Homeಕರ್ನಾಟಕಉತ್ತರ ಕೊಡಿ ಮೋದಿ: ಪ್ರಧಾನಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ

ಉತ್ತರ ಕೊಡಿ ಮೋದಿ: ಪ್ರಧಾನಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರೇ, ರಾಜ್ಯದ ಜನ ನೆರೆ ನೀರಲ್ಲಿ ಮುಳುಗಿದ್ದಾಗ ಕನಿಷ್ಠ ಸಾಂತ್ವನ ಹೇಳಲು ನೀವು ಬರಲಿಲ್ಲ, ಅನುಕಂಪಕ್ಕಾದರೂ ನಿಮ್ಮಿಂದ ನಾಲ್ಕಕ್ಷರ ಸಮಾಧಾನದ ಮಾತು ಹೊರಡಲಿಲ್ಲ. ಈಗ ರೈತರ ಕಲ್ಯಾಣದ ಡೋಂಗಿ ಕಾರ್ಯಕ್ರಮಗಳ ಪ್ರಚಾರಕ್ಕೆ ನಮ್ಮ ಅಮಾಯಕ ಜನ ನೆನಪಾಗುತ್ತಿದ್ದಾರಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನೆರೆಹಾವಳಿಗೆ ಪರಿಹಾರ ಕೊಡಲಿಲ್ಲ, ಜಿಎಸ್ ಟಿ ನಷ್ಟಕ್ಕೆ ಪರಿಹಾರ ತುಂಬಿ ಕೊಡಲಿಲ್ಲ, ಕೇಂದ್ರದ ಅನುದಾನದಲ್ಲಿ ನಮಗೆ ನೀಡಬೇಕಾದ ನ್ಯಾಯಬದ್ಧ ಪಾಲೂ ಕೊಡಲಿಲ್ಲ. ಈಗ ಯಾವ ಮುಖಹೊತ್ತು ರಾಜ್ಯಕ್ಕೆ ಬರ್ತಿದ್ದೀರಿ ಮೋದಿ ಅವರೇ? ಆಪರೇಷನ್ ಕಮಲ ಮಾಡಿ ಹಿಂದಿನ ಬಾಗಿಲಿನಿಂದ ಸರ್ಕಾರ ರಚಿಸುತ್ತೀರಿ, ನೈತಿಕ ರಾಜಕಾರಣದ ಬಗ್ಗೆ ಭಾಷಣ ಮಾಡ್ತೀರಿ. ರಾಜಕೀಯ ವಿರೋಧಿಗಳ ಮೇಲೆ ಐಟಿ, ಇಡಿ, ಸಿಬಿಐ
ಛೂ ಬಿಡ್ತೀರಿ, ಗಣಿಕಳ್ಳರು, ಭೂಕಳ್ಳರನ್ನು ನಿಮ್ಮ ಪಕ್ಷಕ್ಕೆ ಕರೆದು ಮುದ್ದಾಡ್ತೀರಿ. ಇದೇನಾ ನಿಮ್ಮ ‘’ಸ್ವಚ್ಚ ಭಾರತ್’’ ಎಂದಿದ್ದಾರೆ.

