Homeರಾಜಕೀಯಉದ್ಯೋಗ ನಿರ್ನಾಮ ಮುಚ್ಚಲು ಮಂದಿರ ನಿರ್ಮಾಣ!

ಉದ್ಯೋಗ ನಿರ್ನಾಮ ಮುಚ್ಚಲು ಮಂದಿರ ನಿರ್ಮಾಣ!

- Advertisement -
- Advertisement -

-ಮಲ್ಲನಗೌಡರ್. ಪಿ. ಕೆ. |

ಕಳೆದ ವಾರ ಪ್ರಮುಖ ದೈನಿಕಗಳಲ್ಲಿ ಎರಡು ಮುಖಪುಟ ಸುದ್ದಿಗಳಿದ್ದವು. ಒಂದು, ಉದ್ಯೋಗ-ನಿರುದ್ಯೋಗ ಕುರಿತ ಅಂಕಿಸಂಖ್ಯೆಗಳನ್ನು ಕೇಂದ್ರ ಸರ್ಕಾರ ಬೇಕೆಂತಲೇ ಬಿಡುಗಡೆ ಮಾಡುತ್ತಿಲ್ಲ ಎಂದು ‘ರಾಷ್ಟ್ರೀಯ ಸಾಂಖ್ಯಿಕ ಆಯೋಗ’(ಎನ್‍ಎಸ್‍ಸಿ)ದ ಇಬ್ಬರು ಸದಸ್ಯರು ಪ್ರತಿಭಟಿಸಿ ರಾಜಿನಾಮೆ ನೀಡಿದ್ದು.
ಇನ್ನೊಂದು, ಕೇಂದ್ರ ಸರ್ಕಾರವು ಸುಪ್ರಿಂಕೋರ್ಟಿಗೆ ಮನವಿ ಸಲ್ಲಿಸಿ, ಅಯೋಧ್ಯೆಯ ವಿವಾದಿತ ಪ್ರದೇಶದ ಸುತ್ತಲಿನ ಭೂಮಿಯನ್ನು ಸಂಬಂಧಪಟ್ಟವರಿಗೆ ಬಿಟ್ಟುಕೊಡಬೇಕೆಂದು ಕೇಳಿಕೊಂಡಿದ್ದರ ಕುರಿತ ಸುದ್ದಿ.
ಒಂದೇ ದಿನ ಇವೆರಡೂ ಸುದ್ದಿ ಬಂದಿದ್ದು ಕಾಕತಾಳೀಯ ಇರಬಹುದು. ಆದರೆ, ಒಟ್ಟೂ ಸರ್ಕಾರದ ನಿಲುವು, ನಾಟಕ, ಹುಚ್ಚಾಟಗಳಿಗೆ ಈ ಎರಡೂ ಸುದ್ದಿಗಳು ಸಾಂಕೇತಿಕ ಸಾಕ್ಷ್ಯಗಳು ಎಂಬುದರಲ್ಲಿ ಎರಡು ಮಾತಿಲ್ಲ.
2014ರಲ್ಲಿ ಚುನಾವಣಾ ಪ್ರಚಾರ ಮಾಡುವಾಗ, ಬಿಜೆಪಿಯ ಅಂದರೆ ನರೇಂದ್ರ ಮೋದಿಯ ಭಾಷಣದ ವಸ್ತುಗಳು: ಉದ್ಯೋಗ ಸೃಷ್ಟಿ ಮತ್ತು ಕಪ್ಪುಹಣ ವಾಪಸ್ ತರುವಿಕೆ. ಬಿಜೆಪಿಯ ಪ್ರಣಾಳಿಕೆಯಲ್ಲೂ ಉದ್ಯೋಗ ಸೃಷ್ಟಿಯ ಅಜೆಂಡಾವೇ ಪ್ರಧಾನವಾಗಿತ್ತು. ಅದರಲ್ಲಿ ರಾಮ ಮಂದಿರ ನಿರ್ಮಾಣದ ವಿಷಯ ಇತ್ತಾದರೂ, ಬೇಕೆಂತಲೇ ಅದನ್ನು ಅತಿ ಕಡಿಮೆ ಪ್ರಾಶಸ್ತ್ಯದ ಜಾಗದಲ್ಲಿ ಇಡಲಾಗಿತ್ತು!
