Homeಕರ್ನಾಟಕಆಸ್ಪತ್ರೆಗಾಗಿ ಆನ್‍ಲೈನ್ ಅಭಿಯಾನ ಕ್ಯಾರೇ ಎನ್ನದ ಉತ್ತರಕನ್ನಡ ಸಂಸದ, ಸಚಿವರು

ಆಸ್ಪತ್ರೆಗಾಗಿ ಆನ್‍ಲೈನ್ ಅಭಿಯಾನ ಕ್ಯಾರೇ ಎನ್ನದ ಉತ್ತರಕನ್ನಡ ಸಂಸದ, ಸಚಿವರು

ಉತ್ತರ ಕನ್ನಡವೆಂದರೆ ಉತ್ತರಗಳೇ ಇಲ್ಲದ ಸಮಸ್ಯೆಗಳ ನತದೃಷ್ಟ ಜಿಲ್ಲೆ! ಒಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕೆಂಬುದು ಉತ್ತರ ಕನ್ನಡದ ಬಹುದಿನದ ಕೊರಗು.

- Advertisement -
- Advertisement -

| ಶುದ್ದೋಧನ |

ಉತ್ತರ ಕನ್ನಡವೆಂದರೆ ಉತ್ತರಗಳೇ ಇಲ್ಲದ ಸಮಸ್ಯೆಗಳ ನತದೃಷ್ಟ ಜಿಲ್ಲೆ! ಒಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕೆಂಬುದು ಉತ್ತರ ಕನ್ನಡದ ಬಹುದಿನದ ಕೊರಗು. ಇದನ್ನು ಆಳುವ ಖೂಳರು ಕಿವಿ ಮೇಲೆ ಹಾಕಿಕೊಳ್ಳಲೇ ಇಲ್ಲ. ಜಿಲ್ಲೆಯಲ್ಲಿ ಮೂರು ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದೆ. ಹೈವೇ-ಹಳ್ಳಿಗಳಲ್ಲಿ ಅಪಘಾತ ಸಾಮಾನ್ಯ ಎಂಬಂತಾಗಿದೆ. ತಲೆಗೆ ಗಂಭೀರ ಗಾಯಗಳಾದರೆ, ಹೃದಯಕ್ಕೆ ಹೊಡೆತ ಬಿದ್ದರೆ, ಹೃದಯಾಘಾತ ಸಂಭವಿಸಿದರೆ, ಹೆರಿಗೆ ಸಮಯದಲ್ಲಿ ಸಮಸ್ಯೆಯಾದರೆ, ಜೀರ್ಣಾಂಗಕ್ಕೆ ಪೆಟ್ಟಾಗಿ ರಕ್ತಸ್ರಾವ ಶುರುವಾದರೆ ಅರ್ಧ ಗಂಟೆಯಿಂದ ಎರಡು ಗಂಟೆಯೊಳಗೆ ತುರ್ತು ಚಿಕಿತ್ಸೆ ಕೊಟ್ಟರಷ್ಟೇ ಜೀವ ಉಳಿಸಬಹುದು. ವೈದ್ಯಕೀಯ ಪರಿಭಾಷೆಯ ಈ ಗೋಲ್ಡನ್ ಪಿರಿಯಡ್‍ನಲ್ಲಿ ಚಿಕಿತ್ಸೆ ವ್ಯವಸ್ಥೆ ಉತ್ತರ ಕನ್ನಡದಲ್ಲಿ ಇಲ್ಲ. ಶಿರಸಿ-ಯಲ್ಲಾಪುರ ಸೀಮೆಯವರು ಗಾಯಾಳು/ರೋಗಿಯನ್ನು ಹುಬ್ಬಳ್ಳಿ ಅಥವಾ ಧಾರವಾಡಕ್ಕೆ ಕರೆದೊಯ್ಯಲು ಮೂರು ತಾಸು ಬೇಕು. ಮಣಿಪಾಲ-ಮಂಗಳೂರು ನಾಲ್ಕೈದು ತಾಸುಗಳೇ ಬೇಕಾಗುತ್ತದೆ. ಕಾರವಾರದವರು ಪಣಜಿ ಆಸ್ಪತ್ರೆ ತಲುಪಲು ಎರಡು ಗಂಟೆಯಾದರೂ ಅವಶ್ಯ. ಸಿದ್ದಾಪುರ ಭಾಗದವರು ಶಿವಮೊಗ್ಗ ತಲುಪಬೇಕೆಂದರೆ 3 ಗಂಟೆ ಪ್ರಯಾಣ.

