Homeಕರ್ನಾಟಕಆಸ್ಪತ್ರೆಗಾಗಿ ಆನ್‍ಲೈನ್ ಅಭಿಯಾನ ಕ್ಯಾರೇ ಎನ್ನದ ಉತ್ತರಕನ್ನಡ ಸಂಸದ, ಸಚಿವರು

ಆಸ್ಪತ್ರೆಗಾಗಿ ಆನ್‍ಲೈನ್ ಅಭಿಯಾನ ಕ್ಯಾರೇ ಎನ್ನದ ಉತ್ತರಕನ್ನಡ ಸಂಸದ, ಸಚಿವರು

ಉತ್ತರ ಕನ್ನಡವೆಂದರೆ ಉತ್ತರಗಳೇ ಇಲ್ಲದ ಸಮಸ್ಯೆಗಳ ನತದೃಷ್ಟ ಜಿಲ್ಲೆ! ಒಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕೆಂಬುದು ಉತ್ತರ ಕನ್ನಡದ ಬಹುದಿನದ ಕೊರಗು.

- Advertisement -
- Advertisement -

| ಶುದ್ದೋಧನ |

ಉತ್ತರ ಕನ್ನಡವೆಂದರೆ ಉತ್ತರಗಳೇ ಇಲ್ಲದ ಸಮಸ್ಯೆಗಳ ನತದೃಷ್ಟ ಜಿಲ್ಲೆ! ಒಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕೆಂಬುದು ಉತ್ತರ ಕನ್ನಡದ ಬಹುದಿನದ ಕೊರಗು. ಇದನ್ನು ಆಳುವ ಖೂಳರು ಕಿವಿ ಮೇಲೆ ಹಾಕಿಕೊಳ್ಳಲೇ ಇಲ್ಲ. ಜಿಲ್ಲೆಯಲ್ಲಿ ಮೂರು ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದೆ. ಹೈವೇ-ಹಳ್ಳಿಗಳಲ್ಲಿ ಅಪಘಾತ ಸಾಮಾನ್ಯ ಎಂಬಂತಾಗಿದೆ. ತಲೆಗೆ ಗಂಭೀರ ಗಾಯಗಳಾದರೆ, ಹೃದಯಕ್ಕೆ ಹೊಡೆತ ಬಿದ್ದರೆ, ಹೃದಯಾಘಾತ ಸಂಭವಿಸಿದರೆ, ಹೆರಿಗೆ ಸಮಯದಲ್ಲಿ ಸಮಸ್ಯೆಯಾದರೆ, ಜೀರ್ಣಾಂಗಕ್ಕೆ ಪೆಟ್ಟಾಗಿ ರಕ್ತಸ್ರಾವ ಶುರುವಾದರೆ ಅರ್ಧ ಗಂಟೆಯಿಂದ ಎರಡು ಗಂಟೆಯೊಳಗೆ ತುರ್ತು ಚಿಕಿತ್ಸೆ ಕೊಟ್ಟರಷ್ಟೇ ಜೀವ ಉಳಿಸಬಹುದು. ವೈದ್ಯಕೀಯ ಪರಿಭಾಷೆಯ ಈ ಗೋಲ್ಡನ್ ಪಿರಿಯಡ್‍ನಲ್ಲಿ ಚಿಕಿತ್ಸೆ ವ್ಯವಸ್ಥೆ ಉತ್ತರ ಕನ್ನಡದಲ್ಲಿ ಇಲ್ಲ. ಶಿರಸಿ-ಯಲ್ಲಾಪುರ ಸೀಮೆಯವರು ಗಾಯಾಳು/ರೋಗಿಯನ್ನು ಹುಬ್ಬಳ್ಳಿ ಅಥವಾ ಧಾರವಾಡಕ್ಕೆ ಕರೆದೊಯ್ಯಲು ಮೂರು ತಾಸು ಬೇಕು. ಮಣಿಪಾಲ-ಮಂಗಳೂರು ನಾಲ್ಕೈದು ತಾಸುಗಳೇ ಬೇಕಾಗುತ್ತದೆ. ಕಾರವಾರದವರು ಪಣಜಿ ಆಸ್ಪತ್ರೆ ತಲುಪಲು ಎರಡು ಗಂಟೆಯಾದರೂ ಅವಶ್ಯ. ಸಿದ್ದಾಪುರ ಭಾಗದವರು ಶಿವಮೊಗ್ಗ ತಲುಪಬೇಕೆಂದರೆ 3 ಗಂಟೆ ಪ್ರಯಾಣ.