ಈಗ 2019: ಚುನಾವಣೆಯ ವರ್ಷ. ಬಿಜೆಪಿಯ ಪಾಲಿಗೆ ಉದ್ಯೋಗ ಅಥವಾ ನಿರುದ್ಯೋಗ ಎಂಬ ಪದವೇ ಶಾಪವಾಗಿದೆ. ಹಾಗಾಗಿ ಈಗ ಅದು ಆ ವಿಷಯವನ್ನು ಹಿನ್ನೆಲೆಗೆ ಸರಿಸಿ, ಮಂದಿರ ನಿರ್ಮಾಣದಂತಹ ವಿಷಯಗಳಿಗೆ ಆದ್ಯತೆ ಕೊಡಲು ತಯ್ಯಾರಿ ನಡೆಸಿದೆ. ಇದಕ್ಕೆ ಪೂರಕವಾಗಿ ಮೇಲಿನ ಎರಡು ಸುದ್ದಿಗಳ ಹಿಂದಿನ ಅಸಲಿಯತ್ತು ಈಗ ಅನಾವರಣಗೊಳ್ಳುತ್ತಿದೆ.
ಸೃಷ್ಟಿಸಲಿಲ್ಲ, ಉದ್ಯೋಗ ನಿರ್ನಾಮ ಮಾಡಿದರು!
ವರ್ಷಕ್ಕೆ ಎರಡು ಕೋಟಿಯ ಉದ್ಯೋಗ ಸೃಷ್ಟಿಯ ಭಾರಿ ಭರವಸೆ ನೀಡಿದ್ದ ನರೇಂದ್ರ ಮೋದಿ ಪ್ರಧಾನಿಯಾದ ನಂತರ ಆ ಕುರಿತಂತೆ ಯಾವ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲೇ ಇಲ್ಲ. ಅಂತಹ ದೂರದೃಷ್ಟಿಯೂ ಈ ಸರ್ಕಾರಕ್ಕೆ ಇಲ್ಲವೇ ಇಲ್ಲ. ಅದು ದೊಡ್ಡ ಕೈಗಾರಿಕೋದ್ಯಮಿಗಳ ಹಿತ ಕಾಪಾಡುವಲ್ಲೇ ಮಗ್ನವಾಗಿತು. ಪ್ರಚಾರಕ್ಕಾಗಿ ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ, ಸ್ಟಾರ್ಟ್‍ಅಪ್ ಇಂಡಿಯಾ- ಎಂಬಂತಹ ರೋಚಕ ಹೆಸರಿನ ಘೋಷಣೆಗಳನ್ನು ಮಾಡಿತೇ ವಿನಃ, ಅವುಗಳ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನವನ್ನು ಮಾಡಲೇ ಇಲ್ಲ. ಅದು ನಿಜವಾಗಿಯೂ ಈ ಯೋಜನೆಗಳ ಗಂಭೀರವಾಗಿದ್ದರೆ, ಸ್ಕಿಲ್ ಇಂಡಿಯಾವನ್ನು ಅನಂತಕುಮಾರ ಹೆಗಡೆಯಂತಹ ಮುಠ್ಠಾಳನ ಕೈಗೆ ನೀಡುತ್ತಿರಲಿಲ್ಲ. ಮಾತೆತ್ತಿದರೆ ಹೊಡಿ, ಬಡಿ, ಕಡಿ ಎನ್ನುವ ಈ ಮನುಷ್ಯ ‘ಕಿಲ್ ಇಂಡಿಯಾ’ದ ಪ್ರತಿನಿಧಿಯಾದರಷ್ಟೇ. ಮೇಕ್ ಇನ್ ಇಂಡಿಯಾ ಯೋಜನೆಯು ಎಚ್‍ಎಎಲ್‍ನಂತಹ ಸಾರ್ವಜನಿಕ ಉದ್ಯಮಗಳನ್ನು ಬಲಿ ಕೊಟ್ಟು ಅನಿಲ್ ಅಂಬಾನಿಯಂತಹ ವಂಚಕ ಉದ್ಯಮಿಯನ್ನು ರಕ್ಷಿಸುವ ಕೆಲಸಕ್ಕೆ ಸಿಮೀತವಾಗಿತು. ಹಾಗಾಗಿಯೇ ಇವತ್ತು ಬಿಜೆಪಿಗೆ ಚುನಾವಣಾ ಬಾಂಡ್‍ಗಳ ಮೂಲಕ ವಿಪರೀತ ಎನ್ನುವಷ್ಟು ಪಾರ್ಟಿ ಫಂಡ್ ಹರಿದು ಬರುತ್ತಿದೆ.
