Homeಕರ್ನಾಟಕಆಸ್ಪತ್ರೆಗಾಗಿ ಆನ್‍ಲೈನ್ ಅಭಿಯಾನ ಕ್ಯಾರೇ ಎನ್ನದ ಉತ್ತರಕನ್ನಡ ಸಂಸದ, ಸಚಿವರು

ಆಸ್ಪತ್ರೆಗಾಗಿ ಆನ್‍ಲೈನ್ ಅಭಿಯಾನ ಕ್ಯಾರೇ ಎನ್ನದ ಉತ್ತರಕನ್ನಡ ಸಂಸದ, ಸಚಿವರು

ಉತ್ತರ ಕನ್ನಡವೆಂದರೆ ಉತ್ತರಗಳೇ ಇಲ್ಲದ ಸಮಸ್ಯೆಗಳ ನತದೃಷ್ಟ ಜಿಲ್ಲೆ! ಒಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕೆಂಬುದು ಉತ್ತರ ಕನ್ನಡದ ಬಹುದಿನದ ಕೊರಗು.

- Advertisement -
- Advertisement -

| ಶುದ್ದೋಧನ |

ಉತ್ತರ ಕನ್ನಡವೆಂದರೆ ಉತ್ತರಗಳೇ ಇಲ್ಲದ ಸಮಸ್ಯೆಗಳ ನತದೃಷ್ಟ ಜಿಲ್ಲೆ! ಒಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕೆಂಬುದು ಉತ್ತರ ಕನ್ನಡದ ಬಹುದಿನದ ಕೊರಗು. ಇದನ್ನು ಆಳುವ ಖೂಳರು ಕಿವಿ ಮೇಲೆ ಹಾಕಿಕೊಳ್ಳಲೇ ಇಲ್ಲ. ಜಿಲ್ಲೆಯಲ್ಲಿ ಮೂರು ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದೆ. ಹೈವೇ-ಹಳ್ಳಿಗಳಲ್ಲಿ ಅಪಘಾತ ಸಾಮಾನ್ಯ ಎಂಬಂತಾಗಿದೆ. ತಲೆಗೆ ಗಂಭೀರ ಗಾಯಗಳಾದರೆ, ಹೃದಯಕ್ಕೆ ಹೊಡೆತ ಬಿದ್ದರೆ, ಹೃದಯಾಘಾತ ಸಂಭವಿಸಿದರೆ, ಹೆರಿಗೆ ಸಮಯದಲ್ಲಿ ಸಮಸ್ಯೆಯಾದರೆ, ಜೀರ್ಣಾಂಗಕ್ಕೆ ಪೆಟ್ಟಾಗಿ ರಕ್ತಸ್ರಾವ ಶುರುವಾದರೆ ಅರ್ಧ ಗಂಟೆಯಿಂದ ಎರಡು ಗಂಟೆಯೊಳಗೆ ತುರ್ತು ಚಿಕಿತ್ಸೆ ಕೊಟ್ಟರಷ್ಟೇ ಜೀವ ಉಳಿಸಬಹುದು. ವೈದ್ಯಕೀಯ ಪರಿಭಾಷೆಯ ಈ ಗೋಲ್ಡನ್ ಪಿರಿಯಡ್‍ನಲ್ಲಿ ಚಿಕಿತ್ಸೆ ವ್ಯವಸ್ಥೆ ಉತ್ತರ ಕನ್ನಡದಲ್ಲಿ ಇಲ್ಲ. ಶಿರಸಿ-ಯಲ್ಲಾಪುರ ಸೀಮೆಯವರು ಗಾಯಾಳು/ರೋಗಿಯನ್ನು ಹುಬ್ಬಳ್ಳಿ ಅಥವಾ ಧಾರವಾಡಕ್ಕೆ ಕರೆದೊಯ್ಯಲು ಮೂರು ತಾಸು ಬೇಕು. ಮಣಿಪಾಲ-ಮಂಗಳೂರು ನಾಲ್ಕೈದು ತಾಸುಗಳೇ ಬೇಕಾಗುತ್ತದೆ. ಕಾರವಾರದವರು ಪಣಜಿ ಆಸ್ಪತ್ರೆ ತಲುಪಲು ಎರಡು ಗಂಟೆಯಾದರೂ ಅವಶ್ಯ. ಸಿದ್ದಾಪುರ ಭಾಗದವರು ಶಿವಮೊಗ್ಗ ತಲುಪಬೇಕೆಂದರೆ 3 ಗಂಟೆ ಪ್ರಯಾಣ.

