Homeಚಳವಳಿಉಡುಗದ ದನಿ ಗುಡುಗಬೇಕಾದ ಕಾಲವಿದು : ಎಚ್.ಎಸ್. ದೊರೆಸ್ವಾಮಿ

ಉಡುಗದ ದನಿ ಗುಡುಗಬೇಕಾದ ಕಾಲವಿದು : ಎಚ್.ಎಸ್. ದೊರೆಸ್ವಾಮಿ

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿಯವರು ನೂರರ ವಯಸ್ಸಿನ ಗಡಿ ದಾಟಿದರೂ ತುಂಬು ಉತ್ಸಾಹ, ಕಳಕಳಿಯಿಂದ ಜನಪರ ಹೋರಾಟಗಳಲ್ಲಿ ತೊಡಗಿಸಿಕೊಂಡು ಯುವಪೀಳಿಗೆಗೆ ಮಾದರಿಯಾಗಿದ್ದಾರೆ. ಸ್ವಾತಂತ್ರ್ಯ ಚಳವಳಿ ಸಂದರ್ಭದಲ್ಲಿ ಪತ್ರಕರ್ತರಾಗಿ, ಸಕ್ರಿಯ ಹೋರಾಟಗಾರರಾಗಿ ಪಾಲ್ಗೊಂಡಿದ್ದ ಅವರು ಈಗಲೂ ಬಡಜನರ ಪರವಾಗಿ ಭೂಮಿ ಮತ್ತು ವಸತಿ ಹಕ್ಕು ಹೋರಾಟದ ಮುಂಚೂಣಿ ವಹಿಸಿದ್ದಾರೆ. ಗೌರಿ ಮೆಮೋರಿಯಲ್ ಟ್ರಸ್ಟ್‍ನ ಅಧ್ಯಕ್ಷರೂ ಹೌದು. ಬೆಂಗಳೂರಿನ ಬಡಾವಣೆಯೊಂದರ ಉದ್ಯಾನವನದ ಸಮಸ್ಯೆಯಿಂದ ಹಿಡಿದು, ವಿಶ್ವ ವಾಣಿಜ್ಯ ಸಂಸ್ಥೆಯಲ್ಲಿ ಭಾರತಕ್ಕಾಗುತ್ತಿರುವ ತಾರತಮ್ಯದವರೆಗೆ ಯಾವುದೂ ಅವರ ‘ಅನ್ಯಾಯದ ವಿರುದ್ಧದ ಹೋರಾಟ’ದ ಪರಿಧಿಯಿಂದ ಹೊರತಲ್ಲ.

1942ರ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿ, 14 ತಿಂಗಳ ಸ್ಥಾನ ಬದ್ಧತೆಯಲ್ಲಿ ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿ ಬಂಧಿಯಾಗಿದ್ದೆ. 1944ರ ಏಪ್ರಿಲ್‍ನಲ್ಲಿ ನನ್ನ ಬಿಡುಗಡೆ ಆಯಿತು. ನಾನು ಬಿಡುವಾಗಿದ್ದೆ. ಮೈಸೂರಿನ ಯುವರಾಜ ಕಾಲೇಜಿನಲ್ಲಿ ಅಧ್ಯಾಪಕರಾಗಿದ್ದ ನನ್ನ ಅಣ್ಣನವರು, ತಮ್ಮ ಇಬ್ಬರು ಹೆಣ್ಣುಮಕ್ಕಳಿಗೆ ವಿಷಮಶೀತ ಜ್ವರ ಬಂದಿರುವುದಾಗಿ ತಿಳಿಸಿ ನನ್ನನ್ನು ಕೂಡಲೇ ಹೊರಟುಬರಲು ಕೋರಿದ್ದರು. ನಾನು ಕೂಡ ಮೈಸೂರಿಗೆ ಹೊರಟೆ. ಆ ಮಕ್ಕಳಲ್ಲಿ ಒಬ್ಬಳಿಗೆ ಖಾಯಿಲೆ ಉಲ್ಬಣಗೊಂಡು ಆಸ್ಪತ್ರೆಗೆ ಸೇರಿಸಿದರೂ ಕೊನೆಯುಸಿರೆಳೆದಳು. ಮನೆಯಲ್ಲಿ ಶೋಕ ಆವರಿಸಿತು. ಈ ಪರಿಸ್ಥಿತಿಯಲ್ಲಿ ನಮ್ಮಣ್ಣನನ್ನು ಬಿಟ್ಟು ಬೆಂಗಳೂರಿಗೆ ಹಿಂದಿರುಗುವುದು ಸರಿಯಲ್ಲವೆಂದು ಭಾವಿಸಿ ಮೈಸೂರಿನಲ್ಲೇ ಸಾಹಿತ್ಯ ಮಂದಿರ ಎಂಬ ಪ್ರಕಾಶನ ಸಂಸ್ಥೆ ಮತ್ತು ಪುಸ್ತಕ ಮಳಿಗೆಯನ್ನು ತೆರೆದೆ.