ನ್ಯಾಷನಲ್ ಸ್ಯಾಂಪಲ್ ಸರ್ವೆ ಸಂಸ್ಥೆಯ ಅಧ್ಯಯನದ ಪ್ರಕಾರ, ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಆದರೆ ಬಿಜೆಪಿ ಪ್ರಕಾರ, ಉದ್ಯೋಗಗಳಲ್ಲಿ ಹೆಚ್ಚಳವಾಗಿದೆಯಂತೆ! ಅದಕ್ಕಾಗಿ ತಿರುಚಿದ ಭವಿಷ್ಯ ನಿಧಿ ಅಂಕಿಸಂಖ್ಯೆಗಳನ್ನು ಮುಂದಿಡುತ್ತಿದೆ! ಕಾರ್ಮಿಕ ಇಲಾಖೆಯ ಅಧ್ಯಯನ ಕೂಡ ಉದ್ಯೋಗ ನಷ್ಟದ ಬಗ್ಗೆ ವರದಿ ನೀಡಿದ್ದು, ಅದನ್ನೂ ಈ ಕಳ್ ಸರ್ಕಾರ ಮುಚ್ಚಿಡುತ್ತ ಬಂದಿದೆ.
ಈ 45 ವರ್ಷಗಳಲ್ಲಿ ದೇಶ ಕಂಡರಿಯದಷ್ಟು ಪ್ರಮಾಣದಲ್ಲಿ ಉದ್ಯೋಗದ ಸಮಸ್ಯೆ ಸದ್ಯ ದೇಶವನ್ನು ಕಾಡುತ್ತಿದೆ. ಉದ್ಯೋಗ ಸೃಷ್ಟಿ ಹಾಳಾಗಿ ಹೋಗಲಿ, ಇದ್ದಬದ್ದ ಸಣ್ಣಪುಟ್ಟ ಉದ್ಯೋಗಗಳನ್ನೂ ಈ ಸರ್ಕಾರ ತನ್ನ ಮೂರ್ಖ ನೋಟು ರದ್ದತಿಯಿಂದ ನಾಶ ಮಾಡಿದ್ದರ ಪರಿಣಾಮವಿದು.
ಕೃಷಿ ಬಿಕ್ಕಟ್ಟಿನಲ್ಲಿದೆ, ಯುವಕರು ಹತಾಶರಾಗಿದ್ದಾರೆ. ಆ ಬಗ್ಗೆ ಬಜೆಟ್‍ನಲ್ಲಿ ಯಾವುದೇ ಪ್ರಾಮಾಣಿಕ ಭರವಸೆಗಳಿಲ್ಲ. ಬದಲಿಗೆ ಸುಪ್ರಿಂಕೋರ್ಟಿಗೆ ಮನವಿ ಮಾಡುವ ಕೇಂದ್ರ ಸರ್ಕಾರವು, ಅಯೋಧ್ಯೆಯ ವಿವಾದಿತ ಜಾಗವನ್ನು ಬಿಟ್ಟು ಉಳಿದ ಜಾಗವನ್ನು ‘ಸಂಬಂಧಿಸಿದವರಿಗೆ’ ನೀಡಿ ಎಂದು ಕಿಡಿ ಹಚ್ಚಲು ಹೊರಟಿದೆ. ವಿವಾದಿತ ಜಾಗದ ಸುತ್ತಲಿನ ಜಾಗವನ್ನು ‘ಸಂಬಂಧಿಸಿದವರಿಗೆ’ ನೀಡಿದರೆ ಅದು ಕೋಮು ಗಲಭೆಗಳಿಗೆ ಅವಕಾಶ ಮಾಡಿಕೊಡಲು ಮುನ್ನುಡಿ ಬರೆದಂತಾಗುತ್ತದೆ ಎಂದು ಸುಪ್ರಿಂಕೋರ್ಟು 2003ರಲ್ಲೇ ತನ್ನ ಅಭಿಪ್ರಾಯವನ್ನು ದಾಖಲಿಸಿದ್ದು ಗೊತ್ತಿದ್ದೂ ಮೋದಿ ಸರ್ಕಾರ ದೇಶದ ನಿರುದ್ಯೋಗ ಸಮಸ್ಯೆಯನ್ನು ಹಿನ್ನೆಲೆಗೆ ಸರಿಸಿ, ಯುವಕರನ್ನು ಭಾವನಾತ್ಮಕ ನೆಲೆಗೆ ಒಯ್ದು ಲಾಭ ಮಾಡಿಕೊಳ್ಳಲು ಹವಣಿಸುತ್ತಿದೆ.
ಆದರೆ, ಅದು ಅಷ್ಟು ಸುಲಭ ಸಾಧ್ಯವಲ್ಲ ಎಂಬುದು ಅದಕ್ಕೂ ಗೊತ್ತಿರುವುದರಿಂದ, ಇನ್ನಷ್ಟು ಬಗೆಬಗೆಯ ನಾಟಕಗಳನ್ನು ಆರಂಭಿಸಿ, ಧ್ರುವೀಕರಂಕ್ಕೆ ಯತ್ನಿಸುವುದಂತೂ ಖಂಡಿತ. ಜನ ಹುಶಾರಾಗಿರಬೇಕಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...