Homeಕರ್ನಾಟಕಉತ್ತರ ಕೊಡಿ ಮೋದಿ: ಪ್ರಧಾನಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ

ಉತ್ತರ ಕೊಡಿ ಮೋದಿ: ಪ್ರಧಾನಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರೇ, ರಾಜ್ಯದ ಜನ ನೆರೆ ನೀರಲ್ಲಿ ಮುಳುಗಿದ್ದಾಗ ಕನಿಷ್ಠ ಸಾಂತ್ವನ ಹೇಳಲು ನೀವು ಬರಲಿಲ್ಲ, ಅನುಕಂಪಕ್ಕಾದರೂ ನಿಮ್ಮಿಂದ ನಾಲ್ಕಕ್ಷರ ಸಮಾಧಾನದ ಮಾತು ಹೊರಡಲಿಲ್ಲ. ಈಗ ರೈತರ ಕಲ್ಯಾಣದ ಡೋಂಗಿ ಕಾರ್ಯಕ್ರಮಗಳ ಪ್ರಚಾರಕ್ಕೆ ನಮ್ಮ ಅಮಾಯಕ ಜನ ನೆನಪಾಗುತ್ತಿದ್ದಾರಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನೆರೆಹಾವಳಿಗೆ ಪರಿಹಾರ ಕೊಡಲಿಲ್ಲ, ಜಿಎಸ್ ಟಿ ನಷ್ಟಕ್ಕೆ ಪರಿಹಾರ ತುಂಬಿ ಕೊಡಲಿಲ್ಲ, ಕೇಂದ್ರದ ಅನುದಾನದಲ್ಲಿ ನಮಗೆ ನೀಡಬೇಕಾದ ನ್ಯಾಯಬದ್ಧ ಪಾಲೂ ಕೊಡಲಿಲ್ಲ. ಈಗ ಯಾವ ಮುಖಹೊತ್ತು ರಾಜ್ಯಕ್ಕೆ ಬರ್ತಿದ್ದೀರಿ ಮೋದಿ ಅವರೇ? ಆಪರೇಷನ್ ಕಮಲ ಮಾಡಿ ಹಿಂದಿನ ಬಾಗಿಲಿನಿಂದ ಸರ್ಕಾರ ರಚಿಸುತ್ತೀರಿ, ನೈತಿಕ ರಾಜಕಾರಣದ ಬಗ್ಗೆ ಭಾಷಣ ಮಾಡ್ತೀರಿ. ರಾಜಕೀಯ ವಿರೋಧಿಗಳ ಮೇಲೆ ಐಟಿ, ಇಡಿ, ಸಿಬಿಐ
ಛೂ ಬಿಡ್ತೀರಿ, ಗಣಿಕಳ್ಳರು, ಭೂಕಳ್ಳರನ್ನು ನಿಮ್ಮ ಪಕ್ಷಕ್ಕೆ ಕರೆದು ಮುದ್ದಾಡ್ತೀರಿ. ಇದೇನಾ ನಿಮ್ಮ ‘’ಸ್ವಚ್ಚ ಭಾರತ್’’ ಎಂದಿದ್ದಾರೆ.