ಗೋಲ್ಡನ್ ಪಿರಿಯಡ್‍ನಲ್ಲಿ ಸುಸಜ್ಜಿತ ಆಸ್ಪತ್ರೆಗೆ ರೋಗಿಗಳನ್ನು/ಗಾಯಾಳುಗಳನ್ನು ಸೇರಿಸಲಾಗದೆ ವಾರ್ಷಿಕವಾಗಿ ನೂರಾರು ಜೀವಗಳು ಹೋಗುತ್ತಿವೆ. 2018ರ ಮೇ ತಿಂಗಳಿಂದ 2019ರ ಎಪ್ರಿಲ್‍ವರೆಗೆ ಜಿಲ್ಲೆಯಲ್ಲಿ ಸರಾಸರಿ ದಿನಕ್ಕೆರಡರಂತೆ ಗಂಭೀರ ಅಪಘಾತಗಳಾಗಿವೆ. 239 ಮಂದಿ ಸಾವಿಗೀಡಾಗಿದ್ದಾರೆ; 522 ಮಂದಿಯ ಅಂಗ ಊನವಾಗಿದೆ; 1,331 ಜನರು ಗಾಯಗೊಂಡು ಬಚಾವಾಗಿದ್ದಾರೆ. ತುರ್ತು ಸಮಯದಲ್ಲಿ ಕೃತಕ ಉಸಿರಾಟ ವ್ಯವಸ್ಥೆಯಿರುವ ಅಂಬ್ಯುಲೆನ್ಸ್ ಸಹ ಜಿಲ್ಲೆಯವರಿಗೆ ಸಿಗುತ್ತಿಲ್ಲ, ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ಒಂದಿದ್ದರೆ ಹಲವು ಜೀವಗಳನ್ನು ಖಂಡಿತ ಉಳಿಸಬಹುದಿತ್ತು. ಉತ್ತರ ಕನ್ನಡದಲ್ಲಿ ಮೆಡಿಕಲ್ ಕಾಲೇಜು ಶುರುವಾಗಿ ಮೂರು ವರ್ಷವಾಗಿದೆ. ಆದರೆ ಸುಸಜ್ಜಿತ ಆಸ್ಪತ್ರೆ, ಟ್ರಾಮಾ ಸೆಂಟರ್ ಬೇಕೆಂಬ ಬೇಡಿಕೆ ಈಡೇರಿಲ್ಲ.

