Homeಚಳವಳಿಉಡುಗದ ದನಿ ಗುಡುಗಬೇಕಾದ ಕಾಲವಿದು : ಎಚ್.ಎಸ್. ದೊರೆಸ್ವಾಮಿ

ಉಡುಗದ ದನಿ ಗುಡುಗಬೇಕಾದ ಕಾಲವಿದು : ಎಚ್.ಎಸ್. ದೊರೆಸ್ವಾಮಿ

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿಯವರು ನೂರರ ವಯಸ್ಸಿನ ಗಡಿ ದಾಟಿದರೂ ತುಂಬು ಉತ್ಸಾಹ, ಕಳಕಳಿಯಿಂದ ಜನಪರ ಹೋರಾಟಗಳಲ್ಲಿ ತೊಡಗಿಸಿಕೊಂಡು ಯುವಪೀಳಿಗೆಗೆ ಮಾದರಿಯಾಗಿದ್ದಾರೆ. ಸ್ವಾತಂತ್ರ್ಯ ಚಳವಳಿ ಸಂದರ್ಭದಲ್ಲಿ ಪತ್ರಕರ್ತರಾಗಿ, ಸಕ್ರಿಯ ಹೋರಾಟಗಾರರಾಗಿ ಪಾಲ್ಗೊಂಡಿದ್ದ ಅವರು ಈಗಲೂ ಬಡಜನರ ಪರವಾಗಿ ಭೂಮಿ ಮತ್ತು ವಸತಿ ಹಕ್ಕು ಹೋರಾಟದ ಮುಂಚೂಣಿ ವಹಿಸಿದ್ದಾರೆ. ಗೌರಿ ಮೆಮೋರಿಯಲ್ ಟ್ರಸ್ಟ್‍ನ ಅಧ್ಯಕ್ಷರೂ ಹೌದು. ಬೆಂಗಳೂರಿನ ಬಡಾವಣೆಯೊಂದರ ಉದ್ಯಾನವನದ ಸಮಸ್ಯೆಯಿಂದ ಹಿಡಿದು, ವಿಶ್ವ ವಾಣಿಜ್ಯ ಸಂಸ್ಥೆಯಲ್ಲಿ ಭಾರತಕ್ಕಾಗುತ್ತಿರುವ ತಾರತಮ್ಯದವರೆಗೆ ಯಾವುದೂ ಅವರ ‘ಅನ್ಯಾಯದ ವಿರುದ್ಧದ ಹೋರಾಟ’ದ ಪರಿಧಿಯಿಂದ ಹೊರತಲ್ಲ.

1942ರ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿ, 14 ತಿಂಗಳ ಸ್ಥಾನ ಬದ್ಧತೆಯಲ್ಲಿ ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿ ಬಂಧಿಯಾಗಿದ್ದೆ. 1944ರ ಏಪ್ರಿಲ್‍ನಲ್ಲಿ ನನ್ನ ಬಿಡುಗಡೆ ಆಯಿತು. ನಾನು ಬಿಡುವಾಗಿದ್ದೆ. ಮೈಸೂರಿನ ಯುವರಾಜ ಕಾಲೇಜಿನಲ್ಲಿ ಅಧ್ಯಾಪಕರಾಗಿದ್ದ ನನ್ನ ಅಣ್ಣನವರು, ತಮ್ಮ ಇಬ್ಬರು ಹೆಣ್ಣುಮಕ್ಕಳಿಗೆ ವಿಷಮಶೀತ ಜ್ವರ ಬಂದಿರುವುದಾಗಿ ತಿಳಿಸಿ ನನ್ನನ್ನು ಕೂಡಲೇ ಹೊರಟುಬರಲು ಕೋರಿದ್ದರು. ನಾನು ಕೂಡ ಮೈಸೂರಿಗೆ ಹೊರಟೆ. ಆ ಮಕ್ಕಳಲ್ಲಿ ಒಬ್ಬಳಿಗೆ ಖಾಯಿಲೆ ಉಲ್ಬಣಗೊಂಡು ಆಸ್ಪತ್ರೆಗೆ ಸೇರಿಸಿದರೂ ಕೊನೆಯುಸಿರೆಳೆದಳು. ಮನೆಯಲ್ಲಿ ಶೋಕ ಆವರಿಸಿತು. ಈ ಪರಿಸ್ಥಿತಿಯಲ್ಲಿ ನಮ್ಮಣ್ಣನನ್ನು ಬಿಟ್ಟು ಬೆಂಗಳೂರಿಗೆ ಹಿಂದಿರುಗುವುದು ಸರಿಯಲ್ಲವೆಂದು ಭಾವಿಸಿ ಮೈಸೂರಿನಲ್ಲೇ ಸಾಹಿತ್ಯ ಮಂದಿರ ಎಂಬ ಪ್ರಕಾಶನ ಸಂಸ್ಥೆ ಮತ್ತು ಪುಸ್ತಕ ಮಳಿಗೆಯನ್ನು ತೆರೆದೆ.