ಕೇಂದ್ರ- ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ರಾಜ್ಯದ ಭಾಗ್ಯದ ಬಾಗಿಲು ತೆರೆಯುತ್ತೆ ಎಂದು ಭಾಷಣ ಮಾಡಿದ್ರಿ,
ಅಮಾಯಕ ಜನ ನಿಮ್ಮ ಮಾತು ನಂಬಿ 25 ಸ್ಥಾನ ಗೆಲ್ಲಿಸಿಕೊಟ್ಟರು. ನಮ್ಮ ಭಾಗ್ಯದ ಬಾಗಿಲು ತೆಗೆಯಲಿಲ್ಲ,
ಕರ್ನಾಟಕದ ಪಾಲಿಗೆ ನಿಮ್ಮ ಕಚೇರಿ ಬಾಗಿಲು ಮುಚ್ಚಿದ್ದೀರಿ, ಯಾಕೆ? ಕಾವೇರಿ ನೀರು ಹಂಚಿಕೆಯಲ್ಲಿ ಅನ್ಯಾಯ ಮಾಡಿದ್ರಿ,
ಈಗ ಮಹದಾಯಿ ಯೋಜನೆಯನ್ನು ತಡೆದು ದ್ರೊಹ ಮಾಡುತ್ತಿದ್ದೀರಿ, ಚುನಾವಣಾ ಕಾಲದಲ್ಲಿ ನಿಮ್ಮ ಜಲಸಂಪನ್ಮೂಲ ಸಚಿವರು ಹೇಳಿದ್ದೇನು? ಈಗ ಮಾಡಿದ್ದೇನು? ಕರ್ನಾಟಕದ ಜನರ ಬಗ್ಗೆ ನಿಮಗೆ ಯಾಕಿಷ್ಟು ದ್ವೇಷ, ಅಸೂಯೆ? ನೆರೆಹಾವಳಿಯಿಂದ ಆಗಿರುವ ನಷ್ಟ ಅಂದಾಜು ರೂ.೫೦ ಸಾವಿರ ಕೋಟಿಗೂ ಅಧಿಕ. ರಾಜ್ಯ ಸರ್ಕಾರ ಕೇಳಿದ್ದು ರೂ.36 ಸಾವಿರ ಕೋಟಿ, ಕೇಂದ್ರ ಸರ್ಕಾರ ಕೊಟ್ಟಿದ್ದು ರೂ.1200 ಕೋಟಿ. ಕರ್ನಾಟಕದ ಬಗ್ಗೆ ಯಾಕೆ ತಾತ್ಸಾರ ಎಂದು ಕೇಳಿದ್ದಾರೆ.

ಜಿಎಸ್‌ಟಿ ಪರಿಹಾರ ತಿಂಗಳಿಗೆ ರೂ.3600 ಕೋಟಿ ಬರ್ಬೇಕು.
ಕಳೆದ ಸೆಪ್ಟೆಂಬರ್‌ನಿಂದ ನಯಾಪೈಸೆ ಹಣ ಬಂದಿಲ್ಲ. ಸುಮಾರು ರೂ.14-15 ಸಾವಿರ ಕೋಟಿ ಬಾಕಿ ಇದೆ. ಮೋದಿ ಅವರೇ ಕೇಂದ್ರ ಸರ್ಕಾರವನ್ನು ದಿವಾಳಿ ಮಾಡ್ತಿದ್ದೀರಿ, ನಮ್ಮ ರಾಜ್ಯವನ್ನೂ ದಿವಾಳಿ ಮಾಡಲು ಹೊರಟಿದ್ದೀರಾ? ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂಬ ನಿಮ್ಮ‌ ಘೋಷಣೆ ನೆನಪಿದದೆಯೇ?ಕಳೆದ ಆರು ವರ್ಷಗಳಲ್ಲಿ ರೈತರ ಆದಾಯ ಹೆಚ್ಚಾಗಿಲ್ಲ,
ನಷ್ಟ ದ್ವಿಗುಣವಾಗಿದೆ. ಗ್ರಾಮೀಣ ಭಾಗದಲ್ಲಿ ಜನರ ಕೊಳ್ಳುವ ಸಾಮರ್ಥ್ಯ ಶೇಕಡಾ8.8ರಷ್ಟು ಕಡಿಮೆಯಾಗಿದೆ ಎಂದರೆ ಏನರ್ಥ ಎಂದು ಕಿಡಿಕಾರಿದ್ದಾರೆ.

ಸ್ವಚ್ಚಭಾರತ್, ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆ (NRDWP) ಮತ್ತು ನರೇಗಾ ಯೋಜನೆಗಳಿಗಾಗಿ ರಾಜ್ಯಕ್ಕೆ ನೀಡಬೇಕಾದ ಹಣದಲ್ಲಿ ಎಷ್ಟು‌‌ ಸಾವಿರ ಕೋಟಿ ರೂಪಾಯಿ ಬಾಕಿ ಇದೆ ಗೊತ್ತಾ? ಈ ಮಾಹಿತಿಯನ್ನು ಯಡಿಯೂರಪ್ಪ ಅವರಲ್ಲೇ ಕೇಳಿ ತಿಳ್ಕೊಂಡು‌ ರಾಜ್ಯದ ಜನತೆಗೆ ಹೇಳಿ ಬಿಡಿ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...