Homeರಾಜಕೀಯಉದ್ಯೋಗ ನಿರ್ನಾಮ ಮುಚ್ಚಲು ಮಂದಿರ ನಿರ್ಮಾಣ!

ಉದ್ಯೋಗ ನಿರ್ನಾಮ ಮುಚ್ಚಲು ಮಂದಿರ ನಿರ್ಮಾಣ!

- Advertisement -
- Advertisement -

-ಮಲ್ಲನಗೌಡರ್. ಪಿ. ಕೆ. |

ಕಳೆದ ವಾರ ಪ್ರಮುಖ ದೈನಿಕಗಳಲ್ಲಿ ಎರಡು ಮುಖಪುಟ ಸುದ್ದಿಗಳಿದ್ದವು. ಒಂದು, ಉದ್ಯೋಗ-ನಿರುದ್ಯೋಗ ಕುರಿತ ಅಂಕಿಸಂಖ್ಯೆಗಳನ್ನು ಕೇಂದ್ರ ಸರ್ಕಾರ ಬೇಕೆಂತಲೇ ಬಿಡುಗಡೆ ಮಾಡುತ್ತಿಲ್ಲ ಎಂದು ‘ರಾಷ್ಟ್ರೀಯ ಸಾಂಖ್ಯಿಕ ಆಯೋಗ’(ಎನ್‍ಎಸ್‍ಸಿ)ದ ಇಬ್ಬರು ಸದಸ್ಯರು ಪ್ರತಿಭಟಿಸಿ ರಾಜಿನಾಮೆ ನೀಡಿದ್ದು.
ಇನ್ನೊಂದು, ಕೇಂದ್ರ ಸರ್ಕಾರವು ಸುಪ್ರಿಂಕೋರ್ಟಿಗೆ ಮನವಿ ಸಲ್ಲಿಸಿ, ಅಯೋಧ್ಯೆಯ ವಿವಾದಿತ ಪ್ರದೇಶದ ಸುತ್ತಲಿನ ಭೂಮಿಯನ್ನು ಸಂಬಂಧಪಟ್ಟವರಿಗೆ ಬಿಟ್ಟುಕೊಡಬೇಕೆಂದು ಕೇಳಿಕೊಂಡಿದ್ದರ ಕುರಿತ ಸುದ್ದಿ.
ಒಂದೇ ದಿನ ಇವೆರಡೂ ಸುದ್ದಿ ಬಂದಿದ್ದು ಕಾಕತಾಳೀಯ ಇರಬಹುದು. ಆದರೆ, ಒಟ್ಟೂ ಸರ್ಕಾರದ ನಿಲುವು, ನಾಟಕ, ಹುಚ್ಚಾಟಗಳಿಗೆ ಈ ಎರಡೂ ಸುದ್ದಿಗಳು ಸಾಂಕೇತಿಕ ಸಾಕ್ಷ್ಯಗಳು ಎಂಬುದರಲ್ಲಿ ಎರಡು ಮಾತಿಲ್ಲ.
2014ರಲ್ಲಿ ಚುನಾವಣಾ ಪ್ರಚಾರ ಮಾಡುವಾಗ, ಬಿಜೆಪಿಯ ಅಂದರೆ ನರೇಂದ್ರ ಮೋದಿಯ ಭಾಷಣದ ವಸ್ತುಗಳು: ಉದ್ಯೋಗ ಸೃಷ್ಟಿ ಮತ್ತು ಕಪ್ಪುಹಣ ವಾಪಸ್ ತರುವಿಕೆ. ಬಿಜೆಪಿಯ ಪ್ರಣಾಳಿಕೆಯಲ್ಲೂ ಉದ್ಯೋಗ ಸೃಷ್ಟಿಯ ಅಜೆಂಡಾವೇ ಪ್ರಧಾನವಾಗಿತ್ತು. ಅದರಲ್ಲಿ ರಾಮ ಮಂದಿರ ನಿರ್ಮಾಣದ ವಿಷಯ ಇತ್ತಾದರೂ, ಬೇಕೆಂತಲೇ ಅದನ್ನು ಅತಿ ಕಡಿಮೆ ಪ್ರಾಶಸ್ತ್ಯದ ಜಾಗದಲ್ಲಿ ಇಡಲಾಗಿತ್ತು!