ಒಂದು ವರ್ಷ ಪೂರೈಸುವುದರಲ್ಲಿ ನನ್ನ ಬೆಂಗಳೂರಿನ ಸ್ನೇಹಿತರೂ, ರಾಜಕೀಯ ಕಾರ್ಯಕರ್ತರೂ, ಪೌರವಾಣಿ ವಾರಪತ್ರಿಕೆಯ ಸಂಪಾದಕರೂ ಆಗಿದ್ದ ರುಮಾಲೆ ಭದ್ರಣ್ಣನವರು ಸಾವನ್ನಪ್ಪಿದ ಸುದ್ದಿ ತಲುಪಿತು. ನಾನು ಬೆಂಗಳೂರಿಗೆ ಹೋಗಿ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡೆ.

ಸಮಾಧಿ ಕಾರ್ಯಕ್ರಮ ಮುಗಿದ ರಾತ್ರಿ ಗೆಳೆಯರೆಲ್ಲ ಸಭೆ ಸೇರಿದೆವು. ಪತ್ರಿಕೆಯ ಜವಾಬ್ದಾರಿಯನ್ನು ಹೊರಲು ಯಾರು ಸಿದ್ಧರಿದ್ದಾರೆಂಬ ಪ್ರಶ್ನೆ ನಮ್ಮ ಮುಂದೆ ಬಂದಿತು. ನನ್ನ ಸ್ನೇಹಿತರನೇಕರಿಗೆ ಹೊರೆ ಹೊರುವ ಸಾಮಥ್ರ್ಯವಿತ್ತು. ಆದರೆ, ಅವರ್ಯಾರೂ ಸಂಪಾದಕರಾಗಲು ಮುಂದೆ ಬರಲಿಲ್ಲ. ನಾನು ವಹಿಸಿಕೊಳ್ಳುವುದಾಗಿ ಹೇಳಿದೆ. ಎಲ್ಲರೂ ಸಮ್ಮತಿ ಸೂಚಿಸಿದರು.

ಮೈಸೂರಿನ ಪುಸ್ತಕದಂಗಡಿ ಖಾಲಿ ಮಾಡಿ ಬೆಂಗಳೂರಿಗೆ ಬಂದುಬಿಟ್ಟೆ. ಪತ್ರಿಕಾ ಕಚೇರಿಯಲ್ಲೇ ಉಳಿಯುವುದು ಊಟಕ್ಕೆ ನನ್ನ ಸ್ನೇಹಿತರಾದ ಎಂ.ಎಸ್. ಸೀತಾರಾಮಯ್ಯನವರ ಮನೆಗೆ ಹೋಗುವುದು ಎಂದು ತೀರ್ಮಾನವಾಯಿತು.