ಒಂದು ವರ್ಷ ಪೂರೈಸುವುದರಲ್ಲಿ ನನ್ನ ಬೆಂಗಳೂರಿನ ಸ್ನೇಹಿತರೂ, ರಾಜಕೀಯ ಕಾರ್ಯಕರ್ತರೂ, ಪೌರವಾಣಿ ವಾರಪತ್ರಿಕೆಯ ಸಂಪಾದಕರೂ ಆಗಿದ್ದ ರುಮಾಲೆ ಭದ್ರಣ್ಣನವರು ಸಾವನ್ನಪ್ಪಿದ ಸುದ್ದಿ ತಲುಪಿತು. ನಾನು ಬೆಂಗಳೂರಿಗೆ ಹೋಗಿ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡೆ.

ಸಮಾಧಿ ಕಾರ್ಯಕ್ರಮ ಮುಗಿದ ರಾತ್ರಿ ಗೆಳೆಯರೆಲ್ಲ ಸಭೆ ಸೇರಿದೆವು. ಪತ್ರಿಕೆಯ ಜವಾಬ್ದಾರಿಯನ್ನು ಹೊರಲು ಯಾರು ಸಿದ್ಧರಿದ್ದಾರೆಂಬ ಪ್ರಶ್ನೆ ನಮ್ಮ ಮುಂದೆ ಬಂದಿತು. ನನ್ನ ಸ್ನೇಹಿತರನೇಕರಿಗೆ ಹೊರೆ ಹೊರುವ ಸಾಮಥ್ರ್ಯವಿತ್ತು. ಆದರೆ, ಅವರ್ಯಾರೂ ಸಂಪಾದಕರಾಗಲು ಮುಂದೆ ಬರಲಿಲ್ಲ. ನಾನು ವಹಿಸಿಕೊಳ್ಳುವುದಾಗಿ ಹೇಳಿದೆ. ಎಲ್ಲರೂ ಸಮ್ಮತಿ ಸೂಚಿಸಿದರು.

ಮೈಸೂರಿನ ಪುಸ್ತಕದಂಗಡಿ ಖಾಲಿ ಮಾಡಿ ಬೆಂಗಳೂರಿಗೆ ಬಂದುಬಿಟ್ಟೆ. ಪತ್ರಿಕಾ ಕಚೇರಿಯಲ್ಲೇ ಉಳಿಯುವುದು ಊಟಕ್ಕೆ ನನ್ನ ಸ್ನೇಹಿತರಾದ ಎಂ.ಎಸ್. ಸೀತಾರಾಮಯ್ಯನವರ ಮನೆಗೆ ಹೋಗುವುದು ಎಂದು ತೀರ್ಮಾನವಾಯಿತು.