ಈ ನರಕ ಯಾತನೆಯಿಂದ ಜಿಲ್ಲೆಯನ್ನು ಪಾರು ಮಾಡಲೇಬೇಕೆಂಬ ಯೋಚನೆಯಿಂದ ಒಂದಿಷ್ಟು ಯುವಕರು ಕಳೆದೊಂದು ವಾರದಿಂದ ಸಾಮಾಜಿಕ ಜಾಲತಾಣದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗಾಗಿ ಅಕ್ಷರ ಆಂದೋಲನ ಆರಂಭಿಸಿದ್ದಾರೆ.ಟ್ವಿಟರ್, ಫೇಸ್‍ಬುಕ್, ವಾಟ್ಸಾಪ್‍ಗಳಲ್ಲಿ ವ್ಯಾಪಕ ಚರ್ಚೆಗಳು ನಡೆಯುತ್ತಿವೆ. “ವಿ ನೀಡ್ ಮಲ್ಟಿಸ್ಪೆಷಾಲಿಟಿ ಹಾಸ್ಪಿಟಲ್ ಇನ್ ಉತ್ತರ ಕನ್ನಡ” ಎಂಬ ಹ್ಯಾಶ್‍ಟ್ಯಾಗ್‍ನಿಂದ ಯುವಕರು ಜನಪ್ರತಿನಿಧಿಗಳ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಕ್ಕೊತ್ತಾಯ ಮಂಡಿಸುತ್ತಿದ್ದಾರೆ. ಪರಸ್ಪರ ಪರಿಚಯವೇ ಇಲ್ಲದ ಈ ಸಮಾನ ಮನಸ್ಕರ ಸ್ವಯಂ ಪ್ರೇರಣೆಯ ಸುಸಜ್ಜಿತ ಆಸ್ಪತ್ರೆ ಬೇಡಿಕೆಯ ಸರಣಿ ಟ್ವೀಟ್‍ಗೆ ಪ್ರಧಾನಿ, ಸಿಎಂ, ಜಿಲ್ಲೆಯ ದಂಡಪಿಂಡ ಮಂತ್ರಿ ದೇಶಪಾಂಡೆ, ಕರ್ಮಗೇಡಿ ಸಂಸದ ಅನಂತ್ಮಾಣಿ ಮತ್ತು ಜಿಲ್ಲೆಯ ಐದು ಶಾಸಕರು ಗಡಿಬಿಡಿಗೆ ಬಿದ್ದಂತೆ ಎದ್ದು ಕುಂತಿದ್ದಾರೆ.

ಜೂನ್ 8ರ ಶನಿವಾರ ಸಂಜೆ 5.30ರಿಂದ 7.30 ಗಂಟೆವರೆಗೆ ಏಕಕಾಲದಲ್ಲಿ ಜಿಲ್ಲೆಯ ಜನ ಪ್ರಧಾನಿ ಕಾರ್ಯಾಲಯದಿಂದ ಸ್ಥಳೀಯ ಶಾಸಕರ ತನಕದ ಆಯಕಟ್ಟಿನ ಅಧಿಕಾರಸ್ಥರೆಲ್ಲರಿಗೆ ಸುಸಜ್ಜಿತ ಆಸ್ಪತ್ರೆಗಾಗಿ ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ. ಏಳು ಸಾವಿರಕ್ಕೂ ಹೆಚ್ಚು ಜನರು ತೊಡಗಿಕೊಂಡು ಅಧಿಕಾರಸ್ಥರು ಜಿಲ್ಲೆಯತ್ತ ತಿರುಗಿ ನೋಡುವಂತೆ ಮಾಡಿದ್ದು ದಾಖಲೆಯೇ ಸರಿ!! ಜಿಲ್ಲೆಯ ಯುವಕರು ಸಾಮಾಜಿಕ ಕಳಕಳಿಯ ಹೊಸ ಟ್ರೆಂಡ್ ಹುಟ್ಟಿಹಾಕಿದ್ದಾರೆ. ಈ ಅಭಿಯಾನದಿಂದ ಬೆಚ್ಚಿಬಿದ್ದಿರುವ ಜನಪ್ರತಿನಿಧಿಗಳು ಬೆಂಬಲ ಮಾತಾಡುತ್ತಿದ್ದಾರೆ. ಕಾರವಾರ ಶಾಸಕಿ ರೂಪಾಲಿ ನಾಯಕ್ ತಾನು ಹಿಂದೆ ವೈದ್ಯಕೀಯ ಶಿಕ್ಷಣ ಮಂತ್ರಿಯಾಗಿದ್ದ ಡಿಕೆಶಿಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಬರೆದ ಪತ್ರ ತೋರಿಸುತ್ತಿದ್ದರೆ, ಶಿರಸಿಯ ಕಾಗೇರಿ ಮಾಣಿ ಸುಸಜ್ಜಿತ ಆಸ್ಪತ್ರೆ ಶಿರಸಿ ಅಥವಾ ಕುಮಟಾದಲ್ಲಿ ಆಗುವ ಜರೂರಿದೆ ಎನ್ನುತ್ತಿದ್ದಾರೆ. ಭಟ್ಕಳದ ಶಾಸಕ ಸುನೀಲ್ ನಾಯ್ಕ ವೈದ್ಯಕೀಯ ಶಿಕ್ಷಣ ಮಂತ್ರಿಗೆ ಅವಸರವಸರದಲ್ಲಿ ಒಂದು ಪತ್ರ ಗೀಚಿದ್ದಾರೆ. ಡಿಸಿಸಿ ಅಧ್ಯಕ್ಷ ಭೀಮಣ್ಣ ನಾಯ್ಕ, ಮಾಜಿ ಶಾಸಕಿ ಶಾರದಾ ಶೆಟ್ಟಿ ನೆಟ್ಟಿಗರ ಬೇಡಿಕೆಗೆ ಬಲ ಕೊಟ್ಟಿದ್ದಾರೆ.