1947ರ ಮೈಸೂರು ಚಲೋ ಸತ್ಯಾಗ್ರಹ ಆರಂಭವಾಗುವ ಸೂಚನೆ ಇದ್ದದ್ದರಿಂದ ನಾನು ಪೌರವಾಣಿ ವಾರಪತ್ರಿಕೆಯನ್ನು ದಿನಪತ್ರಿಕೆಯಾಗಿ ಪರಿವರ್ತಿಸಿ ಅದರ ಸಂಪಾದಕನಾದೆ. ಪತ್ರಿಕೆಯಲ್ಲಿ ಪ್ರತಿದಿನ ತೀಕ್ಷ್ಣವಾದ ಅಗ್ರ ಲೇಖನ ಹಾಗೂ ಪ್ರಧಾನ ಲೇಖನವೊಂದು ಇರುತ್ತಿತ್ತು. ಪತ್ರಿಕೆಯ ಬೆಲೆ ಮೂರು ಕಾಸು (2 ನಯಾಪೈಸೆಗೆ), 4 ಪುಟಗಳ ಪತ್ರಿಕೆ.

ಪತ್ರಿಕೆಯಲ್ಲಿ  PTI, Reuters  ಸುದ್ದಿಗಳಿರುತ್ತಿದ್ದವು. ಚಳವಳಿಯ ದಿನಗಳು ಹತ್ತಿರ ಬರುತ್ತಿದ್ದಂತೆ ಮುಖ್ಯ ಲೇಖನವನ್ನು ಬರೆದುಕೊಡಲು ತಿರುಮಲೆ ತಾತಾಶರ್ಮರನ್ನು ಪ್ರಾರ್ಥಿಸಿದೆ. ಅವರು ಹತ್ತು ಲೇಖನಗಳನ್ನು ಬರೆದರು. ನೇರವಾಗಿ ಮಹಾರಾಜರನ್ನು, ಮಹಾರಾಜರ ಸರ್ಕಾರವನ್ನು ಟೀಕಿಸುವ ಲೇಖನಗಳು ಅವಾಗಿದ್ದವು.

8ನೇ ಲೇಖನ ಪ್ರಕಟವಾದ ಕೂಡಲೇ ಸರ್ಕಾರದ ಚೀಫ್ ಸೆಕ್ರೆಟರಿಯವರಿಂದ ನನಗೊಂದು ನೋಟಿಸ್ ಬಂದಿತು. ’ಇನ್ನು ಮುಂದೆ ಯಾವುದೇ ಅಗ್ರಲೇಖನ ಅಥವಾ ಲೇಖನವನ್ನು ಪ್ರಕಟಿಸುವ ಮೊದಲು ಅದನ್ನು ಚೀಫ್ ಸೆಕ್ರೆಟರಿಯವರಿಗೆ ಕಳಿಸಿ. ಅವರ ಅನುಮತಿ ದೊರೆತ ಲೇಖನಗಳನ್ನು ಮಾತ್ರ ಪತ್ರಿಕೆಯಲ್ಲಿ ಪ್ರಕಟಿಸಬೇಕು’ ಎಂದು ಆ ನೋಟಿಸ್‍ನಲ್ಲಿ ಬರೆಯಲಾಗಿತ್ತು.