1947ರ ಮೈಸೂರು ಚಲೋ ಸತ್ಯಾಗ್ರಹ ಆರಂಭವಾಗುವ ಸೂಚನೆ ಇದ್ದದ್ದರಿಂದ ನಾನು ಪೌರವಾಣಿ ವಾರಪತ್ರಿಕೆಯನ್ನು ದಿನಪತ್ರಿಕೆಯಾಗಿ ಪರಿವರ್ತಿಸಿ ಅದರ ಸಂಪಾದಕನಾದೆ. ಪತ್ರಿಕೆಯಲ್ಲಿ ಪ್ರತಿದಿನ ತೀಕ್ಷ್ಣವಾದ ಅಗ್ರ ಲೇಖನ ಹಾಗೂ ಪ್ರಧಾನ ಲೇಖನವೊಂದು ಇರುತ್ತಿತ್ತು. ಪತ್ರಿಕೆಯ ಬೆಲೆ ಮೂರು ಕಾಸು (2 ನಯಾಪೈಸೆಗೆ), 4 ಪುಟಗಳ ಪತ್ರಿಕೆ.

ಪತ್ರಿಕೆಯಲ್ಲಿ  PTI, Reuters  ಸುದ್ದಿಗಳಿರುತ್ತಿದ್ದವು. ಚಳವಳಿಯ ದಿನಗಳು ಹತ್ತಿರ ಬರುತ್ತಿದ್ದಂತೆ ಮುಖ್ಯ ಲೇಖನವನ್ನು ಬರೆದುಕೊಡಲು ತಿರುಮಲೆ ತಾತಾಶರ್ಮರನ್ನು ಪ್ರಾರ್ಥಿಸಿದೆ. ಅವರು ಹತ್ತು ಲೇಖನಗಳನ್ನು ಬರೆದರು. ನೇರವಾಗಿ ಮಹಾರಾಜರನ್ನು, ಮಹಾರಾಜರ ಸರ್ಕಾರವನ್ನು ಟೀಕಿಸುವ ಲೇಖನಗಳು ಅವಾಗಿದ್ದವು.

8ನೇ ಲೇಖನ ಪ್ರಕಟವಾದ ಕೂಡಲೇ ಸರ್ಕಾರದ ಚೀಫ್ ಸೆಕ್ರೆಟರಿಯವರಿಂದ ನನಗೊಂದು ನೋಟಿಸ್ ಬಂದಿತು. ’ಇನ್ನು ಮುಂದೆ ಯಾವುದೇ ಅಗ್ರಲೇಖನ ಅಥವಾ ಲೇಖನವನ್ನು ಪ್ರಕಟಿಸುವ ಮೊದಲು ಅದನ್ನು ಚೀಫ್ ಸೆಕ್ರೆಟರಿಯವರಿಗೆ ಕಳಿಸಿ. ಅವರ ಅನುಮತಿ ದೊರೆತ ಲೇಖನಗಳನ್ನು ಮಾತ್ರ ಪತ್ರಿಕೆಯಲ್ಲಿ ಪ್ರಕಟಿಸಬೇಕು’ ಎಂದು ಆ ನೋಟಿಸ್‍ನಲ್ಲಿ ಬರೆಯಲಾಗಿತ್ತು.