ಗೋಲ್ಡನ್ ಪಿರಿಯಡ್‍ನಲ್ಲಿ ಸುಸಜ್ಜಿತ ಆಸ್ಪತ್ರೆಗೆ ರೋಗಿಗಳನ್ನು/ಗಾಯಾಳುಗಳನ್ನು ಸೇರಿಸಲಾಗದೆ ವಾರ್ಷಿಕವಾಗಿ ನೂರಾರು ಜೀವಗಳು ಹೋಗುತ್ತಿವೆ. 2018ರ ಮೇ ತಿಂಗಳಿಂದ 2019ರ ಎಪ್ರಿಲ್‍ವರೆಗೆ ಜಿಲ್ಲೆಯಲ್ಲಿ ಸರಾಸರಿ ದಿನಕ್ಕೆರಡರಂತೆ ಗಂಭೀರ ಅಪಘಾತಗಳಾಗಿವೆ. 239 ಮಂದಿ ಸಾವಿಗೀಡಾಗಿದ್ದಾರೆ; 522 ಮಂದಿಯ ಅಂಗ ಊನವಾಗಿದೆ; 1,331 ಜನರು ಗಾಯಗೊಂಡು ಬಚಾವಾಗಿದ್ದಾರೆ. ತುರ್ತು ಸಮಯದಲ್ಲಿ ಕೃತಕ ಉಸಿರಾಟ ವ್ಯವಸ್ಥೆಯಿರುವ ಅಂಬ್ಯುಲೆನ್ಸ್ ಸಹ ಜಿಲ್ಲೆಯವರಿಗೆ ಸಿಗುತ್ತಿಲ್ಲ, ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ಒಂದಿದ್ದರೆ ಹಲವು ಜೀವಗಳನ್ನು ಖಂಡಿತ ಉಳಿಸಬಹುದಿತ್ತು. ಉತ್ತರ ಕನ್ನಡದಲ್ಲಿ ಮೆಡಿಕಲ್ ಕಾಲೇಜು ಶುರುವಾಗಿ ಮೂರು ವರ್ಷವಾಗಿದೆ. ಆದರೆ ಸುಸಜ್ಜಿತ ಆಸ್ಪತ್ರೆ, ಟ್ರಾಮಾ ಸೆಂಟರ್ ಬೇಕೆಂಬ ಬೇಡಿಕೆ ಈಡೇರಿಲ್ಲ.