ಕೇಂದ್ರ- ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ರಾಜ್ಯದ ಭಾಗ್ಯದ ಬಾಗಿಲು ತೆರೆಯುತ್ತೆ ಎಂದು ಭಾಷಣ ಮಾಡಿದ್ರಿ,
ಅಮಾಯಕ ಜನ ನಿಮ್ಮ ಮಾತು ನಂಬಿ 25 ಸ್ಥಾನ ಗೆಲ್ಲಿಸಿಕೊಟ್ಟರು. ನಮ್ಮ ಭಾಗ್ಯದ ಬಾಗಿಲು ತೆಗೆಯಲಿಲ್ಲ,
ಕರ್ನಾಟಕದ ಪಾಲಿಗೆ ನಿಮ್ಮ ಕಚೇರಿ ಬಾಗಿಲು ಮುಚ್ಚಿದ್ದೀರಿ, ಯಾಕೆ? ಕಾವೇರಿ ನೀರು ಹಂಚಿಕೆಯಲ್ಲಿ ಅನ್ಯಾಯ ಮಾಡಿದ್ರಿ,
ಈಗ ಮಹದಾಯಿ ಯೋಜನೆಯನ್ನು ತಡೆದು ದ್ರೊಹ ಮಾಡುತ್ತಿದ್ದೀರಿ, ಚುನಾವಣಾ ಕಾಲದಲ್ಲಿ ನಿಮ್ಮ ಜಲಸಂಪನ್ಮೂಲ ಸಚಿವರು ಹೇಳಿದ್ದೇನು? ಈಗ ಮಾಡಿದ್ದೇನು? ಕರ್ನಾಟಕದ ಜನರ ಬಗ್ಗೆ ನಿಮಗೆ ಯಾಕಿಷ್ಟು ದ್ವೇಷ, ಅಸೂಯೆ? ನೆರೆಹಾವಳಿಯಿಂದ ಆಗಿರುವ ನಷ್ಟ ಅಂದಾಜು ರೂ.೫೦ ಸಾವಿರ ಕೋಟಿಗೂ ಅಧಿಕ. ರಾಜ್ಯ ಸರ್ಕಾರ ಕೇಳಿದ್ದು ರೂ.36 ಸಾವಿರ ಕೋಟಿ, ಕೇಂದ್ರ ಸರ್ಕಾರ ಕೊಟ್ಟಿದ್ದು ರೂ.1200 ಕೋಟಿ. ಕರ್ನಾಟಕದ ಬಗ್ಗೆ ಯಾಕೆ ತಾತ್ಸಾರ ಎಂದು ಕೇಳಿದ್ದಾರೆ.

ಜಿಎಸ್‌ಟಿ ಪರಿಹಾರ ತಿಂಗಳಿಗೆ ರೂ.3600 ಕೋಟಿ ಬರ್ಬೇಕು.
ಕಳೆದ ಸೆಪ್ಟೆಂಬರ್‌ನಿಂದ ನಯಾಪೈಸೆ ಹಣ ಬಂದಿಲ್ಲ. ಸುಮಾರು ರೂ.14-15 ಸಾವಿರ ಕೋಟಿ ಬಾಕಿ ಇದೆ. ಮೋದಿ ಅವರೇ ಕೇಂದ್ರ ಸರ್ಕಾರವನ್ನು ದಿವಾಳಿ ಮಾಡ್ತಿದ್ದೀರಿ, ನಮ್ಮ ರಾಜ್ಯವನ್ನೂ ದಿವಾಳಿ ಮಾಡಲು ಹೊರಟಿದ್ದೀರಾ? ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂಬ ನಿಮ್ಮ‌ ಘೋಷಣೆ ನೆನಪಿದದೆಯೇ?ಕಳೆದ ಆರು ವರ್ಷಗಳಲ್ಲಿ ರೈತರ ಆದಾಯ ಹೆಚ್ಚಾಗಿಲ್ಲ,
ನಷ್ಟ ದ್ವಿಗುಣವಾಗಿದೆ. ಗ್ರಾಮೀಣ ಭಾಗದಲ್ಲಿ ಜನರ ಕೊಳ್ಳುವ ಸಾಮರ್ಥ್ಯ ಶೇಕಡಾ8.8ರಷ್ಟು ಕಡಿಮೆಯಾಗಿದೆ ಎಂದರೆ ಏನರ್ಥ ಎಂದು ಕಿಡಿಕಾರಿದ್ದಾರೆ.

ಸ್ವಚ್ಚಭಾರತ್, ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆ (NRDWP) ಮತ್ತು ನರೇಗಾ ಯೋಜನೆಗಳಿಗಾಗಿ ರಾಜ್ಯಕ್ಕೆ ನೀಡಬೇಕಾದ ಹಣದಲ್ಲಿ ಎಷ್ಟು‌‌ ಸಾವಿರ ಕೋಟಿ ರೂಪಾಯಿ ಬಾಕಿ ಇದೆ ಗೊತ್ತಾ? ಈ ಮಾಹಿತಿಯನ್ನು ಯಡಿಯೂರಪ್ಪ ಅವರಲ್ಲೇ ಕೇಳಿ ತಿಳ್ಕೊಂಡು‌ ರಾಜ್ಯದ ಜನತೆಗೆ ಹೇಳಿ ಬಿಡಿ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...