ಗೋಲ್ಡನ್ ಪಿರಿಯಡ್‍ನಲ್ಲಿ ಸುಸಜ್ಜಿತ ಆಸ್ಪತ್ರೆಗೆ ರೋಗಿಗಳನ್ನು/ಗಾಯಾಳುಗಳನ್ನು ಸೇರಿಸಲಾಗದೆ ವಾರ್ಷಿಕವಾಗಿ ನೂರಾರು ಜೀವಗಳು ಹೋಗುತ್ತಿವೆ. 2018ರ ಮೇ ತಿಂಗಳಿಂದ 2019ರ ಎಪ್ರಿಲ್‍ವರೆಗೆ ಜಿಲ್ಲೆಯಲ್ಲಿ ಸರಾಸರಿ ದಿನಕ್ಕೆರಡರಂತೆ ಗಂಭೀರ ಅಪಘಾತಗಳಾಗಿವೆ. 239 ಮಂದಿ ಸಾವಿಗೀಡಾಗಿದ್ದಾರೆ; 522 ಮಂದಿಯ ಅಂಗ ಊನವಾಗಿದೆ; 1,331 ಜನರು ಗಾಯಗೊಂಡು ಬಚಾವಾಗಿದ್ದಾರೆ. ತುರ್ತು ಸಮಯದಲ್ಲಿ ಕೃತಕ ಉಸಿರಾಟ ವ್ಯವಸ್ಥೆಯಿರುವ ಅಂಬ್ಯುಲೆನ್ಸ್ ಸಹ ಜಿಲ್ಲೆಯವರಿಗೆ ಸಿಗುತ್ತಿಲ್ಲ, ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ಒಂದಿದ್ದರೆ ಹಲವು ಜೀವಗಳನ್ನು ಖಂಡಿತ ಉಳಿಸಬಹುದಿತ್ತು. ಉತ್ತರ ಕನ್ನಡದಲ್ಲಿ ಮೆಡಿಕಲ್ ಕಾಲೇಜು ಶುರುವಾಗಿ ಮೂರು ವರ್ಷವಾಗಿದೆ. ಆದರೆ ಸುಸಜ್ಜಿತ ಆಸ್ಪತ್ರೆ, ಟ್ರಾಮಾ ಸೆಂಟರ್ ಬೇಕೆಂಬ ಬೇಡಿಕೆ ಈಡೇರಿಲ್ಲ.