ಈ ನರಕ ಯಾತನೆಯಿಂದ ಜಿಲ್ಲೆಯನ್ನು ಪಾರು ಮಾಡಲೇಬೇಕೆಂಬ ಯೋಚನೆಯಿಂದ ಒಂದಿಷ್ಟು ಯುವಕರು ಕಳೆದೊಂದು ವಾರದಿಂದ ಸಾಮಾಜಿಕ ಜಾಲತಾಣದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗಾಗಿ ಅಕ್ಷರ ಆಂದೋಲನ ಆರಂಭಿಸಿದ್ದಾರೆ.ಟ್ವಿಟರ್, ಫೇಸ್‍ಬುಕ್, ವಾಟ್ಸಾಪ್‍ಗಳಲ್ಲಿ ವ್ಯಾಪಕ ಚರ್ಚೆಗಳು ನಡೆಯುತ್ತಿವೆ. “ವಿ ನೀಡ್ ಮಲ್ಟಿಸ್ಪೆಷಾಲಿಟಿ ಹಾಸ್ಪಿಟಲ್ ಇನ್ ಉತ್ತರ ಕನ್ನಡ” ಎಂಬ ಹ್ಯಾಶ್‍ಟ್ಯಾಗ್‍ನಿಂದ ಯುವಕರು ಜನಪ್ರತಿನಿಧಿಗಳ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಕ್ಕೊತ್ತಾಯ ಮಂಡಿಸುತ್ತಿದ್ದಾರೆ. ಪರಸ್ಪರ ಪರಿಚಯವೇ ಇಲ್ಲದ ಈ ಸಮಾನ ಮನಸ್ಕರ ಸ್ವಯಂ ಪ್ರೇರಣೆಯ ಸುಸಜ್ಜಿತ ಆಸ್ಪತ್ರೆ ಬೇಡಿಕೆಯ ಸರಣಿ ಟ್ವೀಟ್‍ಗೆ ಪ್ರಧಾನಿ, ಸಿಎಂ, ಜಿಲ್ಲೆಯ ದಂಡಪಿಂಡ ಮಂತ್ರಿ ದೇಶಪಾಂಡೆ, ಕರ್ಮಗೇಡಿ ಸಂಸದ ಅನಂತ್ಮಾಣಿ ಮತ್ತು ಜಿಲ್ಲೆಯ ಐದು ಶಾಸಕರು ಗಡಿಬಿಡಿಗೆ ಬಿದ್ದಂತೆ ಎದ್ದು ಕುಂತಿದ್ದಾರೆ.

ಜೂನ್ 8ರ ಶನಿವಾರ ಸಂಜೆ 5.30ರಿಂದ 7.30 ಗಂಟೆವರೆಗೆ ಏಕಕಾಲದಲ್ಲಿ ಜಿಲ್ಲೆಯ ಜನ ಪ್ರಧಾನಿ ಕಾರ್ಯಾಲಯದಿಂದ ಸ್ಥಳೀಯ ಶಾಸಕರ ತನಕದ ಆಯಕಟ್ಟಿನ ಅಧಿಕಾರಸ್ಥರೆಲ್ಲರಿಗೆ ಸುಸಜ್ಜಿತ ಆಸ್ಪತ್ರೆಗಾಗಿ ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ. ಏಳು ಸಾವಿರಕ್ಕೂ ಹೆಚ್ಚು ಜನರು ತೊಡಗಿಕೊಂಡು ಅಧಿಕಾರಸ್ಥರು ಜಿಲ್ಲೆಯತ್ತ ತಿರುಗಿ ನೋಡುವಂತೆ ಮಾಡಿದ್ದು ದಾಖಲೆಯೇ ಸರಿ!! ಜಿಲ್ಲೆಯ ಯುವಕರು ಸಾಮಾಜಿಕ ಕಳಕಳಿಯ ಹೊಸ ಟ್ರೆಂಡ್ ಹುಟ್ಟಿಹಾಕಿದ್ದಾರೆ. ಈ ಅಭಿಯಾನದಿಂದ ಬೆಚ್ಚಿಬಿದ್ದಿರುವ ಜನಪ್ರತಿನಿಧಿಗಳು ಬೆಂಬಲ ಮಾತಾಡುತ್ತಿದ್ದಾರೆ. ಕಾರವಾರ ಶಾಸಕಿ ರೂಪಾಲಿ ನಾಯಕ್ ತಾನು ಹಿಂದೆ ವೈದ್ಯಕೀಯ ಶಿಕ್ಷಣ ಮಂತ್ರಿಯಾಗಿದ್ದ ಡಿಕೆಶಿಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಬರೆದ ಪತ್ರ ತೋರಿಸುತ್ತಿದ್ದರೆ, ಶಿರಸಿಯ ಕಾಗೇರಿ ಮಾಣಿ ಸುಸಜ್ಜಿತ ಆಸ್ಪತ್ರೆ ಶಿರಸಿ ಅಥವಾ ಕುಮಟಾದಲ್ಲಿ ಆಗುವ ಜರೂರಿದೆ ಎನ್ನುತ್ತಿದ್ದಾರೆ. ಭಟ್ಕಳದ ಶಾಸಕ ಸುನೀಲ್ ನಾಯ್ಕ ವೈದ್ಯಕೀಯ ಶಿಕ್ಷಣ ಮಂತ್ರಿಗೆ ಅವಸರವಸರದಲ್ಲಿ ಒಂದು ಪತ್ರ ಗೀಚಿದ್ದಾರೆ. ಡಿಸಿಸಿ ಅಧ್ಯಕ್ಷ ಭೀಮಣ್ಣ ನಾಯ್ಕ, ಮಾಜಿ ಶಾಸಕಿ ಶಾರದಾ ಶೆಟ್ಟಿ ನೆಟ್ಟಿಗರ ಬೇಡಿಕೆಗೆ ಬಲ ಕೊಟ್ಟಿದ್ದಾರೆ.