ಸರ್ಕಾರದ ಅವಗಾಹನೆಗೆ ಕಳಿಸದೆಯೇ ಉಳಿದ ಎರಡು ಲೇಖನಗಳನ್ನೂ, ಸಂಪಾದಕೀಯಗಳನ್ನು ಪ್ರಕಟಿಸಿ, ’ಸರ್ಕಾರದ ಇಂತಹ ಕಠೋರ ಆಜ್ಞೆಗಳಿಗೆ ಪೌರವಾಣಿ ತಲೆ ಬಾಗುವುದಿಲ್ಲ. ಸರ್ಕಾರದ ಅನುಮತಿಗೆ ಕಳಿಸದೆಯೇ ಈ ಎರಡೂ ದಿನ ಸಂಪಾದಕೀಯ ಮತ್ತು ಲೇಖನಗಳನ್ನು ಪ್ರಕಟಿಸಲಾಗಿದೆ. ಸರ್ಕಾರದ ಈ ಬಗೆಯ ನೋಟಿಸಿಗೆ ಬೇಸತ್ತು ನಾಳೆಯಿಂದ ಪತ್ರಿಕೆಯನ್ನು ಹೊರತರದೇ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ’ ಎಂಬ ಒಂದು ಬಾಕ್ಸ್ ಸುದ್ದಿಯನ್ನು ಪೌರವಾಣಿ ಪತ್ರಿಕೆಯಲ್ಲಿ ಪ್ರಕಟಿಸಲಾಯಿತು. ಪತ್ರಿಕೆಯ ಪ್ರಕಟಣೆಯನ್ನು ನಿಲ್ಲಿಸಲಾಯಿತು.

ಸರ್ಕಾರ ಪೌರವಾಣಿಯನ್ನು ಮುಟ್ಟುಗೋಲು ಹಾಕಿಕೊಂಡು ಕಚೇರಿಗೆ ಬೀಗಮುದ್ರೆ ಹಾಕಿಸಿತು. ಇನ್ನು ಸಂಪಾದಕರನ್ನು ಬಂಧಿಸಿ ನ್ಯಾಯಾಲಯದ ಮುಂದೆ ನಿಲ್ಲಿಸುವುದೇ ಬಾಕಿ ಉಳಿದಿರುವುದು ಎಂಬುದನ್ನು ಅರಿತಿದ್ದ ನಾನು ಬೇರೆ ಪ್ರಾಂತಕ್ಕೆ ಹೋಗಿ ಪತ್ರಿಕೆ ಹೊರತಂದು ಮುಂಬರುವ ಮೈಸೂರು ಚಲೋ ಸತ್ಯಾಗ್ರಹಕ್ಕೆ ಬೆಂಬಲವಾಗಿ ನಿಲ್ಲುವುದೇ ಸೈ ಎಂದು ನಿರ್ಧರಿಸಿ ಮಿತ್ರ ಕೆ.ಆರ್. ಶ್ರೀಧರಮೂರ್ತಿಯವರನ್ನು ಕರೆದುಕೊಂಡು ಆಂಧ್ರದ ಹಿಂದೂಪುರಕ್ಕೆ ಹೋಗಿ ಅಲ್ಲಿಂದ ಪೌರವಾಣಿ ಪತ್ರಿಕೆ ಹೊರತರಲು ನಿಶ್ಚಯಿಸಿದೆ.

ಹಿಂದೂಪುರದಲ್ಲಿ ಸಿರಾ ಕಡೆಯವರಾದ ಲಿಂಗಣ್ಣ ಎಂಬುವ ಗಣ್ಯರಿದ್ದರು. ಅವರ ಸಹಾಯ ಪಡೆದು ಹಿಂದೂಪುರದ ಸುದರ್ಶನಾ ಮುದ್ರಣಾಲಯದಲ್ಲಿ ಪೌರವಾಣಿ ಅಚ್ಚು ಹಾಕಿಸುವುದೆಂದು ನಿರ್ಧರಿಸಲಾಯಿತು. ಅನಂತಪುರಕ್ಕೆ ಹೋಗಿ ಅಲ್ಲಿಯ ಕಲೆಕ್ಟರ್ ಸಮ್ಮುಖದಲ್ಲಿ ಪೌರವಾಣಿ ಪತ್ರಿಕೆಯ ಸಂಪಾದಕರಾಗಿ ನೋಂದಾಯಿಸಿಕೊಂಡೆ. ಬೆಂಗಳೂರಿನಿಂದ ಮೈಸೂರು ಸಂಸ್ಥಾನದ ಇತರ ಕಡೆಗಳಿಂದ ಸುದ್ದಿ ತರಿಸಿಕೊಂಡು `ಮೈಸೂರು ಚಲೋ’ ಸತ್ಯಾಗ್ರಹಕ್ಕೆ ಪೂರಕವಾಗಿ ಪೌರವಾಣಿಯನ್ನು ನಡೆಸಲಾಯಿತು. ಪ್ರತಿದಿನವೂ ಒಬ್ಬ ಸತ್ಯಾಗ್ರಹಿಯ ಮೂಲಕ ಪತ್ರಿಕೆ ಬಂಡಲನ್ನು ಬೆಂಗಳೂರಿಗೆ ಕಳುಹಿಸಲಾಗುತ್ತಿತ್ತು. ಆತನು ಪೊಲೀಸರ ಬಂಧನಕ್ಕೆ ತಯಾರಾಗಿಯೇ ಹೋಗಬೇಕಾಗಿತ್ತು.