ಸರ್ಕಾರದ ಅವಗಾಹನೆಗೆ ಕಳಿಸದೆಯೇ ಉಳಿದ ಎರಡು ಲೇಖನಗಳನ್ನೂ, ಸಂಪಾದಕೀಯಗಳನ್ನು ಪ್ರಕಟಿಸಿ, ’ಸರ್ಕಾರದ ಇಂತಹ ಕಠೋರ ಆಜ್ಞೆಗಳಿಗೆ ಪೌರವಾಣಿ ತಲೆ ಬಾಗುವುದಿಲ್ಲ. ಸರ್ಕಾರದ ಅನುಮತಿಗೆ ಕಳಿಸದೆಯೇ ಈ ಎರಡೂ ದಿನ ಸಂಪಾದಕೀಯ ಮತ್ತು ಲೇಖನಗಳನ್ನು ಪ್ರಕಟಿಸಲಾಗಿದೆ. ಸರ್ಕಾರದ ಈ ಬಗೆಯ ನೋಟಿಸಿಗೆ ಬೇಸತ್ತು ನಾಳೆಯಿಂದ ಪತ್ರಿಕೆಯನ್ನು ಹೊರತರದೇ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ’ ಎಂಬ ಒಂದು ಬಾಕ್ಸ್ ಸುದ್ದಿಯನ್ನು ಪೌರವಾಣಿ ಪತ್ರಿಕೆಯಲ್ಲಿ ಪ್ರಕಟಿಸಲಾಯಿತು. ಪತ್ರಿಕೆಯ ಪ್ರಕಟಣೆಯನ್ನು ನಿಲ್ಲಿಸಲಾಯಿತು.

ಸರ್ಕಾರ ಪೌರವಾಣಿಯನ್ನು ಮುಟ್ಟುಗೋಲು ಹಾಕಿಕೊಂಡು ಕಚೇರಿಗೆ ಬೀಗಮುದ್ರೆ ಹಾಕಿಸಿತು. ಇನ್ನು ಸಂಪಾದಕರನ್ನು ಬಂಧಿಸಿ ನ್ಯಾಯಾಲಯದ ಮುಂದೆ ನಿಲ್ಲಿಸುವುದೇ ಬಾಕಿ ಉಳಿದಿರುವುದು ಎಂಬುದನ್ನು ಅರಿತಿದ್ದ ನಾನು ಬೇರೆ ಪ್ರಾಂತಕ್ಕೆ ಹೋಗಿ ಪತ್ರಿಕೆ ಹೊರತಂದು ಮುಂಬರುವ ಮೈಸೂರು ಚಲೋ ಸತ್ಯಾಗ್ರಹಕ್ಕೆ ಬೆಂಬಲವಾಗಿ ನಿಲ್ಲುವುದೇ ಸೈ ಎಂದು ನಿರ್ಧರಿಸಿ ಮಿತ್ರ ಕೆ.ಆರ್. ಶ್ರೀಧರಮೂರ್ತಿಯವರನ್ನು ಕರೆದುಕೊಂಡು ಆಂಧ್ರದ ಹಿಂದೂಪುರಕ್ಕೆ ಹೋಗಿ ಅಲ್ಲಿಂದ ಪೌರವಾಣಿ ಪತ್ರಿಕೆ ಹೊರತರಲು ನಿಶ್ಚಯಿಸಿದೆ.

ಹಿಂದೂಪುರದಲ್ಲಿ ಸಿರಾ ಕಡೆಯವರಾದ ಲಿಂಗಣ್ಣ ಎಂಬುವ ಗಣ್ಯರಿದ್ದರು. ಅವರ ಸಹಾಯ ಪಡೆದು ಹಿಂದೂಪುರದ ಸುದರ್ಶನಾ ಮುದ್ರಣಾಲಯದಲ್ಲಿ ಪೌರವಾಣಿ ಅಚ್ಚು ಹಾಕಿಸುವುದೆಂದು ನಿರ್ಧರಿಸಲಾಯಿತು. ಅನಂತಪುರಕ್ಕೆ ಹೋಗಿ ಅಲ್ಲಿಯ ಕಲೆಕ್ಟರ್ ಸಮ್ಮುಖದಲ್ಲಿ ಪೌರವಾಣಿ ಪತ್ರಿಕೆಯ ಸಂಪಾದಕರಾಗಿ ನೋಂದಾಯಿಸಿಕೊಂಡೆ. ಬೆಂಗಳೂರಿನಿಂದ ಮೈಸೂರು ಸಂಸ್ಥಾನದ ಇತರ ಕಡೆಗಳಿಂದ ಸುದ್ದಿ ತರಿಸಿಕೊಂಡು `ಮೈಸೂರು ಚಲೋ’ ಸತ್ಯಾಗ್ರಹಕ್ಕೆ ಪೂರಕವಾಗಿ ಪೌರವಾಣಿಯನ್ನು ನಡೆಸಲಾಯಿತು. ಪ್ರತಿದಿನವೂ ಒಬ್ಬ ಸತ್ಯಾಗ್ರಹಿಯ ಮೂಲಕ ಪತ್ರಿಕೆ ಬಂಡಲನ್ನು ಬೆಂಗಳೂರಿಗೆ ಕಳುಹಿಸಲಾಗುತ್ತಿತ್ತು. ಆತನು ಪೊಲೀಸರ ಬಂಧನಕ್ಕೆ ತಯಾರಾಗಿಯೇ ಹೋಗಬೇಕಾಗಿತ್ತು.