ಸಿಎಂ ಕುಮ್ಮಿ ಕಚೇರಿಯ ಅಧಿಕೃತ ಪೇಜ್‍ನಿಂದ ಆಸ್ಪತ್ರೆ ಅಭಿಯಾನಕ್ಕೆ ಸ್ಪಂದನೆ ಸಿಕ್ಕಿದೆ. “ಉತ್ತರ ಕನ್ನಡಿಗರ ಆಸ್ಪತ್ರೆ ಅಭಿಯಾನ ನನ್ನ ಗಮನಕ್ಕೆ ಬಂದಿದೆ, ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವರದಿ ತರಿಸಿ ಕ್ರಮ ಕೈಗೊಳ್ಳಲಾಗುವುದು” ಎಂಬ ಭರವಸೆ ಬಂದಿದೆ. ಕೇಂದ್ರ ಸರ್ಕಾರದಿಂದ ಯಾವ ರೀತಿಯ ಸಹಕಾರ ನೀಡಬಹುದೆಂದು ಆರೋಗ್ಯ ಸಚಿವಾಲಯದೊಂದಿಗೆ ಚರ್ಚಿಸುತ್ತೇನೆ. ಉತ್ತರ ಕನ್ನಡದ ಸಂಸದನ ಜತೆಯಲ್ಲಿಟ್ಟುಕೊಂಡು ಕೇಂದ್ರದ ಸಹಾಯ ಕೋರಿಸುತ್ತೇನೆ” ಅಂದಿದ್ದಾರೆ. ಆದರೆ ಜಿಲ್ಲೆಗೆ ದೊಡ್ಡ ದಂಡವಾಗಿರುವ ಮಂತ್ರಿ ದೋಷಪಾಂಡೆ ಮತ್ತು ಅನಂತ್ಮಾಣಿ ಇದ್ಯಾವುದೂ ತಮಗೆ ಸಂಬಂಧಿಸಿದ್ದಲ್ಲ ಎಂಬಂತೆ ಮೂರೂ ಮುಚ್ಚಿಕೊಂಡು ಸ್ವಂತ ‘ದಂದೆ’ಯಲ್ಲಿ ತಲ್ಲೀನರಾಗಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ತನ್ನ ಎಂಪಿಗಿರಿ ಅನಿವಾರ್ಯ ಎಂಬಂತೆ ಒಣ ಪೋಸು ಕೊಡುವ, ಅಭಿವೃದ್ಧಿ ಹಿಂದೂತ್ವ ಎಂದು ಬೊಬ್ಬಿರಿವ ಅನಂತ್ಮಾಣಿ ಆಸ್ಪತ್ರೆಗೆ ಒತ್ತಾಯಿಸಿ ಸರಣಿ ಟ್ವಿಟ್ ಮಾಡಿದವರನ್ನು ಬ್ಲಾಕ್ ಮಾಡಿ ತನ್ನ ಅಸಲಿ ಕರ್ಮಗೇಡಿತನ ತೋರಿಸಿಕೊಂಡಿದ್ದಾನೆ.