ಈ ನರಕ ಯಾತನೆಯಿಂದ ಜಿಲ್ಲೆಯನ್ನು ಪಾರು ಮಾಡಲೇಬೇಕೆಂಬ ಯೋಚನೆಯಿಂದ ಒಂದಿಷ್ಟು ಯುವಕರು ಕಳೆದೊಂದು ವಾರದಿಂದ ಸಾಮಾಜಿಕ ಜಾಲತಾಣದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗಾಗಿ ಅಕ್ಷರ ಆಂದೋಲನ ಆರಂಭಿಸಿದ್ದಾರೆ.ಟ್ವಿಟರ್, ಫೇಸ್‍ಬುಕ್, ವಾಟ್ಸಾಪ್‍ಗಳಲ್ಲಿ ವ್ಯಾಪಕ ಚರ್ಚೆಗಳು ನಡೆಯುತ್ತಿವೆ. “ವಿ ನೀಡ್ ಮಲ್ಟಿಸ್ಪೆಷಾಲಿಟಿ ಹಾಸ್ಪಿಟಲ್ ಇನ್ ಉತ್ತರ ಕನ್ನಡ” ಎಂಬ ಹ್ಯಾಶ್‍ಟ್ಯಾಗ್‍ನಿಂದ ಯುವಕರು ಜನಪ್ರತಿನಿಧಿಗಳ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಕ್ಕೊತ್ತಾಯ ಮಂಡಿಸುತ್ತಿದ್ದಾರೆ. ಪರಸ್ಪರ ಪರಿಚಯವೇ ಇಲ್ಲದ ಈ ಸಮಾನ ಮನಸ್ಕರ ಸ್ವಯಂ ಪ್ರೇರಣೆಯ ಸುಸಜ್ಜಿತ ಆಸ್ಪತ್ರೆ ಬೇಡಿಕೆಯ ಸರಣಿ ಟ್ವೀಟ್‍ಗೆ ಪ್ರಧಾನಿ, ಸಿಎಂ, ಜಿಲ್ಲೆಯ ದಂಡಪಿಂಡ ಮಂತ್ರಿ ದೇಶಪಾಂಡೆ, ಕರ್ಮಗೇಡಿ ಸಂಸದ ಅನಂತ್ಮಾಣಿ ಮತ್ತು ಜಿಲ್ಲೆಯ ಐದು ಶಾಸಕರು ಗಡಿಬಿಡಿಗೆ ಬಿದ್ದಂತೆ ಎದ್ದು ಕುಂತಿದ್ದಾರೆ.

ಜೂನ್ 8ರ ಶನಿವಾರ ಸಂಜೆ 5.30ರಿಂದ 7.30 ಗಂಟೆವರೆಗೆ ಏಕಕಾಲದಲ್ಲಿ ಜಿಲ್ಲೆಯ ಜನ ಪ್ರಧಾನಿ ಕಾರ್ಯಾಲಯದಿಂದ ಸ್ಥಳೀಯ ಶಾಸಕರ ತನಕದ ಆಯಕಟ್ಟಿನ ಅಧಿಕಾರಸ್ಥರೆಲ್ಲರಿಗೆ ಸುಸಜ್ಜಿತ ಆಸ್ಪತ್ರೆಗಾಗಿ ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ. ಏಳು ಸಾವಿರಕ್ಕೂ ಹೆಚ್ಚು ಜನರು ತೊಡಗಿಕೊಂಡು ಅಧಿಕಾರಸ್ಥರು ಜಿಲ್ಲೆಯತ್ತ ತಿರುಗಿ ನೋಡುವಂತೆ ಮಾಡಿದ್ದು ದಾಖಲೆಯೇ ಸರಿ!! ಜಿಲ್ಲೆಯ ಯುವಕರು ಸಾಮಾಜಿಕ ಕಳಕಳಿಯ ಹೊಸ ಟ್ರೆಂಡ್ ಹುಟ್ಟಿಹಾಕಿದ್ದಾರೆ. ಈ ಅಭಿಯಾನದಿಂದ ಬೆಚ್ಚಿಬಿದ್ದಿರುವ ಜನಪ್ರತಿನಿಧಿಗಳು ಬೆಂಬಲ ಮಾತಾಡುತ್ತಿದ್ದಾರೆ. ಕಾರವಾರ ಶಾಸಕಿ ರೂಪಾಲಿ ನಾಯಕ್ ತಾನು ಹಿಂದೆ ವೈದ್ಯಕೀಯ ಶಿಕ್ಷಣ ಮಂತ್ರಿಯಾಗಿದ್ದ ಡಿಕೆಶಿಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಬರೆದ ಪತ್ರ ತೋರಿಸುತ್ತಿದ್ದರೆ, ಶಿರಸಿಯ ಕಾಗೇರಿ ಮಾಣಿ ಸುಸಜ್ಜಿತ ಆಸ್ಪತ್ರೆ ಶಿರಸಿ ಅಥವಾ ಕುಮಟಾದಲ್ಲಿ ಆಗುವ ಜರೂರಿದೆ ಎನ್ನುತ್ತಿದ್ದಾರೆ. ಭಟ್ಕಳದ ಶಾಸಕ ಸುನೀಲ್ ನಾಯ್ಕ ವೈದ್ಯಕೀಯ ಶಿಕ್ಷಣ ಮಂತ್ರಿಗೆ ಅವಸರವಸರದಲ್ಲಿ ಒಂದು ಪತ್ರ ಗೀಚಿದ್ದಾರೆ. ಡಿಸಿಸಿ ಅಧ್ಯಕ್ಷ ಭೀಮಣ್ಣ ನಾಯ್ಕ, ಮಾಜಿ ಶಾಸಕಿ ಶಾರದಾ ಶೆಟ್ಟಿ ನೆಟ್ಟಿಗರ ಬೇಡಿಕೆಗೆ ಬಲ ಕೊಟ್ಟಿದ್ದಾರೆ.