ಈಗ 2019: ಚುನಾವಣೆಯ ವರ್ಷ. ಬಿಜೆಪಿಯ ಪಾಲಿಗೆ ಉದ್ಯೋಗ ಅಥವಾ ನಿರುದ್ಯೋಗ ಎಂಬ ಪದವೇ ಶಾಪವಾಗಿದೆ. ಹಾಗಾಗಿ ಈಗ ಅದು ಆ ವಿಷಯವನ್ನು ಹಿನ್ನೆಲೆಗೆ ಸರಿಸಿ, ಮಂದಿರ ನಿರ್ಮಾಣದಂತಹ ವಿಷಯಗಳಿಗೆ ಆದ್ಯತೆ ಕೊಡಲು ತಯ್ಯಾರಿ ನಡೆಸಿದೆ. ಇದಕ್ಕೆ ಪೂರಕವಾಗಿ ಮೇಲಿನ ಎರಡು ಸುದ್ದಿಗಳ ಹಿಂದಿನ ಅಸಲಿಯತ್ತು ಈಗ ಅನಾವರಣಗೊಳ್ಳುತ್ತಿದೆ.
ಸೃಷ್ಟಿಸಲಿಲ್ಲ, ಉದ್ಯೋಗ ನಿರ್ನಾಮ ಮಾಡಿದರು!
ವರ್ಷಕ್ಕೆ ಎರಡು ಕೋಟಿಯ ಉದ್ಯೋಗ ಸೃಷ್ಟಿಯ ಭಾರಿ ಭರವಸೆ ನೀಡಿದ್ದ ನರೇಂದ್ರ ಮೋದಿ ಪ್ರಧಾನಿಯಾದ ನಂತರ ಆ ಕುರಿತಂತೆ ಯಾವ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲೇ ಇಲ್ಲ. ಅಂತಹ ದೂರದೃಷ್ಟಿಯೂ ಈ ಸರ್ಕಾರಕ್ಕೆ ಇಲ್ಲವೇ ಇಲ್ಲ. ಅದು ದೊಡ್ಡ ಕೈಗಾರಿಕೋದ್ಯಮಿಗಳ ಹಿತ ಕಾಪಾಡುವಲ್ಲೇ ಮಗ್ನವಾಗಿತು. ಪ್ರಚಾರಕ್ಕಾಗಿ ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ, ಸ್ಟಾರ್ಟ್‍ಅಪ್ ಇಂಡಿಯಾ- ಎಂಬಂತಹ ರೋಚಕ ಹೆಸರಿನ ಘೋಷಣೆಗಳನ್ನು ಮಾಡಿತೇ ವಿನಃ, ಅವುಗಳ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನವನ್ನು ಮಾಡಲೇ ಇಲ್ಲ. ಅದು ನಿಜವಾಗಿಯೂ ಈ ಯೋಜನೆಗಳ ಗಂಭೀರವಾಗಿದ್ದರೆ, ಸ್ಕಿಲ್ ಇಂಡಿಯಾವನ್ನು ಅನಂತಕುಮಾರ ಹೆಗಡೆಯಂತಹ ಮುಠ್ಠಾಳನ ಕೈಗೆ ನೀಡುತ್ತಿರಲಿಲ್ಲ. ಮಾತೆತ್ತಿದರೆ ಹೊಡಿ, ಬಡಿ, ಕಡಿ ಎನ್ನುವ ಈ ಮನುಷ್ಯ ‘ಕಿಲ್ ಇಂಡಿಯಾ’ದ ಪ್ರತಿನಿಧಿಯಾದರಷ್ಟೇ. ಮೇಕ್ ಇನ್ ಇಂಡಿಯಾ ಯೋಜನೆಯು ಎಚ್‍ಎಎಲ್‍ನಂತಹ ಸಾರ್ವಜನಿಕ ಉದ್ಯಮಗಳನ್ನು ಬಲಿ ಕೊಟ್ಟು ಅನಿಲ್ ಅಂಬಾನಿಯಂತಹ ವಂಚಕ ಉದ್ಯಮಿಯನ್ನು ರಕ್ಷಿಸುವ ಕೆಲಸಕ್ಕೆ ಸಿಮೀತವಾಗಿತು. ಹಾಗಾಗಿಯೇ ಇವತ್ತು ಬಿಜೆಪಿಗೆ ಚುನಾವಣಾ ಬಾಂಡ್‍ಗಳ ಮೂಲಕ ವಿಪರೀತ ಎನ್ನುವಷ್ಟು ಪಾರ್ಟಿ ಫಂಡ್ ಹರಿದು ಬರುತ್ತಿದೆ.
