Homeಕರ್ನಾಟಕಉತ್ತರ ಕೊಡಿ ಮೋದಿ: ಪ್ರಧಾನಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ

ಉತ್ತರ ಕೊಡಿ ಮೋದಿ: ಪ್ರಧಾನಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರೇ, ರಾಜ್ಯದ ಜನ ನೆರೆ ನೀರಲ್ಲಿ ಮುಳುಗಿದ್ದಾಗ ಕನಿಷ್ಠ ಸಾಂತ್ವನ ಹೇಳಲು ನೀವು ಬರಲಿಲ್ಲ, ಅನುಕಂಪಕ್ಕಾದರೂ ನಿಮ್ಮಿಂದ ನಾಲ್ಕಕ್ಷರ ಸಮಾಧಾನದ ಮಾತು ಹೊರಡಲಿಲ್ಲ. ಈಗ ರೈತರ ಕಲ್ಯಾಣದ ಡೋಂಗಿ ಕಾರ್ಯಕ್ರಮಗಳ ಪ್ರಚಾರಕ್ಕೆ ನಮ್ಮ ಅಮಾಯಕ ಜನ ನೆನಪಾಗುತ್ತಿದ್ದಾರಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನೆರೆಹಾವಳಿಗೆ ಪರಿಹಾರ ಕೊಡಲಿಲ್ಲ, ಜಿಎಸ್ ಟಿ ನಷ್ಟಕ್ಕೆ ಪರಿಹಾರ ತುಂಬಿ ಕೊಡಲಿಲ್ಲ, ಕೇಂದ್ರದ ಅನುದಾನದಲ್ಲಿ ನಮಗೆ ನೀಡಬೇಕಾದ ನ್ಯಾಯಬದ್ಧ ಪಾಲೂ ಕೊಡಲಿಲ್ಲ. ಈಗ ಯಾವ ಮುಖಹೊತ್ತು ರಾಜ್ಯಕ್ಕೆ ಬರ್ತಿದ್ದೀರಿ ಮೋದಿ ಅವರೇ? ಆಪರೇಷನ್ ಕಮಲ ಮಾಡಿ ಹಿಂದಿನ ಬಾಗಿಲಿನಿಂದ ಸರ್ಕಾರ ರಚಿಸುತ್ತೀರಿ, ನೈತಿಕ ರಾಜಕಾರಣದ ಬಗ್ಗೆ ಭಾಷಣ ಮಾಡ್ತೀರಿ. ರಾಜಕೀಯ ವಿರೋಧಿಗಳ ಮೇಲೆ ಐಟಿ, ಇಡಿ, ಸಿಬಿಐ
ಛೂ ಬಿಡ್ತೀರಿ, ಗಣಿಕಳ್ಳರು, ಭೂಕಳ್ಳರನ್ನು ನಿಮ್ಮ ಪಕ್ಷಕ್ಕೆ ಕರೆದು ಮುದ್ದಾಡ್ತೀರಿ. ಇದೇನಾ ನಿಮ್ಮ ‘’ಸ್ವಚ್ಚ ಭಾರತ್’’ ಎಂದಿದ್ದಾರೆ.