ಸಿಎಂ ಕುಮ್ಮಿ ಕಚೇರಿಯ ಅಧಿಕೃತ ಪೇಜ್‍ನಿಂದ ಆಸ್ಪತ್ರೆ ಅಭಿಯಾನಕ್ಕೆ ಸ್ಪಂದನೆ ಸಿಕ್ಕಿದೆ. “ಉತ್ತರ ಕನ್ನಡಿಗರ ಆಸ್ಪತ್ರೆ ಅಭಿಯಾನ ನನ್ನ ಗಮನಕ್ಕೆ ಬಂದಿದೆ, ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವರದಿ ತರಿಸಿ ಕ್ರಮ ಕೈಗೊಳ್ಳಲಾಗುವುದು” ಎಂಬ ಭರವಸೆ ಬಂದಿದೆ. ಕೇಂದ್ರ ಸರ್ಕಾರದಿಂದ ಯಾವ ರೀತಿಯ ಸಹಕಾರ ನೀಡಬಹುದೆಂದು ಆರೋಗ್ಯ ಸಚಿವಾಲಯದೊಂದಿಗೆ ಚರ್ಚಿಸುತ್ತೇನೆ. ಉತ್ತರ ಕನ್ನಡದ ಸಂಸದನ ಜತೆಯಲ್ಲಿಟ್ಟುಕೊಂಡು ಕೇಂದ್ರದ ಸಹಾಯ ಕೋರಿಸುತ್ತೇನೆ” ಅಂದಿದ್ದಾರೆ. ಆದರೆ ಜಿಲ್ಲೆಗೆ ದೊಡ್ಡ ದಂಡವಾಗಿರುವ ಮಂತ್ರಿ ದೋಷಪಾಂಡೆ ಮತ್ತು ಅನಂತ್ಮಾಣಿ ಇದ್ಯಾವುದೂ ತಮಗೆ ಸಂಬಂಧಿಸಿದ್ದಲ್ಲ ಎಂಬಂತೆ ಮೂರೂ ಮುಚ್ಚಿಕೊಂಡು ಸ್ವಂತ ‘ದಂದೆ’ಯಲ್ಲಿ ತಲ್ಲೀನರಾಗಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ತನ್ನ ಎಂಪಿಗಿರಿ ಅನಿವಾರ್ಯ ಎಂಬಂತೆ ಒಣ ಪೋಸು ಕೊಡುವ, ಅಭಿವೃದ್ಧಿ ಹಿಂದೂತ್ವ ಎಂದು ಬೊಬ್ಬಿರಿವ ಅನಂತ್ಮಾಣಿ ಆಸ್ಪತ್ರೆಗೆ ಒತ್ತಾಯಿಸಿ ಸರಣಿ ಟ್ವಿಟ್ ಮಾಡಿದವರನ್ನು ಬ್ಲಾಕ್ ಮಾಡಿ ತನ್ನ ಅಸಲಿ ಕರ್ಮಗೇಡಿತನ ತೋರಿಸಿಕೊಂಡಿದ್ದಾನೆ.