ನನ್ನ ನೆರವಿಗೆ ಬೆಂಗಳೂರಿನಿಂದ ರುಮಾಲೆ ಚೆನ್ನಬಸವಯ್ಯನವರು, ತಿರುಮಲೆ ತೀರಂಗಾಚಾರ್ಯರು, ಮೈಸೂರಿನ ಎಚ್.ವಿ. ಸುಬ್ಬರಾಮಯ್ಯ, ಮಂಗಳೂರಿನ ಹಿಂದಿ ಪ್ರಚಾರಕ ಕೆ.ಎಲ್. ಶರ್ಮಾ, ಸೂರ್ಯನಾರಾಯಣ, ಕೃಷ್ಣಮೂರ್ತಿ ಮುಂತಾದವರಿದ್ದರು. 38 ದಿನ ಪತ್ರಿಕೆಯನ್ನು ಯಶಸ್ವಿಯಾಗಿ ನಡೆಸಿ, ಆ ನಂತರ ಬೆಂಗಳೂರಿಗೆ ಹಿಂತಿರುಗಿದೆ.

ಇದನ್ನೆಲ್ಲ ಇಲ್ಲಿ ಹೇಳಲು ಒಂದು ಕಾರಣವಿದೆ. ಕಾಲದ ಓಘದಲ್ಲಿ ಆಗಾಗ್ಗೆ ಇಂಥಾ ಕೆಟ್ಟ ಘಟ್ಟಗಳು ಎದುರಾಗುತ್ತಲೇ ಇರುತ್ತವೆ. ಇಂಥಾ ಘಟ್ಟಗಳು ಹೊಸದೂ ಅಲ್ಲ, ಅನಂತವಾದವೂ ಅಲ್ಲ. ಅವುಗಳಿಗೆ ದಿಟ್ಟವಾಗಿ ಉತ್ತರಿಸುವ ಪಣ ತೊಟ್ಟು ನಿಲ್ಲುವ ಗಟ್ಟಿ ಧೈರ್ಯ ಮಾಡುವುದೇ ನಿಜವಾದ ದೇಶಪ್ರೇಮಿಯ ಕಾಯಕ. ಗಾಂಧೀಜಿ ಮಾಡಿದ್ದೂ ಇದನ್ನೇ. ಈಗಲೂ ಅಂತಹುದೇ ಕಾಲ ಮರುಕಳಿಸಿದೆ. ಅಂದರೆ, ನಾವೀಗ ನಮ್ಮ ದೇಶಪ್ರೇಮವನ್ನು ಪಣಕ್ಕೊಡ್ಡುವ ಸಮಯ ಎದುರಾಗಿದೆ. ದೇಶಪ್ರೇಮಿಗಳ ದನಿ ಎಂದಿಗೂ ಉಡುಗುವಂತದ್ದಲ್ಲ, ಅದು ಗುಡುಗುವಂತದ್ದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...