ಕೇಂದ್ರ- ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ರಾಜ್ಯದ ಭಾಗ್ಯದ ಬಾಗಿಲು ತೆರೆಯುತ್ತೆ ಎಂದು ಭಾಷಣ ಮಾಡಿದ್ರಿ,
ಅಮಾಯಕ ಜನ ನಿಮ್ಮ ಮಾತು ನಂಬಿ 25 ಸ್ಥಾನ ಗೆಲ್ಲಿಸಿಕೊಟ್ಟರು. ನಮ್ಮ ಭಾಗ್ಯದ ಬಾಗಿಲು ತೆಗೆಯಲಿಲ್ಲ,
ಕರ್ನಾಟಕದ ಪಾಲಿಗೆ ನಿಮ್ಮ ಕಚೇರಿ ಬಾಗಿಲು ಮುಚ್ಚಿದ್ದೀರಿ, ಯಾಕೆ? ಕಾವೇರಿ ನೀರು ಹಂಚಿಕೆಯಲ್ಲಿ ಅನ್ಯಾಯ ಮಾಡಿದ್ರಿ,
ಈಗ ಮಹದಾಯಿ ಯೋಜನೆಯನ್ನು ತಡೆದು ದ್ರೊಹ ಮಾಡುತ್ತಿದ್ದೀರಿ, ಚುನಾವಣಾ ಕಾಲದಲ್ಲಿ ನಿಮ್ಮ ಜಲಸಂಪನ್ಮೂಲ ಸಚಿವರು ಹೇಳಿದ್ದೇನು? ಈಗ ಮಾಡಿದ್ದೇನು? ಕರ್ನಾಟಕದ ಜನರ ಬಗ್ಗೆ ನಿಮಗೆ ಯಾಕಿಷ್ಟು ದ್ವೇಷ, ಅಸೂಯೆ? ನೆರೆಹಾವಳಿಯಿಂದ ಆಗಿರುವ ನಷ್ಟ ಅಂದಾಜು ರೂ.೫೦ ಸಾವಿರ ಕೋಟಿಗೂ ಅಧಿಕ. ರಾಜ್ಯ ಸರ್ಕಾರ ಕೇಳಿದ್ದು ರೂ.36 ಸಾವಿರ ಕೋಟಿ, ಕೇಂದ್ರ ಸರ್ಕಾರ ಕೊಟ್ಟಿದ್ದು ರೂ.1200 ಕೋಟಿ. ಕರ್ನಾಟಕದ ಬಗ್ಗೆ ಯಾಕೆ ತಾತ್ಸಾರ ಎಂದು ಕೇಳಿದ್ದಾರೆ.

ಜಿಎಸ್‌ಟಿ ಪರಿಹಾರ ತಿಂಗಳಿಗೆ ರೂ.3600 ಕೋಟಿ ಬರ್ಬೇಕು.
ಕಳೆದ ಸೆಪ್ಟೆಂಬರ್‌ನಿಂದ ನಯಾಪೈಸೆ ಹಣ ಬಂದಿಲ್ಲ. ಸುಮಾರು ರೂ.14-15 ಸಾವಿರ ಕೋಟಿ ಬಾಕಿ ಇದೆ. ಮೋದಿ ಅವರೇ ಕೇಂದ್ರ ಸರ್ಕಾರವನ್ನು ದಿವಾಳಿ ಮಾಡ್ತಿದ್ದೀರಿ, ನಮ್ಮ ರಾಜ್ಯವನ್ನೂ ದಿವಾಳಿ ಮಾಡಲು ಹೊರಟಿದ್ದೀರಾ? ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂಬ ನಿಮ್ಮ‌ ಘೋಷಣೆ ನೆನಪಿದದೆಯೇ?ಕಳೆದ ಆರು ವರ್ಷಗಳಲ್ಲಿ ರೈತರ ಆದಾಯ ಹೆಚ್ಚಾಗಿಲ್ಲ,
ನಷ್ಟ ದ್ವಿಗುಣವಾಗಿದೆ. ಗ್ರಾಮೀಣ ಭಾಗದಲ್ಲಿ ಜನರ ಕೊಳ್ಳುವ ಸಾಮರ್ಥ್ಯ ಶೇಕಡಾ8.8ರಷ್ಟು ಕಡಿಮೆಯಾಗಿದೆ ಎಂದರೆ ಏನರ್ಥ ಎಂದು ಕಿಡಿಕಾರಿದ್ದಾರೆ.

ಸ್ವಚ್ಚಭಾರತ್, ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆ (NRDWP) ಮತ್ತು ನರೇಗಾ ಯೋಜನೆಗಳಿಗಾಗಿ ರಾಜ್ಯಕ್ಕೆ ನೀಡಬೇಕಾದ ಹಣದಲ್ಲಿ ಎಷ್ಟು‌‌ ಸಾವಿರ ಕೋಟಿ ರೂಪಾಯಿ ಬಾಕಿ ಇದೆ ಗೊತ್ತಾ? ಈ ಮಾಹಿತಿಯನ್ನು ಯಡಿಯೂರಪ್ಪ ಅವರಲ್ಲೇ ಕೇಳಿ ತಿಳ್ಕೊಂಡು‌ ರಾಜ್ಯದ ಜನತೆಗೆ ಹೇಳಿ ಬಿಡಿ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...