“ಉತ್ತರ ಕನ್ನಡ ಟ್ರೋಲರ್ಸ್” ಎಂಬ ಟ್ವಟರ್ ಖಾತೆಯಿಂದ ಮಾಣಿಗೆ ಟ್ವಿಟ್ ಮಾಡಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸುವ ಯೋಗ್ಯತೆಯಿಲ್ಲದ ಸಂಸದ ಸಾಹೇಬ ಆಸ್ಪತ್ರೆ ಬೇಡಿಕೆ ಇಡುತ್ತಿರುವವರನ್ನು ತನ್ನ ಸಾಮಾಜಿಕ ಜಾಲತಾಣ ಖಾತೆಯಿಂದ ದೂರ ಇಟ್ಟಿದ್ದಾನೆ. ಕಾರವಾರ ಮೆಡಿಕಲ್ ಕಾಲೇಜಿನ ಬಳಿಯೇ ಟ್ರೋಮಾ ಸೆಂಟರ್ ಸ್ಥಾಪನೆಗೆ ಪ್ರಸ್ತಾವನೆ ಕೇಂದ್ರ ಸರ್ಕಾರಕ್ಕೆ ಕಳಿಸಿ ಬಹಳ ದಿನಗಳೇ ಆಗಿಹೋಗಿವೆ. ಇದಕ್ಕೆ ಜಾಗದ ತಲಾಶ್ ಸಹ ನಡೆದಿದೆ. ಬಹುಶಃ ಸಂಸದ ಮಾಣಿಗೆ ಇದೆಲ್ಲ ಗೊತ್ತಿರುವಂತಿಲ್ಲ. ಖಾಸಗಿಯವರಿಂದ ದುಬಾರಿ ಟ್ರೋಮಾ ಸೆಂಟರ್ ನಿರ್ಮಾಣ ಸಾಧ್ಯವಾಗದು. ಅದು ಕಾರವಾರ ಮೆಡಿಕಲ್ ಕಾಲೇಜಿನ ಬಳಿಯೇ ಆಗಬೇಕಾದ ಅನಿವಾರ್ಯತೆಯಿದೆ. ಜನರ ಈ ಹೋರಾಟಕ್ಕೆ ಬರೀ ಕಣ್ಣೊರೆಸುವ ಕಿತಾಪತಿ ಆಗಬಾರದೆಂಬುದು ಆಸ್ಪತ್ರೆ ಬಯಸುವವರ ಕಳಕಳಿ. ಗುರಿಮುಟ್ಟುವ ತನಕ ಜನಪ್ರತಿನಿಧಿಗಳು ಹಿಂದಡಿ ಇಡಬಾರದೆಂದು ಜನ ಬಯಸಿದ್ದಾರೆ.ಹಾಗೆಯೇ ಭಾವನಾತ್ಮಕ ಹೋರಾಟ ಜೋರಾದಾಗ ಆಳುವವರು ಟ್ರಾಮಾ ಸೆಂಟರ್ ಬೋರ್ಡ್ ಹಾಕಿ, ನಾಲ್ಕು ಡಾಕ್ಟರ್‍ಗಳ ನೇಮಿಸುವ ನಾಟಕ ಆಡದಿರಲಿ. ಉತ್ತರ ಕನ್ನಡಿಗರ ಜೀವ ಉಳಿಸುವ ಪ್ರಾಮಾಣಿಕ ಕೆಲಸ ತುರ್ತಾಗಿ ಆಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...

“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಟ್ವೀಟ್‌...

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ' ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ. ಸರ್ಕಾರ...

ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ

2015ರಲ್ಲಿ ಮಹಮ್ಮದ್‌ ಅಖ್ಲಾಕ್‌ ತನ್ನ ಮನೆಯಲ್ಲಿ ದನ ಮಾಂಸ ಶೇಖರಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶದೆಲ್ಲೆಡೆ ಗುಂಪು ಹಲ್ಲೆಗಳ ವಿರುದ್ದ (ಮಾಬ್‌ ಲಿಂಚಿಂಗ್‌)...