ನನ್ನ ನೆರವಿಗೆ ಬೆಂಗಳೂರಿನಿಂದ ರುಮಾಲೆ ಚೆನ್ನಬಸವಯ್ಯನವರು, ತಿರುಮಲೆ ತೀರಂಗಾಚಾರ್ಯರು, ಮೈಸೂರಿನ ಎಚ್.ವಿ. ಸುಬ್ಬರಾಮಯ್ಯ, ಮಂಗಳೂರಿನ ಹಿಂದಿ ಪ್ರಚಾರಕ ಕೆ.ಎಲ್. ಶರ್ಮಾ, ಸೂರ್ಯನಾರಾಯಣ, ಕೃಷ್ಣಮೂರ್ತಿ ಮುಂತಾದವರಿದ್ದರು. 38 ದಿನ ಪತ್ರಿಕೆಯನ್ನು ಯಶಸ್ವಿಯಾಗಿ ನಡೆಸಿ, ಆ ನಂತರ ಬೆಂಗಳೂರಿಗೆ ಹಿಂತಿರುಗಿದೆ.

ಇದನ್ನೆಲ್ಲ ಇಲ್ಲಿ ಹೇಳಲು ಒಂದು ಕಾರಣವಿದೆ. ಕಾಲದ ಓಘದಲ್ಲಿ ಆಗಾಗ್ಗೆ ಇಂಥಾ ಕೆಟ್ಟ ಘಟ್ಟಗಳು ಎದುರಾಗುತ್ತಲೇ ಇರುತ್ತವೆ. ಇಂಥಾ ಘಟ್ಟಗಳು ಹೊಸದೂ ಅಲ್ಲ, ಅನಂತವಾದವೂ ಅಲ್ಲ. ಅವುಗಳಿಗೆ ದಿಟ್ಟವಾಗಿ ಉತ್ತರಿಸುವ ಪಣ ತೊಟ್ಟು ನಿಲ್ಲುವ ಗಟ್ಟಿ ಧೈರ್ಯ ಮಾಡುವುದೇ ನಿಜವಾದ ದೇಶಪ್ರೇಮಿಯ ಕಾಯಕ. ಗಾಂಧೀಜಿ ಮಾಡಿದ್ದೂ ಇದನ್ನೇ. ಈಗಲೂ ಅಂತಹುದೇ ಕಾಲ ಮರುಕಳಿಸಿದೆ. ಅಂದರೆ, ನಾವೀಗ ನಮ್ಮ ದೇಶಪ್ರೇಮವನ್ನು ಪಣಕ್ಕೊಡ್ಡುವ ಸಮಯ ಎದುರಾಗಿದೆ. ದೇಶಪ್ರೇಮಿಗಳ ದನಿ ಎಂದಿಗೂ ಉಡುಗುವಂತದ್ದಲ್ಲ, ಅದು ಗುಡುಗುವಂತದ್ದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...