್ಕಳು ಅಪೌಷ್ಠಿಕತೆಯಿಂದ ನರಳುತ್ತಿದ್ದಾರೆ; ಭಾರತದಲ್ಲಿ ಹುಟ್ಟುವ ಮಕ್ಕಳಲ್ಲಿ ಶೇ.40ರಷ್ಟು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ತಾಯಂದಿರಾಗುವ ಒಂದು ಲಕ್ಷ ಮಹಿಳೆಯರಲ್ಲಿ 122 ಹೆಣ್ಣು ಮಕ್ಕಳು ಸಾವಿಗೆ ಗುರಿಯಾಗುತ್ತಾರೆ. ಗರ್ಭಿಣಿಯರಲ್ಲಿ ಅರ್ಧದಷ್ಟು ಮಹಿಳೆಯರು ರಕ್ತ ಹೀನತೆಯಿಂದ ಬಳಲುತ್ತಿದ್ದಾರೆ. ಗರ್ಭಿಣಿಯಲ್ಲಿ ಶೇ.36ರಷ್ಟು ಮಹಿಳೆಯರಿಗೆ ಮಾತ್ರ ತಾಯಿತನದ ಬೆನೆಫಿಟ್ ಸಿಕ್ಕುತ್ತಿದೆ.

ಬಡವರಿಗೆ ಕೊಡುವ ರೇಷನ್‍ನಲ್ಲಿ ಪೌಷ್ಟಿಕಾಂಶದ ಕೊರತೆ ಅತ್ಯಧಿಕ. ಆರೋಗ್ಯ ಇಲಾಖೆಯು ಕೋಟ್ಯಾಂತರ ರೂಪಾಯಿ ಖರ್ಚು ತೋರಿಸುತ್ತದೆ. ಆದರೆ ಬಡವರಿಗೆ ನೀಡುವ ಆಹಾರ ಪದಾರ್ಥ ಸತ್ವಹೀನವಾಗಿರುತ್ತವೆ. ಇದರ ಪರಿಣಾಮವಾಗಿ ಬಡವರಲ್ಲಿ ಅಪೌಷ್ಠಿಕತೆಯಿಂದ ನರಳುವ ಮತ್ತು ಸಾಯುವವರ ಸಂಖ್ಯೆ ಅತ್ಯಧಿಕವಾಗಿರುತ್ತದೆ. ಆದರೆ ಆರೋಗ್ಯ ಇಲಾಖೆ ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಆರೋಗ್ಯ ಇಲಾಖೆಯ ಅಧಿಕಾರಿಗಳು ಅದನ್ನು ತಿನ್ನುವ ಇಲಾಖೆ ಹೊರತು ಜನತೆಯ ಒಳಿತಿಗಾಗಿ ಕಾರ್ಯ ನಿರ್ವಹಿಸುವ ಇಲಾಖೆ ಅಲ್ಲ ಎಂದು ಬಗೆದಂತಿದೆ.

ಇವೆಲ್ಲದರ ಅರ್ಥವೇನು? ಬಡತನ ನಿವಾರಣೆಗೆಂದು ಹಲವು ಬಗೆಯ ಯೋಜನೆಗಳನ್ನು ಇದುವರೆಗೆ ಆಳಿದ ವಿವಿಧ ಪಕ್ಷಗಳ ಸರ್ಕಾರಗಳು (ಪ್ರಧಾನವಾಗಿ ಕಾಂಗ್ರೆಸ್ಸು) ತಂದಿದ್ದಾರಾದರೂ, ಆ ನಿಟ್ಟಿನಲ್ಲಿ ಸಂಪೂರ್ಣ ಪರಿಹಾರ ಸಿಕ್ಕಿಲ್ಲ. ಅವೆಲ್ಲವನ್ನೂ ಬಗೆಹರಿಸಿ ಎಂದು 2014ರಲ್ಲಿ ಮತ್ತು 2019ರಲ್ಲಿ ಎರಡೆರಡು ಬಾರಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ ಅವರು ಮಾಡುತ್ತಿರುವುದೇನು? ಈ ಜನರನ್ನು ಬಡತನದ ಕೂಪದಿಂದ ಮೇಲೆತ್ತುವ ಬದಲು, ಜನರನ್ನು ಆತಂಕಕ್ಕೆ ದೂಡುವ ಕ್ರಮಗಳಿಗೆ ಮುಂದಾಗಿದೆ. ನೋಟು ರದ್ದತಿಯಿಂದ ಶುರುವಾಗಿ ಸಿಎಎ, ಎನ್‍ಆರ್‍ಸಿಯವರೆಗೆ ಎಲ್ಲವೂ ದೇಶವನ್ನು ಹಿಂಡುವ ಕ್ರಮಗಳಾಗಿವೆ. ದೇಶವನ್ನಾಳುವವರು ಭಾರತೀಯರ ಕುರಿತು ಕಾಳಜಿ ಇರುವವರೇ ಆಗಿದ್ದರೆ ಮೊದಲು ಬಡ ಭಾರತೀಯರ ಕುರಿತು ಗಮನಹರಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...