ಸಿಎಂ ಕುಮ್ಮಿ ಕಚೇರಿಯ ಅಧಿಕೃತ ಪೇಜ್‍ನಿಂದ ಆಸ್ಪತ್ರೆ ಅಭಿಯಾನಕ್ಕೆ ಸ್ಪಂದನೆ ಸಿಕ್ಕಿದೆ. “ಉತ್ತರ ಕನ್ನಡಿಗರ ಆಸ್ಪತ್ರೆ ಅಭಿಯಾನ ನನ್ನ ಗಮನಕ್ಕೆ ಬಂದಿದೆ, ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವರದಿ ತರಿಸಿ ಕ್ರಮ ಕೈಗೊಳ್ಳಲಾಗುವುದು” ಎಂಬ ಭರವಸೆ ಬಂದಿದೆ. ಕೇಂದ್ರ ಸರ್ಕಾರದಿಂದ ಯಾವ ರೀತಿಯ ಸಹಕಾರ ನೀಡಬಹುದೆಂದು ಆರೋಗ್ಯ ಸಚಿವಾಲಯದೊಂದಿಗೆ ಚರ್ಚಿಸುತ್ತೇನೆ. ಉತ್ತರ ಕನ್ನಡದ ಸಂಸದನ ಜತೆಯಲ್ಲಿಟ್ಟುಕೊಂಡು ಕೇಂದ್ರದ ಸಹಾಯ ಕೋರಿಸುತ್ತೇನೆ” ಅಂದಿದ್ದಾರೆ. ಆದರೆ ಜಿಲ್ಲೆಗೆ ದೊಡ್ಡ ದಂಡವಾಗಿರುವ ಮಂತ್ರಿ ದೋಷಪಾಂಡೆ ಮತ್ತು ಅನಂತ್ಮಾಣಿ ಇದ್ಯಾವುದೂ ತಮಗೆ ಸಂಬಂಧಿಸಿದ್ದಲ್ಲ ಎಂಬಂತೆ ಮೂರೂ ಮುಚ್ಚಿಕೊಂಡು ಸ್ವಂತ ‘ದಂದೆ’ಯಲ್ಲಿ ತಲ್ಲೀನರಾಗಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ತನ್ನ ಎಂಪಿಗಿರಿ ಅನಿವಾರ್ಯ ಎಂಬಂತೆ ಒಣ ಪೋಸು ಕೊಡುವ, ಅಭಿವೃದ್ಧಿ ಹಿಂದೂತ್ವ ಎಂದು ಬೊಬ್ಬಿರಿವ ಅನಂತ್ಮಾಣಿ ಆಸ್ಪತ್ರೆಗೆ ಒತ್ತಾಯಿಸಿ ಸರಣಿ ಟ್ವಿಟ್ ಮಾಡಿದವರನ್ನು ಬ್ಲಾಕ್ ಮಾಡಿ ತನ್ನ ಅಸಲಿ ಕರ್ಮಗೇಡಿತನ ತೋರಿಸಿಕೊಂಡಿದ್ದಾನೆ.