“ಉತ್ತರ ಕನ್ನಡ ಟ್ರೋಲರ್ಸ್” ಎಂಬ ಟ್ವಟರ್ ಖಾತೆಯಿಂದ ಮಾಣಿಗೆ ಟ್ವಿಟ್ ಮಾಡಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸುವ ಯೋಗ್ಯತೆಯಿಲ್ಲದ ಸಂಸದ ಸಾಹೇಬ ಆಸ್ಪತ್ರೆ ಬೇಡಿಕೆ ಇಡುತ್ತಿರುವವರನ್ನು ತನ್ನ ಸಾಮಾಜಿಕ ಜಾಲತಾಣ ಖಾತೆಯಿಂದ ದೂರ ಇಟ್ಟಿದ್ದಾನೆ. ಕಾರವಾರ ಮೆಡಿಕಲ್ ಕಾಲೇಜಿನ ಬಳಿಯೇ ಟ್ರೋಮಾ ಸೆಂಟರ್ ಸ್ಥಾಪನೆಗೆ ಪ್ರಸ್ತಾವನೆ ಕೇಂದ್ರ ಸರ್ಕಾರಕ್ಕೆ ಕಳಿಸಿ ಬಹಳ ದಿನಗಳೇ ಆಗಿಹೋಗಿವೆ. ಇದಕ್ಕೆ ಜಾಗದ ತಲಾಶ್ ಸಹ ನಡೆದಿದೆ. ಬಹುಶಃ ಸಂಸದ ಮಾಣಿಗೆ ಇದೆಲ್ಲ ಗೊತ್ತಿರುವಂತಿಲ್ಲ. ಖಾಸಗಿಯವರಿಂದ ದುಬಾರಿ ಟ್ರೋಮಾ ಸೆಂಟರ್ ನಿರ್ಮಾಣ ಸಾಧ್ಯವಾಗದು. ಅದು ಕಾರವಾರ ಮೆಡಿಕಲ್ ಕಾಲೇಜಿನ ಬಳಿಯೇ ಆಗಬೇಕಾದ ಅನಿವಾರ್ಯತೆಯಿದೆ. ಜನರ ಈ ಹೋರಾಟಕ್ಕೆ ಬರೀ ಕಣ್ಣೊರೆಸುವ ಕಿತಾಪತಿ ಆಗಬಾರದೆಂಬುದು ಆಸ್ಪತ್ರೆ ಬಯಸುವವರ ಕಳಕಳಿ. ಗುರಿಮುಟ್ಟುವ ತನಕ ಜನಪ್ರತಿನಿಧಿಗಳು ಹಿಂದಡಿ ಇಡಬಾರದೆಂದು ಜನ ಬಯಸಿದ್ದಾರೆ.ಹಾಗೆಯೇ ಭಾವನಾತ್ಮಕ ಹೋರಾಟ ಜೋರಾದಾಗ ಆಳುವವರು ಟ್ರಾಮಾ ಸೆಂಟರ್ ಬೋರ್ಡ್ ಹಾಕಿ, ನಾಲ್ಕು ಡಾಕ್ಟರ್‍ಗಳ ನೇಮಿಸುವ ನಾಟಕ ಆಡದಿರಲಿ. ಉತ್ತರ ಕನ್ನಡಿಗರ ಜೀವ ಉಳಿಸುವ ಪ್ರಾಮಾಣಿಕ ಕೆಲಸ ತುರ್ತಾಗಿ ಆಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...