ನ್ಯಾಷನಲ್ ಸ್ಯಾಂಪಲ್ ಸರ್ವೆ ಸಂಸ್ಥೆಯ ಅಧ್ಯಯನದ ಪ್ರಕಾರ, ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಆದರೆ ಬಿಜೆಪಿ ಪ್ರಕಾರ, ಉದ್ಯೋಗಗಳಲ್ಲಿ ಹೆಚ್ಚಳವಾಗಿದೆಯಂತೆ! ಅದಕ್ಕಾಗಿ ತಿರುಚಿದ ಭವಿಷ್ಯ ನಿಧಿ ಅಂಕಿಸಂಖ್ಯೆಗಳನ್ನು ಮುಂದಿಡುತ್ತಿದೆ! ಕಾರ್ಮಿಕ ಇಲಾಖೆಯ ಅಧ್ಯಯನ ಕೂಡ ಉದ್ಯೋಗ ನಷ್ಟದ ಬಗ್ಗೆ ವರದಿ ನೀಡಿದ್ದು, ಅದನ್ನೂ ಈ ಕಳ್ ಸರ್ಕಾರ ಮುಚ್ಚಿಡುತ್ತ ಬಂದಿದೆ.
ಈ 45 ವರ್ಷಗಳಲ್ಲಿ ದೇಶ ಕಂಡರಿಯದಷ್ಟು ಪ್ರಮಾಣದಲ್ಲಿ ಉದ್ಯೋಗದ ಸಮಸ್ಯೆ ಸದ್ಯ ದೇಶವನ್ನು ಕಾಡುತ್ತಿದೆ. ಉದ್ಯೋಗ ಸೃಷ್ಟಿ ಹಾಳಾಗಿ ಹೋಗಲಿ, ಇದ್ದಬದ್ದ ಸಣ್ಣಪುಟ್ಟ ಉದ್ಯೋಗಗಳನ್ನೂ ಈ ಸರ್ಕಾರ ತನ್ನ ಮೂರ್ಖ ನೋಟು ರದ್ದತಿಯಿಂದ ನಾಶ ಮಾಡಿದ್ದರ ಪರಿಣಾಮವಿದು.
ಕೃಷಿ ಬಿಕ್ಕಟ್ಟಿನಲ್ಲಿದೆ, ಯುವಕರು ಹತಾಶರಾಗಿದ್ದಾರೆ. ಆ ಬಗ್ಗೆ ಬಜೆಟ್‍ನಲ್ಲಿ ಯಾವುದೇ ಪ್ರಾಮಾಣಿಕ ಭರವಸೆಗಳಿಲ್ಲ. ಬದಲಿಗೆ ಸುಪ್ರಿಂಕೋರ್ಟಿಗೆ ಮನವಿ ಮಾಡುವ ಕೇಂದ್ರ ಸರ್ಕಾರವು, ಅಯೋಧ್ಯೆಯ ವಿವಾದಿತ ಜಾಗವನ್ನು ಬಿಟ್ಟು ಉಳಿದ ಜಾಗವನ್ನು ‘ಸಂಬಂಧಿಸಿದವರಿಗೆ’ ನೀಡಿ ಎಂದು ಕಿಡಿ ಹಚ್ಚಲು ಹೊರಟಿದೆ. ವಿವಾದಿತ ಜಾಗದ ಸುತ್ತಲಿನ ಜಾಗವನ್ನು ‘ಸಂಬಂಧಿಸಿದವರಿಗೆ’ ನೀಡಿದರೆ ಅದು ಕೋಮು ಗಲಭೆಗಳಿಗೆ ಅವಕಾಶ ಮಾಡಿಕೊಡಲು ಮುನ್ನುಡಿ ಬರೆದಂತಾಗುತ್ತದೆ ಎಂದು ಸುಪ್ರಿಂಕೋರ್ಟು 2003ರಲ್ಲೇ ತನ್ನ ಅಭಿಪ್ರಾಯವನ್ನು ದಾಖಲಿಸಿದ್ದು ಗೊತ್ತಿದ್ದೂ ಮೋದಿ ಸರ್ಕಾರ ದೇಶದ ನಿರುದ್ಯೋಗ ಸಮಸ್ಯೆಯನ್ನು ಹಿನ್ನೆಲೆಗೆ ಸರಿಸಿ, ಯುವಕರನ್ನು ಭಾವನಾತ್ಮಕ ನೆಲೆಗೆ ಒಯ್ದು ಲಾಭ ಮಾಡಿಕೊಳ್ಳಲು ಹವಣಿಸುತ್ತಿದೆ.
ಆದರೆ, ಅದು ಅಷ್ಟು ಸುಲಭ ಸಾಧ್ಯವಲ್ಲ ಎಂಬುದು ಅದಕ್ಕೂ ಗೊತ್ತಿರುವುದರಿಂದ, ಇನ್ನಷ್ಟು ಬಗೆಬಗೆಯ ನಾಟಕಗಳನ್ನು ಆರಂಭಿಸಿ, ಧ್ರುವೀಕರಂಕ್ಕೆ ಯತ್ನಿಸುವುದಂತೂ ಖಂಡಿತ. ಜನ ಹುಶಾರಾಗಿರಬೇಕಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...