“ಉತ್ತರ ಕನ್ನಡ ಟ್ರೋಲರ್ಸ್” ಎಂಬ ಟ್ವಟರ್ ಖಾತೆಯಿಂದ ಮಾಣಿಗೆ ಟ್ವಿಟ್ ಮಾಡಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸುವ ಯೋಗ್ಯತೆಯಿಲ್ಲದ ಸಂಸದ ಸಾಹೇಬ ಆಸ್ಪತ್ರೆ ಬೇಡಿಕೆ ಇಡುತ್ತಿರುವವರನ್ನು ತನ್ನ ಸಾಮಾಜಿಕ ಜಾಲತಾಣ ಖಾತೆಯಿಂದ ದೂರ ಇಟ್ಟಿದ್ದಾನೆ. ಕಾರವಾರ ಮೆಡಿಕಲ್ ಕಾಲೇಜಿನ ಬಳಿಯೇ ಟ್ರೋಮಾ ಸೆಂಟರ್ ಸ್ಥಾಪನೆಗೆ ಪ್ರಸ್ತಾವನೆ ಕೇಂದ್ರ ಸರ್ಕಾರಕ್ಕೆ ಕಳಿಸಿ ಬಹಳ ದಿನಗಳೇ ಆಗಿಹೋಗಿವೆ. ಇದಕ್ಕೆ ಜಾಗದ ತಲಾಶ್ ಸಹ ನಡೆದಿದೆ. ಬಹುಶಃ ಸಂಸದ ಮಾಣಿಗೆ ಇದೆಲ್ಲ ಗೊತ್ತಿರುವಂತಿಲ್ಲ. ಖಾಸಗಿಯವರಿಂದ ದುಬಾರಿ ಟ್ರೋಮಾ ಸೆಂಟರ್ ನಿರ್ಮಾಣ ಸಾಧ್ಯವಾಗದು. ಅದು ಕಾರವಾರ ಮೆಡಿಕಲ್ ಕಾಲೇಜಿನ ಬಳಿಯೇ ಆಗಬೇಕಾದ ಅನಿವಾರ್ಯತೆಯಿದೆ. ಜನರ ಈ ಹೋರಾಟಕ್ಕೆ ಬರೀ ಕಣ್ಣೊರೆಸುವ ಕಿತಾಪತಿ ಆಗಬಾರದೆಂಬುದು ಆಸ್ಪತ್ರೆ ಬಯಸುವವರ ಕಳಕಳಿ. ಗುರಿಮುಟ್ಟುವ ತನಕ ಜನಪ್ರತಿನಿಧಿಗಳು ಹಿಂದಡಿ ಇಡಬಾರದೆಂದು ಜನ ಬಯಸಿದ್ದಾರೆ.ಹಾಗೆಯೇ ಭಾವನಾತ್ಮಕ ಹೋರಾಟ ಜೋರಾದಾಗ ಆಳುವವರು ಟ್ರಾಮಾ ಸೆಂಟರ್ ಬೋರ್ಡ್ ಹಾಕಿ, ನಾಲ್ಕು ಡಾಕ್ಟರ್‍ಗಳ ನೇಮಿಸುವ ನಾಟಕ ಆಡದಿರಲಿ. ಉತ್ತರ ಕನ್ನಡಿಗರ ಜೀವ ಉಳಿಸುವ ಪ್ರಾಮಾಣಿಕ ಕೆಲಸ ತುರ್ತಾಗಿ ಆಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...